ಧಾರ್ಮಿಕ ಭಾವನೆಕ್ಕೆ ಧಕ್ಕೆ ಆರೋಪ: ʼಅನ್ನಪೂರ್ಣಿʼ ಸ್ಟ್ರೀಮಿಂಗ್ ನಿಲ್ಲಿಸಿದ Netflix
Team Udayavani, Jan 11, 2024, 1:35 PM IST
ಚೆನ್ನೈ: ಲೇಡಿ ಸೂಪರ್ ಸ್ಟಾರ್ ನಯನತಾರಾ ಅಭಿನಯಿಸಿರುವ ʼಅನ್ನಪೂರ್ಣಿʼ ಸಿನಿಮಾದ ವಿರುದ್ಧ ಧಾರ್ಮಿಕ ಭಾವನೆಗೆ ಧಕ್ಕೆ ತಂದಿರುವ ಆರೋಪ ಕೇಳಿಬಂದಿದ್ದು, ಬಾಯ್ಕಟ್ ಕೂಗು ಹಾಗೂ ಪ್ರತಿಭಟನೆ ಶುರುವಾಗಿದೆ.
ಆರೋಪವೇನು?: ಹಿಂದೂ ಸಮುದಾಯದ ಭಾವನೆಗಳಿಗೆ ಧಕ್ಕೆ ತಂದಿರುವ ಆರೋಪದ ಮೇಲೆ ನಯನತಾರಾ ಅವರ ಇತ್ತೀಚಿನ ಚಿತ್ರ ʼಅನ್ನಪೂರ್ಣಿʼ ಸಿನಿಮಾದ ನಿರ್ಮಾಪಕರ ವಿರುದ್ಧ ಶಿವಸೇನೆಯ ಮಾಜಿ ನಾಯಕ ರಮೇಶ್ ಸೋಲಂಕಿ ಪೊಲೀಸ್ ದೂರು ದಾಖಲಿಸಿದ್ದಾರೆ. ನಿರ್ಮಾಪಕರು ರಾಮನನ್ನು ಅವಮಾನಿಸಿದ್ದಾರೆ ಎಂದು ಅವರು ಆರೋಪಿಸಿದ್ದಾರೆ.
“ಭಗವಾನ್ ಶ್ರೀರಾಮ ಮಂದಿರದ ಪ್ರಾಣ ಪ್ರತಿಷ್ಠೆಯ ನಿರೀಕ್ಷೆಯಲ್ಲಿ ಇಡೀ ಜಗತ್ತು ಸಂಭ್ರಮಿಸುತ್ತಿರುವ ಈ ಸಮಯದಲ್ಲಿ, ಝೀ ಸ್ಟುಡಿಯೋಸ್, ನಾಡ್ ಸ್ಟುಡಿಯೋಸ್ ಮತ್ತು ಟ್ರೈಡೆಂಟ್ ಆರ್ಟ್ಸ್ ನಿರ್ಮಾಣದ ಈ ಹಿಂದೂ ವಿರೋಧಿ ಚಲನಚಿತ್ರ ʼಅನ್ನಪೂರ್ಣಿʼ ನೆಟ್ಫ್ಲಿಕ್ಸ್ನಲ್ಲಿ ಬಿಡುಗಡೆಯಾಗಿದೆ. ಈ ಸಿನಿಮಾದಲ್ಲಿ ಹಿಂದೂ ಪೂಜಾರಿಯ ಮಗಳು ಬಿರಿಯಾನಿ ಅಡುಗೆ ಮಾಡುವ ವೇಳೆ ನಮಾಜ್ ಮಾಡುತ್ತಾಳೆ.ಈ ಚಿತ್ರದಲ್ಲಿ ಲವ್ ಜಿಹಾದ್ ನ್ನು ಪ್ರಚಾರ ಮಾಡಲಾಗಿದೆ. ಫರ್ಹಾನ್ (ನಟ) ಭಗವಾನ್ ಶ್ರೀ ರಾಮ್ ಕೂಡ ಮಾಂಸ ತಿನ್ನುವವರಾಗಿದ್ದರು ಎಂದು ಹೇಳಿ ಮಾಂಸ ತಿನ್ನಲು ನಟಿಯನ್ನು ಮನವೊಲಿಸುವ ದೃಶ್ಯಗಳಿವೆ” ಎಂದು ಸೋಲಂಕಿ ಬರೆದಿದ್ದಾರೆ.
ಇದನ್ನೂ ಓದಿ: Thug Life: ಕಮಲ್ ಹಾಸನ್ ʼಥಗ್ ಲೈಫ್ʼ ಚಿತ್ರಕ್ಕೆ ಇಬ್ಬರು ಸ್ಟಾರ್ ನಟರ ಎಂಟ್ರಿ
ಪ್ರಕರಣ ದಾಖಲಾದ ಬಳಿಕ ಚಿತ್ರತಂಡದ ವಿರುದ್ಧ ʼಬಾಯ್ಕಟ್ ಹಾಗೂ ಪ್ರತಿಭಟನೆ ನಡೆದಿದೆ. ಈ ನಡುವೆ ಸ್ಟ್ರೀಮಿಂಗ್ ಫ್ಲಾಟ್ ಫಾರ್ಮ್ ನೆಟ್ ಫ್ಲಿಕ್ಸ್ ಸಿನಿಮಾದ ಸ್ಟ್ರೀಮಿಂಗ್ ನ್ನು ನಿಲ್ಲಿಸಿದೆ. ಬುಧವಾರ(ಜ.10) ದವರೆಗೆ ನೆಟ್ ಫ್ಲಿಕ್ಸ್ ನಲ್ಲಿ ಸಿನಿಮಾ ಸ್ಟ್ರೀಮ್ ಆಗುತ್ತಿತ್ತು. ಆದರೆ ಗುರುವಾರದಿಂದ ಸಿನಿಮಾ ನೆಟ್ ಫ್ಲಿಕ್ಸ್ ನಲ್ಲಿ ಕಾಣಿಸುತ್ತಿಲ್ಲ. ಸಿನಿಮಾದ ವಿರುದ್ಧ ನಡೆಯುತ್ತಿರುವ ಪ್ರತಿಭಟನೆಯೇ ಇದಕ್ಕೆ ಕಾರಣವೆಂದು ಹೇಳಲಾಗುತ್ತಿದೆ.
ಮತ್ತೆ ಯಾವಾಗದಿಂದ ಸ್ಟ್ರೀಮ್ ಆಗುತ್ತದೆ ಎನ್ನುವುದರ ಮಾಹಿತಿಯಿಲ್ಲ. ಸಿನಿಮಾಕ್ಕೆ ಕೇಳಿ ಬರುತ್ತಿರುವ ವಿರೋಧದ ಬಗ್ಗೆ ಚಿತ್ರತಂಡ ಇದುವರೆಗೆ ಯಾವುದೇ ಸ್ಪಷ್ಟೀಕರಣ ನೀಡಿಲ್ಲ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ʼಬಂಗಾರಂʼನಲ್ಲಿ ರಕ್ತಸಿಕ್ತ ಅವತಾರ ತಾಳಿದ ಸಮಂತಾ: ಹುಟ್ಟುಹಬ್ಬಕ್ಕೆ ಹೊಸ ಸಿನಿಮಾ ಅನೌನ್ಸ್
Tollywood: ಅಧಿಕೃತವಾಗಿ ರಿವೀಲ್ ಆಯಿತು ‘ಕಲ್ಕಿ 2898 ಎಡಿʼ ಸಿನಿಮಾದ ರಿಲೀಸ್ ಡೇಟ್
Rakshit Shetty: ʼರಿಚರ್ಡ್ ಆಂಟನಿʼಯಲ್ಲಿ ಈ ಕರಾವಳಿಯ ನಟಿಯರಿಗೆ ಸಿಗುತ್ತಾ ಅವಕಾಶ?
Kollywood: ಅಜಿತ್ ಹುಟ್ಟುಹಬ್ಬಕ್ಕೆ ಸೂಪರ್ ಹಿಟ್ ʼಬಿಲ್ಲಾʼ ರೀ ರಿಲೀಸ್; ಫ್ಯಾನ್ಸ್ ಖುಷ್
OTT Release: ವಿಜಯ್ ದೇವರಕೊಂಡ ʼಫ್ಯಾಮಿಲಿ ಸ್ಟಾರ್ʼ ಓಟಿಟಿ ರಿಲೀಸ್ಗೆ ಡೇಟ್ ಫಿಕ್ಸ್
MUST WATCH
ಹೊಸ ಸೇರ್ಪಡೆ
Belagavi; ಪ್ರಧಾನಿ ಮೋದಿ ಯಾಕೆ ಪ್ರಜ್ವಲ್ ವರ್ತನೆ ಖಂಡಿಸಲಿಲ್ಲ…: ಲಕ್ಷ್ಮೀ ಹೆಬ್ಬಾಳ್ಕರ್
Bengaluru: ಕ್ರೈಂ ತಡೆಗೆ ರಾತ್ರಿ ಗಸ್ತು ಹೆಚ್ಚಳ; ದಯಾನಂದ್
Bengaluru: ಮೆಟ್ರೋ ಶೌಚದಲ್ಲಿ ಕ್ಯೂಆರ್ ಕೋಡ್ ಅಂಟಿಸಿದ್ದ ಉದ್ಯಮಿ ಸೆರೆ
Bengaluru: ಗ್ರಾಹಕನ ಗುಪ್ತಾಂಗ ಮುಟ್ಟಿ ಡೆಲಿವರಿ ಬಾಯ್ ನೀಚ ಕೃತ್ಯ
ಚಾಕೋಲೆಟ್ ಕೊಡ್ತೇನೆಂದು ಮನೆಗೆ ಕರೆದು ಬಾಲಕಿಗೆ ಲೈಂಗಿಕ ದೌರ್ಜನ್ಯ: ಇಬ್ಬರು ಬಂಧನ