Kollywood: ಅಲ್ಲು ಅರ್ಜುನ್ ಜೊತೆ ಅಟ್ಲಿ ಸಿನಿಮಾ; ನಿರ್ದೇಶನ ಮಾಡಲು ಅತೀ ಹೆಚ್ಚು ಸಂಭಾವನೆ?
Team Udayavani, Mar 12, 2024, 4:14 PM IST
ಚೆನ್ನೈ: ಕಾಲಿವುಡ್ ನಿರ್ದೇಶಕ ಅಟ್ಲಿ ಕುಮಾರ್ ಕಳೆದ ವರ್ಷ ʼಜವಾನ್ʼ ಮೂಲಕ ಬಾಲಿವುಡ್ ನಲ್ಲೂ ಯಶಸ್ಸು ಸಾಧಿಸಿದ್ದರು. ʼಜವಾನ್ʼ ಸಿನಿಮಾ 1,100 ಕೋಟಿಗೂ ಅಧಿಕ ಗಳಿಕೆ ಕಾಣುವ ಮೂಲಕ ವರ್ಲ್ಡ್ ವೈಡ್ ಬಾಕ್ಸ್ ಆಫೀಸ್ ನಲ್ಲಿ ಭರ್ಜರಿ ಸದ್ದು ಮಾಡಿತ್ತು.
ಶಾರುಖ್ ಖಾನ್, ನಯನತಾರಾ ದೀಪಿಕಾ ಪಡುಕೋಣೆ ʼಜವಾನ್ʼ ಸಿನಿಮಾದಲ್ಲಿ ಪ್ರಮುಖ ಪಾತ್ರದಲ್ಲಿ ಕಾಣಿಸಿಕೊಂಡಿದ್ದರು. ಈ ಸಿನಿಮಾದ ಬಳಿಕ ಅಟ್ಲಿ ಅವರ ಬೇಡಿಕೆ ಮತ್ತಷ್ಟು ಹೆಚ್ಚಾಗಿದೆ. ಸೋಲಿಲ್ಲದ ಸರದಾರನಾಗಿ ಅಟ್ಲಿ ಮುನ್ನುಗ್ಗುತ್ತಿದ್ದಾರೆ.
ಅಟ್ಲಿ ಮುಂದೆ ದಳಪತಿ ವಿಜಯ್ ಅವರೊಂದಿಗೆ ಸಿನಿಮಾ ಮಾಡಲಿದ್ದಾರೆ ಎನ್ನಲಾಗಿತ್ತು. ಆದರೆ ಇದೀಗ ಅಟ್ಲಿ ಟಾಲಿವುಡ್ ಸೂಪರ್ ಸ್ಟಾರ್ ಅಲ್ಲು ಅರ್ಜುನ್ ಅವರೊಂದಿಗೆ ಸಿನಿಮಾ ಮಾಡಲಿದ್ದಾರೆ ಎಂದು ವರದಿ ಆಗಿದೆ.
ಈ ಸಿನಿಮಾಕ್ಕಾಗಿ ಸನ್ ಪಿಕ್ಚರ್ಸ್ ಕೈಜೋಡಿಸಿದ್ದು, ಸಿನಿಮಾವನ್ನು ನಿರ್ಮಾಣ ಮಾಡಲಿದೆ. ಇದಕ್ಕಾಗಿ ಅಟ್ಲಿ 60 ಕೋಟಿ ಸಂಭಾವನೆ ಪಡೆಯಲಿದ್ದಾರೆ. ಇದು ಕಾಲಿವುಡ್ ನಿರ್ದೇಶಕನೊಬ್ಬ ಪಡೆಯುವ ಅತೀ ಹೆಚ್ಚು ಸಂಭಾವನೆ ಆಗಲಿದೆ. ಆ ಮೂಲಕ ಖ್ಯಾತ ಕಾಲಿವುಡ್ ನಿರ್ದೇಶಕ ಎಸ್. ಶಂಕರ್ ಅವರ ಸಂಭಾವನೆಯನ್ನು ಕೂಡ ಅಟ್ಲಿ ಮೀರಿಸಲಿದ್ದಾರೆ ಎಂದು ವರದಿ ಆಗಿದೆ.
ಈ ಹಿಂದೆ ಎಸ್.ಶಂಕರ್ ಅವರು ಅತೀ ಹೆಚ್ಚು ಸಂಭಾವನೆ ಪಡೆಯುವ ನಿರ್ದೇಶಕರಾಗಿದ್ದರು. ಅಟ್ಲಿ ಅವರು ಎಸ್.ಶಂಕರ್ ಅವರ ಜೊತೆ ಸಹಾಯಕ ನಿರ್ದೇಶಕರಾಗಿ ಕೆಲಸ ಮಾಡಿದ್ದರು. ಇಂದಿಗೂ ಅಟ್ಲಿ ಶಂಕರ್ ಅವರನ್ನು ಮಾರ್ಗದರ್ಶಕರೆಂದೇ ಗೌರವ ಕೊಟ್ಟು, ಗುರುವಿನ ಸ್ಥಾನದಲ್ಲಿ ಇಟ್ಟಿದ್ದಾರೆ.
ಸದ್ಯ ಅಲ್ಲು ಅರ್ಜುನ್ ಜೊತೆಗಿನ ಸಿನಿಮಾದ ಸ್ಕ್ರಿಪ್ಟ್ ಕೆಲಸ ಆರಂಭವಾಗಿದ್ದು, ಅಂತಿಮ ಹಂತದ ಮಾತುಕತೆ ನಡೆಯುತ್ತಿದೆ ಎಂದು ವರದಿ ತಿಳಿಸಿದೆ.
ಅಟ್ಲಿ ಅವರ ʼತೇರಿʼ ಸಿನಿಮಾ ರಿಮೇಕ್ ಆಗಿ ಹಿಂದಿಯಲ್ಲಿ ಬರುತ್ತಿದೆ. ಇದಕ್ಕೆ ʼಬೇಬಿ ಜಾನ್ʼ ಎಂದು ಟೈಟಲ್ ಇಡಲಾಗಿದೆ. ಈ ಸಿನಿಮಾಕ್ಕೆ ಅಟ್ಲಿ ನಿರ್ಮಾಪಕರಾಗಿ ಕೈಜೋಡಿಸಿದ್ದಾರೆ. ಸಿನಿಮಾದಲ್ಲಿ ವರುಣ್ ಧವನ್ ಮುಖ್ಯ ಪಾತ್ರದಲ್ಲಿ ನಟಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ʼಬಂಗಾರಂʼನಲ್ಲಿ ರಕ್ತಸಿಕ್ತ ಅವತಾರ ತಾಳಿದ ಸಮಂತಾ: ಹುಟ್ಟುಹಬ್ಬಕ್ಕೆ ಹೊಸ ಸಿನಿಮಾ ಅನೌನ್ಸ್
Tollywood: ಅಧಿಕೃತವಾಗಿ ರಿವೀಲ್ ಆಯಿತು ‘ಕಲ್ಕಿ 2898 ಎಡಿʼ ಸಿನಿಮಾದ ರಿಲೀಸ್ ಡೇಟ್
Rakshit Shetty: ʼರಿಚರ್ಡ್ ಆಂಟನಿʼಯಲ್ಲಿ ಈ ಕರಾವಳಿಯ ನಟಿಯರಿಗೆ ಸಿಗುತ್ತಾ ಅವಕಾಶ?
Kollywood: ಅಜಿತ್ ಹುಟ್ಟುಹಬ್ಬಕ್ಕೆ ಸೂಪರ್ ಹಿಟ್ ʼಬಿಲ್ಲಾʼ ರೀ ರಿಲೀಸ್; ಫ್ಯಾನ್ಸ್ ಖುಷ್
OTT Release: ವಿಜಯ್ ದೇವರಕೊಂಡ ʼಫ್ಯಾಮಿಲಿ ಸ್ಟಾರ್ʼ ಓಟಿಟಿ ರಿಲೀಸ್ಗೆ ಡೇಟ್ ಫಿಕ್ಸ್
MUST WATCH
ಹೊಸ ಸೇರ್ಪಡೆ
Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್
Ramanagara: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು
Sirsi: ಮನವಿ ಕೊಟ್ಟ ವಾರದೊಳಗೇ ಕೆಲಸ ಶುರು… 26 ಗುಂಟೆ ಕೆರೆಗೆ ಜೀರ್ಣೋದ್ದಾರ ಭಾಗ್ಯ
Father; ಚಂದ್ರು ನಿರ್ಮಾಣದ ‘ಫಾದರ್’ ಚಿತ್ರಕ್ಕೆ ಮುಹೂರ್ತ
Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ