Manjummel Boys ಚಿತ್ರದ ನಿರ್ಮಾಪಕರಿಗೆ ಲೀಗಲ್ ನೋಟಿಸ್ ಕೊಟ್ಟ ಇಳಯರಾಜ
Team Udayavani, May 23, 2024, 1:39 PM IST
ಚೆನ್ನೈ: ಇತ್ತೀಚೆಗೆ ತೆರೆಕಂಡು ಸೂಪರ್ ಹಿಟ್ ಆದ ಮಳಯಾಲಂ ಸಿನಿಮಾ ‘ಮಂಜುಮ್ಮೆಲ್ ಬಾಯ್ಸ್’ ಚಿತ್ರದ ನಿರ್ಮಾಪಕರಿಗೆ ಹಿರಿಯ ಸಂಗೀತ ನಿರ್ದೇಶಕ ಇಳಯರಾಜ ಅವರು ಲೀಗಲ್ ನೋಟಿಸ್ ಕಳುಹಿಸಿದ್ದಾರೆ. ಮಂಜುಮ್ಮೆಲ್ ಬಾಯ್ಸ್ ಚಿತ್ರದ ನಿರ್ಮಾಪಕರಾದ ಸೊಬಿನ್ ಶಹಿರ್, ಬಾಬು ಶಹಿರ್ ಮತ್ತು ಶಾನ್ ಅಂಟೋನಿ ಅವರಿಗೆ ಕಾಪಿರೈಟ್ ಉಲ್ಲಂಘನೆಗಾಗಿ ಇಳಯರಾಜ ಅವರು ಲೀಗಲ್ ನೋಟಿಸ್ ಕಳುಹಿಸಿದ್ದಾರೆ.
ಕಮಲ್ ಹಾಸನ್ ಅವರ ‘ಗುಣ’ ಚಿತ್ರದ ಇಳಯರಾಜ ಅವರ ಐಕಾನಿಕ್ ‘ಕಣ್ಮಣಿ ಅನ್ಬೋಡು’ ಹಾಡನ್ನು ‘ಮಂಜುಮ್ಮೆಲ್ ಬಾಯ್ಸ್’ ಚಿತ್ರದಲ್ಲಿ ಅನಧಿಕೃತವಾಗಿ ಬಳಸಿಕೊಳ್ಳಲಾಗಿದೆ ಎಂದು ಅವರ ಕಾನೂನು ತಂಡವು ಆರೋಪಿಸಿದೆ.
ಚಿದಂಬರಂ ನಿರ್ದೇಶನದ ಮಲಯಾಳಂ ಚಿತ್ರ ‘ಮಂಜುಮ್ಮೆಲ್ ಬಾಯ್ಸ್’ ನ ಕ್ಲೈಮ್ಯಾಕ್ಸ್ ನಲ್ಲಿ ‘ಕಣ್ಮಣಿ ಅನ್ಬೋಡು’ ಹಾಡಿನ ಬಳಕೆ ಮಾಡಿದ್ದು, ಚಿತ್ರಕ್ಕೆ ಉತ್ತಮ ಪ್ರಶಂಸೆ ವ್ಯಕ್ತವಾಗಿದೆ.
ಇಳಯರಾಜ ಅವರು ಹಕ್ಕುಸ್ವಾಮ್ಯ ಉಲ್ಲಂಘನೆಯನ್ನು ಕ್ಲೈಮ್ ಮಾಡಿದ್ದಾರೆ. ಚಿತ್ರದಲ್ಲಿ ಹಾಡಿನ ಬಳಕೆಯನ್ನು ಮುಂದುವರಿಸಲು ಅಥವಾ ಅದನ್ನು ತೆಗೆದು ಹಾಕಲು ಅವರಿಂದ ಸೂಕ್ತ ಅನುಮತಿ ಪಡೆಯಲು ನಿರ್ಮಾಪಕರನ್ನು ಕೋರಿದ್ದಾರೆ.
‘ಮಂಜುಮ್ಮೆಲ್ ಬಾಯ್ಸ್’ ತಮಿಳುನಾಡಿನ ಕೊಡೈಕೆನಾಲ್ನಲ್ಲಿರುವ ಗುಣ ಗುಹೆಯಲ್ಲಿ ಸ್ನೇಹಿತರ ಗುಂಪೊಂದು ಆಳವಾದ ಗುಂಡಿಯಲ್ಲಿ ಬಿದ್ದ ತಮ್ಮ ಸ್ನೇಹಿತನನ್ನು ರಕ್ಷಿಸುವ ನೈಜ ಘಟನೆಯನ್ನು ಆಧರಿಸಿದ ಚಲನಚಿತ್ರವಾಗಿದೆ.
‘ಮಂಜುಮ್ಮೆಲ್ ಬಾಯ್ಸ್’ ವಿಶ್ವದಾದ್ಯಂತ ಬಾಕ್ಸ್ ಆಫೀಸ್ನಲ್ಲಿ 200 ಕೋಟಿ ರೂ.ಗಳನ್ನು ಗಳಿಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ದರ್ಶನ್ ಬಂಧನ To ಕಲ್ಕಿ ಟ್ರೇಲರ್.. ಈ ವಾರ ಸುದ್ದಿಯಾದ ಪ್ರಮುಖ ಸೌತ್ ಸಿನಿ ಸುದ್ದಿಗಳಿವು
Movies: ʼಪುಷ್ಪ-2ʼ ಮುಂದೂಡಿಕೆಯಾದರೆ ಸ್ವಾತಂತ್ರ್ಯ ದಿನದ ರಿಲೀಸ್ ಮೇಲೆ ಈ ಚಿತ್ರಗಳ ಕಣ್ಣು
ಲಂಡನ್ ಶೂಟ್,ಡಾನ್ ಲುಕ್, ಖ್ಯಾತ ನಟಿ ಎಂಟ್ರಿ.. ʼಟಾಕ್ಸಿಕ್ʼ ಲೇಟೆಸ್ಟ್ ಅಪ್ಡೇಟ್ ಔಟ್
Pradeep K Vijayan: ಮನೆಯಲ್ಲಿ ಶವವಾಗಿ ಪತ್ತೆಯಾದ ಖ್ಯಾತ ನಟ; ತನಿಖೆ ಆರಂಭ
Cinema Shot: ಹೆಲಿ ಕಾಪ್ಟರ್ ನಿಂದ ಜಿಗಿಯುವ ದೃಶ್ಯ ಚಿತ್ರೀಕರಣ, ನಟ ಜಾರ್ಜ್ ಗೆ ಗಾಯ
MUST WATCH
ಹೊಸ ಸೇರ್ಪಡೆ
David Wiese: ಅಂತಾರಾಷ್ಟ್ರೀಯ ಕ್ರಿಕೆಟ್ ಗೆ ವಿದಾಯ ಹೇಳಿದ ಡೇವಿಡ್ ವೀಸ
Gaza: ರಫಾದಲ್ಲಿ ಸ್ಫೋಟ; ಪ್ರಾಣ ಕಳೆದುಕೊಂಡ ಎಂಟು ಇಸ್ರೇಲಿ ಸೈನಿಕರು
ನಮೀಬಿಯಾ ವಿರುದ್ದ ಗೆದ್ದ ಇಂಗ್ಲೆಂಡ್; ಸೂಪರ್ 8ರಲ್ಲಿ ಒಂದು ಕಾಲಿಟ್ಟು ಕುಳಿತ ಬಟ್ಲರ್ ಪಡೆ
Udupi: ಎಸೆಸೆಲ್ಸಿ ಫಲಿತಾಂಶ ಶ್ರೇಷ್ಠತೆಗೆ ವಿನೂತನ ಪ್ರಯೋಗ
Daily Horoscope:ವಸ್ತ್ರ,ಆಭರಣ ವ್ಯಾಪಾರಿಗಳಿಗೆ ನಿರೀಕ್ಷೆ ಮೀರಿ ಲಾಭ,ಮಿತ್ರರೊಂದಿಗೆ ಪ್ರವಾಸ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.