ಮಂಡ್ಯ: 207 ಮಂದಿಗೆ ಹೊಸದಾಗಿ ಕೋವಿಡ್ 19 ಸೋಂಕು : 79 ಮಂದಿ ಬಿಡುಗಡೆ
Team Udayavani, Sep 28, 2020, 8:40 PM IST
ಸಾಂದರ್ಭಿಕ ಚಿತ್ರವನ್ನು ಬಳಸಲಾಗಿದೆ – Representative Image Used
ಮಂಡ್ಯ: ಜಿಲ್ಲೆಯಲ್ಲಿ ಸೋಮವಾರ 207 ಮಂದಿಗೆ ಹೊಸದಾಗಿ ಕೋವಿಡ್ 19 ಸೋಂಕು ದೃಢಪಟ್ಟಿದೆ.
ಈ ನಡುವೆ 79 ಮಂದಿ ಕೋವಿಡ್ 19 ಸೋಂಕಿನಿಂದ ಚೇತರಿಸಿಕೊಂಡು ಆಸ್ಪತ್ರೆಯಿಂದ ಬಿಡುಗಡೆಗೊಂಡಿದ್ದಾರೆ ಮತ್ತು ಜಿಲ್ಲೆಯಲ್ಲಿ ಇಂದು ಕೋವಿಡ್ ಸೋಂಕು ಸಂಬಂಧಿತ ಯಾವುದೇ ಸಾವಿನ ಪ್ರಕರಣ ದಾಖಲಾಗಿಲ್ಲ.
ಮಂಡ್ಯ 72, ಮದ್ದೂರು 28, ಮಳವಳ್ಳಿ 06, ಪಾಂಡವಪುರ 29, ಶ್ರೀರಂಗಪಟ್ಟಣ 33, ಕೆ.ಆರ್.ಪೇಟೆ 33 ಹಾಗೂ ನಾಗಮಂಗಲದ 06 ಮಂದಿ ಸೇರಿದಂತೆ 207 ಜನರಿಗೆ ಕೋವಿಡ್ ಸೋಂಕು ವಕ್ಕರಿಸಿದೆ.
ಇದರಿಂದ ಜಿಲ್ಲೆಯಲ್ಲಿ 10,531 ಸೋಂಕಿತ ಪ್ರಕರಣಗಳು ದಾಖಲಾಗಿವೆ.
2093 ಮಂದಿಗೆ ಪರೀಕ್ಷೆ:
ಜಿಲ್ಲೆಯಾದ್ಯಂತ ಒಂದೇ ದಿನ 2093 ಮಂದಿಗೆ ಕೋವಿಡ್ 19 ಪರೀಕ್ಷೆ ನಡೆಸಲಾಗಿತ್ತು. ಇದರಲ್ಲಿ 1016 ರ್ಯಾಪಿಡ್ ಹಾಗೂ 1077 ಜನರು ಆರ್ಟಿಪಿಸಿಆರ್ ಪರೀಕ್ಷೆಗೊಳಪಟ್ಟಿದ್ದರು.
79 ಮಂದಿ ಬಿಡುಗಡೆ
ಮಂಡ್ಯ 28, ಮದ್ದೂರು 12, ಮಳವಳ್ಳಿ 7, ಪಾಂಡವಪುರ 16, ಶ್ರೀರಂಗಪಟ್ಟಣ 7, ಕೆ.ಆರ್.ಪೇಟೆ 1 ಹಾಗೂ ನಾಗಮಂಗಲದ 8 ಸೇರಿದಂತೆ ಒಟ್ಟು 79 ಮಂದಿ ಸೋಮವಾರ ಗುಣಮುಖರಾಗಿದ್ದಾರೆ. ಇದುವರೆಗೂ 8543 ಮಂದಿ ಬಿಡುಗಡೆಯಾಗಿದ್ದಾರೆ.
1887 ಸಕ್ರಿಯ ಪ್ರಕರಣಗಳು:
ಜಿಲ್ಲೆಯಲ್ಲಿ 1887 ಸಕ್ರಿಯ ಪ್ರಕರಣಗಳಿವೆ. ಜಿಲ್ಲೆಯ ಸರ್ಕಾರಿ ಆಸ್ಪತ್ರೆಗಳ ಐಸೋಲೇಷನ್ನಲ್ಲಿ 745, ಖಾಸಗಿ ಆಸ್ಪತ್ರೆಗಳ ಐಸೋಲೇನ್ನಲ್ಲಿ 143, ಕೋವಿಡ್ ಕೇರ್ ಸೆಂಟರ್ನಲ್ಲಿ 175 ಹಾಗೂ ಹೋಂ ಐಸೋಲೇಷನ್ನಲ್ಲಿ 816 ಮಂದಿ ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ಜಿಲ್ಲಾ ಸರ್ವೇಕ್ಷಣಾಧಿಕಾರಿ ಡಾ.ಟಿ.ಎನ್.ಧನಂಜಯ ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Srirangapatna: ಐಸ್ ಕ್ರೀಂನಲ್ಲಿ ವಿಷ ಬೆರೆಸಿ ಮಕ್ಕಳ ಕೊಂದ ತಾಯಿ
LS Polls 2024: ಸುಮಲತಾ ಪ್ರಚಾರಕ್ಕೆ ಬರುವುದು ರಾಜ್ಯ ನಾಯಕರ ತೀರ್ಮಾನ: ನಿಖಿಲ್
Mandya Lok Sabha Constituency; ಸ್ಟಾರ್ ಚಂದ್ರು ಪರ ಇಂದು ನಟ ದರ್ಶನ್ ಪ್ರಚಾರ
ಚುನಾವಣ ಬಾಂಡ್ ವಿಶ್ವದ ಅತಿದೊಡ್ಡ ಹಗರಣ: ರಾಹುಲ್
Lok Sabha Elections; ಜಾತಿ ಗಣತಿ ಬಗ್ಗೆ ಮೋದಿ ನಿಲುವೇನು?: ರಾಹುಲ್ ಗಾಂಧಿ
MUST WATCH
ಹೊಸ ಸೇರ್ಪಡೆ
Daily Horoscope: ಉದ್ಯೋಗದಲ್ಲಿ ಪ್ರತಿಭೆಗೆ ಗೌರವ, ದೇವತಾರಾಧನೆಯ ಮೂಲಕ ವಿಘ್ನ ನಿವಾರಣೆ
Srirangapatna: ಐಸ್ ಕ್ರೀಂನಲ್ಲಿ ವಿಷ ಬೆರೆಸಿ ಮಕ್ಕಳ ಕೊಂದ ತಾಯಿ
Loksabha Election; ದೇಶದಲ್ಲಿ ಹಂತ-1: ಮತ ಇಂದು
Ls Polls: ಕಾಂಗ್ರೆಸ್ ಗೆಲ್ಲಿಸದಿದ್ದರೆ ಸಿದ್ದು ಸ್ಥಾನಕ್ಕೆ ಕಂಟಕ; ಸಚಿವ ಬೈರತಿ ಸುರೇಶ್
Wrestlers: ದುಬಾೖ ವಿಮಾನ ನಿಲ್ದಾಣದಲ್ಲಿ ಸಿಕ್ಕಿಬಿದ್ದ ಇಬ್ಬರು ಕುಸ್ತಿಪಟುಗಳು