Rajinikanth: ಮನೆ ಕೆಲಸದಾಕೆಯನ್ನು ಅವಮಾನ ಮಾಡಿದ ರಜಿನಿಕಾಂತ್? ವಿಡಿಯೋ ವೈರಲ್
Team Udayavani, Mar 4, 2024, 1:51 PM IST
ಚೆನ್ನೈ: ಸೂಪರ್ ಸ್ಟಾರ್ ರಜಿನಿಕಾಂತ್ ಅವರಿಗೆ ಪ್ಯಾನ್ ಇಂಡಿಯಾದಲ್ಲಿ ದೊಡ್ಡ ಅಭಿಮಾನಿಗಳ ವರ್ಗವೇ ಇದೆ. ಸಿನಿಮಾ ಮಾತ್ರವಲ್ಲದೆ ರಜಿನಿ ತನ್ನ ಸರಳ ವ್ಯಕ್ತಿತ್ವದಿಂದಲೇ ಅಭಿಮಾನಿಗಳ ಹೃದಯ ಗೆದ್ದಿದ್ದಾರೆ. ಆದರೆ ಇತ್ತೀಚೆಗೆ ಅವರು ತನ್ನ ಕೆಲಸದಾಕೆಯನ್ನು ನಡೆಸಿಕೊಂಡ ರೀತಿಗೆ ಅನೇಕರು ಅಸಮಾಧಾನ ವ್ಯಕ್ತಪಡಿಸಿದ್ದಾರೆ.
ಉದ್ಯಮಿ ಮುಖೇಶ್ ಅಂಬಾನಿ ಪುತ್ರ ಅನಂತ್ ಅಂಬಾನಿ ಮದುವೆ ಪೂರ್ವ ಸಮಾರಂಭದಲ್ಲಿ ರಜಿನಿಕಾಂತ್, ಪತ್ನಿ ಹಾಗೂ ಅವರ ಮಗಳು ಭಾಗಿಯಾಗಿದ್ದಾರೆ. ಈ ವೇಳೆ ರಜಿನಿ ಕುಟುಂಬ ಮನೆ ಕೆಲಸದಾಕೆಯನ್ನು ತನ್ನೊಂದಿಗೆ ಕರೆದುಕೊಂಡು ಹೋಗಿದೆ.
ಅನಂತ್ ಅಂಬಾನಿ ಹಾಗೂ ರಾಧಿಕಾ ಮರ್ಚೆಂಟ್ ಮದುವೆ ಪೂರ್ವಕ್ಕೆ ಬಂದ ವೇಳೆ ಮಾಧ್ಯಮದವರು ರಜಿನಿ ಅವರ ಫೋಟೋ ತೆಗೆಯಲು ಮುಂದಾಗಿದ್ದಾರೆ. ಈ ವೇಳೆ ರಜಿನಿ ಮಾಧ್ಯಮಕ್ಕೆ ತನ್ನ ಕುಟುಂಬದ ಜೊತೆ ಫೋಟೋ ತೆಗೆಲು ಪೋಸ್ ಕೊಟ್ಟಿದ್ದಾರೆ. ಆದರೆ ರಜಿನಿ ಕುಟುಂಬದ ಜೊತೆ ಬಂದ ಕೆಲಸದಾಕೆಯೂ ರಜಿನಿ ಫೋಟೋಗಾಗಿ ಕರೆದಾಗ ಬಂದಿದ್ದಾರೆ. ಆದರೆ ಈ ವೇಳೆ ರಜಿನಿಕಾಂತ್ ಕೆಲಸದಾಕೆಯನ್ನು ದೂರವಿರುವಂತೆ ಕೈ ಸನ್ನೆ ಮಾಡಿದ್ದಾರೆ.
ಈ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಸರಳ ವ್ಯಕ್ತಿತ್ವದ ರಜಿನಿಕಾಂತ್ ಅವರು ಈ ರೀತಿ ಮಾಡಿದ್ದು ಸರಿಯಲ್ಲ. ರಜಿನಿಕಾಂತ್ ಅವರ ಈ ವರ್ತನೆ ಸರಿಯಲ್ಲ. ಅವರು ಒಟ್ಟಿಗೆ ಇದ್ದಿದ್ದರೆ ಏನಾಗುತ್ತಿತ್ತು ಎಂದು ಕೆಲವರು ಕಮೆಂಟ್ ಮಾಡಿದ್ದಾರೆ.
ಆದರೆ ಕೆಲವರು ರಜಿನಿಕಾಂತ್ ಅವರು ಫ್ಯಾಮಿಲಿ ಪೋಟೋಗಾಗಿ ಪೋಸ್ ನೀಡಿದ್ದಾರೆ. ಹಾಗಾಗಿ ಅವರು ಹೀಗೆ ಮಾಡಿದ್ದಾರೆ ಎಂದು ಅವರ ಬೆಂಬಲಕ್ಕೆ ನಿಂತಿದ್ದಾರೆ.
ಸಿನಿಮಾ ವಿಚಾರಕ್ಕೆ ಬಂದರೆ ಇತ್ತೀಚೆಗೆ ರಜಿನಿಕಾಂತ್ ʼಲಾಲ್ ಸಲಾಂʼ ಸಿನಿಮಾದಲ್ಲಿ ಕಾಣಿಸಿಕೊಂಡಿದ್ದರು. ಸದ್ಯ ಅವರು ʼವಟ್ಟೈಯನ್ʼ ಸಿನಿಮಾದಲ್ಲಿ ಬ್ಯುಸಿಯಾಗಿದ್ದಾರೆ.
This is not a good attitude @rajinikanth 👎#AnantAmbani #Rajinikanth #AnantRadhikaWedding pic.twitter.com/fkZ4LQ8Etq
— 𝐌𝐚𝐬𝐬 𝐌𝐚𝐡𝐚𝐫𝐚𝐣𝐚ᴵᴺᴰᴵᴬᴺ² (@Mass_Maharaja) March 3, 2024
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ʼಬಂಗಾರಂʼನಲ್ಲಿ ರಕ್ತಸಿಕ್ತ ಅವತಾರ ತಾಳಿದ ಸಮಂತಾ: ಹುಟ್ಟುಹಬ್ಬಕ್ಕೆ ಹೊಸ ಸಿನಿಮಾ ಅನೌನ್ಸ್
Tollywood: ಅಧಿಕೃತವಾಗಿ ರಿವೀಲ್ ಆಯಿತು ‘ಕಲ್ಕಿ 2898 ಎಡಿʼ ಸಿನಿಮಾದ ರಿಲೀಸ್ ಡೇಟ್
Rakshit Shetty: ʼರಿಚರ್ಡ್ ಆಂಟನಿʼಯಲ್ಲಿ ಈ ಕರಾವಳಿಯ ನಟಿಯರಿಗೆ ಸಿಗುತ್ತಾ ಅವಕಾಶ?
Kollywood: ಅಜಿತ್ ಹುಟ್ಟುಹಬ್ಬಕ್ಕೆ ಸೂಪರ್ ಹಿಟ್ ʼಬಿಲ್ಲಾʼ ರೀ ರಿಲೀಸ್; ಫ್ಯಾನ್ಸ್ ಖುಷ್
OTT Release: ವಿಜಯ್ ದೇವರಕೊಂಡ ʼಫ್ಯಾಮಿಲಿ ಸ್ಟಾರ್ʼ ಓಟಿಟಿ ರಿಲೀಸ್ಗೆ ಡೇಟ್ ಫಿಕ್ಸ್
MUST WATCH
ಹೊಸ ಸೇರ್ಪಡೆ
Chitradurga; ನ್ಯಾಯಾಲಯಕ್ಕೆ ಶರಣಾದ ಮುರುಘಾ ಶ್ರೀ
Video: ಸಹೋದರಿಯ ಮದುವೆಯಲ್ಲಿ ಕುಣಿಯುತ್ತಿದ್ದ ವೇಳೆ ಕುಸಿದು ಬಿದ್ದು 18ರ ಯುವತಿ ಮೃತ್ಯು
Manvita Kamath; ಮದುವೆ ನಂತರವೂ ಸಿನಿಮಾ ಮಾಡ್ತೀನಿ ಎಂದ ಟಗರುಪುಟ್ಟಿ
Hubli; ರಾಜಕಾರಣಕ್ಕಾಗಿ ರಾಜ್ಯವನ್ನು ಬಳಸಿಕೊಂಡಿದ್ದೆ ಜೋಶಿ ಸಾಧನೆ: ವಿನಯ ಕುಮಾರ್ ಸೊರಕೆ
Padubidri; ಓವರ್ ಟೇಕ್ ತಗಾದೆ: ಬಸ್ಸಿನೊಳಗೆ ನುಗ್ಗಿ ಚಾಲಕನ ಮೇಲೆ ಹಲ್ಲೆ