Video: ರಾಮ್‌ಚರಣ್‌ಗೆ ʼಇಡ್ಲಿ ವಡಾʼ ಎಂದಿದ್ದಕ್ಕೆ ಶಾರುಖ್‌ ಮೇಲೆ ಗರಂ ಆದ ಫ್ಯಾನ್ಸ್


Team Udayavani, Mar 5, 2024, 12:22 PM IST

Video: ರಾಮ್‌ಚರಣ್‌ಗೆ ʼಇಡ್ಲಿ ವಡಾʼ ಎಂದಿದ್ದಕ್ಕೆ ಶಾರುಖ್‌ ಮೇಲೆ ಗರಂ ಆದ ಫ್ಯಾನ್ಸ್

ಹೈದರಾಬಾದ್: ಜಾಮ್‌ ನಗರದಲ್ಲಿ ಅಂಬಾನಿ ಪುತ್ರ ಅನಂತ್‌ ಅವರ ಪ್ರೀ ವೆಡ್ಡಿಂಗ್‌ ಸಮಾರಂಭ ಅದ್ಧೂರಿಯಾಗಿ ನೆರವೇರಿದೆ. ಈ ಸಮಾರಂಭದಲ್ಲಿ ದೇಶ – ವಿದೇಶದ ಖ್ಯಾತ ಸೆಲೆಬ್ರಿಟಿಗಳು ಭಾಗಿಯಾಗಿ ಸಾಂಸ್ಕೃತಿಕ ಸಂಜೆಗೆ ಮೆರುಗು ನೀಡಿದ್ದಾರೆ.

ಇಡೀ ಸಮಾರಂಭದಲ್ಲಿ ಸದ್ದು ಮಾಡಿದ್ದು ಪಾಪ್‌ ಗಾಯಕಿ ರಿಹಾನಾ ಅವರ ಕಾರ್ಯಕ್ರಮ ಹಾಗೂ ಬಿಟೌನ್‌ ಖಾನ್‌ ಗಳ ʼನಾಟು ನಾಟುʼ ನೃತ್ಯ. ʼನಾಟು ನಾಟುʼ ಹಾಡಿಗೆ ಶಾರುಖ್‌ ಖಾನ್‌, ಸಲ್ಮಾನ್‌ ಹಾಗೂ ಆಮಿರ್‌ ಖಾನ್‌ ವೇದಿಕೆ ಮೇಲೆ ಹೆಜ್ಜೆ ಹಾಕಿದ್ದಾರೆ. ಈ ವೇಳೆ ಶಾರುಖ್‌ ಖಾನ್‌ ರಾಮ್‌ ಚರಣ್‌ ಅವರನ್ನು ವೇದಿಕೆಗೆ ಕರೆದಿದ್ದಾರೆ.

ಆದರೆ ರಾಮ್‌ ಚರಣ್‌ ಅವರನ್ನು ಶಾರುಖ್‌ ಖಾನ್‌ ವೇದಿಕೆಗೆ ಕರೆಯುವಾಗ ʼಇಡ್ಲಿ ವಡಾ ಎಲ್ಲಿದ್ದೀಯಾ ನೀನುʼ ಎಂದು ಕರೆದು ವೇದಿಕೆಗೆ ಆಹ್ವಾನಿಸಿದ್ದಾರೆ. ಇದು ಖ್ಯಾತ ನಟನಿಗೆ ಶಾರುಖ್‌ ಅವರು ತೋರಿಸಿದ ಅಗೌರವ ಎಂದು ರಾಮ್‌ ಚರಣ್‌ ಪತ್ನಿ ಉಪಸನಾ ಅವರು ಹೇಳಿದ್ದಾರೆ.

ರಾಮ್‌ ಚರಣ್‌ ಪತ್ನಿ ಉಪಾಸನಾಗೆ ಮೇಕಪ್ ಆರ್ಟಿಸ್ಟ್ ಆಗಿರುವ ಜೆಬಾ ಹಾಸನ್ ಈ ಬಗ್ಗೆ ಸೋಶಿಯಲ್ ಮೀಡಿಯಾದಲ್ಲಿ ಪೋಸ್ಟ್ ಮಾಡಿದ್ದಾರೆ. ರಾಮ್ ಚರಣ್ ಅವರನ್ನು ಶಾರುಖ್ ಖಾನ್ ಇಡ್ಲಿ ಸಾಂಬಾರ್ ಎಂದು ಕರೆದ ಬಳಿಕ ನಾನು ಹೊರ ನಡೆದೆ. ಇದು ರಾಮ್‌ ಚರಣ್‌ ಅವರಿಗೆ ತೋರಿಸಿದ ಅಗೌರವ ಎಂದು ಅವರು ಪೋಸ್ಟ್ ಮಾಡಿದ್ದಾರೆ.

ಈ ವಿಡಿಯೋ ವೈರಲ್‌ ಆದ ಬೆನ್ನಲ್ಲೇ ನೆಟ್ಟಿಗರು ನಾನಾ ರೀತಿಯಲ್ಲಿ ಕಮೆಂಟ್‌ ಮಾಡಿದ್ದಾರೆ.  “ಶಾರುಖ್‌ ತಮಾಷೆಗಾಗಿ ಹೀಗೆ ಕರೆದರೂ, ಈ ರೀತಿ ಕರೆದಿರುವುದು ತಪ್ಪೆಂದು” ಒಬ್ಬರು ಬರೆದುಕೊಂಡಿದ್ದಾರೆ. ದಕ್ಷಿಣ ಭಾರತದ ಬಗ್ಗೆ ಶಾರುಖ್‌ ಅವರಿಗೆ ಎಂತಹ ಮನಸ್ಥಿತಿ ಇದೆ ಎಂದು ಇದರಲ್ಲೇ ಗೊತ್ತಾಗುತ್ತದೆ ಎಂದು ಮತ್ತೊಬ್ಬರು ಬರೆದುಕೊಂಡಿದ್ದಾರೆ.

ಆದರೆ ಶಾರುಖ್‌ ಖಾನ್‌ ಯಾರಿಗೂ ಅವಮಾನ ಮಾಡಿಲ್ಲ. ಅವರು ತನ್ನ ʼಒನ್‌ ಟು ಕಾ 4ʼ  ಸಿನಿಮಾದ ಡೈಲಾಗ್‌ ನ್ನು ಬದಲಾಯಿಸಿ ರಾಮ್‌ ಚರಣ್‌ ಅವರನ್ನು ಹಾಗೆಯೇ ಕರೆದಿದ್ದಾರೆ ಎಂದು ಕೆಲವರು ಶಾರುಖ್‌ ಪರ ಕಮೆಂಟ್‌ ಮಾಡಿದ್ದಾರೆ.

ʼಒನ್‌ ಟು ಕಾ 4ʼ  ಸಿನಿಮಾದ ಸೀನ್‌ ವೊಂದರಲ್ಲಿ ದಕ್ಷಿಣದಲ್ಲಿ ಫೇಮಸ್ ಆಗಿರುವ ವಿಷಯಗಳ ಬಗ್ಗೆ ಮಾತನಾಡುತ್ತಾ. ಇಡ್ಲಿ, ವಡೆ, ರಜನಿಕಾಂತ್, ವೆಂಕಟೇಶ್, ನಾಗಾರ್ಜುನ ಎಂದು ಶಾರುಖ್‌ ಹೇಳುತ್ತಾರೆ.

ಇದೇ ಡೈಲಾಗ್ ನ್ನು ಅಂಬಾನಿ ಪ್ರೀ ವೆಡ್ಡಿಂಗ್ ವೇದಿಕೆಯಲ್ಲಿ ರಾಮ್‌ಚರಣ್‌ ಅವರನ್ನು ಕರೆಯುವಾಗ ಬಳಸಿದ್ದಾರೆ. ಸಿನಿಮಾ ಡೈಲಾಗ್‌ನಲ್ಲಿ ಇದ್ದ ರಜನಿಕಾಂತ್ ಹೆಸರು ತೆಗೆದು ರಾಮ್ ಚರಣ್ ಹೆಸರು ಸೇರಿಸಿ ಶಾರುಖ್ ಹೇಳಿದ್ದರು ಎಂದು ಕೆಲವರು ಕಮೆಂಟ್‌ ಮಾಡಿದ್ದಾರೆ.

ರಾಮ್‌ ಚರಣ್‌  ಬಿಟೌನ್‌ ಸ್ಟಾರ್‌ ಗಳಾದ ಶಾರುಖ್‌ ಹಾಗೂ ಸಲ್ಮಾನ್‌ ಇಬ್ಬರೊಂದಿಗೂ ಉತ್ತಮ ಬಾಂಧವ್ಯವನ್ನು ಹೊಂದಿದ್ದಾರೆ.

ಟಾಪ್ ನ್ಯೂಸ್

1-eewqeqwe

Davanagere;ಬೆಣ್ಣೆದೋಸೆಯೊಂದಿಗೆ ವಿಜಯೋತ್ಸವ ಆಚರಿಸಲು ಸಿದ್ಧತೆ ಮಾಡಿಕೊಳ್ಳಿ: ಮೋದಿ

1-dasdas

PM Modi ಪ್ರತಿ ಬಾರಿ ಭಯಾನಕ ಸುಳ್ಳು ಹೇಳಿ ಹೋಗ್ತಾರೆ: ಸಿದ್ದರಾಮಯ್ಯ ಕಿಡಿ

ʼಬಂಗಾರಂʼನಲ್ಲಿ ರಕ್ತಸಿಕ್ತ ಅವತಾರ ತಾಳಿದ ಸಮಂತಾ: ಹುಟ್ಟುಹಬ್ಬಕ್ಕೆ ಹೊಸ ಸಿನಿಮಾ ಅನೌನ್ಸ್

ʼಬಂಗಾರಂʼನಲ್ಲಿ ರಕ್ತಸಿಕ್ತ ಅವತಾರ ತಾಳಿದ ಸಮಂತಾ: ಹುಟ್ಟುಹಬ್ಬಕ್ಕೆ ಹೊಸ ಸಿನಿಮಾ ಅನೌನ್ಸ್

1—dsdasd

Chikkamagaluru:ದತ್ತಪೀಠದಲ್ಲಿ ಪ್ರವಾಸಿ ಬಸ್ ಪಲ್ಟಿಯಾಗಿ 30 ಮಂದಿಗೆ ಗಾಯ

1-qewqewq

BJP Rally; ರಾಮ ಮಂದಿರ ನಿರ್ಮಾಣಕ್ಕೆ 56 ಇಂಚಿನ ಎದೆ ಬೇಕಾಗಿತ್ತು: ಪ್ರಧಾನಿ ಮೋದಿ

Shivrajkumar is frustrated with social media

Sandalwood: ಸೋಷಿಯಲ್‌ ಮೀಡಿಯಾ ವಿರುದ್ಧ ಶಿವರಾಜ್ ಕುಮಾರ್ ಬೇಸರ

Netherlands Trip: ಹೀಗೊಂದು ನಿಶ್ಶಬ್ದ ಪಯಣ!

Netherlands Trip: ಹೀಗೊಂದು ನಿಶ್ಶಬ್ದ ಪಯಣ!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ʼಬಂಗಾರಂʼನಲ್ಲಿ ರಕ್ತಸಿಕ್ತ ಅವತಾರ ತಾಳಿದ ಸಮಂತಾ: ಹುಟ್ಟುಹಬ್ಬಕ್ಕೆ ಹೊಸ ಸಿನಿಮಾ ಅನೌನ್ಸ್

ʼಬಂಗಾರಂʼನಲ್ಲಿ ರಕ್ತಸಿಕ್ತ ಅವತಾರ ತಾಳಿದ ಸಮಂತಾ: ಹುಟ್ಟುಹಬ್ಬಕ್ಕೆ ಹೊಸ ಸಿನಿಮಾ ಅನೌನ್ಸ್

14

Tollywood: ಅಧಿಕೃತವಾಗಿ ರಿವೀಲ್‌ ಆಯಿತು ‘ಕಲ್ಕಿ 2898 ಎಡಿʼ ಸಿನಿಮಾದ ರಿಲೀಸ್‌ ಡೇಟ್

Rakshit Shetty: ʼರಿಚರ್ಡ್‌ ಆಂಟನಿʼಯಲ್ಲಿ ಈ ಕರಾವಳಿಯ ನಟಿಯರಿಗೆ ಸಿಗುತ್ತಾ ಅವಕಾಶ?

Rakshit Shetty: ʼರಿಚರ್ಡ್‌ ಆಂಟನಿʼಯಲ್ಲಿ ಈ ಕರಾವಳಿಯ ನಟಿಯರಿಗೆ ಸಿಗುತ್ತಾ ಅವಕಾಶ?

Kollywood: ಅಜಿತ್‌ ಹುಟ್ಟುಹಬ್ಬಕ್ಕೆ ಸೂಪರ್‌ ಹಿಟ್ ʼಬಿಲ್ಲಾʼ ರೀ ರಿಲೀಸ್; ಫ್ಯಾನ್ಸ್‌ ಖುಷ್

Kollywood: ಅಜಿತ್‌ ಹುಟ್ಟುಹಬ್ಬಕ್ಕೆ ಸೂಪರ್‌ ಹಿಟ್ ʼಬಿಲ್ಲಾʼ ರೀ ರಿಲೀಸ್; ಫ್ಯಾನ್ಸ್‌ ಖುಷ್

24

OTT Release: ವಿಜಯ್‌ ದೇವರಕೊಂಡ ʼಫ್ಯಾಮಿಲಿ ಸ್ಟಾರ್‌ʼ ಓಟಿಟಿ ರಿಲೀಸ್‌ಗೆ ಡೇಟ್‌ ಫಿಕ್ಸ್

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-eewqeqwe

Davanagere;ಬೆಣ್ಣೆದೋಸೆಯೊಂದಿಗೆ ವಿಜಯೋತ್ಸವ ಆಚರಿಸಲು ಸಿದ್ಧತೆ ಮಾಡಿಕೊಳ್ಳಿ: ಮೋದಿ

1-dasdas

PM Modi ಪ್ರತಿ ಬಾರಿ ಭಯಾನಕ ಸುಳ್ಳು ಹೇಳಿ ಹೋಗ್ತಾರೆ: ಸಿದ್ದರಾಮಯ್ಯ ಕಿಡಿ

ʼಬಂಗಾರಂʼನಲ್ಲಿ ರಕ್ತಸಿಕ್ತ ಅವತಾರ ತಾಳಿದ ಸಮಂತಾ: ಹುಟ್ಟುಹಬ್ಬಕ್ಕೆ ಹೊಸ ಸಿನಿಮಾ ಅನೌನ್ಸ್

ʼಬಂಗಾರಂʼನಲ್ಲಿ ರಕ್ತಸಿಕ್ತ ಅವತಾರ ತಾಳಿದ ಸಮಂತಾ: ಹುಟ್ಟುಹಬ್ಬಕ್ಕೆ ಹೊಸ ಸಿನಿಮಾ ಅನೌನ್ಸ್

1—dsdasd

Chikkamagaluru:ದತ್ತಪೀಠದಲ್ಲಿ ಪ್ರವಾಸಿ ಬಸ್ ಪಲ್ಟಿಯಾಗಿ 30 ಮಂದಿಗೆ ಗಾಯ

Aditya on kangaroo movie

Kangaroo ಮೇಲೆ ಆದಿತ್ಯ ಕಣ್ಣು; ಮೇ.3ಕ್ಕೆ ಸಿನಿಮಾ ಬಿಡುಗಡೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.