ಗಾಯಕ ಹರಿಹರನ್‌ ಕಾರ್ಯಕ್ರಮದಲ್ಲಿ ಭಾರೀ ಜನಸ್ತೋಮ: ನಟಿ ತಮನ್ನಾ ನೋಡಲು ಮುಗಿಬಿದ್ದ ಫ್ಯಾನ್ಸ್


Team Udayavani, Feb 12, 2024, 3:14 PM IST

ಗಾಯಕ ಹರಿಹರನ್‌ ಕಾರ್ಯಕ್ರಮದಲ್ಲಿ ಭಾರೀ ಜನಸ್ತೋಮ: ನಟಿ ತಮನ್ನಾ ನೋಡಲು ಮುಗಿಬಿದ್ದ ಫ್ಯಾನ್ಸ್

ಕೊಲಂಬೊ: ಕಳೆದ ವರ್ಷ ಖ್ಯಾತ ಗಾಯಕ ಎಆರ್ ರೆಹಮಾನ್ ಅವರ ಮರಕ್ಕುಮಾ ನೆಂಜಮ್ ಮ್ಯೂಸಿಕ್‌ ಕಾನ್ಸರ್ಟ್‌ ನಲ್ಲಿ ಭಾರೀ ಜನಸ್ತೋಮ ಸೇರಿದ ಕಾರಣ ನೂಕುನುಗ್ಗಲು ಉಂಟಾಗಿತ್ತು. ಇದೀಗ ಜನಪ್ರಿಯ ಗಾಯಕ ಹರಿಹರನ್‌ ಅವರ ಇತ್ತೀಚೆಗಿನ ಕಾನ್ಸರ್ಟ್‌ ನಲ್ಲಿ ಇಂಥದ್ದೇ ದೃಶ್ಯ ಕಂಡು ಬಂದಿದೆ.

ಇತ್ತೀಚೆಗೆ(ಫೆ.9 ರಂದು) ಶ್ರೀಲಂಕಾದ ಜಾಫ್ನಾದಲ್ಲಿ ಹರಿಹರನ್‌ ಅವರ ಸಂಗೀತ ಸಂಜೆ ಕಾರ್ಯಕ್ರಮವನ್ನುಆಯೋಜನೆ ಮಾಡಲಾಗಿತ್ತು. ಎಲ್ಲವೂ ಅಂದುಕೊಂಡಂತೆ ಆಗಿದ್ದರೆ, ಈ ಕಾರ್ಯಕ್ರಮ ಕಳೆದ ಡಿಸೆಂಬರ್‌ ನಲ್ಲೇ ಆಗಬೇಕಿತ್ತು. ಆದರೆ ಹವಾಮಾನ ವೈಪರೀತ್ಯದಿಂದ ಕಾರ್ಯಕ್ರಮವನ್ನು ಫೆ.9 ರಂದು ನಿಗದಿಪಡಿಸಲಾಗಿತ್ತು.

ಕಾರ್ಯಕ್ರಮವನ್ನು ಅದ್ಧೂರಿಯಾಗಿ ಆಯೋಜನೆ ಮಾಡಲಾಗಿತ್ತು. ಗಾಯಕ ಹರಿಹರನ್‌ ಮಾತ್ರವಲ್ಲದೆ, ದಕ್ಷಿಣ ಚಿತ್ರರಂಗದ ಪ್ರಮುಖ ತಾರೆಯರಾದ ತಮನ್ನಾ ಭಾಟಿಯಾ, ರಂಬಾ, ಯೋಗಿ ಬಾಬು, ಶ್ವೇತಾ ಮೆನನ್, ಬಾಲಾ ಮತ್ತು ಸ್ಯಾಂಡಿ ಮಾಸ್ಟರ್ ಮುಂತಾದವರು ಭಾಗಿಯಾಗಿದ್ದರು.

ತಮನ್ನಾ ಅವರ ಪ್ರದರ್ಶನದ ಬಳಿಕ ಅನಿರೀಕ್ಷಿತವಾಗಿ ಲಕ್ಷಕ್ಕೂ ಅಧಿಕ ಜನ ಕಾರ್ಯಕ್ರಮವನ್ನು ನೋಡಲು ಹರಿದು ಬಂದಿದ್ದಾರೆ. ಕಾರ್ಯಕ್ರಮದ ಆಯೋಜಕರು ಮೊದಲು ಉಚಿತವಾಗಿ ಕಾರ್ಯಕ್ರಮಕ್ಕೆ ಬರಬಹುದೆಂದು ಘೋಷಿಸಿದ್ದರು. ಆದರೆ ಆ ಬಳಿಕ ಒಂದು ವಿಭಾಗಕ್ಕೆ 3,000 ರಿಂದ 25,000 ರೂ.ವರೆಗೆ ರೂ.ವರೆಗೆ ಟಿಕೆಟ್‌ ಇಟ್ಟಿದ್ದರು. ಆದರೆ ಜನ ಪಾವತಿಸಿದ ಸೀಟ್‌ ಗಳನ್ನು ಕಬಳಿಸುವ ಭರದಲ್ಲಿ ನೂಕುನುಗ್ಗಲು ಉಂಟಾಗಿದೆ. ಎಲ್ಲಿಯವರೆಗೆ ಅಂದರೆ ಕಲಾವಿದರು ಜನರಲ್ಲಿ ಮಾಡಿದರೂ ಜನದಟ್ಟಣೆ ಕಮ್ಮಿಯಾಗಿಲ್ಲ. ಇದರಿಂದ ಕೆಲಕಾಲ ಕಾರ್ಯಕ್ರವನ್ನು ನಿಲ್ಲಿಸಲಾಗಿತ್ತು.

ಅಭಿಮಾನಿಗಳು ತಮ್ಮ ನೆಚ್ಚಿನ ತಾರೆಯರನ್ನು ಕಾಣಕಲು ಕ್ಯಾಮೆರಾ ಹಾಗೂ ಸ್ಪೀಕರ್‌ ಇಟ್ಟ ಜಾಗದಲ್ಲಿ ಹತ್ತಿ ಕೂತಿದ್ದಾರೆ. ಕೆಲವರಂತೂ ಮರದ ಮೇಲೆ ಹತ್ತಿದ್ದಾರೆ.

ಅಭಿಮಾನಿಗಳ ರಾದ್ಧಾಂತದಿಂದ ಭದ್ರತಾ ಸಿಬ್ಬಂದಿ ಮತ್ತು ನಟರು ಅಭಿಮಾನಿಗಳನ್ನು ಶಾಂತಗೊಳಿಸಲು ಪ್ರಯತ್ನಿಸಿದರು. ಕಾನ್ಸರ್ಟ್‌ ನ ನಿಯಮಗಳು ಮತ್ತು ನಿಬಂಧನೆಗಳನ್ನು ಜನ ಅನುಸರಿಸಲು ನಿರಾಕರಿಸಿದ ನಂತರ ಟಾಸ್ಕ್ ಫೋರ್ಸ್ ಪಡೆ ಜನರಿಗೆ ಎಚ್ಚರಿಕೆ ನೀಡಿದೆ.

ಈ ಘಟನೆಯಲ್ಲಿ 3 ಮಂದಿ ಗಾಯಗೊಂಡಿದ್ದು, 6 ಮಂದಿಯನ್ನು ಬಂಧಿಸಲಾಗಿದೆ ಎಂದು ವರದಿ ತಿಳಿಸಿದೆ.

ಉಚಿತ ಪ್ರೇಕ್ಷಕರ ಪ್ರವೇಶದಿಂದ ಸಮಸ್ಯೆಗಳು ಉಂಟಾಗಿವೆ ಎಂದು ಆಯೋಜಕರು ಹೇಳಿದ್ದಾರೆ. ಇನ್ನೊಂದೆಡೆ ಈ ಅವಘಡಕ್ಕೆ ಸಂಘಟಕರ ನಿರ್ಲಕ್ಷ್ಯವೇ ಕಾರಣ ಎಂದು ಜನ ಆರೋಪಿಸಿದ್ದಾರೆ.

ಈ ಕಾರ್ಯಕ್ರಮವನ್ನು ನಟಿ ರಂಬಾ ಅವರ ಪತಿ ಇಂದ್ರ ಮತ್ತು ಅವರ ಉತ್ತರ ವಿಶ್ವವಿದ್ಯಾಲಯ ಆಯೋಜಿಸಿತ್ತು.

 

ಟಾಪ್ ನ್ಯೂಸ್

1-24-saturday

Daily Horoscope: ಪಾಲುದಾರಿಕೆ ವ್ಯವಹಾರದಲ್ಲಿ ಲಾಭ ಹೆಚ್ಚಳ, ಆರೋಗ್ಯ ಉತ್ತಮ

CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್‌ಗೆ ವಿವರಣೆ?

CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್‌ಗೆ ವಿವರಣೆ?

Ramanagara ಜಿಲ್ಲೆ ಇನ್ನು ಬೆಂಗಳೂರು ದಕ್ಷಿಣ; ರಾಜ್ಯ ಸಚಿವ ಸಂಪುಟದಲ್ಲಿ ನಿರ್ಧಾರ

Ramanagara ಜಿಲ್ಲೆ ಇನ್ನು ಬೆಂಗಳೂರು ದಕ್ಷಿಣ; ರಾಜ್ಯ ಸಚಿವ ಸಂಪುಟದಲ್ಲಿ ನಿರ್ಧಾರ

Siddaramaiah ನನ್ನ ವಿರುದ್ಧ ವಿಪಕ್ಷ ಷಡ್ಯಂತ್ರ

Siddaramaiah ನನ್ನ ವಿರುದ್ಧ ವಿಪಕ್ಷ ಷಡ್ಯಂತ್ರ

Pilikula Biological Park: ಕಾಳಿಂಗ ಸರ್ಪಗಳಿಗೆ “ಮೈಕ್ರೋ ಚಿಪ್‌’!

Pilikula Biological Park: ಕಾಳಿಂಗ ಸರ್ಪಗಳಿಗೆ “ಮೈಕ್ರೋ ಚಿಪ್‌’!

1-aaasdeqweqw

India-Sri Lanka ಟಿ20 ಸರಣಿ ಇಂದಿನಿಂದ : ಸೂರ್ಯ, ಗಂಭೀರ್‌ ಯುಗಾರಂಭ

1-hockey

Paris Olympics ಹಾಕಿ ಕಂಚಿನಿಂದಾಚೆ ಮಿಂಚಲಿ ಭಾರತ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

rudraveena movie

Rudra Veena; ಜುಲೈ 26ರಂದು ತೆರೆಗೆ ಬರುತ್ತಿದೆ ‘ರುದ್ರ ವೀಣಾ’ ಚಿತ್ರ

Sai Pallavi: ಎರಡು ಮಕ್ಕಳ ತಂದೆ ಜೊತೆ ನಟಿ ಸಾಯಿಪಲ್ಲವಿ ಡೇಟಿಂಗ್?‌ ಏನಿದು ವಿಚಾರ?

Sai Pallavi: ಎರಡು ಮಕ್ಕಳ ತಂದೆ ಜೊತೆ ನಟಿ ಸಾಯಿಪಲ್ಲವಿ ಡೇಟಿಂಗ್?‌ ಏನಿದು ವಿಚಾರ?

Love Insurance Kompany: ಪತಿಯ ಸಿನಿಮಾಕ್ಕೆ ನಿರ್ಮಾಪಕಿಯಾದ ನಯನತಾರಾ; ಫಸ್ಟ್‌ ಲುಕ್‌ ಔಟ್

Love Insurance Kompany: ಪತಿಯ ಸಿನಿಮಾಕ್ಕೆ ನಿರ್ಮಾಪಕಿಯಾದ ನಯನತಾರಾ; ಫಸ್ಟ್‌ ಲುಕ್‌ ಔಟ್

Kollywood: ರಜಿನಿಕಾಂತ್‌ ʼಕೂಲಿʼಗೆ ಖಡಕ್‌ ವಿಲನ್‌ ಆಗಿ ಅಕ್ಕಿನೇನಿ ನಾಗಾರ್ಜುನ ಎಂಟ್ರಿ?

Kollywood: ರಜಿನಿಕಾಂತ್‌ ʼಕೂಲಿʼಗೆ ಖಡಕ್‌ ವಿಲನ್‌ ಆಗಿ ಅಕ್ಕಿನೇನಿ ನಾಗಾರ್ಜುನ ಎಂಟ್ರಿ?

SK25: ಶಿವಕಾರ್ತಿಕೇಯನ್ ಗೆ ಆ್ಯಕ್ಷನ್ ಕಟ್ ಹೇಳಲಿದ್ದಾರೆ ಸುಧಾ ಕೊಂಗರ

SK25: ಶಿವಕಾರ್ತಿಕೇಯನ್ ಗೆ ಆ್ಯಕ್ಷನ್ ಕಟ್ ಹೇಳಲಿದ್ದಾರೆ ಸುಧಾ ಕೊಂಗರ

MUST WATCH

udayavani youtube

ಸರ್ಕಾರದ ವಿರುದ್ಧ ವಿಧಾನಸಭೆಯಲ್ಲಿ ಬಿಜೆಪಿ-JDS ಶಾಸಕರಿಂದ ಭಜನೆ

udayavani youtube

ಶಿರೂರು ಗುಡ್ಡಕುಸಿತ; ಕಾಣೆಯಾದವರ ಹುಡುಕಾಟಕ್ಕೆ ಡ್ರೋನ್ ಬಳಸಿ ಕಾರ್ಯಾಚರಣೆ

udayavani youtube

ಕರ್ಮಫಲ ಶಿಕ್ಷಣದಿಂದ ಆತ್ಮೋನ್ನತಿ

udayavani youtube

ತಪ್ತ ಮುದ್ರಾ ಧಾರಣೆ ವಿಶೇಷ ಮಹತ್ವದ್ದು, ಯಾಕೆ?

udayavani youtube

ಬಾಳೆಯಿಂದ ವಾರ್ಷಿಕ 50-60 ಲಕ್ಷ ರೂ. ಆದಾಯ

ಹೊಸ ಸೇರ್ಪಡೆ

1-24-saturday

Daily Horoscope: ಪಾಲುದಾರಿಕೆ ವ್ಯವಹಾರದಲ್ಲಿ ಲಾಭ ಹೆಚ್ಚಳ, ಆರೋಗ್ಯ ಉತ್ತಮ

CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್‌ಗೆ ವಿವರಣೆ?

CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್‌ಗೆ ವಿವರಣೆ?

Ramanagara ಜಿಲ್ಲೆ ಇನ್ನು ಬೆಂಗಳೂರು ದಕ್ಷಿಣ; ರಾಜ್ಯ ಸಚಿವ ಸಂಪುಟದಲ್ಲಿ ನಿರ್ಧಾರ

Ramanagara ಜಿಲ್ಲೆ ಇನ್ನು ಬೆಂಗಳೂರು ದಕ್ಷಿಣ; ರಾಜ್ಯ ಸಚಿವ ಸಂಪುಟದಲ್ಲಿ ನಿರ್ಧಾರ

Siddaramaiah ನನ್ನ ವಿರುದ್ಧ ವಿಪಕ್ಷ ಷಡ್ಯಂತ್ರ

Siddaramaiah ನನ್ನ ವಿರುದ್ಧ ವಿಪಕ್ಷ ಷಡ್ಯಂತ್ರ

Pilikula Biological Park: ಕಾಳಿಂಗ ಸರ್ಪಗಳಿಗೆ “ಮೈಕ್ರೋ ಚಿಪ್‌’!

Pilikula Biological Park: ಕಾಳಿಂಗ ಸರ್ಪಗಳಿಗೆ “ಮೈಕ್ರೋ ಚಿಪ್‌’!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.