ರಾಮ್ ಚರಣ್ – ಜಾಹ್ನವಿ ʼRC 16′ ಸಿನಿಮಾದ ಮುಹೂರ್ತ: ವಿಶೇಷ ಪಾತ್ರದಲ್ಲಿ ಶಿವರಾಜ್ ಕುಮಾರ್
Team Udayavani, Mar 20, 2024, 3:57 PM IST
ಹೈದರಾಬಾದ್: ರಾಮ್ ಚರಣ್ ಅವರ 16ನೇ ಸಿನಿಮಾದ ಮುಹೂರ್ತ ಬುಧವಾರ(ಮಾ.20 ರಂದು) ಹೈದರಾಬಾದ್ನಲ್ಲಿ ನೆರವೇರಿದೆ.
ಮುಹೂರ್ತ ಸಮಾರಂಭದಲ್ಲಿ ನಟ ಚಿರಂಜೀವಿ, ನಿರ್ದೇಶಕ ಶಂಕರ್, ನಿರ್ಮಾಪಕ ಅಲ್ಲು ಅರವಿಂದ್, ಜಾಹ್ನವಿ ತಂದೆ ಬೋನಿ ಕಪೂರ್ ಸೇರಿದಂತೆ ಹಲವು ಗಣ್ಯರು ಭಾಗಿಯಾಗಿ ಚಿತ್ರತಂಡಕ್ಕೆ ಶುಭಕೋರಿದ್ದಾರೆ.
ʼಉಪ್ಪೇನʼ ಖ್ಯಾತಿಯ ಬುಚ್ಚಿ ಬಾಬು ಸನಾ ನಿರ್ದೇಶನದ ಈ ಸಿನಿಮಾಕ್ಕೆ ತಾತ್ಕಾಲಿಕವಾಗಿ ‘ಆರ್ ಸಿ 16ʼ ಎಂದು ಟೈಟಲ್ ಇಡಲಾಗಿದೆ. ಸಿನಿಮಾದಲ್ಲಿ ಜಾಹ್ನವಿ ಕಪೂರ್ ನಾಯಕಿಯಾಗಿ ಕಾಣಿಸಿಕೊಳ್ಳಲಿದ್ದಾರೆ. ಇದೊಂದು ಸ್ಪೋರ್ಟ್ಸ್ ಡ್ರಾಮಾ ಕಥೆಯ ಸಿನಿಮಾವೆಂದು ಹೇಳಲಾಗುತ್ತಿದೆ. ರಾಮ್ ಚರಣ್ ಕಬಡ್ಡಿ ಆಟಗಾರನಾಗಿ ಕಾಣಿಸಿಕೊಳ್ಳಲಿದ್ದಾರೆ ಎನ್ನಲಾಗಿದೆ.
ಇದನ್ನೂ ಓದಿ: ‘Mirzapurʼ ಸೀಸನ್ -3 ಅನೌನ್ಸ್: ʼಗುಡ್ಡು ಭಯ್ಯಾʼನನ್ನು ನೋಡಿ ಥ್ರಿಲ್ ಆದ ಫ್ಯಾನ್ಸ್
ಈಗಾಗಲೇ ʼಜೈಲರ್ʼ ಸಿನಿಮಾದಲ್ಲಿ ʼನರಸಿಂಹʼ ನಾಗಿ ಅಬ್ಬರಿಸಿರುವ ಸ್ಯಾಂಡಲ್ ವುಡ್ ನ ಹಿರಿಯ ನಟ ಶಿವರಾಜ್ ಕುಮಾರ್ ʼಆರ್ ಸಿ16ʼ ಸಿನಿಮಾದಲ್ಲಿ ವಿಶೇಷ ಪಾತ್ರದಲ್ಲಿ ಕಾಣಿಸಿಕೊಳ್ಳಲಿದ್ದಾರೆ. ಆ ಮೂಲಕ ಶಿವಣ್ಣ ಮತ್ತೊಮ್ಮೆ ಪರಭಾಷಾ ಸಿನಿಮಾದಲ್ಲಿ ಮಿಂಚಲಿದ್ದಾರೆ.
ಎ. ಆರ್ ರಹಮಾನ್ ಸಂಗೀತ ಚಿತ್ರಕ್ಕಿದೆ. ಮೈತ್ರಿ ಮೂವಿ ಮೇಕರ್ಸ್ ಸಿನಿಮಾವನ್ನು ನಿರ್ಮಾಣ ಮಾಡುತ್ತಿದೆ. ಶೀಘ್ರದಲ್ಲಿ ಚಿತ್ರೀಕರಣ ಆರಂಭಗೊಳ್ಳುವ ಸಾಧ್ಯತೆಯಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ʼಬಂಗಾರಂʼನಲ್ಲಿ ರಕ್ತಸಿಕ್ತ ಅವತಾರ ತಾಳಿದ ಸಮಂತಾ: ಹುಟ್ಟುಹಬ್ಬಕ್ಕೆ ಹೊಸ ಸಿನಿಮಾ ಅನೌನ್ಸ್
Tollywood: ಅಧಿಕೃತವಾಗಿ ರಿವೀಲ್ ಆಯಿತು ‘ಕಲ್ಕಿ 2898 ಎಡಿʼ ಸಿನಿಮಾದ ರಿಲೀಸ್ ಡೇಟ್
Rakshit Shetty: ʼರಿಚರ್ಡ್ ಆಂಟನಿʼಯಲ್ಲಿ ಈ ಕರಾವಳಿಯ ನಟಿಯರಿಗೆ ಸಿಗುತ್ತಾ ಅವಕಾಶ?
Kollywood: ಅಜಿತ್ ಹುಟ್ಟುಹಬ್ಬಕ್ಕೆ ಸೂಪರ್ ಹಿಟ್ ʼಬಿಲ್ಲಾʼ ರೀ ರಿಲೀಸ್; ಫ್ಯಾನ್ಸ್ ಖುಷ್
OTT Release: ವಿಜಯ್ ದೇವರಕೊಂಡ ʼಫ್ಯಾಮಿಲಿ ಸ್ಟಾರ್ʼ ಓಟಿಟಿ ರಿಲೀಸ್ಗೆ ಡೇಟ್ ಫಿಕ್ಸ್
MUST WATCH
ಹೊಸ ಸೇರ್ಪಡೆ
Hassan ಆಕ್ಷೇಪಾರ್ಹ ವಿಡಿಯೋ ಪ್ರಕರಣ: ಜೆಡಿಎಸ್ ಪಕ್ಷದಿಂದ ಪ್ರಜ್ವಲ್ ರೇವಣ್ಣ ಉಚ್ಛಾಟನೆ
ಸುಳ್ಳಿನ ಭರವಸೆ ಮೂಲಕ ಬಿಜೆಪಿ ಖಾಲಿ ಚೊಂಬಿನ ಆಶ್ವಾಸನೆಯನ್ನು ನೀಡಿದೆ: ಜೈ ಕುಮಾರ್
Lok Sabha Elections: ಸೋಲು,ಗೆಲುವಿನ ಲೆಕ್ಕಾಚಾರ
Shocking: ಮಸೀದಿಗೆ ನುಗ್ಗಿ ಧರ್ಮಗುರುವನ್ನೇ ದೊಣ್ಣೆಯಿಂದ ಹೊಡೆದು ಕೊಂದ ಮುಸುಕುಧಾರಿಗಳು
Hubli; ಬಿಜೆಪಿಯವರು 400 ಸೀಟುಗಳನ್ನು ಕೇಳುತ್ತಿರುವುದು ಸಂವಿಧಾನ ಬದಲಿಸಲು: ಎಚ್. ಎಂ.ರೇವಣ್ಣ