Salaar vs Dunki:‌ ದಕ್ಷಿಣದ ಪ್ರಮುಖ ಮಲ್ಟಿಪ್ಲೆಕ್ಸ್‌ನಲ್ಲಿ ʼಸಲಾರ್‌ʼ ರಿಲೀಸ್‌ ಇಲ್ಲ?ಕಾರಣ

Salaar - Dunki ಸ್ಕ್ರೀನಿಂಗ್‌ ವಾರ್ ಗೆ ಕಾರಣವೇನು?

Team Udayavani, Dec 20, 2023, 6:09 PM IST

Salaar vs Dunki:‌ ದಕ್ಷಿಣದ ಪ್ರಮುಖ ಮಲ್ಟಿಪ್ಲೆಕ್ಸ್‌ನಲ್ಲಿ ʼಸಲಾರ್‌ʼ ರಿಲೀಸ್‌ ಇಲ್ಲ?ಕಾರಣ

ಹೈದರಾಬಾದ್/ಮುಂಬಯಿ: ಭಾರತದ ಸಿನಿರಂಗದಲ್ಲಿ ವರ್ಷಾಂತ್ಯಕ್ಕೆ ದೊಡ್ಡ ಸಿನಿಮಾಗಳು ರಿಲೀಸ್‌ ಆಗಲಿವೆ. ʼಡಂಕಿʼ, ಸಲಾರ್‌ʼ ರಿಲೀಸ್‌ ನಿಂದಾಗಿ ನಾರ್ತ್‌ – ಸೌತ್‌ ಬಾಕ್ಸ್‌ ಆಫೀಸ್‌ ದಂಗಲ್‌ ಗೆ ಕ್ಷಣಗಣನೆ ಆರಂಭವಾಗಿದೆ.

ಈಗಾಗಲೇ ಎರಡೂ ಸಿನಿಮಾಗಳ ಅಡ್ವಾನ್ಸ್‌ ಬುಕಿಂಗ್‌ ಆರಂಭಗೊಂಡಿದೆ. ಇದರಲ್ಲೂ ತೀವ್ರ ಪೈಪೋಟಿ ಉಂಟಾಗಿದೆ. ದಕ್ಷಿಣ ಭಾರತ ಮಾತ್ರವಲ್ಲದೆ ಪ್ರಭಾಸ್‌ ಅವರ ʼಸಲಾರ್‌ʼ ಉತ್ತರ ಭಾರತದಲ್ಲೂ ಭಾರೀ ಬೇಡಿಕೆ ಎದುರಾಗಿದೆ. ಮುಂಗಡವಾಗಿ  6 ಲಕ್ಷ ಟಿಕೆಟ್‌ ಮಾರಾಟವಾಗುವ ಮೂಲಕ 13.70 ಕೋಟಿಯ ಗಳಿಕೆಯನ್ನು ʼಸಲಾರ್‌ʼ ಗಳಿಸಿದೆ.

ಇನ್ನೊಂದೆಡೆ ಶಾರುಖ್‌ ಖಾನ್‌ ಅವರ ʼಡಂಕಿʼ ಸಿನಿಮಾದ ಟಿಕೆಟ್‌ ಗೂ ಭಾರೀ ಬೇಡಿಕೆಯಿದೆ. ಪ್ಯಾನ್‌ ಇಂಡಿಯಾ ರಿಲೀಸ್‌ ಅಲ್ಲದಿದ್ರು, ದಕ್ಷಿಣದ ಕೆಲವೆಡೆ ʼಡಂಕಿʼಯ ಟಿಕೆಟ್‌ ಗೆ ಬೇಡಿಕೆಯಿದೆ. ಆದರೆ ಇದೀಗ ʼಸಲಾರ್‌ʼ , ʼಡಂಕಿʼ ನಡುವೆ ಸ್ಕ್ರೀನಿಂಗ್‌ ವಿಚಾರದಲ್ಲಿ ಜಟಾಪಟಿ ಉಂಟಾಗಿದೆ ಎನ್ನಲಾಗಿದೆ.

ಉತ್ತರ ಭಾರತದಲ್ಲಿ ʼಸಲಾರ್‌ʼ ಸಿನಿಮಾಕ್ಕೆ ಬೇಡಿಕೆ ಹೆಚ್ಚಾಗಿದೆ. ಆದರೆ ರಾಷ್ಟ್ರೀಯ ಮಲ್ಟಿಪ್ಲೆಕ್ಸ್ ಚೈನ್ಸ್‌ (ಪಿವಿಆರ್‌, ಐನಾಕ್ಸ್)‌ ಗಳಲ್ಲಿ ʼಸಲಾರ್‌ʼ ಸಿನಿಮಾಕ್ಕೆ ಹೆಚ್ಚಿನ ಸ್ಕ್ರೀನ್‌ ಗಳನ್ನು ನೀಡದೆ ಬಹುತೇಕ ಸ್ಕ್ರೀನ್ಸ್‌ ಗಳನ್ನು ʼಡಂಕಿʼ ಸಿನಿಮಾಕ್ಕೆ ಮೀಸಲಿಟ್ಟಿದೆ. ಇದರಿಂದ ಹೊಂಬಾಳೆ ಫಿಲ್ಮ್ಸ್‌ ʼಸಲಾರ್‌ʼ ಸಿನಿಮಾವನ್ನು ದಕ್ಷಿಣದ ರಾಜ್ಯದಲ್ಲಿರುವ ಪಿವಿಆರ್‌, ಐನಾಕ್ಸ್ ಮತ್ತು ಮೀರಜ್ ಮಲ್ಟಿಪ್ಲೆಕ್ಸ್‌ ಗಳಲ್ಲಿ ರಿಲೀಸ್‌ ಮಾಡದಿರಲು ನಿರ್ಧರಿಸಿದೆ. ಈಗಾಗಲೇ ನಿಗದಿಗೊಳಿಸಿದ ಸ್ಕ್ರೀನ್ಸ್‌ ಗಳನ್ನು ಹಿಂದಕ್ಕೆ ತೆಗೆದುಕೊಳ್ಳಲಾಗಿದೆ ಎಂದು ವರದಿಯಾಗಿದೆ.

ಮುಂಬಯಿ ಪಿವಿಆರ್‌, ಐನಾಕ್ಸ್ ನಲ್ಲಿ ʼಡಂಕಿʼ ಗೆ ಸಿನಿಮಾಕ್ಕೆ ಎಲ್ಲ ಶೋ ಟೈಮ್‌ ಗಳನ್ನು ನೀಡಲಾಗಿದೆ. ಆದರೆ ʼಸಲಾರ್‌ʼ ಗೆ ಯಾವುದೇ ಸ್ಲಾಟ್‌ ನ್ನು ನೀಡಿಲ್ಲ ಎನ್ನಲಾಗಿದೆ. ಈ ಕಾರಣದಿಂದ ʼಸಲಾರ್‌ʼ ಸಿನಿಮಾವನ್ನು ದಕ್ಷಿಣದ ಪ್ರಮುಖ ಮಲ್ಟಿಪ್ಲೆಕ್ಸ್‌ ಗಳಲ್ಲಿ ರಿಲೀಸ್‌ ಮಾಡದಿರಲು ನಿರ್ಧರಿಸಿದೆ ಎನ್ನಲಾಗಿದೆ. ಇದರ ಬಗ್ಗೆ ಚರ್ಚಿಸಿ‌ ಸಮಸ್ಯೆ ಬಗೆಹರಿದರೆ ಮಾತ್ರ ʼಸಲಾರ್‌ʼ ದಕ್ಷಿಣದ ಪ್ರಮುಖ ಮಲ್ಟಿಪ್ಲೆಕ್ಸ್‌ ನಲ್ಲಿ ರಿಲೀಸ್‌ ಆಗಬಹುದೆಂದು ವರದಿ ತಿಳಿಸಿದೆ.

ಹೊಂಬಾಳೆ ಪ್ರೊಡಕ್ಷನ್ಸ್, ಶಾರುಖ್‌ ಅವರ ರೆಡ್ ಚಿಲ್ಲಿಸ್ ಮತ್ತು ಮಲ್ಟಿಪ್ಲೆಕ್ಸ್‌ಗಳು ಮತ್ತು ಸಿಂಗಲ್ ಸ್ಕ್ರೀನ್‌ಗಳು ಕಳೆದ ವಾರದಲ್ಲಿ ಪರಸ್ಪರ ಮಾತುಕತೆ ನಡೆಸಿದ್ದರು. ʼಸಲಾರ್‌ʼ ನಿರ್ಮಾಪಕರು ಶಾರುಖ್‌ ಅವರನ್ನು ಭೇಟಿಯಾಗಿ, ಎರಡೂ ಸಿನಿಮಾಗಳು 50-50 ಸ್ಕ್ರೀನಿಂಗ್ ಹಕ್ಕುಗಳನ್ನು ತೆಗೆದುಕೊಳ್ಳುವುದರ ಬಗ್ಗೆ ಒಮ್ಮತದ ಒಪ್ಪಂದವನ್ನು ಮಾಡಿಕೊಂಡಿದ್ದರು. ಆದರೆ ಆ ಒಪ್ಪಂದ ಪಾಲನೆಯಾಗುತ್ತಿಲ್ಲ ಎನ್ನುವ ಆರೋಪ ಕೇಳಿಬಂದಿದೆ.

ಟಾಪ್ ನ್ಯೂಸ್

Food Poison; ಚಿಕನ್ ಶವರ್ಮಾ ಸೇವಿಸಿ ಆಸ್ಪತ್ರೆಗೆ ದಾಖಲಾದ 12 ಜನರು

Food Poison; ಚಿಕನ್ ಶವರ್ಮಾ ಸೇವಿಸಿ ಆಸ್ಪತ್ರೆಗೆ ದಾಖಲಾದ 12 ಜನರು

ಮೀಸಲಾತಿ ಕುರಿತ ಅಮಿತ್ ಶಾ ಹೇಳಿಕೆಯ ನಕಲಿ ವಿಡಿಯೋ ವೈರಲ್… FIR ದಾಖಲು

ಮೀಸಲಾತಿ ಕುರಿತ ಅಮಿತ್ ಶಾ ಹೇಳಿಕೆಯ ನಕಲಿ ವಿಡಿಯೋ ವೈರಲ್… FIR ದಾಖಲು

Srinivas Prasad: ದ. ಕರ್ನಾಟಕದ ʼದಲಿತ ಸೂರ್ಯʼ ಎಂದು ಖ್ಯಾತರಾಗಿದ್ದ ಶ್ರೀನಿವಾಸ ಪ್ರಸಾದ್‌

Srinivas Prasad: ದ. ಕರ್ನಾಟಕದ ʼದಲಿತ ಸೂರ್ಯʼ ಎಂದು ಖ್ಯಾತರಾಗಿದ್ದ ಶ್ರೀನಿವಾಸ ಪ್ರಸಾದ್‌

ಗುಜರಾತ್ ಕರಾವಳಿ ಪ್ರದೇಶದಲ್ಲಿ 602 ಕೋಟಿ ಮೌಲ್ಯದ ಡ್ರಗ್ಸ್ ವಶ: 14 ಪಾಕ್ ಪ್ರಜೆಗಳ ಬಂಧನ

ಗುಜರಾತ್ ಕರಾವಳಿ ಪ್ರದೇಶದಲ್ಲಿ 602 ಕೋಟಿ ಮೌಲ್ಯದ ಡ್ರಗ್ಸ್ ವಶ: 14 ಪಾಕ್ ಪ್ರಜೆಗಳ ಬಂಧನ

Spying: ಪಾಕಿಸ್ತಾನ ಪರ ಬೇಹುಗಾರಿಕೆ: ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ವ್ಯಕ್ತಿಯ ಬಂಧನ

Spying: ಪಾಕಿಸ್ತಾನ ಪರ ಬೇಹುಗಾರಿಕೆ: ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ವ್ಯಕ್ತಿಯ ಬಂಧನ

T20 ವಿಶ್ವಕಪ್ ಗೆ ಬಲಿಷ್ಠ ತಂಡವನ್ನು ಪ್ರಕಟಿಸಿದ ನ್ಯೂಜಿಲೆಂಡ್; ಮರಳಿದ ಸ್ಫೋಟಕ ಆಟಗಾರ

T20 ವಿಶ್ವಕಪ್ ಗೆ ಬಲಿಷ್ಠ ತಂಡವನ್ನು ಪ್ರಕಟಿಸಿದ ನ್ಯೂಜಿಲೆಂಡ್; ಮರಳಿದ ಸ್ಫೋಟಕ ಆಟಗಾರ

Tragedy: ಛತ್ತೀಸ್‌ಗಢದಲ್ಲಿ ಭೀಕರ ಅಪಘಾತ… ಮಕ್ಕಳು ಸೇರಿ 8 ಮಂದಿ ಸಾವು, 22 ಮಂದಿಗೆ ಗಾಯ

Tragedy: ಛತ್ತೀಸ್‌ಗಢದಲ್ಲಿ ಭೀಕರ ಅಪಘಾತ… ಮಕ್ಕಳು ಸೇರಿ 8 ಮಂದಿ ಮೃತ್ಯು, 22 ಮಂದಿಗೆ ಗಾಯ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ʼಬಂಗಾರಂʼನಲ್ಲಿ ರಕ್ತಸಿಕ್ತ ಅವತಾರ ತಾಳಿದ ಸಮಂತಾ: ಹುಟ್ಟುಹಬ್ಬಕ್ಕೆ ಹೊಸ ಸಿನಿಮಾ ಅನೌನ್ಸ್

ʼಬಂಗಾರಂʼನಲ್ಲಿ ರಕ್ತಸಿಕ್ತ ಅವತಾರ ತಾಳಿದ ಸಮಂತಾ: ಹುಟ್ಟುಹಬ್ಬಕ್ಕೆ ಹೊಸ ಸಿನಿಮಾ ಅನೌನ್ಸ್

14

Tollywood: ಅಧಿಕೃತವಾಗಿ ರಿವೀಲ್‌ ಆಯಿತು ‘ಕಲ್ಕಿ 2898 ಎಡಿʼ ಸಿನಿಮಾದ ರಿಲೀಸ್‌ ಡೇಟ್

Rakshit Shetty: ʼರಿಚರ್ಡ್‌ ಆಂಟನಿʼಯಲ್ಲಿ ಈ ಕರಾವಳಿಯ ನಟಿಯರಿಗೆ ಸಿಗುತ್ತಾ ಅವಕಾಶ?

Rakshit Shetty: ʼರಿಚರ್ಡ್‌ ಆಂಟನಿʼಯಲ್ಲಿ ಈ ಕರಾವಳಿಯ ನಟಿಯರಿಗೆ ಸಿಗುತ್ತಾ ಅವಕಾಶ?

Kollywood: ಅಜಿತ್‌ ಹುಟ್ಟುಹಬ್ಬಕ್ಕೆ ಸೂಪರ್‌ ಹಿಟ್ ʼಬಿಲ್ಲಾʼ ರೀ ರಿಲೀಸ್; ಫ್ಯಾನ್ಸ್‌ ಖುಷ್

Kollywood: ಅಜಿತ್‌ ಹುಟ್ಟುಹಬ್ಬಕ್ಕೆ ಸೂಪರ್‌ ಹಿಟ್ ʼಬಿಲ್ಲಾʼ ರೀ ರಿಲೀಸ್; ಫ್ಯಾನ್ಸ್‌ ಖುಷ್

24

OTT Release: ವಿಜಯ್‌ ದೇವರಕೊಂಡ ʼಫ್ಯಾಮಿಲಿ ಸ್ಟಾರ್‌ʼ ಓಟಿಟಿ ರಿಲೀಸ್‌ಗೆ ಡೇಟ್‌ ಫಿಕ್ಸ್

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Food Poison; ಚಿಕನ್ ಶವರ್ಮಾ ಸೇವಿಸಿ ಆಸ್ಪತ್ರೆಗೆ ದಾಖಲಾದ 12 ಜನರು

Food Poison; ಚಿಕನ್ ಶವರ್ಮಾ ಸೇವಿಸಿ ಆಸ್ಪತ್ರೆಗೆ ದಾಖಲಾದ 12 ಜನರು

ಮೀಸಲಾತಿ ಕುರಿತ ಅಮಿತ್ ಶಾ ಹೇಳಿಕೆಯ ನಕಲಿ ವಿಡಿಯೋ ವೈರಲ್… FIR ದಾಖಲು

ಮೀಸಲಾತಿ ಕುರಿತ ಅಮಿತ್ ಶಾ ಹೇಳಿಕೆಯ ನಕಲಿ ವಿಡಿಯೋ ವೈರಲ್… FIR ದಾಖಲು

Srinivas Prasad: ದ. ಕರ್ನಾಟಕದ ʼದಲಿತ ಸೂರ್ಯʼ ಎಂದು ಖ್ಯಾತರಾಗಿದ್ದ ಶ್ರೀನಿವಾಸ ಪ್ರಸಾದ್‌

Srinivas Prasad: ದ. ಕರ್ನಾಟಕದ ʼದಲಿತ ಸೂರ್ಯʼ ಎಂದು ಖ್ಯಾತರಾಗಿದ್ದ ಶ್ರೀನಿವಾಸ ಪ್ರಸಾದ್‌

ಗುಜರಾತ್ ಕರಾವಳಿ ಪ್ರದೇಶದಲ್ಲಿ 602 ಕೋಟಿ ಮೌಲ್ಯದ ಡ್ರಗ್ಸ್ ವಶ: 14 ಪಾಕ್ ಪ್ರಜೆಗಳ ಬಂಧನ

ಗುಜರಾತ್ ಕರಾವಳಿ ಪ್ರದೇಶದಲ್ಲಿ 602 ಕೋಟಿ ಮೌಲ್ಯದ ಡ್ರಗ್ಸ್ ವಶ: 14 ಪಾಕ್ ಪ್ರಜೆಗಳ ಬಂಧನ

ನಾರಿಶಕ್ತಿ ವಿರೋಧಿಸುವ ಕಾಂಗ್ರೆಸ್‌ಗೆ ಚುನಾವಣೆಯಲ್ಲಿ ಪಾಠ ಕಲಿಸಬೇಕು: ಗಾಯತ್ರಿ ಸಿದ್ದೇಶ್ವರ

ನಾರಿ ಶಕ್ತಿ ವಿರೋಧಿಸುವ ಕಾಂಗ್ರೆಸ್‌ಗೆ ಚುನಾವಣೆಯಲ್ಲಿ ಪಾಠ ಕಲಿಸಬೇಕು: ಗಾಯತ್ರಿ ಸಿದ್ದೇಶ್ವರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.