ಗಾನಕೋಗಿಲೆ ಎಂ.ಎಸ್.ಸುಬ್ಬುಲಕ್ಷ್ಮಿ ಪಾತ್ರಕ್ಕೆ ಬಣ್ಣ ಹಚ್ಚುತ್ತಾರಾ ಈ ಸೌತ್‌ ಬೆಡಗಿಯರು?


Team Udayavani, May 22, 2024, 3:33 PM IST

ಗಾನಕೋಗಿಲೆ ಎಂ.ಎಸ್.ಸುಬ್ಬುಲಕ್ಷ್ಮಿ ಪಾತ್ರಕ್ಕೆ ಬಣ್ಣ ಹಚ್ಚುತ್ತಾರಾ ಈ ಸೌತ್‌ ಬೆಡಗಿಯರು?

ಬೆಂಗಳೂರು/ಚೆನ್ನೈ: ಒಬ್ಬ ಶ್ರೇಷ್ಠ ವ್ಯಕ್ತಿಯ ಜೀವನಗಾಥೆಯ ಕುರಿತು ಕೃತಿ ಅಥವಾ ಸಿನಿಮಾಗಳು ಬರುವುದು ಹೊಸದೇನಲ್ಲ. ಚಿತ್ರರಂಗದಲ್ಲಿ ಕೆಲ ಬಯೋಪಿಕ್‌ ಸೂಪರ್‌ ಹಿಟ್‌ ಆಗಿದೆ. ಶ್ರೇಷ್ಠ ವ್ಯಕ್ತಿಯ ಜೀವನದ ಸವಾಲು, ಸಾಧನೆ ಹಾಗೂ ಸಂಕಷ್ಟವನ್ನು ದೊಡ್ಡ ಪರದೆಯಲ್ಲಿ ದೃಶ್ಯ ರೂಪದಲ್ಲಿ ತರುವ ಪ್ರಯತ್ನ ಚಿತ್ರರಂಗ ಆಗುತ್ತಿರುತ್ತದೆ.

ಇತ್ತೀಚೆಗಷ್ಟೇ ಸಂಗೀತ ದಿಗ್ಗಜ ಇಳಯರಾಜ ಬಯೋಪಿಕ್‌ ಅನೌನ್ಸ್‌ ಆಗಿದೆ. ಇದರಲ್ಲಿ ನಟ ಧನುಷ್‌ ಕಾಣಿಸಿಕೊಳ್ಳಲಿದ್ದಾರೆ. ಇದಲ್ಲದೆ ಪ್ರಧಾನಿ ಮೋದಿ ಅವರ ಬಯೋಪಿಕ್‌ ಸೆಟ್ಟೇರಲಿದೆ ಎನ್ನುವ ಸುದ್ದಿಯೊಂದು ದಕ್ಷಿಣ ಸಿನಿರಂಗದಲ್ಲಿ ಹರಿದಾಡಿದೆ. ನರೇಂದ್ರ ಮೋದಿಯವರ ಜೀವನಾಧಾರಿತ ಚಿತ್ರದಲ್ಲಿ ಸತ್ಯರಾಜ್‌ ಕಾಣಿಸಿಕೊಳ್ಳಲಿದ್ದಾರೆ ಎನ್ನಲಾಗಿದೆ.

ಇದೀಗ ಮತ್ತೊಂದು ಬಯೋಪಿಕ್‌ ಬಗ್ಗೆ ಸುದ್ದಿ ಹರಿದಾಡಿದೆ. ಕರ್ನಾಟಕ ಶಾಸ್ತ್ರೀಯ ಸಂಗೀತ ಗಾಯಕಿ ಎಂ.ಎಸ್.‌ ಸುಬ್ಬುಲಕ್ಷ್ಮಿ ಅವರ ಜೀವನಗಾಥೆಯ ಕಥೆ ಸಿನಿಮಾವಾಗಿ ಬರಲಿದೆ.

ಬೆಂಗಳೂರು ಮೂಲದ ಪ್ರೊಡಕ್ಷನ್ ಹೌಸ್ ಮತ್ತು ಪ್ರಸಿದ್ಧ ನಿರ್ದೇಶಕರ ತಂಡವು ಈಗಾಗಲೇ ಚಿತ್ರದ ಪ್ರಿ-ಪ್ರೊಡಕ್ಷನ್ ಕೆಲಸವನ್ನು ಪ್ರಾರಂಭಿಸಿದೆ ಎಂದು ʼಪಿಂಕ್‌ ವಿಲ್ಲಾʼ ವರದಿ ಮಾಡಿದೆ.

ಈ ಹಿಂದೆಯೇ ಎಂ.ಎಸ್.‌ ಸುಬ್ಬುಲಕ್ಷ್ಮಿ ಅವರ ಕುರಿತಾದ ಸಿನಿಮಾ ಬರಲಿದೆ ಎನ್ನುವ ಮಾತುಗಳು ಹರಿದಾಡಿತ್ತು. ಆದರೆ ಅದರ ಬಗ್ಗೆ ಮತ್ಯಾವ ಅಪ್ಡೇಟ್ಸ್‌ ಹೊರಬಿದ್ದಿರಲಿಲ್ಲ.

ಇದೀಗ ಚಿತ್ರತಂಡ ಸುಬ್ಬುಲಕ್ಷ್ಮಿ ಅವರ ಪಾತ್ರವನ್ನು ಮಾಡುವ ಕಲಾವಿದರ ಹುಡುಕಾಟದಲ್ಲಿ ನಿರತರಾಗಿದೆ. ದಕ್ಷಿಣ ಭಾರತದಲ್ಲಿ ಸದ್ಯ ಯಶಸ್ಸಿನ ಹಾದಿಯಲ್ಲಿರುವ ನಟಿ ನಯನತಾರಾ, ತ್ರಿಶಾ ಕೃಷ್ಣನ್ ಮತ್ತು ರಶ್ಮಿಕಾ ಮಂದಣ್ಣ ಅವರ ಹೆಸರು ಮುಂಚೂಣಿಯಲ್ಲಿದೆ. ಇದಲ್ಲದೆ ʼಮಹಾನಟಿʼ ಪಾತ್ರವನ್ನು ಮಾಡಿರುವ ಕೀರ್ತಿ ಸುರೇಶ್‌ ಕೂಡ ಸುಬ್ಬುಲಕ್ಷ್ಮಿ ಅವರ ಪಾತ್ರವನ್ನು ಮಾಡುವ ಲಿಸ್ಟ್‌ ನಲ್ಲಿದ್ದಾರೆ ಎಂದು ವರದಿ ತಿಳಿಸಿದೆ.

ಸ್ಕ್ರಿಪ್ಟ್ ಕೆಲಸ ಅಂತಿಮ ಹಂತದಲ್ಲಿದೆ. ಸುಬ್ಬುಲಕ್ಷ್ಮಿ ಪಾತ್ರವನ್ನು ಯಾರು ಮಾಡಲಿದ್ದಾರೆ ಎನ್ನುವುದನ್ನು ಚಿತ್ರತಂಡ ನಿರ್ಧರಿಸಲಿದೆ. ಚಿತ್ರವನ್ನು ದೊಡ್ಡ ಮಟ್ಟದಲ್ಲಿ ತೆರೆಗೆ ತರಲು ಯೋಜಿಸಲಾಗಿದೆ ಎಂದು ಮೂಲಗಳು ಹೇಳಿರುವುದಾಗಿ ವರದಿ ತಿಳಿಸಿದೆ.

ಆದರೆ ಪ್ರೂಡಕ್ಷನ್‌ ಸಂಸ್ಥೆ ಇನ್ನಷ್ಟೇ ಅಧಿಕೃತವಾಗಿ ಚಿತ್ರದ ಬಗ್ಗೆ ಮಾಹಿತಿ ನೀಡಿಬೇಕಿದೆ.

ಮಧುರೈ ಷಣ್ಮುಖವಡಿವು ಸುಬ್ಬುಲಕ್ಷ್ಮಿ ಅವರು ಎಂ.ಎಸ್.ಸುಬ್ಬುಲಕ್ಷ್ಮಿ ಎಂದೇ ಖ್ಯಾತಿ ಆದವರು. ಶಾಸ್ತ್ರೀಯ ಸಂಗೀತ ಗಾಯಕಿ ಮತ್ತು ನಟಿಯೂ ಆಗಿಯೂ ಗುರುತಿಸಿಕೊಂಡಿದ್ದ ಅವರು 10ನೇ ವಯಸ್ಸಿನಲ್ಲೇ ಗಾಯನಕ್ಕೆ ಕಾಲಿಟ್ಟಿದ್ದರು.

1938 ರಲ್ಲಿ ʼಸೇವಾಸದನ್ʼ ಮೂಲಕ ಚಿತ್ರರಂಗಕ್ಕೆ ಪಾದಾರ್ಪಣೆ ಮಾಡಿದ್ದ ʼಸಾವಿತ್ರಿʼ ಮತ್ತು ʼಮೀರಾʼ ಸಿನಿಮಾದಲ್ಲಿ ನಟಿಸಿದ್ದರು.

ʼಸುಪ್ರಭಾತಂʼ, ʼಕುರೈ ಒನ್ರುಮ್ ಇಲ್ಲೈʼ, ʼಭಜಗೋವಿಂದಂʼ, ʼವಿಷ್ಣು ಸಹಸ್ರನಾಮʼ, ʼಹನುಮಾನ್ ಚಾಲೀಸಾʼ, ಹಾಗೂ ಇತರೆ ಪ್ರಮುಖ ಭಕ್ತಿಗೀತೆಗಳನ್ನು ಹಾಡಿದ್ದರು.

‘ಭಾರತರತ್ನ’ವನ್ನು ಶಾಸ್ತ್ರೀಯ ಸಂಗೀತಕ್ಕೆ ಮೊದಲಾಗಿ ಪಡೆದವರು ಸುಬ್ಬುಲಕ್ಷ್ಮಿ.  2004 ರಲ್ಲಿ ತನ್ನ 88ನೇ ವಯಸ್ಸಿನಲ್ಲಿ ಅವರು ನಿಧನರಾದರು.

 

ಟಾಪ್ ನ್ಯೂಸ್

ಕೆಎಸ್‌ಆರ್‌ಟಿಸಿ, ಬಿಎಂಟಿಸಿಗೆ 100 ಕೋಟಿ ರೂ. ಹೆಚ್ಚುವರಿ ಹೊರೆ!

KSRTC, ಬಿಎಂಟಿಸಿಗೆ 100 ಕೋಟಿ ರೂ. ಹೆಚ್ಚುವರಿ ಹೊರೆ!

mob

‘Deepfake’ ತಡೆಗೆ ಮಸೂದೆ? 

ಪುತ್ರನ ಬಂಧನ ಎಂದು ಉದ್ಯಮಿಗೆ ಹಣದ ಬೇಡಿಕೆ ಇಟ್ಟ ಅನಾಮಿಕರು !

ಪುತ್ರನ ಬಂಧನ ಎಂದು ಉದ್ಯಮಿಗೆ ಹಣದ ಬೇಡಿಕೆ ಇಟ್ಟ ಅನಾಮಿಕರು !

Mangaluru ಸಿಟಿಬಸ್‌ಗಳಲ್ಲಿ ಶೀಘ್ರ ಯುಪಿಐ ಮುಖಾಂತರವೂ ಟಿಕೆಟ್‌

Mangaluru ಸಿಟಿಬಸ್‌ಗಳಲ್ಲಿ ಶೀಘ್ರ ಯುಪಿಐ ಮುಖಾಂತರವೂ ಟಿಕೆಟ್‌

1-pS

Parliament ಇಂದು ಪ್ರೇರಣ ಸ್ಥಳ ಉದ್ಘಾಟನೆ; ವಿಪಕ್ಷ ವಿರೋಧ

Kasaragod ಮಾತೃತ್ವ ಮೆರೆದ ಆಸ್ಪತ್ರೆಯ ನರ್ಸಿಂಗ್‌ ಆಫೀಸರ್‌

Kasaragod ಮಾತೃತ್ವ ಮೆರೆದ ಆಸ್ಪತ್ರೆಯ ನರ್ಸಿಂಗ್‌ ಆಫೀಸರ್‌

1-aaaaa

PM ಮೋದಿ ಜತೆಗಿನ ಮೆಲೋನಿ ಸೆಲ್ಫಿ ವೀಡಿಯೋ ಭಾರೀ ವೈರಲ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

11

ದರ್ಶನ್‌ ಬಂಧನ To ಕಲ್ಕಿ ಟ್ರೇಲರ್..‌ ಈ ವಾರ ಸುದ್ದಿಯಾದ ಪ್ರಮುಖ ಸೌತ್‌ ಸಿನಿ ಸುದ್ದಿಗಳಿವು

6

Movies: ʼಪುಷ್ಪ-2ʼ ಮುಂದೂಡಿಕೆಯಾದರೆ ಸ್ವಾತಂತ್ರ್ಯ ದಿನದ ರಿಲೀಸ್‌ ಮೇಲೆ ಈ ಚಿತ್ರಗಳ ಕಣ್ಣು

ಲಂಡನ್‌ ಶೂಟ್‌,ಡಾನ್‌ ಲುಕ್, ಖ್ಯಾತ ನಟಿ ಎಂಟ್ರಿ.. ʼಟಾಕ್ಸಿಕ್‌ʼ ಲೇಟೆಸ್ಟ್‌ ಅಪ್ಡೇಟ್‌ ಔಟ್

ಲಂಡನ್‌ ಶೂಟ್‌,ಡಾನ್‌ ಲುಕ್, ಖ್ಯಾತ ನಟಿ ಎಂಟ್ರಿ.. ʼಟಾಕ್ಸಿಕ್‌ʼ ಲೇಟೆಸ್ಟ್‌ ಅಪ್ಡೇಟ್‌ ಔಟ್

3

Pradeep K Vijayan: ಮನೆಯಲ್ಲಿ ಶವವಾಗಿ ಪತ್ತೆಯಾದ ಖ್ಯಾತ ನಟ; ತನಿಖೆ ಆರಂಭ

Cinema Shot: ಹೆಲಿ ಕಾಪ್ಟರ್‌ ನಿಂದ ಜಿಗಿಯುವ ದೃಶ್ಯ ಚಿತ್ರೀಕರಣ, ನಟ ಜಾರ್ಜ್‌ ಗೆ ಗಾಯ

Cinema Shot: ಹೆಲಿ ಕಾಪ್ಟರ್‌ ನಿಂದ ಜಿಗಿಯುವ ದೃಶ್ಯ ಚಿತ್ರೀಕರಣ, ನಟ ಜಾರ್ಜ್‌ ಗೆ ಗಾಯ

MUST WATCH

udayavani youtube

ಕಾಪು ಸರ್ವೀಸ್ ರಸ್ತೆಯಲ್ಲಿ ರಿಕ್ಷಾ ಚಾಲಕ ಮತ್ತು ಬೈಕ್ ಸವಾರನ ನಡುವೆ ಹೊಡೆದಾಟ

udayavani youtube

ದರ್ಶನ್ ಗ್ಯಾಂಗ್ ಕ್ರೌರ್ಯ ಹೇಗಿತ್ತು ಗೊತ್ತಾ..? ವೈರಲ್ ಆಡಿಯೋ ಇಲ್ಲಿದೆ

udayavani youtube

Udupi: ಚಾಲಕನ ನಿಯಂತ್ರಣ ತಪ್ಪಿ ಕಾರು ಪಲ್ಟಿ

udayavani youtube

ಕಾಂಗ್ರೆಸ್ ಹಿರಿಯ ಶಾಸಕ ಸಿ.ಎಸ್.ನಾಡಗೌಡರಿಂದ ರಾಜಕೀಯ ತ್ಯಾಗದ ಮಾತು

udayavani youtube

ಇಳಿಕೆಯಾದ ಘಟಪ್ರಭಾ ನದಿ

ಹೊಸ ಸೇರ್ಪಡೆ

ಕೆಎಸ್‌ಆರ್‌ಟಿಸಿ, ಬಿಎಂಟಿಸಿಗೆ 100 ಕೋಟಿ ರೂ. ಹೆಚ್ಚುವರಿ ಹೊರೆ!

KSRTC, ಬಿಎಂಟಿಸಿಗೆ 100 ಕೋಟಿ ರೂ. ಹೆಚ್ಚುವರಿ ಹೊರೆ!

mob

‘Deepfake’ ತಡೆಗೆ ಮಸೂದೆ? 

ಪುತ್ರನ ಬಂಧನ ಎಂದು ಉದ್ಯಮಿಗೆ ಹಣದ ಬೇಡಿಕೆ ಇಟ್ಟ ಅನಾಮಿಕರು !

ಪುತ್ರನ ಬಂಧನ ಎಂದು ಉದ್ಯಮಿಗೆ ಹಣದ ಬೇಡಿಕೆ ಇಟ್ಟ ಅನಾಮಿಕರು !

Mangaluru ಸಿಟಿಬಸ್‌ಗಳಲ್ಲಿ ಶೀಘ್ರ ಯುಪಿಐ ಮುಖಾಂತರವೂ ಟಿಕೆಟ್‌

Mangaluru ಸಿಟಿಬಸ್‌ಗಳಲ್ಲಿ ಶೀಘ್ರ ಯುಪಿಐ ಮುಖಾಂತರವೂ ಟಿಕೆಟ್‌

1-pS

Parliament ಇಂದು ಪ್ರೇರಣ ಸ್ಥಳ ಉದ್ಘಾಟನೆ; ವಿಪಕ್ಷ ವಿರೋಧ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.