Singer Mangli: ಖ್ಯಾತ ಗಾಯಕಿ ಮಂಗ್ಲಿ ಕಾರು ಅಪಘಾತ; ಅಪಾಯದಿಂದ ಪಾರು
Team Udayavani, Mar 18, 2024, 1:03 PM IST
ಬೆಂಗಳೂರು: ಖ್ಯಾತ ಹಿನ್ನೆಲೆ ಗಾಯಕಿ ಸತ್ಯವತಿ ರಾಥೋಡ್(ಮಂಗ್ಲಿ) ಅವರ ಕಾರು ಅಪಘಾತವಾಗಿರುವ ಘಟನೆ ಹೈದರಾಬಾದ್-ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯ ಶಂಶಾಬಾದ್ನ ತೊಂಡುಪಲ್ಲಿ ಸೇತುವೆ ಬಳಿ ಭಾನುವಾರ (ಮಾ. 17 ರಂದು) ರಾತ್ರಿ ನಡೆದಿರುವುದು ವರದಿಯಾಗಿದೆ.
ಆಧ್ಯಾತ್ಮಿಕ ಕಾರ್ಯಕ್ರಮವೊಂದರಲ್ಲಿ ಪಾಲ್ಗೊಂಡು ವಾಪಾಸಾಗುತ್ತಿದ್ದ ವೇಳೆ ಈ ಘಟನೆ ನಡೆದಿದೆ ಎನ್ನಲಾಗಿದೆ. ಮಂಗ್ಲಿ ಅವರ ಕಾರಿಗೆ ಟ್ರಕ್(ಡಿಸಿಎಂ ವಾಹನ) ಢಿಕ್ಕಿ ಹೊಡೆದ ಪರಿಣಾಮ ಈ ಘಟನೆ ನಡೆದಿದೆ.
ಗಾಯಕಿ ಮಂಗ್ಲಿ ಮತ್ತು ಇತರ ಇಬ್ಬರು ಪ್ರಯಾಣಿಕರಾದ ಮೇಘರಾಜ್ ಮತ್ತು ಮನೋಹರ್ ಅವರಿಗೆ ಸಣ್ಣಪುಟ್ಟ ಗಾಯಗಳಾಗಿವೆ ಎಂದು ವರದಿ ಆಗಿದೆ.
ಮಂಗ್ಲಿ ಅವರ ಕಾರಿಗೆ ವಾಹನ ಹಿಂದಿನಿಂದ ಗುದ್ದಿದೆ. ಟ್ರಕ್ ಚಾಲಕ ಮದ್ಯದ ಅಮಲಿನಲ್ಲಿದ್ದ ಎನ್ನಲಾಗಿದೆ. ಸದ್ಯ ಪೊಲೀಸರು ಈ ಬಗ್ಗೆ ಪ್ರಕರಣವನ್ನು ದಾಖಲಿಸಿದ್ದಾರೆ.
ಅಪಘಾತದ ಬಳಿಕ ಮಂಗ್ಲಿ ಅವರು ʼಮಾ ಸೂಪರ್ ಸಿಂಗರ್ ಪಾರ್ಟಿʼಯಲ್ಲಿ ಭಾಗವಹಿಸಿದ್ದರು. ಈ ವೇಳೆ ಅವರಿಗೆ ಯಾವುದೇ ಗಾಯಗಳು ಆಗದೆ ಇರುವುದು ಕಂಡು ಬಂದಿದೆ ಎಂದು ವರದಿ ಆಗಿದೆ.
ಕನ್ನಡ, ತೆಲುಗಿನಲ್ಲಿ ಜನಪ್ರಿಯ ಆಗಿರುವ ಮಂಗ್ಲಿ ‘ರಾಮುಲೂ ರಾಮುಲಾ’, ‘ಜ್ವಾಲಾ ರೆಡ್ಡಿ’, ‘ಹೂ ಅಂತೀಯಾ..’’,`ಕಣ್ಣೇ ಅದಿರಿಂದಿ, ‘ರಾ ರಾ ರಕ್ಕಮ್ಮ’ ಮತ್ತು ‘ಜಿಂದಾ ಬಂದಾ’ ಇತರೆ ಸೂಪರ್ ಹಿಟ್ ಹಾಡುಗಳನ್ನು ಹಾಡಿದ್ದಾರೆ.
Singer #Mangli has a lucky escape after minor road accident near Tondupally, Shamshabad. Incident occurred post-midnight Friday while she was returning from Kanha Shanti Vanam. No injuries reported, only minor damage to the car. Police filed case under IPC Section 279.#Hyderabad pic.twitter.com/rFWejE3rU7
— Informed Alerts (@InformedAlerts) March 18, 2024
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ʼಬಂಗಾರಂʼನಲ್ಲಿ ರಕ್ತಸಿಕ್ತ ಅವತಾರ ತಾಳಿದ ಸಮಂತಾ: ಹುಟ್ಟುಹಬ್ಬಕ್ಕೆ ಹೊಸ ಸಿನಿಮಾ ಅನೌನ್ಸ್
Tollywood: ಅಧಿಕೃತವಾಗಿ ರಿವೀಲ್ ಆಯಿತು ‘ಕಲ್ಕಿ 2898 ಎಡಿʼ ಸಿನಿಮಾದ ರಿಲೀಸ್ ಡೇಟ್
Rakshit Shetty: ʼರಿಚರ್ಡ್ ಆಂಟನಿʼಯಲ್ಲಿ ಈ ಕರಾವಳಿಯ ನಟಿಯರಿಗೆ ಸಿಗುತ್ತಾ ಅವಕಾಶ?
Kollywood: ಅಜಿತ್ ಹುಟ್ಟುಹಬ್ಬಕ್ಕೆ ಸೂಪರ್ ಹಿಟ್ ʼಬಿಲ್ಲಾʼ ರೀ ರಿಲೀಸ್; ಫ್ಯಾನ್ಸ್ ಖುಷ್
OTT Release: ವಿಜಯ್ ದೇವರಕೊಂಡ ʼಫ್ಯಾಮಿಲಿ ಸ್ಟಾರ್ʼ ಓಟಿಟಿ ರಿಲೀಸ್ಗೆ ಡೇಟ್ ಫಿಕ್ಸ್
MUST WATCH
ಹೊಸ ಸೇರ್ಪಡೆ
Gadag ನಾಲ್ವರ ಹತ್ಯೆ ಕೇಸ್ ಆರೋಪಿಯಿಂದ ಪೊಲೀಸರ ಮೇಲೆ ಹಲ್ಲೆ!; ಕಾಲಿಗೆ ಗುಂಡು
Kalaburagi; ಪ್ರಜ್ವಲ್ ಪರ ಮತಯಾಚನೆ ಮಾಡಿದ್ದ ಮೋದಿ-ಶಾ ಈಗ ಉತ್ತರಿಸಲಿ: ಪ್ರಿಯಾಂಕ ವಾದ್ರಾ
BJP ಶೆಟ್ಟರ್, ಶ್ರೀರಾಮುಲುಗೆ ಚೊಂಬು ಗ್ಯಾರಂಟಿ : ಲಕ್ಷ್ಮಣ ಸವದಿ
Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್
Ramanagara: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು