Yatra 2 ರಿಲೀಸ್: ಥಿಯೇಟರ್‌ನಲ್ಲಿ ಪವನ್ ಕಲ್ಯಾಣ್- ವೈಎಸ್ ಜಗನ್ ಅಭಿಮಾನಿಗಳ ನಡುವೆ ಮಾರಾಮಾರಿ


Team Udayavani, Feb 8, 2024, 6:25 PM IST

15

ಹೈದರಾಬಾದ್: ಟಾಲಿವುಡ್‌ ನಲ್ಲಿ ಪ್ರೇಕ್ಷಕರ ಮನಗೆದ್ದು, ರಾಜಕೀಯವಾಗಿಯೂ ಸದ್ದು ಮಾಡಿದ್ದ ʼಯಾತ್ರಾʼ ಸಿನಿಮಾದ ಸೀಕ್ವೆಲ್‌ ಗುರುವಾರ(ಫೆ.8 ರಂದು) ರಿಲೀಸ್ ಆಗಿದೆ. ನಿರೀಕ್ಷೆಯಂತೆ ಆಂಧ್ರದ ಹಲವು ಕಡೆ ಸಿನಿಮಾಕ್ಕೆ ಭರ್ಜರಿ ಆರಂಭ ಸಿಕ್ಕಿದೆ.

ಸಿನಿಮಾ ರಿಲೀಸ್‌ ಆದ ಬೆನ್ನಲ್ಲೇ ಥಿಯೇಟರ್‌ ವೊಂದರಲ್ಲಿ ಅಭಿಮಾನಿಗಳ ನಡುವೆ ವಾಗ್ವಾದ ಉಂಟಾದ ಘಟನೆಯ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್‌ ಆಗಿದೆ. ನಟ ಕಂ ರಾಜಕಾರಣಿ ಪವನ್‌ ಕಲ್ಯಾಣ್‌ ಹಾಗೂ ಆಂಧ್ರ ಸಿಎಂ ವೈಎಸ್‌ ಜಗನ್‌ ಮೋಹನ್‌ ರೆಡ್ಡಿ ಅವರ ಅಭಿಮಾನಿಗಳ ನಡುವೆ ಈ ಜಗಳ ನಡೆದಿದೆ.

ಹೈದರಾಬಾದ್‌ನ ಪ್ರಸಾದ್ ಥಿಯೇಟರ್‌ನಲ್ಲಿ ಈ ಮಾರಾಮಾರಿ ನಡೆದಿದೆ. ಎರಡೂ ಕಡೆ ಅಭಿಮಾನಿಗಳ ನಡುವೆ ವಾಗ್ವಾದ ಉಂಟಾಗಿದೆ. ಪರಿಣಾಮ ಒಬ್ಬರನ್ನೊಬ್ಬರು ದೂಡಿಕೊಂಡಿದ್ದಾರೆ. ಗಲಾಟೆಗೆ ಏನು ಕಾರಣ ಎನ್ನುವುದು ಇದುವರೆಗೆ ತಿಳಿದು ಬಂದಿಲ್ಲ.

ರಾಜಕೀಯವಾಗಿ ಜಗನ್‌ ಹಾಗೂ ಪವನ್‌ ಕಲ್ಯಾಣ್‌ ನಡುವೆ ಪೈಪೋಟಿ ಇದೆ. ಈ ಎರಡು ನಾಯಕರ ನಡುವಿನ ಪೈಪೋಟಿ ಆಂಧ್ರ ರಾಜಕೀಯದಲ್ಲಿ ಹೊಸದೇನಲ್ಲ.

ಮಹಿ ವಿ ರಾಘವ್ ನಿರ್ದೇಶನದಲ್ಲಿ 2019 ರಲ್ಲಿ ʼಯಾತ್ರಾʼ ಸಿನಿಮಾ ಬಂದಿತ್ತು. ಈ ಸಿನಿಮಾ ಆಂಧ್ರಪ್ರದೇಶದ ಮಾಜಿ ಮುಖ್ಯಮಂತ್ರಿ ವೈಎಸ್ ರಾಜಶೇಖರ ರೆಡ್ಡಿ ಅವರ ಜೀವನವನದ ಕಥೆಯನ್ನೊಳಗೊಂಡಿದೆ. ಈಗ ಬಂದಿರುವ ʼಯಾತ್ರಾ-2ʼ ಸಿನಿಮಾ ಆಂಧ್ರ ಸಿಎಂ ವೈಎಸ್ ಜಗನ್ ಮೋಹನ್ ರೆಡ್ಡಿ ಅವರ ಬಯೋಪಿಕ್ ಆಗಿದೆ. ಈ ಸಿನಿಮಾದಲ್ಲಿ ಜೀವಾ ಮತ್ತು ಮಮ್ಮುಟ್ಟಿ ಪ್ರಧಾನ ಪಾತ್ರದಲ್ಲಿ ನಟಿಸಿದ್ದಾರೆ.

ಈ ಎರಡೂ ಸಿನಿಮಾಗಳು ಆಂಧ್ರಪ್ರದೇಶದ ರಾಜಕೀಯದಲ್ಲಿನ ಈ ಪ್ರಭಾವಿ ವ್ಯಕ್ತಿಗಳ ರಾಜಕೀಯ ಪ್ರಯಾಣ ಮತ್ತು ಜೀವನದ ಪ್ರಮುಖ ಘಟನೆಗಳನ್ನು ಒಳಗೊಂಡಿದ್ದು, ರಾಜಕೀಯವಾಗಿಯೂ ಸದ್ದು ಮಾಡಿದೆ.

ಈ ನಡುವೆ 2012 ರಲ್ಲಿ ತೆರೆಕಂಡು ರಾಜಕೀಯವಾಗಿ ಭಾರೀ ವಿವಾದಕ್ಕೆ ಕಾರಣವಾಗಿದ್ದ, ಪವನ್‌ ಕಲ್ಯಾಣ್‌ ಅವರ ʼಕ್ಯಾಮೆರಾಮ್ಯಾನ್ ಗಂಗತೋ ರಾಂಬಾಬುʼ ಸಿನಿಮಾವನ್ನು ಆಂಧ್ರದ ಕೆಲವಡೆ ಮರು ಬಿಡುಗಡೆ ಮಾಡಲಾಗಿದೆ. ಈ ಸಿನಿಮಾ ಅಂದು ಸಿಎಂ ವೈಎಸ್ ರಾಜಶೇಖರ ರೆಡ್ಡಿ ಅವರ ಅಧಿಕಾರದ ಅವಧಿಯಲ್ಲಿ ವಿವಾದಕ್ಕೆ ಕಾರಣವಾಗಿತ್ತು. ಇಲ್ಲಿ ಹೇಳಿದ ಕೆಲ ವಿಚಾರಗಳು ಸಿಎಂ ಅವರಿಗೆ ಅಪಮಾನ ಮಾಡಿದ್ದಂತೆ ಇತ್ತು ಎನ್ನುವ ಕಾರಣಕ್ಕೆ ಸಿನಿಮಾ ಬ್ಯಾನ್‌ ಗೆ ಕೂಗು ಕೇಳಿ ಬಂದಿತ್ತು. ಕೊನೆಗೂ ಒಂದಷ್ಟು ಸೀನ್‌ ಹಾಗೂ ಡೈಲಾಗ್‌ ಗಳ ಕಡಿತದಿಂದ ಸಿನಿಮಾವನ್ನು ರಿಲೀಸ್‌ ಮಾಡಲಾಗಿತ್ತು.

 

ಟಾಪ್ ನ್ಯೂಸ್

Netherlands Trip: ಹೀಗೊಂದು ನಿಶ್ಶಬ್ದ ಪಯಣ!

Netherlands Trip: ಹೀಗೊಂದು ನಿಶ್ಶಬ್ದ ಪಯಣ!

7-modi

ರಾಜ್ಯದಲ್ಲಿ ಕಾಂಗ್ರೆಸ್ ಸರಕಾರ ಬಂದ ಬಳಿಕ ಕಾನೂನು ಸುವ್ಯವಸ್ಥೆ ಹದಗೆಟ್ಟಿದೆ: ಪ್ರಧಾನಿ ಮೋದಿ

1-wqe-qweq

Congress Protest; ಕೇಳಿದ್ದು 18,172 ಕೋಟಿ ರೂ. ಕೊಟ್ಟಿದ್ದು 3,400 ಕೋಟಿ ರೂ. ಮಾತ್ರ

Bidar; ಕರ್ನಾಟಕಕ್ಕೆ ಬರಲು ಮೋದಿಗೆ ಯಾವುದೇ ನೈತಿಕತೆ ಇಲ್ಲ: ಸುರ್ಜೇವಾಲಾ

Bidar; ಕರ್ನಾಟಕಕ್ಕೆ ಬರಲು ಮೋದಿಗೆ ಯಾವುದೇ ನೈತಿಕತೆ ಇಲ್ಲ: ಸುರ್ಜೇವಾಲಾ

6-Fibromyalgia

Fibromyalgia: ಫೈಬ್ರೊಮಯಾಲ್ಜಿಯಾ ಜತೆಗೆ ಜೀವನ

ಗುಜರಾತ್ ಗೆ ಆರ್ ಸಿಬಿ ಸವಾಲು: ತಂಡಕ್ಕೆ ಮರಳಿದ ಗ್ಲೆನ್ ಮ್ಯಾಕ್ಸವೆಲ್

IPL 2024; ಗುಜರಾತ್ ಗೆ ಆರ್ ಸಿಬಿ ಸವಾಲು: ತಂಡಕ್ಕೆ ಮರಳಿದ ಗ್ಲೆನ್ ಮ್ಯಾಕ್ಸವೆಲ್

PCB: ಭಾರತದ ವಿಶ್ವಕಪ್ ಗೆಲುವಿನ ರೂವಾರಿ ಈಗ ಪಾಕಿಸ್ತಾನ ತಂಡದ ಹೊಸ ಕೋಚ್

PCB: ಭಾರತದ ವಿಶ್ವಕಪ್ ಗೆಲುವಿನ ರೂವಾರಿ ಈಗ ಪಾಕಿಸ್ತಾನ ತಂಡದ ಹೊಸ ಕೋಚ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

14

Tollywood: ಅಧಿಕೃತವಾಗಿ ರಿವೀಲ್‌ ಆಯಿತು ‘ಕಲ್ಕಿ 2898 ಎಡಿʼ ಸಿನಿಮಾದ ರಿಲೀಸ್‌ ಡೇಟ್

Rakshit Shetty: ʼರಿಚರ್ಡ್‌ ಆಂಟನಿʼಯಲ್ಲಿ ಈ ಕರಾವಳಿಯ ನಟಿಯರಿಗೆ ಸಿಗುತ್ತಾ ಅವಕಾಶ?

Rakshit Shetty: ʼರಿಚರ್ಡ್‌ ಆಂಟನಿʼಯಲ್ಲಿ ಈ ಕರಾವಳಿಯ ನಟಿಯರಿಗೆ ಸಿಗುತ್ತಾ ಅವಕಾಶ?

Kollywood: ಅಜಿತ್‌ ಹುಟ್ಟುಹಬ್ಬಕ್ಕೆ ಸೂಪರ್‌ ಹಿಟ್ ʼಬಿಲ್ಲಾʼ ರೀ ರಿಲೀಸ್; ಫ್ಯಾನ್ಸ್‌ ಖುಷ್

Kollywood: ಅಜಿತ್‌ ಹುಟ್ಟುಹಬ್ಬಕ್ಕೆ ಸೂಪರ್‌ ಹಿಟ್ ʼಬಿಲ್ಲಾʼ ರೀ ರಿಲೀಸ್; ಫ್ಯಾನ್ಸ್‌ ಖುಷ್

24

OTT Release: ವಿಜಯ್‌ ದೇವರಕೊಂಡ ʼಫ್ಯಾಮಿಲಿ ಸ್ಟಾರ್‌ʼ ಓಟಿಟಿ ರಿಲೀಸ್‌ಗೆ ಡೇಟ್‌ ಫಿಕ್ಸ್

23

ಹೂಡಿಕೆದಾರರಿಗೆ ಲಾಭಾಂಶ ನೀಡದ ಆರೋಪ ʼManjummel Boysʼ ನಿರ್ಮಾಪಕರ ವಿರುದ್ದ ದೂರು ದಾಖಲು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Netherlands Trip: ಹೀಗೊಂದು ನಿಶ್ಶಬ್ದ ಪಯಣ!

Netherlands Trip: ಹೀಗೊಂದು ನಿಶ್ಶಬ್ದ ಪಯಣ!

10

ಕುತ್ತಿಗೆಗೇ ಬಂತು… ಕುತ್ತಿಗೆ ಸ್ಪ್ರಿಂಗ್‌ ಇದ್ದಂತೆ…

7-modi

ರಾಜ್ಯದಲ್ಲಿ ಕಾಂಗ್ರೆಸ್ ಸರಕಾರ ಬಂದ ಬಳಿಕ ಕಾನೂನು ಸುವ್ಯವಸ್ಥೆ ಹದಗೆಟ್ಟಿದೆ: ಪ್ರಧಾನಿ ಮೋದಿ

Lok Sabha elections: ಲೋಕ ಸಮರ; ಮತದಾನದಲ್ಲಿ ಪುರುಷರೇ ಮೇಲುಗೈ

Lok Sabha elections: ಲೋಕ ಸಮರ; ಮತದಾನದಲ್ಲಿ ಪುರುಷರೇ ಮೇಲುಗೈ

1-wqe-qweq

Congress Protest; ಕೇಳಿದ್ದು 18,172 ಕೋಟಿ ರೂ. ಕೊಟ್ಟಿದ್ದು 3,400 ಕೋಟಿ ರೂ. ಮಾತ್ರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.