Actor Yash: “ಯಶ್‌ಗಾಗಿ ನನ್ನ ಬಳಿ ಸೂಕ್ತ ಕಥೆಯಿದೆ..” ಖ್ಯಾತ ಕಾಲಿವುಡ್ ನಿರ್ದೇಶಕ


Team Udayavani, May 30, 2024, 4:39 PM IST

Actor Yash: “ಯಶ್‌ಗಾಗಿ ನನ್ನ ಬಳಿ ಸೂಕ್ತ ಕಥೆಯಿದೆ..” ಖ್ಯಾತ ಕಾಲಿವುಡ್ ನಿರ್ದೇಶಕ

ಬೆಂಗಳೂರು: ʼಕೆಜಿಎಫ್‌ʼ ಸರಣಿ ಮೂಲಕ ಪ್ಯಾನ್‌ ಇಂಡಿಯಾ ಸ್ಟಾರ್‌ ಆಗಿರುವ ಕನ್ನಡದ ಯಶ್‌ ಸದ್ಯ ಮತ್ತೊಂದು ಬಿಗ್‌ ಬಜೆಟ್‌ ಪ್ಯಾನ್‌ ಇಂಡಿಯಾ ʼಟಾಕ್ಸಿಕ್‌ʼ ಸಿನಿಮಾದಲ್ಲಿ ಬ್ಯುಸಿಯಾಗಿದ್ದಾರೆ.

ಯಶ್‌ ʼಕೆಜಿಎಫ್ʼನಲ್ಲಿ ಮಾಡಿದ ಅಭಿನಯ ಕನ್ನಡ ಮಾತ್ರವಲ್ಲದೆ ಇತರೆ ಸಿನಿರಂಗದಲ್ಲೂ ಹವಾ ಎಬ್ಬಿಸಿತ್ತು. ಸಿನಿಮಾ ಬಹುದೊಡ್ಡಮಟ್ಟದಲ್ಲಿ ಸದ್ದು ಮಾಡಿದ ನಂತರ ಯಶ್‌ ಆದಾಗಲೇ ಪ್ಯಾನ್‌ ಇಂಡಿಯಾದಲ್ಲಿ ಸ್ಟಾರ್‌ ಆಗಿ ಎಲ್ಲರ ಗಮನ ಸೆಳೆದಿದ್ದರು. ಖ್ಯಾತ ನಿರ್ದೇಶಕರೆಲ್ಲರೂ ಯಶ್‌ ಜೊತೆ ಸಿನಿಮಾ ಮಾಡಬೇಕೆನ್ನುವಷ್ಟರ ಮಟ್ಟಿಗೆ ʼರಾಕಿಭಾಯ್‌ʼ ಮಾರ್ಕೆಟ್‌ ಡಿಮ್ಯಾಂಡ್‌ ಡೈಮಂಡ್‌ ನಂತೆ ಹೆಚ್ಚಾಯಿತು.

ಖ್ಯಾತ ನಿರ್ದೇಶಕರು ಕೂಡ ಯಶ್‌ ಜೊತೆ ಕೆಲಸ ಮಾಡಯವ ಇಂಗಿತವನ್ನು ವ್ಯಕ್ತಪಡಿಸಿದ್ದರು. ಯಶ್‌ ಮುಂದಿನ ಸಿನಿಮಾ ಯಾವುದೆನ್ನುವುದು ಎಲ್ಲರೂ ಕುತೂಹಲದಿಂದ ಕಾಯುವಂತೆ ಮಾಡಿತ್ತು.

ಇದನ್ನೂ ಓದಿ: Kantara -1: ರಿಷಬ್‌ ಶೆಟ್ಟಿ ʼಕಾಂತಾರ-1ʼ ಗೆ ಖ್ಯಾತ ಮಾಲಿವುಡ್‌ ನಟ ಜಯರಾಂ ಎಂಟ್ರಿ?

ಇದೀಗ ಮತ್ತೊಬ್ಬ ಖ್ಯಾತ ನಿರ್ದೇಶಕರೊಬ್ಬರು ಯಶ್‌ ಜೊತೆ ಕೆಲಸ ಮಾಡುವ ಇರಾದೆಯನ್ನು ವ್ಯಕ್ತಪಡಿಸಿದ್ದಾರೆ.

ಸೂಪರ್‌ ಸ್ಟಾರ್‌ ರಜಿನಿಕಾಂತ್‌ ಅವರ  ‘ಮುತ್ತು’, ‘ನಾಟಾಮ್ಮೈ’, ‘ಪಡೆಯಪ್ಪ’ ಸೇರಿದಂತೆ ಹಲವು ಸೂಪರ್‌ ಹಿಟ್‌ ಸಿನಿಮಾಗಳನ್ನು ನೀಡಿ ಸೈ ಎನ್ನಿಸಿಕೊಂಡಿರುವ ನಿರ್ದೇಶಕ ಕೆಎಸ್‌ ರವಿಕುಮಾರ್‌ ಯಶ್‌ ಜೊತೆ ಕೆಲಸ ಮಾಡುವ ಆಸೆಯನ್ನು ವ್ಯಕ್ತಪಡಿಸಿದ್ದಾರೆ.

ಕಾಲಿವುಡ್‌ ಮಾತ್ರವಲ್ಲದೆ ಕನ್ನಡದಲ್ಲಿ ʼಕೋಟಿಗೊಬ್ಬ-2ʼ ಸಿನಿಮಾವನ್ನು ಮಾಡಿರುವ  ರವಿಕುಮಾರ್ ಅವರಿಗೆ ತೆಲುಗಿನ ಸಂದರ್ಶನವೊಂದರಲ್ಲಿ ಕೇಳಿದ ಪ್ರಶ್ನೆಗೆ ಉತ್ತರಿಸುವ ವೇಳೆ ಯಶ್‌ ಬಗ್ಗೆ ಅವರು ಹೇಳಿದ್ದಾರೆ.

“ನನಗೆ ಯಶ್‌ ಜೊತೆ ಕೆಲಸ ಮಾಡುವ ಆಸಕ್ತಿಯಿದೆ. ನನ್ನ ಬಳಿ ಅವರಿಗೆ ಸೂಕ್ತವಾಗುವ ಪಾತ್ರದ ಕಥೆಯೊಂದಿದೆ. ಅವರು ಇಂದು ಬಹಳ ದೊಡ್ಡ ನಟ. ಈ ಕಥೆ ಕೂಡ ಭಿನ್ನವಾಗಿದೆ. ನಾನು ರಜಿನಿಕಾಂತ್‌ ಜೊತೆ ಮಾಡಬೇಕಿದ್ದ ʼರಾಣಾʼ ಸಿನಿಮಾ ನಿಂತು ಹೋಯಿತು. ಆ ಚಿತ್ರವನ್ನು ಮಾಡುವುದು ನನ್ನ ಕನಸು. ತೆಲುಗಿನಲ್ಲಿ ನನಗೆ ರಾಮ್‌ ಚರಣ್‌ ಇಷ್ಟ” ಎಂದು ಅವರು ಹೇಳಿದ್ದಾರೆ.

ಸದ್ಯ ಯಶ್‌ ʼಟಾಕ್ಸಿಕ್‌ʼ ಸಿನಿಮಾದಲ್ಲಿ ನಿರತರಾಗಿದ್ದು, ಈ ಸಿನಿಮಾದಲ್ಲಿ ನಾಯಕಿ ಹಾಗೂ ಯಶ್‌ ಸಹೋದರಿಯ  ಪಾತ್ರದಲ್ಲಿ ನಟಿಸುವವರ ಹೆಸರು ದಿನಕ್ಕೊಂದರಂತೆ ಬರುತ್ತಿದೆ.

ʼಟಾಕ್ಸಿಕ್‌ʼ 2025 ರ ಏ.10 ರಂದು ರಿಲೀಸ್‌ ಆಗಲಿದೆ.

ಟಾಪ್ ನ್ಯೂಸ್

1-24-saturday

Daily Horoscope: ಪಾಲುದಾರಿಕೆ ವ್ಯವಹಾರದಲ್ಲಿ ಲಾಭ ಹೆಚ್ಚಳ, ಆರೋಗ್ಯ ಉತ್ತಮ

CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್‌ಗೆ ವಿವರಣೆ?

CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್‌ಗೆ ವಿವರಣೆ?

Ramanagara ಜಿಲ್ಲೆ ಇನ್ನು ಬೆಂಗಳೂರು ದಕ್ಷಿಣ; ರಾಜ್ಯ ಸಚಿವ ಸಂಪುಟದಲ್ಲಿ ನಿರ್ಧಾರ

Ramanagara ಜಿಲ್ಲೆ ಇನ್ನು ಬೆಂಗಳೂರು ದಕ್ಷಿಣ; ರಾಜ್ಯ ಸಚಿವ ಸಂಪುಟದಲ್ಲಿ ನಿರ್ಧಾರ

Siddaramaiah ನನ್ನ ವಿರುದ್ಧ ವಿಪಕ್ಷ ಷಡ್ಯಂತ್ರ

Siddaramaiah ನನ್ನ ವಿರುದ್ಧ ವಿಪಕ್ಷ ಷಡ್ಯಂತ್ರ

Pilikula Biological Park: ಕಾಳಿಂಗ ಸರ್ಪಗಳಿಗೆ “ಮೈಕ್ರೋ ಚಿಪ್‌’!

Pilikula Biological Park: ಕಾಳಿಂಗ ಸರ್ಪಗಳಿಗೆ “ಮೈಕ್ರೋ ಚಿಪ್‌’!

1-aaasdeqweqw

India-Sri Lanka ಟಿ20 ಸರಣಿ ಇಂದಿನಿಂದ : ಸೂರ್ಯ, ಗಂಭೀರ್‌ ಯುಗಾರಂಭ

1-hockey

Paris Olympics ಹಾಕಿ ಕಂಚಿನಿಂದಾಚೆ ಮಿಂಚಲಿ ಭಾರತ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

rudraveena movie

Rudra Veena; ಜುಲೈ 26ರಂದು ತೆರೆಗೆ ಬರುತ್ತಿದೆ ‘ರುದ್ರ ವೀಣಾ’ ಚಿತ್ರ

Sai Pallavi: ಎರಡು ಮಕ್ಕಳ ತಂದೆ ಜೊತೆ ನಟಿ ಸಾಯಿಪಲ್ಲವಿ ಡೇಟಿಂಗ್?‌ ಏನಿದು ವಿಚಾರ?

Sai Pallavi: ಎರಡು ಮಕ್ಕಳ ತಂದೆ ಜೊತೆ ನಟಿ ಸಾಯಿಪಲ್ಲವಿ ಡೇಟಿಂಗ್?‌ ಏನಿದು ವಿಚಾರ?

Love Insurance Kompany: ಪತಿಯ ಸಿನಿಮಾಕ್ಕೆ ನಿರ್ಮಾಪಕಿಯಾದ ನಯನತಾರಾ; ಫಸ್ಟ್‌ ಲುಕ್‌ ಔಟ್

Love Insurance Kompany: ಪತಿಯ ಸಿನಿಮಾಕ್ಕೆ ನಿರ್ಮಾಪಕಿಯಾದ ನಯನತಾರಾ; ಫಸ್ಟ್‌ ಲುಕ್‌ ಔಟ್

Kollywood: ರಜಿನಿಕಾಂತ್‌ ʼಕೂಲಿʼಗೆ ಖಡಕ್‌ ವಿಲನ್‌ ಆಗಿ ಅಕ್ಕಿನೇನಿ ನಾಗಾರ್ಜುನ ಎಂಟ್ರಿ?

Kollywood: ರಜಿನಿಕಾಂತ್‌ ʼಕೂಲಿʼಗೆ ಖಡಕ್‌ ವಿಲನ್‌ ಆಗಿ ಅಕ್ಕಿನೇನಿ ನಾಗಾರ್ಜುನ ಎಂಟ್ರಿ?

SK25: ಶಿವಕಾರ್ತಿಕೇಯನ್ ಗೆ ಆ್ಯಕ್ಷನ್ ಕಟ್ ಹೇಳಲಿದ್ದಾರೆ ಸುಧಾ ಕೊಂಗರ

SK25: ಶಿವಕಾರ್ತಿಕೇಯನ್ ಗೆ ಆ್ಯಕ್ಷನ್ ಕಟ್ ಹೇಳಲಿದ್ದಾರೆ ಸುಧಾ ಕೊಂಗರ

MUST WATCH

udayavani youtube

ಸರ್ಕಾರದ ವಿರುದ್ಧ ವಿಧಾನಸಭೆಯಲ್ಲಿ ಬಿಜೆಪಿ-JDS ಶಾಸಕರಿಂದ ಭಜನೆ

udayavani youtube

ಶಿರೂರು ಗುಡ್ಡಕುಸಿತ; ಕಾಣೆಯಾದವರ ಹುಡುಕಾಟಕ್ಕೆ ಡ್ರೋನ್ ಬಳಸಿ ಕಾರ್ಯಾಚರಣೆ

udayavani youtube

ಕರ್ಮಫಲ ಶಿಕ್ಷಣದಿಂದ ಆತ್ಮೋನ್ನತಿ

udayavani youtube

ತಪ್ತ ಮುದ್ರಾ ಧಾರಣೆ ವಿಶೇಷ ಮಹತ್ವದ್ದು, ಯಾಕೆ?

udayavani youtube

ಬಾಳೆಯಿಂದ ವಾರ್ಷಿಕ 50-60 ಲಕ್ಷ ರೂ. ಆದಾಯ

ಹೊಸ ಸೇರ್ಪಡೆ

1-24-saturday

Daily Horoscope: ಪಾಲುದಾರಿಕೆ ವ್ಯವಹಾರದಲ್ಲಿ ಲಾಭ ಹೆಚ್ಚಳ, ಆರೋಗ್ಯ ಉತ್ತಮ

CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್‌ಗೆ ವಿವರಣೆ?

CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್‌ಗೆ ವಿವರಣೆ?

Ramanagara ಜಿಲ್ಲೆ ಇನ್ನು ಬೆಂಗಳೂರು ದಕ್ಷಿಣ; ರಾಜ್ಯ ಸಚಿವ ಸಂಪುಟದಲ್ಲಿ ನಿರ್ಧಾರ

Ramanagara ಜಿಲ್ಲೆ ಇನ್ನು ಬೆಂಗಳೂರು ದಕ್ಷಿಣ; ರಾಜ್ಯ ಸಚಿವ ಸಂಪುಟದಲ್ಲಿ ನಿರ್ಧಾರ

Siddaramaiah ನನ್ನ ವಿರುದ್ಧ ವಿಪಕ್ಷ ಷಡ್ಯಂತ್ರ

Siddaramaiah ನನ್ನ ವಿರುದ್ಧ ವಿಪಕ್ಷ ಷಡ್ಯಂತ್ರ

Pilikula Biological Park: ಕಾಳಿಂಗ ಸರ್ಪಗಳಿಗೆ “ಮೈಕ್ರೋ ಚಿಪ್‌’!

Pilikula Biological Park: ಕಾಳಿಂಗ ಸರ್ಪಗಳಿಗೆ “ಮೈಕ್ರೋ ಚಿಪ್‌’!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.