Tollywood: ಜೂ.ಎನ್ಟಿಆರ್ ʼದೇವರʼ ಚಿತ್ರತಂಡದ ಮೇಲೆ ಜೇನುನೊಣ ದಾಳಿ; ಕೆಲವರಿಗೆ ಗಾಯ
Team Udayavani, May 7, 2024, 9:01 AM IST
ಹೈದರಾಬಾದ್: ಜೂ.ಎನ್ ಟಿಆರ್ ಅವರ ಬಹು ನಿರೀಕ್ಷಿತ ʼದೇವರʼ ಸಿನಿಮಾದ ಚಿತ್ರೀಕರಣ ಆರಂಭಗೊಂಡಿದೆ. ಆಂಧ್ರದಲ್ಲಿ ಸಿನಿಮಾದ ಶೂಟಿಂಗ್ ನಡೆಯುತ್ತಿದೆ.
ಸೋಮವಾರ(ಮೇ.6 ರಂದು) ʼದೇವರʼ ಚಿತ್ರೀಕರಣದ ಸಂದರ್ಭದಲ್ಲಿ ಜೇನು ನೊಣಗಳು ದಾಳಿ ನಡೆಸಿದ ಪರಿಣಾಮ ಒಂದು ಕ್ಷಣ ಎಲ್ಲರೂ ಚೆಲ್ಲಾಪಿಲ್ಲಿಯಾಗಿ ಓಡಿರುವ ಘಟನೆ ನಡೆದಿರುವುದು ವರದಿಯಾಗಿದೆ.
ಅಲ್ಲೂರಿ ಜಿಲ್ಲೆಯ ಪಾಡೇರುವಿನ ಮೋದಕೊಂಡಮ್ಮ ಬಳಿ ಸಿನಿಮಾದ ಮಹತ್ವದ ದೃಶ್ಯವನ್ನು ಚಿತ್ರೀಕರಣ ಮಾಡಲಾಗುತ್ತಿತ್ತು. ಏಜೆನ್ಸಿ ಪ್ರದೇಶದಲ್ಲಿ ಚಿತ್ರೀಕರಣ ನಡೆಸುತ್ತಿದ್ದಾಗ ಏಕಾಏಕಿ ಜೇನುನೊಣಗಳ ದೊಡ್ಡ ಗುಂಪೊಂದು ʼದೇವರʼ ತಂಡದ ಮೇಲೆ ದಾಳಿ ಮಾಡಿವೆ.
ಲೇಟೆಸ್ಟ್ ಮಾಹಿತಿಯ ಪ್ರಕಾರ ಈ ಘಟನೆಯಲ್ಲಿ ತಂಡದ ಯಾವುದೇ ಸದಸ್ಯರಿಗೆ ಪ್ರಾಣಾಪಾಯವಾಗಿಲ್ಲ. ಕಲವರಿಗೆ ಸಣ್ಣಪುಟ್ಟ ಗಾಯಗಳಾಗಿವೆ. ಸ್ವಲ್ಪ ವಿರಾಮದ ನಂತರ ಶೂಟಿಂಗ್ ಪುನರಾರಂಭವಾಗಿದೆ ಎಂದು ವರದಿ ತಿಳಿಸಿದೆ.
ಘಟನೆಯ ಸಂದರ್ಭದಲ್ಲಿ ನಟ ಜೂ.ಎನ್ ಟಿಆರ್ ಸ್ಥಳದಲ್ಲಿ ಇರಲಿಲ್ಲ. ಅವರು ಸದ್ಯ ʼವಾರ್ -2ʼ ಸಿನಿಮಾದ ಚಿತ್ರೀಕರಣದಲ್ಲಿ ಭಾಗಿಯಾಗಿದ್ದಾರೆ ಎಂದು ವರದಿ ತಿಳಿಸಿದೆ.
ಕೊರಟಾಲ ಶಿವ ನಿರ್ದೇಶನದ ʼದೇವರʼ ಎರಡು ಪಾರ್ಟ್ ನಲ್ಲಿ ರಿಲೀಸ್ ಆಗಲಿದ್ದು, ಈ ಪ್ಯಾನ್ ಇಂಡಿಯಾ ಸಿನಿಮಾದಲ್ಲಿ ಜಾಹ್ನವಿ ಕಪೂರ್, ಸೈಫ್ ಆಲಿಖಾನ್ ಕಾಣಿಸಿಕೊಳ್ಳಲಿದ್ದಾರೆ. ಇದೇ ವರ್ಷದ ಅಕ್ಟೋಬರ್ 10 ರಂದು ಸಿನಿಮಾ ಬಿಡುಗಡೆಯಾಗಲಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Actress: 42ನೇ ವಯಸ್ಸಿನಲ್ಲಿ ತನಗಿಂತ 6 ವರ್ಷ ಚಿಕ್ಕವನೊಂದಿಗೆ 3ನೇ ಮದುವೆಯಾದ ಖ್ಯಾತ ನಟಿ
Indian 2; ಜುಲೈ 12ರಂದು ತೆರೆಗೆ ಬರಲಿದೆ ಕಮಲ್-ಶಂಕರ್ ಜೋಡಿಯ ಇಂಡಿಯನ್ -2
ಕಾರ್ತಿ ಸಿನಿ ಕೆರಿಯರ್ನಲ್ಲೇ ಅತ್ಯಂತ ದುಬಾರಿ ಸಿನಿಮಾವಾಗಿರಲಿದೆ ʼಸರ್ದಾರ್ -2ʼ
Manjummel Boys ಚಿತ್ರದ ನಿರ್ಮಾಪಕರಿಗೆ ಲೀಗಲ್ ನೋಟಿಸ್ ಕೊಟ್ಟ ಇಳಯರಾಜ
ಗಾನಕೋಗಿಲೆ ಎಂ.ಎಸ್.ಸುಬ್ಬುಲಕ್ಷ್ಮಿ ಪಾತ್ರಕ್ಕೆ ಬಣ್ಣ ಹಚ್ಚುತ್ತಾರಾ ಈ ಸೌತ್ ಬೆಡಗಿಯರು?
MUST WATCH
ಹೊಸ ಸೇರ್ಪಡೆ
Rajkot ದುರಂತ; ಗುಜರಾತ್ ಸರಕಾರದ ಮೇಲೆ ಭರವಸೆಯಿಲ್ಲ: ಹೈಕೋರ್ಟ್ ತರಾಟೆ
Cyclone Remal ಅಪಾರ ಹಾನಿ ; ಪ.ಬಂಗಾಲದಲ್ಲಿ 6, ಬಾಂಗ್ಲಾದಲ್ಲಿ 7 ಸಾವು
ಕೇರಳದಲ್ಲೂ ದಿಲ್ಲಿ ಮಾದರಿ ಮದ್ಯ ಹಗರಣ: ಸಿಬಿಐ ತನಿಖೆಗೆ ಸಚಿವ ಮುರಳೀಧರನ್ ಆಗ್ರಹ
76,000 ಅಂಕ ತಲುಪಿದ್ದ ಬಿಎಸ್ಇ ಸೂಚ್ಯಂಕ: 23,000ಕ್ಕೇರಿ ಕುಸಿದ ನಿಫ್ಟಿ
Ranchi;ಮದ್ಯ ಕೊಡದ್ದಕ್ಕೆ ಗುಂಡಿಕ್ಕಿ ಡಿಜೆಯ ಹತ್ಯೆ: ಆರೋಪಿ ಪೊಲೀಸರ ವಶಕ್ಕೆ