Pushpa 2: ದಾಖಲೆ ಬೆಲೆಗೆ ʼಪುಷ್ಪ-2ʼ ಡಿಜಿಟಲ್ ಹಕ್ಕನ್ನು ಖರೀದಿಸಿದ ನೆಟ್ಫ್ಲಿಕ್ಸ್
Team Udayavani, Apr 18, 2024, 3:25 PM IST
ಹೈದರಾಬಾದ್: ಅಲ್ಲು ಅರ್ಜುನ್ ಅವರ ಪ್ಯಾನ್ ಇಂಡಿಯಾ ʼಪುಷ್ಪ-2ʼ ಸಿನಿಮಾ ವರ್ಷದ ಬಹು ನಿರೀಕ್ಷಿತ ಸಿನಿಮಾಗಳಲ್ಲೊಂದು. ʼಕೆಜಿಎಫ್-2 ಹಾಗೂ ʼಬಾಹುಬಲಿ-2ʼ ಬಳಿಕ ಒಂದು ಸಿನಿಮಾಕ್ಕಾಗಿ ಪ್ರೇಕ್ಷಕರು ಅತ್ಯಂತ ಕಾತರದಿಂದ ಕಾಯುತ್ತಿದ್ದಾರೆ ಅಂದರೆ ಅದು ʼಪುಷ್ಪ-2ʼ ಸಿನಿಮಾಕ್ಕಾಗಿ ಎಂದರೆ ತಪ್ಪಾಗದು.
ಇತ್ತೀಚೆಗೆ ಸಿನಿಮಾದ ಟೀಸರ್ ರಿಲೀಸ್ ಆಗಿದೆ. ಅಲ್ಲು ಅರ್ಜುನ್ ಅವರು ನಾರಿಯ ವೇಷದಲ್ಲಿ ಮಾರಿಯ ರೋಷವನ್ನು ತಾಳಿ ಅಬ್ಬರಿಸಿದ್ದಾರೆ. ಇನ್ನು ಕೆಲ ದಿನಗಳಲ್ಲಿ ಎರಡನೇ ಟೀಸರ್ ರಿಲೀಸ್ ಆಗುವ ಸಾಧ್ಯತೆಯಿದೆ.
ಸುಕುಮಾರ್ ನಿರ್ದೇಶನದ ʼಪುಷ್ಪ- 2ʼ ಸಿನಿಮಾದ ಉತ್ತರ ಭಾರತ ವಿತರಣೆ ಹಕ್ಕುಗಳನ್ನು ಅನಿಲ್ ಥಡಾನಿ ಅವರು ಮುಂಗಡ ಆಧಾರದ ಮೇಲೆ 200 ಕೋಟಿ ರೂಪಾಯಿಗಳ ದಾಖಲೆ ಬೆಲೆಗೆ ಪಡೆದುಕೊಂಡಿರುವುದು ವರದಿಯಾಗಿದೆ.
ಇದೀಗ ಸಿನಿಮಾದ ಡಿಜಿಟಲ್ ಹಕ್ಕು ಕೂಡ ದಾಖಲೆಯ ಬೆಲೆಗೆ ಮಾರಾಟವಾಗಿದೆ ಎನ್ನುವ ಸುದ್ದಿಯೊಂದು ಟಾಲಿವುಡ್ ವಲಯದಲ್ಲಿ ಹರಿದಾಡುತ್ತಿದೆ ಎಂದು ʼಪಿಂಕ್ ವಿಲ್ಲಾʼ ವರದಿ ಮಾಡಿದೆ.
ʼಪುಷ್ಪ-2ʼ ಸಿನಿಮಾದ ಡಿಜಿಟಲ್ ಹಕ್ಕನ್ನು ನೆಟ್ಫ್ಲಿಕ್ಸ್ 250 ಕೋಟಿ ರೂ.ಗಳ ಮೂಲ ಬೆಲೆಗೆ ಖರೀದಿಸಿದೆ. ಸಿನಿಮಾ ರಿಲೀಸ್ ಆದ ಬಳಿಕ ಅದು ಬಾಕ್ಸ್ ಆಫೀಸ್ ನಲ್ಲಿ ಹೇಗೆ ಕಮಾಯಿ ಮಾಡುತ್ತದೆ ಎನ್ನುವುದರ ಮೇಲೆ ಈ ಮೂಲ ಬೆಲೆ ಹೆಚ್ಚಾಗುವ ಸಾಧ್ಯತೆಯಿದೆ. 300 ಕೋಟಿ ರೂಪಾಯಿವರೆಗೂ ಇದರ ಬೆಲೆ ವಿಸ್ತರಿಸಬಹುದು ಎಂದು ಮೂಲಗಳು ತಿಳಿಸಿರುವುದಾಗಿ ʼಪಿಂಕ್ ವಿಲ್ಲಾʼ ವರದಿ ಮಾಡಿದೆ.
ಈ ಹಿಂದೆ ʼಆರ್ ಆರ್ ಆರ್ʼ ಸಿನಿಮಾದ ಡಿಜಿಟಲ್ ಹಕ್ಕು 170 ಕೋಟಿ ರೂ.ಗೆ ಮಾರಾಟವಾಗಿತ್ತು. ʼಪುಷ್ಪ-2ʼ ಸಿನಿಮಾದ ಡಿಜಿಟಲ್ ಹಕ್ಕು 250 ಕೋಟಿ ರೂಪಾಯಿಗೆ ಮಾರಾಟವಾದರೆ ಎಲ್ಲಾ ಭಾಷೆಗಳಲ್ಲೂ ಇದು ದಾಖಲೆಯಾಗಲಿದೆ.
ಅಲ್ಲು ಅರ್ಜುನ್ ಜೊತೆ ಸಿನಿಮಾದಲ್ಲಿ ಫಾಹದ್ ಫಾಸಿಲ್, ರಶ್ಮಿಕಾ ಮಂದಣ್ಣ ಸೇರಿದಂತೆ ಇತರೆ ಪ್ರಮುಖರು ಕಾಣಿಸಿಕೊಳ್ಳಲಿದ್ದಾರೆ. ಇದೇ ವರ್ಷದ ಆಗಸ್ಟ್ 15 ರಂದು ಸಿನಿಮಾ ತೆರೆ ಕಾಣಲಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Kollywood: ಕಮಲ್ ಹಾಸನ್ ʼಥಗ್ ಲೈಫ್ʼ ಅಖಾಡಕ್ಕೆ ಬಾಲಿವುಡ್ನ ಖ್ಯಾತ ನಟರು ಎಂಟ್ರಿ?
ʼಬಂಗಾರಂʼನಲ್ಲಿ ರಕ್ತಸಿಕ್ತ ಅವತಾರ ತಾಳಿದ ಸಮಂತಾ: ಹುಟ್ಟುಹಬ್ಬಕ್ಕೆ ಹೊಸ ಸಿನಿಮಾ ಅನೌನ್ಸ್
Tollywood: ಅಧಿಕೃತವಾಗಿ ರಿವೀಲ್ ಆಯಿತು ‘ಕಲ್ಕಿ 2898 ಎಡಿʼ ಸಿನಿಮಾದ ರಿಲೀಸ್ ಡೇಟ್
Rakshit Shetty: ʼರಿಚರ್ಡ್ ಆಂಟನಿʼಯಲ್ಲಿ ಈ ಕರಾವಳಿಯ ನಟಿಯರಿಗೆ ಸಿಗುತ್ತಾ ಅವಕಾಶ?
Kollywood: ಅಜಿತ್ ಹುಟ್ಟುಹಬ್ಬಕ್ಕೆ ಸೂಪರ್ ಹಿಟ್ ʼಬಿಲ್ಲಾʼ ರೀ ರಿಲೀಸ್; ಫ್ಯಾನ್ಸ್ ಖುಷ್
MUST WATCH
ಹೊಸ ಸೇರ್ಪಡೆ
Bengaluru: ಫ್ಲೈಓವರ್ಗಳಲ್ಲೂ ಕಸ ಸುರಿಯುವ ವಾಹನ ಸವಾರರು
Godrej: ಜನಪ್ರಿಯ ಗೋದ್ರೆಜ್ ಸಮೂಹ ಇಬ್ಭಾಗ: ಜಮ್ಶೆಡ್, ನಾದಿರ್ ನೂತನ ಮುಖ್ಯಸ್ಥರು
ಪ್ರಜ್ವಲ್ ರೇವಣ್ಣ ವಿದೇಶಕ್ಕೆ ಹೋಗುವುದನ್ನು ಪ್ಲ್ಯಾನ್ ಮಾಡಿದವರು ದೇವೇಗೌಡರು – ಸಿಎಂ ಆರೋಪ
Vijayapura: ಗೃಹಿಣಿ ಮೇಲೆ ಅತ್ಯಾಚಾರ,ಚಿತ್ರೀಕರಣ: ಮಗನೊಂದಿಗೆ ನಾಪತ್ತೆಯಾದ ಸಂತ್ರಸ್ತೆ
Koppala: ವೈದ್ಯರ ನಿರ್ಲಕ್ಷ್ಯ-ಚಿಕಿತ್ಸೆ ಫಲಿಸದೇ ಗರ್ಭಿಣಿ ಸಾವು ; ಕುಟುಂಬಸ್ಥರ ಪ್ರತಿಭಟನೆ