Jai Hanuman: ʼಹನುಮಾನ್‌ʼ ಹಿಟ್‌ ಬೆನ್ನಲ್ಲೇ ಸೀಕ್ವೆಲ್‌ ಘೋಷಿಸಿದ ಪ್ರಶಾಂತ್‌ ವರ್ಮಾ


Team Udayavani, Jan 23, 2024, 11:57 AM IST

Jai Hanuman: ʼಹನುಮಾನ್‌ʼ ಹಿಟ್‌ ಬೆನ್ನಲ್ಲೇ ಸೀಕ್ವೆಲ್‌ ಘೋಷಿಸಿದ ಪ್ರಶಾಂತ್‌ ವರ್ಮಾ

ಹೈದರಾಬಾದ್: ʼಹನುಮಾನ್‌ʼ ಮೂಲಕ ನಿರ್ದೇಶಕ ಪ್ರಶಾಂತ್‌ ವರ್ಮಾ ಪ್ರೇಕ್ಷಕರ ಮನಗೆದ್ದಿದ್ದಾರೆ. ಸೂಪರ್‌ ಹೀರೋ ಕಥೆಯಯಾದ ʼಹನುಮಾನ್‌ʼ ಬಾಕ್ಸ್ ಆಫೀಸ್‌ ನಲ್ಲಿ 100 ಕೋಟಿಗೂ ಅಧಿಕ ಕಲೆಕ್ಷನ್‌ ಮಾಡಿ ಸದ್ದು ಮಾಡಿದೆ.

ತೇಜ ಸಜ್ಜಾ ಅಭಿನಯದ ಮೂಲಕ ʼಹನುಮಾನ್‌ʼ ನಲ್ಲಿ ಮಿಂಚಿದ್ದಾರೆ. ಸಂಕ್ರಾಂತಿ ಹಬ್ಬದ ಸಂದರ್ಭದಲ್ಲಿ ಮಹೇಶ್‌ ಬಾಬು ಅವರ ʼಗುಂಟೂರು ಖಾರಂʼ ಸಿನಿಮಾದೊಂದಿಗೆ ಬಿಡುಗಡೆಯಾದ ʼಹನುಮಾನ್‌ʼ ಕಲೆಕ್ಷನ್‌ ವಿಚಾರದಲ್ಲಿ ಹಿಂದೆ ಬಿದ್ದಿಲ್ಲ. ಅದರ ಜೊತೆಗೆ ಸಿನಿಮಾದ ಕಥೆ ಹಾಗೂ ವಿಎಫ್‌ ಎಕ್ಸ್‌ ಕೂಡ ಮೆಚ್ಚುಗೆ ಪಡೆದುಕೊಂಡಿದೆ.

ʼಹನುಮಾನ್‌ʼ ಹಿಟ್‌ ಆದ ಖುಷಿಯಲ್ಲೇ ನಿರ್ದೇಶಕ ಪ್ರಶಾಂತ್‌ ವರ್ಮಾ ಸಿನಿಮಾದ ಸೀಕ್ವೆಲ್‌ ಅನೌನ್ಸ್‌ ಮಾಡಿದ್ದಾರೆ. ಎರಡನೇ ಭಾಗಕ್ಕೆ ʼಜೈ ಹನುಮಾನ್‌ʼ ಎಂದು ಟೈಟಲ್‌ ಇಡಲಾಗಿದ್ದು, ಪ್ರಾಣ ಪ್ರತಿಷ್ಠಾಪನೆಯ ದಿನ ಹನುಮಂತ ದೇವರ ಮುಂದೆ ಸಿನಿಮಾದ ಸ್ಕ್ರಿಪ್ಟ್‌ ಇಟ್ಟು ಪೂಜೆ ಮಾಡಿರುವ ಫೋಟೋವನ್ನು ಹಂಚಿಕೊಂಡಿದ್ದಾರೆ.

“ಪ್ರಪಂಚದಾದ್ಯಂತದ ಪ್ರೇಕ್ಷಕರಿಂದ ಹನುಮಾನ್ ಮೇಲೆ ಅಪಾರ ಪ್ರೀತಿ ಮತ್ತು ಬೆಂಬಲಕ್ಕೆ ಕೃತಜ್ಞತೆಯೊಂದಿಗೆ, ನಾನು ನನಗೆ ಭರವಸೆ ನೀಡುವ ಮೂಲಕ ಹೊಸ ಪ್ರಯಾಣದ ಹೊಸ್ತಿಲಲ್ಲಿ ನಿಂತಿದ್ದೇನೆ! ರಾಮಮಂದಿರ ಪ್ರಾಣ ಪ್ರತಿಷ್ಠೆಯ ಶುಭ ದಿನದಂದು ʼಜೈ ಹನುಮಾನ್ʼ ಪ್ರಿ-ಪ್ರೊಡಕ್ಷನ್ ಕೆಲಸಗಳು ಪ್ರಾರಂಭವಾಗುತ್ತವೆ” ಎಂದು ಎಕ್ಸ್‌ ನಲ್ಲಿ ಪ್ರಶಾಂತ್‌ ವರ್ಮಾ ಬರೆದುಕೊಂಡಿದ್ದಾರೆ.

ಈ ಚಿತ್ರದಲ್ಲಿ ತೇಜ ಸಜ್ಜಾ ನಟಿಸಲಿದ್ದಾರೆ. ಆದರೆ ಯಾರು ಹನುಮಂತನ ಪಾತ್ರವನ್ನು ನಿರ್ವಹಿಸುತ್ತಾರೆ ಮತ್ತು ಶ್ರೀರಾಮನ ಪಾತ್ರವನ್ನು ಯಾರು ನಿರ್ವಹಿಸುತ್ತಾರೆ ಎನ್ನುವುದರ ಬಗೆಗಿನ ಕುತೂಹಲ ಕುತೂಹಲವಾಗಿಯೇ ಉಳಿದಿದೆ.

ಈ ಸಿನಿಮಾ ಮಾತ್ರವಲ್ಲದೆ, ಪ್ರಶಾಂತ್‌ ವರ್ಮಾ ಈಗಾಗಲೇ ಮತ್ತೊಂದು ಸೂಪರ್‌ ಹೀರೋ ʼ ಅಧಿರಾʼ ಎನ್ನುವ ಸಿನಿಮಾವನ್ನು ಅನೌನ್ಸ್‌ ಮಾಡಿದ್ದಾರೆ. ಪ್ರತಿ ಸಂಕ್ರಾಂತಿ ಹಬ್ಬದಂದು ಒಂದು ಸೂಪರ್‌ ಹೀರೋ ಸಿನಿಮಾ ತೆರೆಗೆ ತರುವ ಯೋಜನೆಯಿದೆ ಎಂದು ಈ ಹಿಂದೆ ಸಂದರ್ಶನವೊಂದರಲ್ಲಿ ಪ್ರಶಾಂತ್‌ ವರ್ಮಾ ಹೇಳಿದ್ದರು.

ಟಾಪ್ ನ್ಯೂಸ್

Vijayendra (2)

JDS ಪ್ರಜ್ವಲ್ ಗೆ ಮೋದಿ ನೆರವು; ದಾರಿ ತೋಚದೆ ಟೀಕಿಸುತ್ತಿದ್ದಾರೆ: ವಿಜಯೇಂದ್ರ ತಿರುಗೇಟು

1-wdsad

I.N.D.I.A ಕೂಟದಲ್ಲಿ ವರ್ಷಕ್ಕೆ ಒಬ್ಬರನ್ನು ಪ್ರಧಾನಿಯನ್ನಾಗಿಸಲು ಚಿಂತನೆ: ಅಣ್ಣಾಮಲೈ

1-wwwqe

HSC PARALI; ಲಕ್ಷದ್ವೀಪದಿಂದ ಮಂಗಳೂರಿಗೆ ಆಗಮಿಸಿದ ಹೈ ಸ್ಪೀಡ್ ಪರಲಿ

1-qweqweq

CNG ಇಂಧನ ನಿರಂತರ ಪೂರೈಕೆಗೆ ಕೇಂದ್ರಕ್ಕೆ ಯಶ್ ಪಾಲ್ ಸುವರ್ಣ ಮನವಿ

ಸಿ.ಟಿ.ರವಿ

Belagavi; ಪ್ರಜ್ವಲ್ ಪ್ರಕರಣವು ಚುನಾವಣೆಗೆ ಪ್ರಭಾವ ಬೀರುತ್ತದೆ: ಸಿ.ಟಿ.ರವಿ

1-wqqweqwe

BJP 200 ಸೀಟು ದಾಟುವುದು ಕಷ್ಟ: ಗೋವಾದಲ್ಲಿ ಶಶಿ ತರೂರ್

1-aaa

Prajwal Revanna ವಿದೇಶಕ್ಕೆ ತೆರಳಲು ಕ್ಲಿಯರೆನ್ಸ್ ಕೇಳಿಲ್ಲ: ವಿದೇಶಾಂಗ ಸಚಿವಾಲಯ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Salaar: ಜಪಾನ್‌ನಲ್ಲಿ ಈ ತಿಂಗಳು ತೆರೆಕಾಣಲಿದೆ ಪ್ರಭಾಸ್‌ – ಪ್ರಶಾಂತ್‌ ನೀಲ್‌  ʼಸಲಾರ್‌ʼ

Salaar: ಜಪಾನ್‌ನಲ್ಲಿ ಈ ತಿಂಗಳು ತೆರೆಕಾಣಲಿದೆ ಪ್ರಭಾಸ್‌ – ಪ್ರಶಾಂತ್‌ ನೀಲ್‌ ʼಸಲಾರ್‌ʼ

rajinikanth

Rajinikanth ಬಯೋಪಿಕ್‌ಗೆ ಭರ್ಜರಿ ತಯಾರಿ; ಬಾಲಿವುಡ್‌ ನಿರ್ಮಾಪಕನಿಂದ ಸಿನಿಮಾ ನಿರ್ಮಾಣ

Kollywood: ದಳಪತಿ ವಿಜಯ್‌ ʼGOATʼ ಸಿನಿಮಾದಲ್ಲಿ ಧೋನಿ, ರುತ್‌ ರಾಜ್ ನಟನೆ?

Kollywood: ದಳಪತಿ ವಿಜಯ್‌ ʼGOATʼ ಸಿನಿಮಾದಲ್ಲಿ ಧೋನಿ, ರುತ್‌ ರಾಜ್ ನಟನೆ?

Pushpa 2 First single: ʼಪುಷ್ಪ ಪುಷ್ಪʼ ಎನ್ನುತ್ತಾ ಹಾಡಿನಲ್ಲಿ ಮಿಂಚಿದ ಅಲ್ಲು ಅರ್ಜುನ್

Pushpa 2 First single: ʼಪುಷ್ಪ ಪುಷ್ಪʼ ಎನ್ನುತ್ತಾ ಹಾಡಿನಲ್ಲಿ ಮಿಂಚಿದ ಅಲ್ಲು ಅರ್ಜುನ್

ರಜಿನಿಕಾಂತ್‌ ʼಕೂಲಿʼಯಲ್ಲಿ ಅನುಮತಿಯಿಲ್ಲದೆ ಹಾಡು ಬಳಕೆ: ಲೀಗಲ್‌ ನೋಟಿಸ್‌ ಕಳುಹಿಸಿದ ಇಳಯರಾಜ

ರಜಿನಿಕಾಂತ್‌ ʼಕೂಲಿʼಯಲ್ಲಿ ಅನುಮತಿಯಿಲ್ಲದೆ ಹಾಡು ಬಳಕೆ: ಲೀಗಲ್‌ ನೋಟಿಸ್‌ ಕಳುಹಿಸಿದ ಇಳಯರಾಜ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Vijayendra (2)

JDS ಪ್ರಜ್ವಲ್ ಗೆ ಮೋದಿ ನೆರವು; ದಾರಿ ತೋಚದೆ ಟೀಕಿಸುತ್ತಿದ್ದಾರೆ: ವಿಜಯೇಂದ್ರ ತಿರುಗೇಟು

Uppinangady: ತೀವ್ರ ಜ್ವರ; ಅರ್ಚಕ ಸಾವು

Uppinangady: ತೀವ್ರ ಜ್ವರ; ಅರ್ಚಕ ಸಾವು

Ajekar: ಟೆರೇಸಿನಿಂದ ಬಿದ್ದ ಮುಖ್ಯ ಶಿಕ್ಷಕ ಸಾವು

Ajekar: ಟೆರೇಸಿನಿಂದ ಬಿದ್ದ ಮುಖ್ಯ ಶಿಕ್ಷಕ ಸಾವು

Kamalapur: ಜಾತಿ ನಿಂದನೆ ಕೇಸ್‌ಗೆ ಹೆದರಿ ಯುವಕ ಆತ್ಮಹತ್ಯೆ

Kamalapur: ಜಾತಿ ನಿಂದನೆ ಕೇಸ್‌ಗೆ ಹೆದರಿ ಯುವಕ ಆತ್ಮಹತ್ಯೆ

1-wqqwqw

Congress ಸರಕಾರದಿಂದ ದಲಿತರ ಮತ ಮತ್ತು ಯೋಜನೆ ದುರುಪಯೋಗ: ನಾರಾಯಣಸ್ವಾಮಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.