Allu Arjun: ಯೂಟ್ಯೂಬ್ನಲ್ಲಿ ಧೂಳೆಬ್ಬಿಸಿ ದಾಖಲೆ ಬರೆದ ʼಪುಷ್ಪ ಪುಷ್ಪʼ ಹಾಡು
Team Udayavani, May 4, 2024, 5:41 PM IST
ಹೈದರಾಬಾದ್: ಅಲ್ಲು ಅರ್ಜುನ್ ಅವರ ʼಪುಷ್ಪ-2ʼ ಸಿನಿಮಾ ರಿಲೀಸ್ ಗೆ ಇನ್ನು ಕೆಲ ತಿಂಗಳು ಬಾಕಿಯಿದೆ. ಆದರೂ ಸಿನಿಮಾದ ಬಗೆಗಿನ ನಿರೀಕ್ಷೆ ದಿನಕಳೆದಂತೆ ಹೆಚ್ಚಾಗುತ್ತಿದೆ.
ಇತ್ತೀಚೆಗೆ ಅಲ್ಲು ಅರ್ಜುನ್ ಅವರ ಹುಟ್ಟುಹಬ್ಬಕ್ಕೆ ʼಪುಷ್ಪ-2ʼ ಚಿತ್ರತಂಡ ಕ್ಯಾರೆಕ್ಟರ್ ಟೀಸರ್ ರಿಲೀಸ್ ಮಾಡಿತ್ತು. ಇದಾದ ಬಳಿಕ ಸಿನಿಮಾ ಮೊದಲ ಹಾಡನ್ನು ರಿಲೀಸ್ ಮಾಡಲಾಗಿದೆ.
ʼಪುಷ್ಪರಾಜ್ʼ ಮ್ಯಾನೇರಿಸಂ ತೋರಿಸುವ ʼಪುಷ್ಪ ಪುಷ್ಪʼ ಹಾಡು ಟಾಲಿವುಡ್ ಹಾಗೂ ಅಲ್ಲು ಅರ್ಜುನ್ ಪ್ಯಾನ್ ಇಂಡಿಯಾ ಫ್ಯಾನ್ಸ್ ಗಳಲ್ಲಿ ಸಖತ್ ಕ್ರೇಜ್ ಹುಟ್ಟಿಸಿದೆ. ಸಿನಿಮಾದ ಮೇಲಿನ ನಿರೀಕ್ಷೆ ಎಷ್ಟಿದೆ ಎನ್ನುವುದು ಹಾಡು ರಿಲೀಸ್ ಆಗಿ ಬಂದಿರುವ ವೀವ್ಸ್ ನೋಡಿದರೆ ಗೊತ್ತಾಗುತ್ತದೆ.
ʼಪುಷ್ಪ ಪುಷ್ಪʼ ಹಾಡು ಟ್ರೆಂಡ್ ನಲ್ಲಿರುವಾಗಲೇ ಹೊಸ ದಾಖಲೆ ಬರೆದಿದೆ. ʼಪುಷ್ಪ ಪುಷ್ಪʼ ಹಾಡು ಈಗ 6 ಭಾಷೆಗಳಲ್ಲಿ 50 ಮಿಲಿಯನ್ ಯೂಟ್ಯೂಬ್ ವೀಕ್ಷಣೆಗಳನ್ನು ತಲುಪಿದೆ. ಈ ಮೂಲಕ ಅತ್ಯಂತ ವೇಗದಲ್ಲಿ ಅತೀ ಹೆಚ್ಚು ವೀಕ್ಷಣೆ ಕಂಡಿರುವ ಹಾಡಾಗಿ ಮೂಡಿ ಬಂದಿದೆ. ಸದ್ಯ ಈ ಹಾಡು 15 ದೇಶಗಳಲ್ಲಿ ಟ್ರೆಂಡಿಂಗ್ ಆಗಿದ್ದು, ಇನ್ಸ್ಟಾಗ್ರಾಮ್ ನಲ್ಲಿ ಈ ಹಾಡಿನಲ್ಲಿ 100K ರೀಲ್ಸ್ ಗಳಾಗಿದೆ.
ʼಪುಷ್ಪ ಪುಷ್ಪʼ ಎಂಬ ಶೀರ್ಷಿಕೆಯಡಿ ಬಂದಿರುವ ಹಾಡಿನ ಸಾಹಿತ್ಯವನ್ನು ಚಂದ್ರ ಬೋಸ್ ಬರೆದಿದ್ದಾರೆ. ನಕಾಶ್ ಅಜೀಜ್ ,ದೀಪಕ್ ಬ್ಲೂ ಹಾಡಿಗೆ ಧ್ವನಿಯಾಗಿದ್ದಾರೆ. ದೇವಿ ಶ್ರೀ ಪ್ರಸಾದ್ ಹಾಡನ್ನು ಸಂಯೋಜಿಸಿದ್ದಾರೆ.
ಸುಕುಮಾರ್ ನಿರ್ದೇಶನದ ʼಪುಷ್ಪ 2: ದಿ ರೂಲ್ʼ ಚಿತ್ರದಲ್ಲಿ ಅಲ್ಲು, ರಶ್ಮಿಕಾ ಮತ್ತು ಫಾಹದ್ ಫಾಸಿಲ್ ಮುಂತಾದ ಪ್ರಮುಖರು ಕಾಣಿಸಿಕೊಳ್ಳಲಿದ್ದಾರೆ. ಇದೇ ವರ್ಷದ ಆಗಸ್ಟ್ 15 ರಂದು ಚಿತ್ರ ಬಿಡುಗಡೆಯಾಗಲಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Tollywood: ಪ್ರಶಾಂತ್ ನೀಲ್ – Jr. NTR ಸಿನಿಮಾಕ್ಕೆ ಈ ಟೈಟಲ್ ಫಿಕ್ಸ್?
ಕಾರ್ತಿಕ್ – ಸೂರ್ಯ ಕಾಂಬಿನೇಷನ್ ನ ಬಹು ನಿರೀಕ್ಷಿತ ಸಿನಿಮಾಕ್ಕೆ ಪೂಜಾ ಹೆಗ್ಡೆ ನಾಯಕಿ?
ಪ್ರಭಾಸ್ ಜೀವನಕ್ಕೆ ಬರಲಿದ್ದಾರೆ ವಿಶೇಷ ವ್ಯಕ್ತಿ.. ಮದುವೆ ಆಗಲಿದ್ದಾರಾ ʼಸಲಾರ್ʼ ನಟ?
Anushka Shetty: ಕನ್ನಡದ ಖ್ಯಾತ ನಿರ್ಮಾಪಕನ ಜೊತೆ ಅನುಷ್ಕಾ ಶೆಟ್ಟಿ ಮದುವೆ?
ಫಾಹದ್ ಫಾಸಿಲ್ ಜೊತೆ ʼದೃಶ್ಯಂʼ ನಿರ್ದೇಶಕನ ಸಿನಿಮಾ: ಸುದ್ದಿ ಕೇಳಿ ಥ್ರಿಲ್ ಆದ ಫ್ಯಾನ್ಸ್
MUST WATCH
ಬಭ್ರುವಾಹನ ಜನ್ಮಸ್ಥಳ ಅರ್ಜುನ ಪ್ರತಿಷ್ಠಾಪಿಸಿದ ಆಂಜನೇಯ ಸ್ವಾಮಿ ದೇವಸ್ಥಾನ
ನವಜಾತ ಶಿಶುಗಳಲ್ಲಿ ಉಂಟಾಗುವ ಸಮಸ್ಯೆ ಮತ್ತು ಪರಿಹಾರಗಳು
ಶ್ರೀಲಂಕಾದಲ್ಲಿ ಜೀರ್ಣೋದ್ಧಾರಗೊಂಡ ದೇವಾಲಯಕ್ಕೆ ಅಂಜನಾದ್ರಿಯಿಂದ ಜಲ, ಸೀರೆ,ಮಣ್ಣು ಸಮರ್ಪಣೆ
ಭಗವಂತನ ಆಣೆ ಯಾವ ಸಂತ್ರಸ್ತೆಯರನ್ನು ನಾನು ಭೇಟಿ ಮಾಡಿಲ್ಲಶ್ರೇಯಸ್ಪಟೇಲ್ ಹೇಳಿಕೆ
ಉಡುಪಿ ರೈತನ ವಿಭಿನ್ನ ಪ್ರಯತ್ನ : ಕೈ ಹಿಡಿದ ಕೇಸರಿ ಕಲ್ಲಂಗಡಿ
ಹೊಸ ಸೇರ್ಪಡೆ
Gangavathi ಸಾಣಾಪೂರ ಕೆರೆಯಲ್ಲಿ ಮುಳುಗಿ ಯುವಕ ಮೃತ್ಯು
Ramanagara; ಅಪ್ರಾಪ್ತ ಮಕ್ಕಳ ಮೈಯನ್ನು ಕಾದ ಕಬ್ಬಿಣದಿಂದ ಸುಟ್ಟ ಮದ್ಯವ್ಯಸನಿ ತಂದೆ
Vedganga ನದಿಯಲ್ಲಿ ಮುಳುಗಿ ನಾಲ್ವರು ಮೃತ್ಯು:ಇಬ್ಬರು ಬೆಳಗಾವಿಯವರು
Election; ಪ್ರಧಾನಿ ಮೋದಿ ಯಾಕೆ ಮಂಗಳಸೂತ್ರ,ಧರ್ಮದ ಮೇಲೆ ಮತ ಕೇಳುತ್ತಾರೆ: ಪ್ರಿಯಾಂಕಾ ಗಾಂಧಿ
Congress ಗಾಡ್ ಫಾದರ್ ಸಂಸ್ಕೃತಿ ಬಿಜೆಪಿಗೆ ಬಂದಿದೆ: ರಘುಪತಿ ಭಟ್