Eagle Vs Lal Salaam: ಮೊದಲ ದಿನದ ಬಾಕ್ಸ್ ಆಫೀಸ್ ಪೈಪೋಟಿಯಲ್ಲಿ ಯಾರು ಮುಂದೆ?
Team Udayavani, Feb 10, 2024, 11:14 AM IST
ಚೆನ್ನೈ/ಹೈದರಾಬಾದ್: ಕಾಲಿವುಡ್ ಹಾಗೂ ಟಾಲಿವುಡ್ ನಲ್ಲಿ ಶುಕ್ರವಾರ(ಫೆ.9 ರಂದು) ಎರಡು ಬಹು ನಿರೀಕ್ಷಿತ ಸಿನಿಮಾಗಳು ರಿಲೀಸ್ ಆಗಿದೆ. ಎರಡೂ ಸಿನಿಮಾಕ್ಕೆ ಮೊದಲ ಪ್ರೇಕ್ಷಕರಿಂದ ಮಿಶ್ರ ಪ್ರತಿಕ್ರಿಯೆ ಸಿಕ್ಕಿದೆ. ಹಾಗಾದರೆ ಬಾಕ್ಸ್ ಆಫೀಸ್ ನಲ್ಲಿ ಈ ಎರಡು ಸಿನಿಮಾಗಳ ಮೊದಲ ದಿನದ ಕಲೆಕ್ಷನ್ ನತ್ತ ಒಂದು ನೋಟ ಹಾಕಿ ಬರೋಣ.
ಲಾಲ್ ಸಲಾಂ: ಸೂಪರ್ ಸ್ಟಾರ್ ರಜಿನಿಕಾಂತಾ ಅವರ ಪುತ್ರಿ ಐಶ್ವರ್ಯಾ ರಜಿನಿಕಾಂತ್, ಬಹುತೇಕ ಎಂಟು ವರ್ಷದ ಬಳಿಕ ಡೈರೆಕ್ಷನ್ ಗೆ ಇಳಿದಿದ್ದಾರೆ. ಸ್ಪೋರ್ಟ್ಸ್ ಡ್ರಾಮಾ ಕಥೆಯಲ್ಲಿ ಸಾಮಾಜಿಕ ಸಂದೇಶವನ್ನು ಸಾರಿದ್ದು, ಹಿಂದೂ – ಮುಸ್ಲಿಂ ಧಾರ್ಮಿಕ ವಿಚಾರವನ್ನು ಸಿನಿಮಾದಲ್ಲಿ ತೋರಿಸಲಾಗಿದೆ.
ಸಿನಿಮಾದಲ್ಲಿ ವಿಷ್ಣು ವಿಶಾಲ್, ವಿಕ್ರಾಂತ್ ಪ್ರಾತಕ್ಕೆ ಎಷ್ಟು ಪ್ರಾಮುಖ್ಯತೆ ಇದೆಯೋ, ಅಷ್ಟೇ ಮಹತ್ವದ ಪಾತ್ರವನ್ನು ರಜಿನಿಕಾಂತ್ ಅವರು ನಿಭಾಯಿಸಿದ್ದಾರೆ. ಅವರ 40 ನಿಮಿಷದ ಪಾತ್ರ ಸಿನಿಮಾದಲ್ಲಿ ಎದ್ದು ಕಾಣುತ್ತದೆ.
ಮೊದಲ ದಿನ ಪ್ರೇಕ್ಷಕರಿಂದ ಸಿನಿಮಾಕ್ಕೆ ಮಿಶ್ರ ಪ್ರತಿಕ್ರಿಯೆ ವ್ಯಕ್ತವಾಗಿದೆ. ದೊಡ್ಡಮಟ್ಟದ ಆರಂಭವನ್ನು ಪಡೆದುಕೊಳ್ಳುವ ಸಾಧ್ಯತೆಯಿದ್ದ ʼಲಾಲ್ ಸಲಾಂʼ ಆರಂಭಿಕ ಅಂದಾಜಿನ ಪ್ರಕಾರ 4.30 ಕೋಟಿ ರೂಪಾಯಿಯ ಗಳಿಕೆಯನ್ನು ಕಂಡಿದೆ.
ವಾರಾಂತ್ಯದಲ್ಲಿ ʼಲಾಲ್ ಸಲಾಂʼ ಕಲೆಕ್ಷನ್ ವಿಚಾರದಲ್ಲಿ ಸದ್ದು ಮಾಡುವ ಸಾಧ್ಯತೆಯಿದೆ ಎನ್ನಲಾಗುತ್ತಿದೆ.
ಈಗಲ್: ದೊಡ್ಡಮಟ್ಟದ ನಿರೀಕ್ಷೆ ಹುಟ್ಟುಹಾಕಿದ್ದ ರವಿತೇಜ ಅವರ ʼಟೈಗರ್ ನಾಗೇಶ್ವರ ರಾವ್ʼ ಅಷ್ಟಾಗಿ ಸದ್ದು ಮಾಡಿಲ್ಲ. ಇದೀಗ ಬಂದಿರುವ ಅವರ ʼಈಗಲ್ʼ ಸಿನಿಮಾದ ಮೇಲೂ ದೊಡ್ಡಮಟ್ಟದ ನಿರೀಕ್ಷೆಯನ್ನಿಟ್ಟುಕೊಳ್ಳಲಾಗಿದೆ.
ಕಾರ್ತಿಕ್ ಘಟ್ಟಮನೆನಿ ನಿರ್ದೇಶನದ ಈ ಸಿನಿಮಾದಲ್ಲಿ ರವಿತೇಜ ಸಖತ್ ಮಾಸ್ ಅವತಾರದಲ್ಲಿ ಕಾಣಿಸಿಕೊಂಡಿದ್ದಾರೆ. ಮಾಸ್ ಮಹಾರಾಜ ರವಿತೇಜ ಅವರ ಸಿನಿಮಾಗಳು ಬಾಕ್ಸ್ ಆಫೀಸ್ ನಲ್ಲಿ ಉತ್ತಮ ಗಳಿಕೆ ಕಾಣುತ್ತದೆ ಎನ್ನುವುದು ʼಈಗಲ್ʼ ಕೂಡ ಸಾಬೀತು ಮಾಡಿದೆ. ಮೊದಲ ದಿನವೇ ಭರ್ಜರಿ ಆರಂಭವನ್ನು ಪಡೆದುಕೊಂಡಿದೆ.
ಇಂಡಿಯನ್ ಬಾಕ್ಸ್ ಆಫೀಸ್ ನಲ್ಲಿ ಆರಂಭಿಕ ಅಂದಾಜಿನ ಪ್ರಕಾರ 6 ಕೋಟಿ ರೂ.ಗಳಿಸಿದೆ. ಆ ಮೂಲಕ ಪಾಸಿಟಿವ್ ಸ್ಟಾರ್ಟ್ ಪಡೆದುಕೊಂಡಿದೆ.
‘ಈಗಲ್’ ಚಿತ್ರದಲ್ಲಿ ಅನುಪಮಾ ಪರಮೇಶ್ವರನ್, ಕಾವ್ಯಾ ಥಾಪರ್, ನವದೀಪ್, ಶ್ರೀನಿವಾಸ್ ಅವಸರಲ ಮತ್ತು ಮಧುಬಾಲಾ ಮುಂತಾದವರು ಕಾಣಿಸಿಕೊಂಡಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Salaar: ಜಪಾನ್ನಲ್ಲಿ ಈ ತಿಂಗಳು ತೆರೆಕಾಣಲಿದೆ ಪ್ರಭಾಸ್ – ಪ್ರಶಾಂತ್ ನೀಲ್ ʼಸಲಾರ್ʼ
Rajinikanth ಬಯೋಪಿಕ್ಗೆ ಭರ್ಜರಿ ತಯಾರಿ; ಬಾಲಿವುಡ್ ನಿರ್ಮಾಪಕನಿಂದ ಸಿನಿಮಾ ನಿರ್ಮಾಣ
Kollywood: ದಳಪತಿ ವಿಜಯ್ ʼGOATʼ ಸಿನಿಮಾದಲ್ಲಿ ಧೋನಿ, ರುತ್ ರಾಜ್ ನಟನೆ?
Pushpa 2 First single: ʼಪುಷ್ಪ ಪುಷ್ಪʼ ಎನ್ನುತ್ತಾ ಹಾಡಿನಲ್ಲಿ ಮಿಂಚಿದ ಅಲ್ಲು ಅರ್ಜುನ್
ರಜಿನಿಕಾಂತ್ ʼಕೂಲಿʼಯಲ್ಲಿ ಅನುಮತಿಯಿಲ್ಲದೆ ಹಾಡು ಬಳಕೆ: ಲೀಗಲ್ ನೋಟಿಸ್ ಕಳುಹಿಸಿದ ಇಳಯರಾಜ
MUST WATCH
ಹೊಸ ಸೇರ್ಪಡೆ
Water scarcity; ಮಂಗಳೂರು ನಗರಕ್ಕೆ ಎರಡು ದಿನಕ್ಕೊಮ್ಮೆ ನೀರು
Prajwal Case; ಮೊದಲು ರಾಹುಲ್ ಗಾಂಧಿಗೆ ನೋಟಿಸ್ ಕೊಡಬೇಕು: ಎಚ್ ಡಿಕೆ ಆಗ್ರಹ
Pakistan ಜಿಂದಾಬಾದ್ ಅಂದವರನ್ನು ಡಿಶ್ಯುಂ ಡಿಶ್ಯುಂ ಎಂದು ಶೂಟ್ ಮಾಡಬೇಕು: ಜಮೀರ್
Chikkodi:ಅಮಿತ್ ಶಾ ಸಮ್ಮುಖದಲ್ಲಿ ವಿವೇಕರಾವ್ ಪಾಟೀಲ ಬಿಜೆಪಿ ಸೇರ್ಪಡೆ
Bommai Interview: “ನೀರಾವರಿ-ಕೈಗಾರಿಕಾ ಬೆಳವಣಿಗೆ ಜೊತೆ ಆರ್ಥಿಕಾಭಿವೃದ್ಧಿಗೆ ಆದ್ಯತೆ’