Rajamouli: ʼಬಾಹುಬಲಿʼ ಪ್ರಚಾರಕ್ಕೆ ಒಂದು ಪೈಸೆಯನ್ನು ಖರ್ಚು ಮಾಡಿಲ್ಲ; ನಿರ್ದೇಶಕ ರಾಜಮೌಳಿ


Team Udayavani, May 8, 2024, 2:24 PM IST

Rajamouli: ʼಬಾಹುಬಲಿʼ ಪ್ರಚಾರಕ್ಕೆ ಒಂದು ಪೈಸೆಯನ್ನು ಖರ್ಚು ಮಾಡಿಲ್ಲ; ನಿರ್ದೇಶಕ ರಾಜಮೌಳಿ

ಹೈದರಾಬಾದ್: ʼಬಾಹುಬಲಿʼ ಮೂಲಕ ಪ್ಯಾನ್‌ ಇಂಡಿಯಾದಲ್ಲಿ ಮಿಂಚಿದ ನಿರ್ದೇಶಕ ಎಸ್‌. ಎಸ್.‌ ರಾಜಮಾಳಿ ಸದ್ಯ ಮಹೇಶ್‌ ಬಾಬು ಅವರ ಜೊತೆಗಿನ ಸಿನಿಮಾದ ಕೆಲಸದಲ್ಲಿ ನಿರತರಾಗಿದ್ದಾರೆ.

ʼಬಾಹುಬಲಿ: ಕ್ರೌನ್‌ ಆಫ್‌ ಬ್ಲಡ್‌ʼ ಅನಿಮೇಟೆಡ್ ಸರಣಿಯ ಬಿಡುಗಡೆ ಸಮಾರಂಭದಲ್ಲಿ ʼಬಾಹುಬಲಿʼ ಸಿನಿಮಾವನ್ನು ಹೇಗೆ ಪ್ರಚಾರ ಮಾಡಿದರು ಎನ್ನುವುದರ ಬಗ್ಗೆ ಮಾತನಾಡಿದ್ದಾರೆ.

ʼಬಾಹುಬಲಿʼ ಸಿನಿಮಾಕ್ಕೆ ನಾವು ಒಂದೂ ಪೈಸೆಯನ್ನು ಖರ್ಚು ಮಾಡಿಲ್ಲ. ಇಡೀ ಹಣ ಸಿನಿಮಾ ನಿರ್ಮಾಣಕ್ಕೆ ಖರ್ಚಾಗಿದೆಯೇ ಹೊರತು ಪ್ರಚಾರಕ್ಕೆ ಅಲ್ಲ. ನಾನು ನನ್ನ ಬಗ್ಗೆ ಹೆಚ್ಚು ಯೋಚಿಸುವುದಿಲ್ಲ. ನಾನು ನನ್ನ ಬಗ್ಗೆ ಕೀಳಾಗಿ ಯೋಚಿಸುವುದಿಲ್ಲ. ನನ್ನ ಮುಂದಿನ ಯೋಜನೆಯು ಹೊರಬರುತ್ತಿದ್ದರೆ, ಎಲ್ಲರೂ ಅದಕ್ಕಾಗಿ ಕಾಯುತ್ತಾರೆ ಎಂದು ನಾನು ಭಾವಿಸುವುದಿಲ್ಲ” ಎಂದಿದ್ದಾರೆ.

“ನಾನು ಯಾವಾಗಲೂ ಹೊಸ ಪ್ರೇಕ್ಷಕರನ್ನು ಹುಡುಕಲು ಪ್ರಯತ್ನಿಸುತ್ತೇನೆ. ನಾನು ಹೊಸ ಪ್ರೇಕ್ಷಕರನ್ನು ಹೇಗೆ ತಲುಪಬಹುದು ಮತ್ತು ಅವರು ಬಂದು ನನ್ನ ಸಿನಿಮಾ ನೋಡುವಂತೆ ಮಾಡುವುದು ಹೇಗೆ? ಎನ್ನುವ ಏಕೈಕ ಯೋಚನೆ ಪ್ರಚಾರದ ಸಮಯದಲ್ಲಿ ಬರುತ್ತದೆ” ಎಂದಿದ್ದಾರೆ.

“ನಾವು ‘ಬಾಹುಬಲಿ’ ಪ್ರಚಾರಕ್ಕೆ ಒಂದು ಪೈಸೆಯನ್ನು ಖರ್ಚು ಮಾಡಿಲ್ಲ. ನಾವು ಯಾವುದೇ ಸ್ಪಾಟ್‌ ಗಳನ್ನು ಖರೀದಿಸಿಲ್ಲ, ಪೋಸ್ಟರ್‌ ಗಳನ್ನು ಹಾಕಲು ನಾವು ಯಾವುದೇ ಪೇಪರ್ಸ್ ಮತ್ತು ವೆಬ್‌ಸೈಟ್‌ಗಳಿಗೆ ಪಾವತಿಸಿಲ್ಲ. ಆದರೆ ನಾವು ಹಲವಾರು ಮೇಕಿಂಗ್ ವೀಡಿಯೊಗಳನ್ನು ಬಿಡುಗಡೆ ಮಾಡಿದ್ದೇವೆ. ನಾವು ಡಿಜಿಟಲ್ ಪೋಸ್ಟರ್‌ಗಳನ್ನು ಮಾಡಿದ್ದೇವೆ. ‌ಕ್ಯಾರೆಕ್ಟರ್‌ ಲುಕ್‌ ರಿಲೀಸ್‌ ಮಾಡಿದ್ದೇವೆ. ಆದ್ದರಿಂದ ಇದೇ ನಮಗೆ ಪ್ರಚಾರವಾಯಿತು. ಈ ಕಾರಣದಿಂದ ನಾವು ಪ್ರತ್ಯೇಕವಾಗಿ ಪ್ರಚಾರಕ್ಕೆ ಹಣ ಖರ್ಚು ಮಾಡಿಲ್ಲ. ನಮ್ಮ ತಲೆ ಹಾಗೂ ಸಮಯವನ್ನು ಉಪಯೋಗಿಸಿಕೊಂಡು ನಾವು ಈ ರೀತಿಯಾಗಿ ಪ್ರಚಾರ ಮಾಡಿದ್ದೇವೆ” ಎಂದು ಅವರು ಹೇಳಿದ್ದಾರೆ.

‘ಬಾಹುಬಲಿ: ದಿ ಬಿಗಿನಿಂಗ್’ ಮತ್ತು ‘ಬಾಹುಬಲಿ: ದಿ ಕನ್‌ಕ್ಲೂಷನ್’ ಚಿತ್ರದಲ್ಲಿ ಪ್ರಭಾಸ್, ರಾಣಾ ದಗ್ಗುಬಾಟಿ, ಅನುಷ್ಕಾ ಶೆಟ್ಟಿ, ತಮನ್ನಾ, ರಮ್ಯಾ ಕೃಷ್ಣನ್, ನಾಸರ್ ಮತ್ತು ಸತ್ಯರಾಜ್ ಪ್ರಮುಖ ಪಾತ್ರಗಳಲ್ಲಿ ನಟಿಸಿದ್ದಾರೆ. ಈ ಎರಡು ಸಿನಿಮಾಗಳು ವರ್ಲ್ಡ್‌ ವೈಡ್‌ 2,000 ಕೋಟಿ ರೂ. ಗಳಿಸಿತ್ತು.

 

ಟಾಪ್ ನ್ಯೂಸ್

Mangaluru; ಲವ್‌ ಜಿಹಾದ್‌ ತಡೆಯಲು ಶ್ರೀರಾಮ ಸೇನೆಯಿಂದ ಸಹಾಯವಾಣಿ ಆರಂಭ

Mangaluru; ಲವ್‌ ಜಿಹಾದ್‌ ತಡೆಯಲು ಶ್ರೀರಾಮ ಸೇನೆಯಿಂದ ಸಹಾಯವಾಣಿ ಆರಂಭ

11

ಗಣೇಶ ದೇವಸ್ಥಾನ ನಿರ್ಮಿಸಲು ಹಿಂದೂಗಳಿಗೆ ಭೂಮಿಯನ್ನು ದಾನವನ್ನಾಗಿ ನೀಡಿದ ಮುಸ್ಲಿಂ ಜಮಾತ್

Bellary; ಸಚಿವ ನಾಗೇಂದ್ರ ವಿರುದ್ಧ ಭುಗಿಲೆದ್ದ ಆಕ್ರೋಶ; ಬಳ್ಳಾರಿಯಲ್ಲಿ ಪ್ರತಿಭಟನೆ

Bellary; ಸಚಿವ ನಾಗೇಂದ್ರ ವಿರುದ್ಧ ಭುಗಿಲೆದ್ದ ಆಕ್ರೋಶ; ಬಳ್ಳಾರಿಯಲ್ಲಿ ಪ್ರತಿಭಟನೆ

MLC Election ಪ್ರಚಾರ ಪತ್ರದಲ್ಲಿ ಬಿಜೆಪಿಯ ಉದಯ ಕುಮಾರ್ ಶೆಟ್ಟಿ: ಕಾಂಗ್ರೆಸ್ ಎಡವಟ್ಟು

MLC Election ಪ್ರಚಾರ ಪತ್ರದಲ್ಲಿ ಬಿಜೆಪಿಯ ಉದಯ ಕುಮಾರ್ ಶೆಟ್ಟಿ: ಕಾಂಗ್ರೆಸ್ ಎಡವಟ್ಟು

Desi Swara: ಚೈತ್ರದ ಚುಮುಚುಮು ಚಳಿಯ ಸುಂದರಿ “ಡ್ಯಾಂಡೆಲೈನ್‌’

Desi Swara: ಚೈತ್ರದ ಚುಮುಚುಮು ಚಳಿಯ ಸುಂದರಿ “ಡ್ಯಾಂಡೆಲೈನ್‌’

Bengaluru: ಕ್ರಿಮಿನಲ್‌ಗ‌ಳಿಗೆ ಸಿಡಿಆರ್‌ ಮಾರಾಟ; 10 ಸೆರೆ

Bengaluru: ಕ್ರಿಮಿನಲ್‌ಗ‌ಳಿಗೆ ಸಿಡಿಆರ್‌ ಮಾರಾಟ; 10 ಸೆರೆ

Desi Swara: ಸೆಲ್ಫಿಗಳ ಹಿಂದಿನ ಮಾನಸಿಕತೆ

Desi Swara: ಸೆಲ್ಫಿಗಳ ಹಿಂದಿನ ಮಾನಸಿಕತೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

13

Ashika Ranganath: ಚಿರಂಜೀವಿ ಸಿನಿಮಾದಲ್ಲಿ ಆಶಿಕಾ ರಂಗನಾಥ್‌

Tamil filmmaker: ಹೃದಯಾಘಾತದಿಂದ ಕಾಲಿವುಡ್‌ನ ಖ್ಯಾತ ನಿರ್ದೇಶಕ ಸೂರ್ಯ ಪ್ರಕಾಶ್ ನಿಧನ

Tamil filmmaker: ಹೃದಯಾಘಾತದಿಂದ ಕಾಲಿವುಡ್‌ನ ಖ್ಯಾತ ನಿರ್ದೇಶಕ ಸೂರ್ಯ ಪ್ರಕಾಶ್ ನಿಧನ

18

Actress: 42ನೇ ವಯಸ್ಸಿನಲ್ಲಿ ತನಗಿಂತ 6 ವರ್ಷ ಚಿಕ್ಕವನೊಂದಿಗೆ 3ನೇ ಮದುವೆಯಾದ ಖ್ಯಾತ ನಟಿ

Kamal Hassan’s Indian 2 gets release date

Indian 2; ಜುಲೈ 12ರಂದು ತೆರೆಗೆ ಬರಲಿದೆ ಕಮಲ್-ಶಂಕರ್ ಜೋಡಿಯ ಇಂಡಿಯನ್ -2

1

ಕಾರ್ತಿ ಸಿನಿ ಕೆರಿಯರ್‌ನಲ್ಲೇ ಅತ್ಯಂತ ದುಬಾರಿ ಸಿನಿಮಾವಾಗಿರಲಿದೆ ʼಸರ್ದಾರ್‌ -2ʼ

MUST WATCH

udayavani youtube

ವಾಲ್ಮೀಕಿ ಅಭಿವೃದ್ಧಿ ನಿಗಮದ ಅಧೀಕ್ಷಕನ ಆತ್ಮಹ*ತ್ಯೆ ಪ್ರಕರಣ,ಅಧಿಕಾರಿಗಳ ಭೇಟಿ

udayavani youtube

ಹೆದ್ದಾರಿಯಲ್ಲೇ ಲಾಂಗ್‌ ಹಿಡಿದು ಓಡಾಡಿದ ಯುವಕ!

udayavani youtube

ಆರೋಗ್ಯಕರ ಬೇಕರಿ ಫುಡ್ ತಿನ್ನಬೇಕಾ ? ಇಲ್ಲಿಗೆ ಬನ್ನಿ

udayavani youtube

ಬಾವಿಗೆ ಬಿದ್ದು ಒದ್ದಾಡುತ್ತಿದ್ದ ರಾಷ್ಟ್ರಪಕ್ಷಿಯ ರಕ್ಷಣೆ

udayavani youtube

ಮಡಿಕೇರಿಯಲ್ಲೊಂದು ಪಕ್ಕಾ ಉಡುಪಿ ಶೈಲಿಯ ಉಪಹಾರ ಮಂದಿರ

ಹೊಸ ಸೇರ್ಪಡೆ

9-kodachadri

Kodachadri: ಮಳೆಯಲಿ ಕೊಡಚಾದ್ರಿ ಮಡಿಲಲಿ

Desi Swara: ವಾಸವಿ ಕ್ಲಬ್‌ ಮೆರ್ಲಿಯನ್‌ ಸಿಂಗಾಪುರ- ವಾಸವಿ ಜಯಂತಿ ಪೂಜೆ ಸಂಪನ್ನ

Desi Swara: ವಾಸವಿ ಕ್ಲಬ್‌ ಮೆರ್ಲಿಯನ್‌ ಸಿಂಗಾಪುರ- ವಾಸವಿ ಜಯಂತಿ ಪೂಜೆ ಸಂಪನ್ನ

8-ipl

IPL: ಸನ್‌ ರೈಸರ್ಸ್‌ ಆದ ಡೆಕ್ಕನ್‌ ಚಾರ್ಜಸ್‌

Mangaluru; ಲವ್‌ ಜಿಹಾದ್‌ ತಡೆಯಲು ಶ್ರೀರಾಮ ಸೇನೆಯಿಂದ ಸಹಾಯವಾಣಿ ಆರಂಭ

Mangaluru; ಲವ್‌ ಜಿಹಾದ್‌ ತಡೆಯಲು ಶ್ರೀರಾಮ ಸೇನೆಯಿಂದ ಸಹಾಯವಾಣಿ ಆರಂಭ

11

ಗಣೇಶ ದೇವಸ್ಥಾನ ನಿರ್ಮಿಸಲು ಹಿಂದೂಗಳಿಗೆ ಭೂಮಿಯನ್ನು ದಾನವನ್ನಾಗಿ ನೀಡಿದ ಮುಸ್ಲಿಂ ಜಮಾತ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.