Japan earthquake: ಜಪಾನ್‌ನಿಂದ ಸುರಕ್ಷಿತವಾಗಿ ಭಾರತಕ್ಕೆ ಮರಳಿದ ನಟ ಜೂ.ಎನ್‌ ಟಿಆರ್


Team Udayavani, Jan 2, 2024, 10:22 AM IST

Japan earthquake: ಜಪಾನ್‌ನಿಂದ ಸುರಕ್ಷಿತವಾಗಿ ಭಾರತಕ್ಕೆ ಮರಳಿದ ನಟ ಜೂ.ಎನ್‌ ಟಿಆರ್

ಹೈದರಾಬಾದ್: ಕಳೆದ ವಾರ ಜಪಾನ್‌ ನಲ್ಲಿ ಕುಟುಂಬಸ್ಥರೊಂದಿಗೆ ಆತ್ಮೀಯ ಕ್ಷಣಗಳನ್ನು ಕಳೆದಿದ್ದ ನಟ ಜೂ.ಎನ್‌ ಟಿಆರ್‌  ಸುರಕ್ಷಿತವಾಗಿ ಭಾರತಕ್ಕೆ ಮರಳಿದ್ದಾರೆ.

ಜಪಾನ್‌ ನಲ್ಲಿ 155 ಬಾರಿ ಭೂಮಿ ಕಂಪಿಸಿದ್ದು, ಸುನಾಮಿಯಿಂದ 12 ಮಂದಿ ಮೃತಪಟ್ಟಿದ್ದಾರೆ. ಹತ್ತಾರು ಕಟ್ಟಡಗಳು ಕುಸಿದಿವೆ. ಜನರು ಪ್ರಾಣ ಭಯದಿಂದ ಸುರಕ್ಷಿತ ಸ್ಥಳಕ್ಕೆ ತೆರಳುತ್ತಿದ್ದಾರೆ. ಭೀಕರ ಸುನಾಮಿಯ ಎಚ್ಚರಿಕೆಯನ್ನು ನೀಡಲಾಗಿದೆ.

ಕ್ರಿಸ್‌ ಮಸ್‌ ಹಾಗೂ ಹೊಸ ವರ್ಷದ ಸಂಭ್ರಮಕ್ಕಾಗಿ ನಟ ಜೂ.ಎನ್‌ ಟಿಆರ್‌ ತನ್ನ ಕುಟುಂಬದೊಂದಿಗೆ ಜಪಾನ್‌ ತೆರಳಿದ್ದರು.  ತಮ್ಮ ಪತ್ನಿ ಲಕ್ಷ್ಮಿ ಪ್ರಣತಿ ಮತ್ತು ಅವರ ಇಬ್ಬರು ಮಕ್ಕಳಾದ ಅಭಯ್ ಮತ್ತು ಭಾರ್ಗವ್ ಅವರೊಂದಿಗೆ ಕ್ರಿಸ್‌ಮಸ್ ಮತ್ತು ಹೊಸ ವರ್ಷವನ್ನು ಜಪಾನ್‌ನಲ್ಲಿ ಕಳೆದಿದ್ದಾರೆ.

ಜ.1 ರಂದು ಜಪಾನ್‌ ನಲ್ಲಿ ಸುನಾಮಿಯ ಎಚ್ಚರಿಕೆಯನ್ನು ನೀಡಲಾಗಿದೆ. ಭೂಕಂಪದ ಭೀತಿಯಲ್ಲಿದ್ದ ಜಪಾನ್‌ ನಿಂದ ಜೂ.ಎನ್‌ ಟಿಆರ್‌ ವಾಪಾಸ್‌ ಆಗಿದ್ದು, ಸುರಕ್ಷಿತವಾಗಿ ಬಂದಿರುವ ಬಗ್ಗೆ ʼಎಕ್ಸ್‌ʼನಲ್ಲಿ ಬರೆದುಕೊಂಡಿದ್ದಾರೆ.

“ಇಂದು ಜಪಾನ್‌ ನಿಂದ ಹಿಂತಿರುಗಿ ಮನೆಗೆ ಬಂದಿದ್ದೇನೆ. ಅಲ್ಲಿಗೆ ಅಪ್ಪಳಿಸಿರುವ ಭೂಕಂಪದ ಸುದ್ದಿಯಿಂದ ಆಘಾತಗೊಂಡಿದ್ದೇನೆ. ಕಳೆದ ವಾರ ಪೂರ್ತಿ ಅಲ್ಲಿಯೇ ಕಳೆದಿದ್ದೇನೆ. ಕಷ್ಟದಲ್ಲಿ ಬಾಧಿತರಾದವರ ಜೊತೆ ನನ್ನ ಮನಸ್ಸು ಇರುತ್ತದೆ. ಶೀಘ್ರದಲ್ಲಿ ಪರಿಸ್ಥಿತಿ ಸರಿಯಾಗುತ್ತದೆಂದು ಆಶಿಸುತ್ತೇನೆ” ಎಂದು ಬರೆದುಕೊಂಡಿದ್ದಾರೆ.

ಜನವರಿ 1 ರಂದು, ಜೂನಿಯರ್ ಎನ್‌ಟಿಆರ್, ಅವರ ಪತ್ನಿ ಮತ್ತು ಇಬ್ಬರು ಪುತ್ರರು ಹೈದರಾಬಾದ್ ವಿಮಾನ ನಿಲ್ದಾಣಕ್ಕೆ ಆಗಮಿಸಿದ್ದಾರೆ.

ʼಆರ್‌ ಆರ್‌ ಆರ್‌ ʼ ಬಳಿಕ ಜೂನಿಯರ್ ಎನ್‌ಟಿಆರ್ ʼದೇವರʼ ಸಿನಿಮಾದಲ್ಲಿ ಬ್ಯುಸಿಯಾಗಿದ್ದಾರೆ. ಇದರ ಮೊದಲ ಗ್ಲಿಂಪ್ಸ್‌ ಜ.8 ರಂದು ರಿವೀಲ್‌ ಆಗಲಿದೆ.

 

View this post on Instagram

 

A post shared by Kamlesh Nand (work) (@artistrybuzz_)

ಟಾಪ್ ನ್ಯೂಸ್

Priyanka Gandhi

ಪ್ರಿಯಾಂಕಾ ಮಾಂಗಲ್ಯ ಧರಿಸದ್ದಕ್ಕೆ ನೆಹರೂ ಆತ್ಮಕ್ಕೆ ಕೊರಗು: ಮೋಹನ್‌ ಯಾದವ್‌

Exam

ಕೋಟಾದಲ್ಲಿ ನೀಟ್‌ ವಿದ್ಯಾರ್ಥಿನಿ ನಾಪತ್ತೆ: ಇದು 4ನೇ ಪ್ರಕರಣ

musk

Elon Musk ಭಾರತ ಭೇಟಿ ರದ್ದಾದ ಬೆನ್ನಲ್ಲೇ ಚೀನಕ್ಕೆ ಭೇಟಿ

1-fire

ಮತ್ತೆ ಉತ್ತರಾಖಂಡದ 8 ಸ್ಥಳಗಳಲ್ಲಿ ಹಬ್ಬಿದ ಕಾಳ್ಗಿಚ್ಚು!

chess

Chess; ಭಾರತದಲ್ಲೇ ವಿಶ್ವ ಚಾಂಪಿಯನ್‌ಶಿಪ್‌ ನಡೆಸಲು ಚಿಂತನೆ

Temperature ಕಾಸರಗೋಡಿನಲ್ಲಿ ತಾಪಮಾನ ಹೆಚ್ಚಳ

Temperature ಕಾಸರಗೋಡಿನಲ್ಲಿ ತಾಪಮಾನ ಹೆಚ್ಚಳ

D.K; Udupi ರಜೆ, ಶುಭ ಸಮಾರಂಭ: ಎಲ್ಲೆಡೆ ವಾಹನ ದಟ್ಟಣೆ

D.K; Udupi ರಜೆ, ಶುಭ ಸಮಾರಂಭ: ಎಲ್ಲೆಡೆ ವಾಹನ ದಟ್ಟಣೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ʼಬಂಗಾರಂʼನಲ್ಲಿ ರಕ್ತಸಿಕ್ತ ಅವತಾರ ತಾಳಿದ ಸಮಂತಾ: ಹುಟ್ಟುಹಬ್ಬಕ್ಕೆ ಹೊಸ ಸಿನಿಮಾ ಅನೌನ್ಸ್

ʼಬಂಗಾರಂʼನಲ್ಲಿ ರಕ್ತಸಿಕ್ತ ಅವತಾರ ತಾಳಿದ ಸಮಂತಾ: ಹುಟ್ಟುಹಬ್ಬಕ್ಕೆ ಹೊಸ ಸಿನಿಮಾ ಅನೌನ್ಸ್

14

Tollywood: ಅಧಿಕೃತವಾಗಿ ರಿವೀಲ್‌ ಆಯಿತು ‘ಕಲ್ಕಿ 2898 ಎಡಿʼ ಸಿನಿಮಾದ ರಿಲೀಸ್‌ ಡೇಟ್

Rakshit Shetty: ʼರಿಚರ್ಡ್‌ ಆಂಟನಿʼಯಲ್ಲಿ ಈ ಕರಾವಳಿಯ ನಟಿಯರಿಗೆ ಸಿಗುತ್ತಾ ಅವಕಾಶ?

Rakshit Shetty: ʼರಿಚರ್ಡ್‌ ಆಂಟನಿʼಯಲ್ಲಿ ಈ ಕರಾವಳಿಯ ನಟಿಯರಿಗೆ ಸಿಗುತ್ತಾ ಅವಕಾಶ?

Kollywood: ಅಜಿತ್‌ ಹುಟ್ಟುಹಬ್ಬಕ್ಕೆ ಸೂಪರ್‌ ಹಿಟ್ ʼಬಿಲ್ಲಾʼ ರೀ ರಿಲೀಸ್; ಫ್ಯಾನ್ಸ್‌ ಖುಷ್

Kollywood: ಅಜಿತ್‌ ಹುಟ್ಟುಹಬ್ಬಕ್ಕೆ ಸೂಪರ್‌ ಹಿಟ್ ʼಬಿಲ್ಲಾʼ ರೀ ರಿಲೀಸ್; ಫ್ಯಾನ್ಸ್‌ ಖುಷ್

24

OTT Release: ವಿಜಯ್‌ ದೇವರಕೊಂಡ ʼಫ್ಯಾಮಿಲಿ ಸ್ಟಾರ್‌ʼ ಓಟಿಟಿ ರಿಲೀಸ್‌ಗೆ ಡೇಟ್‌ ಫಿಕ್ಸ್

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

congress

North East Delhi ಅಭ್ಯರ್ಥಿ ಕನ್ಹಯ್ಯ ವಿರುದ್ಧ ಕಾಂಗ್ರೆಸಿಗರ ಪ್ರತಿಭಟನೆ!

IMD

Kerala; ಬಿಸಿಲ ಝಳಕ್ಕೆ ಇಬ್ಬರ ಸಾವು

Priyanka Gandhi

ಪ್ರಿಯಾಂಕಾ ಮಾಂಗಲ್ಯ ಧರಿಸದ್ದಕ್ಕೆ ನೆಹರೂ ಆತ್ಮಕ್ಕೆ ಕೊರಗು: ಮೋಹನ್‌ ಯಾದವ್‌

Exam

ಕೋಟಾದಲ್ಲಿ ನೀಟ್‌ ವಿದ್ಯಾರ್ಥಿನಿ ನಾಪತ್ತೆ: ಇದು 4ನೇ ಪ್ರಕರಣ

musk

Elon Musk ಭಾರತ ಭೇಟಿ ರದ್ದಾದ ಬೆನ್ನಲ್ಲೇ ಚೀನಕ್ಕೆ ಭೇಟಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.