ಮಂಡ್ಯದಲ್ಲಿಂದು 209 ಕೋವಿಡ್ ಹೊಸ ಪ್ರಕರಣ; 263 ಮಂದಿ ಚೇತರಿಕೆ; ಇಬ್ಬರು ಸಾವು
Team Udayavani, Oct 8, 2020, 7:46 PM IST
ಮಂಡ್ಯ: ಜಿಲ್ಲೆಯಲ್ಲಿ ಗುರುವಾರ ಕೋವಿಡ್ ನಿಂದ ಇಬ್ಬರು ಮೃತಪಟ್ಟಿದ್ದು, 209 ಹೊಸ ಪ್ರಕರಣ ಪತ್ತೆಯಾಗಿದೆ. 263 ಮಂದಿ ಚೇತರಿಸಿಕೊಂಡು ಬಿಡುಗಡೆಯಾಗಿದ್ದಾರೆ.
ಮದ್ದೂರು ತಾಲ್ಲೂಕಿನ 63 ವರ್ಷದ ವೃದ್ಧೆ ಹಾಗೂ ಮಂಡ್ಯ ತಾಲ್ಲೂಕಿನ 78 ವರ್ಷದ ವೃದ್ಧರು ಕೋವಿಡ್ ಸೇರಿದಂತೆ ನ್ಯುಮೋನಿಯಾ, ತೀವ್ರ ಉಸಿರಾಟದ ತೊಂದರೆ ಸೇರಿದಂತೆ ಇತರೆ ಆರೋಗ್ಯ ಸಮಸ್ಯೆಗಳಿಂದ ನರಳುತ್ತಿದ್ದರು. ಇಂದು ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ. ಇದರಿಂದ ಸಾವಿನ ಸಂಖ್ಯೆ 118ಕ್ಕೇರಿದೆ.
209 ಹೊಸ ಪ್ರಕರಣ:
ಮಂಡ್ಯ 62, ಮದ್ದೂರು 19, ಮಳವಳ್ಳಿ 22, ಪಾಂಡವಪುರ 35, ಶ್ರೀರಂಗಪಟ್ಟಣ 29, ಕೆ.ಆರ್.ಪೇಟೆ 26 ಹಾಗೂ ನಾಗಮಂಗಲದ 15, ಹೊರ ಜಿಲ್ಲೆಯ ಒಬ್ಬರು ಸೇರಿದಂತೆ ಒಟ್ಟು 209 ಮಂದಿಗೆ ಸೋಂಕು ಆವರಿಸಿದೆ. ಇದುವರೆಗೂ 12812 ಸೋಂಕು ಪ್ರಕರಣಗಳು ದಾಖಲಾಗಿವೆ.
2689 ಮಂದಿಗೆ ಪರೀಕ್ಷೆ:
759 ರ್ಯಾಪಿಡ್ ಹಾಗೂ 2008 ಮಂದಿ ಆರ್ಟಿಪಿಸಿಆರ್ ಸೇರಿದಂತೆ ಒಟ್ಟು 2689 ಮಂದಿ ಪರೀಕ್ಷೆ ಮಾಡಿಸಿಕೊಂಡಿದ್ದರು.
ಇದನ್ನೂ ಓದಿ: ಕೃಷ್ಣಾ ನೀರಿನ ಮರು ಹಂಚಿಕೆ: ಸರ್ವಪಕ್ಷ ಸಭೆ ಕರೆಯಲು ಎಂ.ಬಿ ಪಾಟಿಲ್ ಆಗ್ರಹ
ಮಂಡ್ಯ 97, ಮದ್ದೂರು 31, ಮಳವಳ್ಳಿ 23, ಪಾಂಡವಪುರ 22, ಶ್ರೀರಂಗಪಟ್ಟಣ 14, ಕೆ.ಆರ್.ಪೇಟೆ 50 ಹಾಗೂ ನಾಗಮಂಗಲದ 26 ಮಂದಿ ಸೇರಿದಂತೆ ಒಟ್ಟು 263 ಮಂದಿ ಕೊರೊನಾದಿಂದ ಚೇತರಿಸಿಕೊಂಡಿದ್ದಾರೆ. ಇದುವರೆಗೂ 10950 ಮಂದಿ ಬಿಡುಗಡೆಯಾಗಿದ್ದಾರೆ.
1744 ಸಕ್ರಿಯ ಪ್ರಕರಣಗಳು:
ಜಿಲ್ಲೆಯಲ್ಲಿ 1744 ಸಕ್ರಿಯ ಪ್ರಕರಣಗಳಿವೆ. ಸರ್ಕಾರಿ ಆಸ್ಪತ್ರೆಗಳಲ್ಲಿ 483, ಖಾಸಗಿ ಆಸ್ಪತ್ರೆಗಳಲ್ಲಿ 138, ಕೋವಿಡ್ ಕೇರ್ ಸೆಂಟರ್ನಲ್ಲಿ 251 ಹಾಗೂ ಮನೆಗಳಲ್ಲಿ 872 ಮಂದಿ ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ಜಿಲ್ಲಾ ಸರ್ವೇಕ್ಷಣಾಧಿಕಾರಿ ಡಾ.ಟಿ.ಎನ್.ಧನಂಜಯ ತಿಳಿಸಿದರು.
ಇದನ್ನೂ ಓದಿ: ಜಿಲ್ಲೆಗಳಲ್ಲಿ ಕೋವಿಡ್ ಸೋಂಕು ತಡೆಗೆ ಕ್ರಮ ವಹಿಸಲು ಜಿಲ್ಲಾಧಿಕಾರಿಗಳಿಗೆ ಸಿಎಂ ಸೂಚನೆ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Srirangapatna: ಐಸ್ ಕ್ರೀಂನಲ್ಲಿ ವಿಷ ಬೆರೆಸಿ ಮಕ್ಕಳ ಕೊಂದ ತಾಯಿ
LS Polls 2024: ಸುಮಲತಾ ಪ್ರಚಾರಕ್ಕೆ ಬರುವುದು ರಾಜ್ಯ ನಾಯಕರ ತೀರ್ಮಾನ: ನಿಖಿಲ್
Mandya Lok Sabha Constituency; ಸ್ಟಾರ್ ಚಂದ್ರು ಪರ ಇಂದು ನಟ ದರ್ಶನ್ ಪ್ರಚಾರ
ಚುನಾವಣ ಬಾಂಡ್ ವಿಶ್ವದ ಅತಿದೊಡ್ಡ ಹಗರಣ: ರಾಹುಲ್
Lok Sabha Elections; ಜಾತಿ ಗಣತಿ ಬಗ್ಗೆ ಮೋದಿ ನಿಲುವೇನು?: ರಾಹುಲ್ ಗಾಂಧಿ
MUST WATCH
ಹೊಸ ಸೇರ್ಪಡೆ
Stones Pelted: ಮತದಾನದ ವೇಳೆ ಕಲ್ಲು ತೂರಾಟ… ಬಿಜೆಪಿ ನಾಯಕನಿಗೆ ಗಾಯ
Gadag Incident; ದರೋಡೆಯ ಉದ್ದೇಶವಿಲ್ಲ; ಕೊಲೆ ಮಾಡಲೆಂದೆ ಬಂದಿದ್ದಾರೆ; ಐಜಿಪಿ ಹೇಳಿಕೆ
Udupi-ಚಿಕ್ಕಮಗಳೂರಿನಲ್ಲಿ ಬಿಜೆಪಿಗರೂ ಜೆಪಿ-ಜೆಪಿ ಎನ್ನುತ್ತಿದ್ದಾರೆ: ನಿಕೇತ್ರಾಜ್ ಮೌರ್ಯ
Food Safety: ಆಹಾರ ಸುರಕ್ಷೆ- ನೂರು ಪ್ರತಿಶತ ಖಾತರಿ ಅಗತ್ಯ
Gujarat Lok Sabha Constituency: ಗುಜರಾತ್ ಎಂಬ ಕೇಸರಿ ಕೋಟೆಗೆ ಲಗ್ಗೆ ಸಾಧ್ಯವೇ?