ನಾಯಕನ ಜೊತೆ ಜಗಳ: ರಿಲೀಸ್‌ಗೂ ಮುನ್ನ ಸಿನಿಮಾವನ್ನು ಆನ್‌ಲೈನ್‌ನಲ್ಲಿ ಲೀಕ್‌ ಮಾಡಿದ ನಿರ್ದೇಶಕ


Team Udayavani, May 15, 2024, 3:33 PM IST

ನಾಯಕನ ಜೊತೆ ಜಗಳ: ರಿಲೀಸ್‌ಗೂ ಮುನ್ನ ಸಿನಿಮಾವನ್ನು ಆನ್‌ಲೈನ್‌ನಲ್ಲಿ ಲೀಕ್‌ ಮಾಡಿದ ನಿರ್ದೇಶಕ

ಕೊಚ್ಚಿ: ಮಾಲಿವುಡ್‌ ಸಿನಿಮಾರಂಗ ಮುಟ್ಟಿದೆಲ್ಲ ಚಿನ್ನವಾಗುತ್ತಿದೆ. ಕಳೆದ ಕೆಲ ತಿಂಗಳಿನಲ್ಲಿ ತೆರಕಂಡ ಸಿನಿಮಾಗಳು 100 ಕೋಟಿಗೂ ಅಧಿಕ ಕಲೆಕ್ಷನ್‌ ಮಾಡಿದೆ.  ನಾಲ್ಕು ತಿಂಗಳಿನಲ್ಲಿ ಮಲಯಾಳಂ ಚಿತ್ರರಂಗ 1000 ಕೋಟಿ ಗಳಿಕೆ ಮಾಡಿದೆ.

ಇಷ್ಟೆಲ್ಲ ಒಳಿತು ನಡೆಯುತ್ತಿರುವಾಗಲೇ ಅದೊಂದು ನಿರ್ದೇಶಕ – ನಾಯಕನ ನಡುವಿನ ಮನಸ್ತಾಪದಿಂದ ತೆರೆಕಾಣಬೇಕಿದ್ದ ಸಿನಿಮಾವೊಂದಕ್ಕೆ ಭಾರೀ ಹಿನ್ನೆಡೆ ಆಗಿದೆ. ಮಾಲಿವುಡ್‌ ಚಿತ್ರರಂಗದ ಖ್ಯಾತ ನಟ ಟೊವಿನೋ ಥಾಮಸ್‌ ಹಾಗೂ ನಿರ್ದೇಶಕ ಸನಲ್ ಕುಮಾರ್‌ ಶಶಿಧರನ್‌ ನಡುವಿನ ಮನಸ್ತಾಪ ಮಾಲಿವುಡ್‌ ನಲ್ಲಿ ತಾರಕಕ್ಕೇರಿದೆ.

ಏನಿದು ಜಗಳ?: ಶಶಿಧರನ್‌ ಹಾಗೂ ಟೊವಿನೋ ಜೊತೆಯಾಗಿ ʼವಳಕ್ಕುʼ ಎನ್ನುವ ಸಿನಿಮಾವನ್ನು ಮಾಡಿದ್ದಾರೆ. 2020 ರಲ್ಲೇ ಚಿತ್ರೀಕರಣಗೊಂಡಿರುವ ಈ ಸಿಬಿಮಾ ಇದುವರೆಗೆ ರಿಲೀಸ್‌ ಆಗಿಲ್ಲ. ರಿಲೀಸ್‌ ವಿಚಾರವಾಗಿ ನಿರ್ದೇಶಕ ಹಾಗೂ ನಟ ಥಾಮಸ್‌ ನಡುವೆ ಭಿನ್ನಾಭಿಪ್ರಾಯ ಉಂಟಾಗಿದೆ. ಈ ಸಿನಿಮಾ ನಿರ್ಮಾಣಕ್ಕೆ ನಟ ಥಾಮಸ್‌ ಸಹ-ನಿರ್ಮಾಪಕ ಗಿರೀಶ್ ಚಂದ್ರನ್ ಅವರೊಂದಿಗೆ ಸೇರಿ 27 ಲಕ್ಷ ರೂಪಾಯಿಯನ್ನು ಬಂಡವಾಳವನ್ನಾಗಿ ಹಾಕಿದ್ದರು ಎನ್ನಲಾಗಿದೆ

ಈ ಸಿನಿಮಾಕ್ಕಾಗಿ ಪ್ರೇಕ್ಷಕರು ಕೆಲ ಸಮಯದಿಂದ ಕಾಯುತ್ತಿದ್ದಾರೆ. ಆದರೆ ಇದುವರೆಗೆ ರಿಲೀಸ್‌ ಬಗ್ಗೆ ಯಾವ ಮಾಹಿತಿಯೂ ಹೊರಬಿದ್ದಿಲ್ಲ. ನಿರ್ದೇಶಕ ಶಶಿಧರನ್‌ ಇತ್ತೀಚೆಗೆ ತಮ್ಮ ಫೇಸ್‌ ಬುಕ್‌ ಖಾತೆಯಲ್ಲಿ ಶಶಿಧರನ್‌ ಥಾಮಸ್‌ ಮೇಲೆ ಆರೋಪವನ್ನು ಮಾಡಿದ್ದರು. ʼವಳಕ್ಕುʼ ಸಿನಿಮಾ ಬಿಡುಗಡೆ ವಿಚಾರದಲ್ಲಿ ಟೊವಿನೋ ಮಧ್ಯ ಪ್ರವೇಶ ಮಾಡಿದ್ದಾರೆ. ತಮ್ಮ ವೃತ್ತಿ ಜೀವನದ ಮೇಲೆ ಪರಿಣಾಮ ಬೀರಬಾರದೆನ್ನುವ ಕಾರಣದಿಂದ ಥಾಮಸ್‌ ʼವಳಕ್ಕುʼ ಸಿನಿಮಾವನ್ನು ಥಿಯೇಟರ್‌ ಹಾಗೂ ಓಟಿಟಿಯಲ್ಲಿ ರಿಲೀಸ್‌ ಮಾಡಲು ಒಪ್ಪಿಗೆ ನೀಡುತ್ತಿಲ್ಲ. 2020 ರಲ್ಲಿ ಚಿತ್ರೀಕರಣಗೊಂಡರೂ, 2021 ರ ವೇಳೆಗೆ ಪೋಸ್ಟ್-ಪ್ರೊಡಕ್ಷನ್ ಮುಗಿದಿದ್ದರೂ, ನಟನ ಕಾರಣದಿಂದಾಗಿ ಚಿತ್ರ ಇನ್ನೂ ಬಿಡುಗಡೆಯಾಗಿಲ್ಲ ಎಂದು  ನಿರ್ದೇಶಕರು ಆರೋಪ ಮಾಡಿದ್ದಾರೆ.

ಇದರಿಂದ ಇಷ್ಟು ದಿನ ಒಳಜಗಳವಾಗಿದ್ದ ʼವಳಕ್ಕುʼ ರಿಲೀಸ್‌ ವಿಚಾರ ಸೋಶಿಯಲ್‌ ಮೀಡಿಯಾದ ಪೋಸ್ಟ್‌ ನಿಂದ ಬಹಿರಂಗವಾಗಿದೆ.

ಇದಕ್ಕೆ ಇನ್ಸ್ಟಾಗ್ರಾಮ್‌ ಲೈವ್‌ ನಲ್ಲಿ ನಟ ಟೊವಿನೋ ಸಹ ನಿರ್ಮಾಪಕ ಗಿರೀಸ್‌ ಅವರೊಂದಿಗೆ ಲೈವ್‌ ಬಂದು ಪ್ರತಿಕ್ರಿಯೆ ನೀಡಿದ್ದಾರೆ.

ನಟ ಟೊವಿನೋ ಪ್ರತಿಕ್ರಿಯೆ:

ನಿರ್ದೇಶಕರ ಮೇಲಿನ ಗೌರವದಿಂದ ಚಿತ್ರವನ್ನು ನಿರ್ಮಿಸಲು ನಿರ್ಧರಿಸಿರುವುದಾಗಿ ವಿಡಿಯೋದಲ್ಲಿ ಹೇಳಿಕೊಂಡಿದ್ದಾರೆ. ಟೊವಿನೊ ಯಾವುದೇ ಆದಾಯವಿಲ್ಲದೆ ಚಿತ್ರದ ನಿರ್ಮಾಣಕ್ಕೆ ₹27 ಲಕ್ಷ ಹೂಡಿಕೆ ಮಾಡಿದ್ದೇನೆ” ಎಂದಿದ್ದಾರೆ.

ಸಿನಿಮಾ ಬಿಡುಗಡೆ ಅಡ್ಡಿ ಆಗಿದ್ದು ನಾನಲ್ಲ, ಬದಲಾಗಿ ಸ್ವತಃ ನಿರ್ದೇಶಕ ಸನಲ್‌ ಅವರೇ ಎಂದಿದ್ದಾರೆ. ಮುಂಬೈ ಫಿಲ್ಮ್ ಫೆಸ್ಟಿವಲ್ (MAMI) ಸಿನಿಮಾವನ್ನು ಪ್ರದರ್ಶನ ಮಾಡುವ ವಿಚಾರವನ್ನು ಪ್ರಸ್ತಾಪಿಸಿದ್ದೆ. ಆದರೆ ನಿರ್ದೇಶಕರು ಆನ್‌ ಲೈನ್‌ ನಲ್ಲಿ ಸಿನಿಮಾ ಸೋರಿಕೆ ಆಗುತ್ತದೆ ಎನ್ನುವ ಕಾರಣಕ್ಕೆ ಅದನ್ನು ಬೇಡ ಎಂದಿದ್ದರು. ಇದಲ್ಲದೆ ಅವರು ಸಿನಿಮಾದ ವಿತರಣಾ ಹಕ್ಕನ್ನು ಹಸ್ತಾಂತರಿಸಲು ಸಿದ್ದರಿಲ್ಲ. ಓಟಿಟಿಗೆ ಸಿನಿಮಾ ಮಾರಾಟ ಮಾಡುವಾಗ ಇದು ಮುಖ್ಯವಾಗುತ್ತದೆ ಎಂದಿದ್ದಾರೆ.

2022 ರಲ್ಲಿ ನಟಿ ಮಂಜು ವಾರಿಯರ್‌ ಅವರನ್ನು ಬ್ಲಾಕ್‌ಮೇಲ್ ಮಾಡಿ ಸಾಮಾಜಿಕ ಜಾಲತಾಣಗಳ ಮೂಲಕ ಆಕೆಯ ಪ್ರತಿಷ್ಠೆಗೆ ಧಕ್ಕೆ ತಂದ ಆರೋಪದ ಮೇಲೆ ಶಶಿಧರನ್‌ ಅವರನ್ನು ಬಂಧಿಸಲಾಗಿತ್ತು. ಈ ಕಾರಣದಿಂದ ಬಹಳಷ್ಟು OTT ಪ್ಲಾಟ್‌ಫಾರ್ಮ್‌ಗಳು ಸಿನಿಮಾವನ್ನು ಖರೀದಿಸಲು ಮುಂದೆ ಬಂದಿಲ್ಲ ಎಂದು ಟೊವಿನೋ ಹೇಳಿದ್ದಾರೆ.

ರಿಲೀಸ್‌ ಗೂ ಮುನ್ನ ಇಡೀ ಸಿನಿಮಾವನ್ನೇ ಆನ್‌ ಲೈನ್‌ ನಲ್ಲಿ ಸೋರಿಕೆ ಮಾಡಿದ ನಿರ್ದೇಶಕ: ಟೊವಿನೋ ಅವರ ಹೇಳಿಕೆಗೆ ಪ್ರತಿಕ್ರಿಯೆ ನೀಡುವ ನಿಟ್ಟಿನಲ್ಲಿ ಆಕ್ರೋಶಗೊಂಡ ನಿರ್ದೇಶಕ ಸನಿಲ್‌ ವಿಮಿಯೋ’ ವಿಡಿಯೋ ಪ್ಲಾಟ್​ಫಾರ್ಮ್​ನಲ್ಲಿ ʼವಳಕ್ಕುʼ ಸಿನಿಮಾವನ್ನು ಅಪ್ ಲೋಡ್ ಮಾಡಿದ್ದಾರೆ. ಈಗಾಗಲೇ ಉಚಿತವಾಗಿ ನೋಡಲು ಇರುವ ʼವಳಕ್ಕುʼ ಸಿನಿಮಾ ಲಕ್ಷಾಂತರ ವೀಕ್ಷಣೆ ಕಂಡಿದೆ.

“ಸಿನಿಮಾವನ್ನು ಪ್ರೇಕ್ಷಕರು ನೋಡಬೇಕು. ಇದನ್ನು ವೀಕ್ಷಿಸಲು ಬಯಸುವವರಿಗೆ, ಇಲ್ಲಿ ʼವಳಕ್ಕುʼ ಸಿನಿಮಾ ಇದೆ. ಈಗ ಇದು ಯಾಕೆ ರಿಲೀಸ್ ಆಗಿಲ್ಲ ಎಂಬುದು ನಿಮಗೆ ಅರ್ಥವಾಗುತ್ತದೆ. ಎಂದು ಬತರೆದುಕೊಂಡು ಸಿನಿಮಾವನ್ನು ಆನ್‌ ಲೈನ್‌ ನಲ್ಲಿ ಹಾಕಿದ್ದಾರೆ.

ಆದರೆ ಆ ಬಳಿಕ ಅದನ್ನು ಅವರು ಡಿಲೀಟ್‌ ಮಾಡಿದ್ದಾರೆ ಎನ್ನಲಾಗಿದೆ. ಆದರೆ ಅದರ ಲಿಂಕ್‌ ಇನ್ನು ಕೂಡ ಫೇಸ್‌ ಬುಕ್‌ ನಲ್ಲಿದೆ.

ನಿರ್ದೇಶಕ ಸನಲ್‌ ವಿರುದ್ಧ ಮಾಲಿವುಡ್‌ ಸಿನಿಮಂದಿ ಆಕ್ರೋಶ ಹೊರಹಾಕಿದ್ದಾರೆ.

 

ಟಾಪ್ ನ್ಯೂಸ್

Shiroor Hill Slide:: ನಾಪತ್ತೆಯಾದವರ ಪತ್ತೆ ಕಾರ್ಯಕ್ಕೆ ಈಶ್ವರ್ ಮಲ್ಪೆ ತಂಡ ಶಿರೂರಿಗೆ

Shiroor Hill Slide:: ನಾಪತ್ತೆಯಾದವರ ಪತ್ತೆ ಕಾರ್ಯಕ್ಕೆ ಈಶ್ವರ್ ಮಲ್ಪೆ ತಂಡ ಶಿರೂರಿಗೆ

Shimoga; ಎಣ್ಣೆ ಕೊಟ್ಟಿಲ್ಲವೆಂದು ಹೆದ್ದಾರಿ ತಡೆದ ಯುವಕನ ಹುಚ್ಚಾಟಕ್ಕೆ ವಾಹನ ಸವಾರರ ಪರದಾಟ

Shimoga; ಎಣ್ಣೆ ಕೊಟ್ಟಿಲ್ಲವೆಂದು ಹೆದ್ದಾರಿ ತಡೆದ ಯುವಕನ ಹುಚ್ಚಾಟಕ್ಕೆ ವಾಹನ ಸವಾರರ ಪರದಾಟ

Leopard… ಪೆರಂಪಳ್ಳಿ: ಮನೆಯ ಕಾಂಪೌಂಡ್ ಒಳಗೆ ಕಾಣಿಸಿಕೊಂಡ ಚಿರತೆ… ಭಯಭೀತರಾದ ಜನ

Leopard… ಪೆರಂಪಳ್ಳಿ: ಮನೆಯ ಕಾಂಪೌಂಡ್ ಒಳಗೆ ಕಾಣಿಸಿಕೊಂಡ ಚಿರತೆ… ಭಯಭೀತರಾದ ಜನ

Navi Mumbai: ಬೆಳ್ಳಂಬೆಳಗ್ಗೆ ಮೂರೂ ಅಂತಸ್ತಿನ ಕಟ್ಟಡ ಕುಸಿತ… ಹಲವರು ಸಿಲುಕಿರುವ ಶಂಕೆ

Navi Mumbai: ಬೆಳ್ಳಂಬೆಳಗ್ಗೆ ಮೂರೂ ಅಂತಸ್ತಿನ ಕಟ್ಟಡ ಕುಸಿತ… ಹಲವರು ಸಿಲುಕಿರುವ ಶಂಕೆ

Tragedy: ಚಲಿಸುತ್ತಿದ್ದ ಬೈಕ್ ಮೇಲೆ ಬಿದ್ದ ಮರ… ಯುವಕ ಸ್ಥಳದಲ್ಲೇ ಮೃತ್ಯು

Tragedy: ಚಲಿಸುತ್ತಿದ್ದ ಬೈಕ್ ಮೇಲೆ ಬಿದ್ದ ಮರ… ಯುವಕ ಸ್ಥಳದಲ್ಲೇ ಮೃತ್ಯು

1-24-saturday

Daily Horoscope: ಪಾಲುದಾರಿಕೆ ವ್ಯವಹಾರದಲ್ಲಿ ಲಾಭ ಹೆಚ್ಚಳ, ಆರೋಗ್ಯ ಉತ್ತಮ

CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್‌ಗೆ ವಿವರಣೆ?

CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್‌ಗೆ ವಿವರಣೆ?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

rudraveena movie

Rudra Veena; ಜುಲೈ 26ರಂದು ತೆರೆಗೆ ಬರುತ್ತಿದೆ ‘ರುದ್ರ ವೀಣಾ’ ಚಿತ್ರ

Sai Pallavi: ಎರಡು ಮಕ್ಕಳ ತಂದೆ ಜೊತೆ ನಟಿ ಸಾಯಿಪಲ್ಲವಿ ಡೇಟಿಂಗ್?‌ ಏನಿದು ವಿಚಾರ?

Sai Pallavi: ಎರಡು ಮಕ್ಕಳ ತಂದೆ ಜೊತೆ ನಟಿ ಸಾಯಿಪಲ್ಲವಿ ಡೇಟಿಂಗ್?‌ ಏನಿದು ವಿಚಾರ?

Love Insurance Kompany: ಪತಿಯ ಸಿನಿಮಾಕ್ಕೆ ನಿರ್ಮಾಪಕಿಯಾದ ನಯನತಾರಾ; ಫಸ್ಟ್‌ ಲುಕ್‌ ಔಟ್

Love Insurance Kompany: ಪತಿಯ ಸಿನಿಮಾಕ್ಕೆ ನಿರ್ಮಾಪಕಿಯಾದ ನಯನತಾರಾ; ಫಸ್ಟ್‌ ಲುಕ್‌ ಔಟ್

Kollywood: ರಜಿನಿಕಾಂತ್‌ ʼಕೂಲಿʼಗೆ ಖಡಕ್‌ ವಿಲನ್‌ ಆಗಿ ಅಕ್ಕಿನೇನಿ ನಾಗಾರ್ಜುನ ಎಂಟ್ರಿ?

Kollywood: ರಜಿನಿಕಾಂತ್‌ ʼಕೂಲಿʼಗೆ ಖಡಕ್‌ ವಿಲನ್‌ ಆಗಿ ಅಕ್ಕಿನೇನಿ ನಾಗಾರ್ಜುನ ಎಂಟ್ರಿ?

SK25: ಶಿವಕಾರ್ತಿಕೇಯನ್ ಗೆ ಆ್ಯಕ್ಷನ್ ಕಟ್ ಹೇಳಲಿದ್ದಾರೆ ಸುಧಾ ಕೊಂಗರ

SK25: ಶಿವಕಾರ್ತಿಕೇಯನ್ ಗೆ ಆ್ಯಕ್ಷನ್ ಕಟ್ ಹೇಳಲಿದ್ದಾರೆ ಸುಧಾ ಕೊಂಗರ

MUST WATCH

udayavani youtube

ಸರ್ಕಾರದ ವಿರುದ್ಧ ವಿಧಾನಸಭೆಯಲ್ಲಿ ಬಿಜೆಪಿ-JDS ಶಾಸಕರಿಂದ ಭಜನೆ

udayavani youtube

ಶಿರೂರು ಗುಡ್ಡಕುಸಿತ; ಕಾಣೆಯಾದವರ ಹುಡುಕಾಟಕ್ಕೆ ಡ್ರೋನ್ ಬಳಸಿ ಕಾರ್ಯಾಚರಣೆ

udayavani youtube

ಕರ್ಮಫಲ ಶಿಕ್ಷಣದಿಂದ ಆತ್ಮೋನ್ನತಿ

udayavani youtube

ತಪ್ತ ಮುದ್ರಾ ಧಾರಣೆ ವಿಶೇಷ ಮಹತ್ವದ್ದು, ಯಾಕೆ?

udayavani youtube

ಬಾಳೆಯಿಂದ ವಾರ್ಷಿಕ 50-60 ಲಕ್ಷ ರೂ. ಆದಾಯ

ಹೊಸ ಸೇರ್ಪಡೆ

Shiroor Hill Slide:: ನಾಪತ್ತೆಯಾದವರ ಪತ್ತೆ ಕಾರ್ಯಕ್ಕೆ ಈಶ್ವರ್ ಮಲ್ಪೆ ತಂಡ ಶಿರೂರಿಗೆ

Shiroor Hill Slide:: ನಾಪತ್ತೆಯಾದವರ ಪತ್ತೆ ಕಾರ್ಯಕ್ಕೆ ಈಶ್ವರ್ ಮಲ್ಪೆ ತಂಡ ಶಿರೂರಿಗೆ

Shimoga; ಎಣ್ಣೆ ಕೊಟ್ಟಿಲ್ಲವೆಂದು ಹೆದ್ದಾರಿ ತಡೆದ ಯುವಕನ ಹುಚ್ಚಾಟಕ್ಕೆ ವಾಹನ ಸವಾರರ ಪರದಾಟ

Shimoga; ಎಣ್ಣೆ ಕೊಟ್ಟಿಲ್ಲವೆಂದು ಹೆದ್ದಾರಿ ತಡೆದ ಯುವಕನ ಹುಚ್ಚಾಟಕ್ಕೆ ವಾಹನ ಸವಾರರ ಪರದಾಟ

2-chithapura

Chittapur: ಪಟ್ಟಣದ ಹೊರವಲಯದಲ್ಲಿ ಯುವಕನ ಶವ ಪತ್ತೆ: ಕೊಲೆ ಶಂಕೆ

Leopard… ಪೆರಂಪಳ್ಳಿ: ಮನೆಯ ಕಾಂಪೌಂಡ್ ಒಳಗೆ ಕಾಣಿಸಿಕೊಂಡ ಚಿರತೆ… ಭಯಭೀತರಾದ ಜನ

Leopard… ಪೆರಂಪಳ್ಳಿ: ಮನೆಯ ಕಾಂಪೌಂಡ್ ಒಳಗೆ ಕಾಣಿಸಿಕೊಂಡ ಚಿರತೆ… ಭಯಭೀತರಾದ ಜನ

Navi Mumbai: ಬೆಳ್ಳಂಬೆಳಗ್ಗೆ ಮೂರೂ ಅಂತಸ್ತಿನ ಕಟ್ಟಡ ಕುಸಿತ… ಹಲವರು ಸಿಲುಕಿರುವ ಶಂಕೆ

Navi Mumbai: ಬೆಳ್ಳಂಬೆಳಗ್ಗೆ ಮೂರೂ ಅಂತಸ್ತಿನ ಕಟ್ಟಡ ಕುಸಿತ… ಹಲವರು ಸಿಲುಕಿರುವ ಶಂಕೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.