ಮಹಾರಾಷ್ಟ್ರದಲ್ಲಿ ಸೋಂಕಿತರ ಸಂಖ್ಯೆ 2 ಸಾವಿರ ; ದೇಶದಲ್ಲಿಯೇ ಅತ್ಯಧಿಕ ಸೋಂಕಿತರ ರಾಜ್ಯ

ಮುಂಬೈನ ಧಾರಾವಿ ಸೇರಿ ಕೊಳೆಗೇರಿ ಪ್ರದೇಶಗಳೇ  ಹಾಟ್‌ಸ್ಪಾಟ್‌

Team Udayavani, Apr 14, 2020, 6:48 AM IST

ಮಹಾರಾಷ್ಟ್ರದಲ್ಲಿ ಸೋಂಕಿತರ ಸಂಖ್ಯೆ 2 ಸಾವಿರ ; ದೇಶದಲ್ಲಿಯೇ ಅತ್ಯಧಿಕ ಸೋಂಕಿತರ ರಾಜ್ಯ

ಮುಂಬೈನ ಧಾರಾವಿ ಕೊಳೆಗೇರಿಯಲ್ಲಿ ವೈದ್ಯರ ತಂಡ ನಿವಾಸಿಗಳಿಗೆ ಥರ್ಮಲ್‌ ಸ್ಕ್ರೀನಿಂಗ್‌ ನಡೆಸುತ್ತಿರುವುದು.

ಮುಂಬೈ: ಮಹಾರಾಷ್ಟ್ರದಲ್ಲಿ ಕೋವಿಡ್ ವೈರಸ್ ಸೋಂಕಿತರ ಸಂಖ್ಯೆ ಗಣನೀಯ ಪ್ರಮಾಣದಲ್ಲಿ ಹೆಚ್ಚುತ್ತಿದ್ದು, ಸೋಮವಾರ 82 ಹೊಸ ಪ್ರಕರಣ ಪತ್ತೆಯಾಗುವ ಮೂಲಕ, ಸೋಂಕಿತರ ಸಂಖ್ಯೆ 2,334 ಆಗಿದೆ. ಹೀಗಾಗಿ, 2 ಸಾವಿರಕ್ಕೂ ಹೆಚ್ಚು ಸೋಂಕಿತರಿರುವ ಮೊದಲ ರಾಜ್ಯ ಎಂಬ ಅಪಖ್ಯಾತಿಗೆ ಮಹಾರಾಷ್ಟ್ರ ಪಾತ್ರವಾಗಿದೆ.

ರಾಜಧಾನಿ ಮುಂಬೈನಲ್ಲಿ ಇದುವರೆಗೆ 1,400 ಪ್ರಕರಣಗಳು ಪತ್ತೆಯಾಗಿವೆ. ಈ ಪೈಕಿ 47 ಕೇಸುಗಳು ಧಾರಾವಿಯಲ್ಲಿಯೇ ಇವೆ. ಜತೆಗೆ ಮುಂಬೈನಲ್ಲಿಯೇ 100 ಸಾವಿನ ಪ್ರಕರಣ ಪತ್ತೆಯಾಗಿದೆ.ಹೀಗಾಗಿ ದೇಶದ ವಾಣಿಜ್ಯ ರಾಜಧಾನಿಯ ಇತರ ಕೊಳೆಗೇರಿ ಪ್ರದೇಶಗಳಾಗಿರುವ ವರ್ಲಿ ಕೋಳಿವಾಡ, ಗೊವಂಡಿ, ಬೈಗನ್‌ವಾಡಿ, ಶಿವಾಜಿನಗರ, ಲೋಟಸ್‌ ಕಾಲೊನಿಗಳಲ್ಲಿ ಸೋಂಕಿನ ಪ್ರಮಾಣ ವೃದ್ಧಿಸಿದೆ.

ಮುಂಬೈನ ಧಾರಾವಿಯಲ್ಲಿ ಸೋಮವಾರ ಮತ್ತೆ 4 ಪ್ರಕರಣಗಳು ದೃಢಪಟ್ಟಿದ್ದು, ಒಬ್ಬ ಸೋಂಕಿತ ಮೃತಪಟ್ಟಿದ್ದಾರೆ. ಈ ಮೂಲಕ ಏಷ್ಯಾದ ಅತಿದೊಡ್ಡ ಕೊಳೆಗೇರಿ ಪ್ರದೇಶದಲ್ಲಿ ಮೃತರ ಸಂಖ್ಯೆ 5ಕ್ಕೆ ಹಾಗೂ ಸೋಂಕಿತರ ಸಂಖ್ಯೆ 47ಕ್ಕೇರಿದೆ.

ಮಲೇರಿಯಾ ಮಾತ್ರೆ ವಿತರಣೆ?
ಮಹಾರಾಷ್ಟ್ರ ಸರ್ಕಾರ ಮುಂಜಾಗ್ರತಾ ಕ್ರಮವಾಗಿ ಮುಂಬೈನ ಕೊಳಗೇರಿ ನಿವಾಸಿಗಳಿಗೆ ಹೈಡ್ರಾಕ್ಸಿಕ್ಲೋರೋಕ್ವೀನ್‌ (ಎಚ್‌ಸಿಕ್ಯೂ)ಮಾತ್ರೆಗಳನ್ನು ಹಂಚಲು ಯೋಚಿಸುತ್ತಿದೆ. ಒಂದು ವೇಳೆ, ರಾಜ್ಯ ಸರ್ಕಾರದ ಈ ಚಿಂತನೆ ಕಾರ್ಯಗತವಾದಲ್ಲಿ ಇದೇ ಮೊದಲ ಬಾರಿಗೆ ಭಾರತದಲ್ಲಿ ಸಮುದಾಯದ ಮಟ್ಟದಲ್ಲಿ ಎಚ್‌ಸಿಕ್ಯೂ ಮಾತ್ರೆಗಳನ್ನು ಕೋವಿಡ್ ವೈರಸ್ ಗೆ ರೋಗ ನಿರೋಧಕವಾಗಿ ಬಳಸಿದಂತಾಗುತ್ತದೆ.

ವಿಶೇಷವಾಗಿ ಕ್ವಾರಂಟೈನ್‌ನಲ್ಲಿ ಇರುವವರಿಗೆ ಈ ಮಾತ್ರೆ ನೀಡುವ ಉದ್ದೇಶವಿದೆ. ಮಹಾರಾಷ್ಟ್ರ ಆರೋಗ್ಯ ಸಚಿವ ರಾಜೇಶ್‌ ಥೋಪೆ ಈ ಬಗ್ಗೆ ಪ್ರತಿಕ್ರಿಯಿಸಿ, ಅಮೆರಿಕದಲ್ಲಿ ಈಗಾಗಲೇ ಎಚ್‌ಸಿಕ್ಯೂ ಮಾತ್ರೆಗಳನ್ನು ಕೋವಿಡ್ ವೈರಸ್ ಚಿಕಿತ್ಸೆಗೆ ಬಳಸಲಾಗುತ್ತಿದೆ.

ಹೀಗಾಗಿ, ಧಾರವಿ ಕೊಳಗೇರಿ ನಿವಾಸಿಗಳ ಪೈಕಿ ಸೋಂಕಿನ ಅಪಾಯ ಹೆಚ್ಚಿರುವವರನ್ನು ಗುರುತಿಸಿ ಅಂತವರಿಗೆ ಈ ಮಾತ್ರೆ ನೀಡುವ ಚಿಂತನೆ ನಡೆದಿದೆ ಎಂದು ತಿಳಿಸಿದ್ದಾರೆ. ಈ ಮಧ್ಯೆ, ‘ರಾಷ್ಟ್ರೀಯ ಕೋವಿಡ್‌-19 ವಿಶೇಷ ಕಾರ್ಯಪಡೆ’ ಕೂಡ ಈ ಬಗ್ಗೆ ಚರ್ಚೆ ನಡೆಸಿದ್ದು, ಧಾರವಿಯಲ್ಲಿ ಯೋಜನೆ ಫ‌ಲಕಾರಿಯಾದರೆ, ದೇಶದ ಇತರೆಡೆಯೂ ಈ ಮಾತ್ರೆಗಳನ್ನು ಬಳಸಲು ಚಿಂತಿಸಲಾಗುತ್ತಿದೆ.

ಟಾಪ್ ನ್ಯೂಸ್

Bengaluru: ನಕಲಿ ಭೂ ದಾಖಲೆಗಳ ಸಲ್ಲಿಸಿ 22 ಬ್ಯಾಂಕಲ್ಲಿ 10 ಕೋಟಿ ಸಾಲ!

Bengaluru: ನಕಲಿ ಭೂ ದಾಖಲೆಗಳ ಸಲ್ಲಿಸಿ 22 ಬ್ಯಾಂಕಲ್ಲಿ 10 ಕೋಟಿ ಸಾಲ!

Dharwad; ನೇಹಾ ಕೊಲೆ ಮಾಡಿದ ನನ್ನ ಮಗನಿಗೆ ಕಠಿಣ ಶಿಕ್ಷೆಯಾಗಲಿ: ಫಯಾಜ್ ತಾಯಿ ಆಗ್ರಹ

Dharwad; ನೇಹಾ ಕೊಲೆ ಮಾಡಿದ ನನ್ನ ಮಗನಿಗೆ ಕಠಿಣ ಶಿಕ್ಷೆಯಾಗಲಿ: ಫಯಾಜ್ ತಾಯಿ ಆಗ್ರಹ

gayi

Davanagere; ಗಾಯಿತ್ರಿ ಸಿದ್ದೇಶ್ವರ್‌ ಅಂತಿಮ ನಾಮಪತ್ರ ಸಲ್ಲಿಕೆ; ಭರ್ಜರಿ ಮೆರವಣಿಗೆ

4-shirva

Rain: ಕಟಪಾಡಿ-ಶಿರ್ವ ರಾಜ್ಯ ಹೆದ್ದಾರಿ; ಮೊದಲ ಮಳೆಯ ಅವಾಂತರ; ರಸ್ತೆ ಕೆಸರುಮಯ

Gadag ಬೆಳ್ಳಂಬೆಳಗ್ಗೆ ವರುಣಾರ್ಭಟ ಆರಂಭ; ಮುಂಗಾರು ನಿರೀಕ್ಷೆ ಹೆಚ್ಚಿಸಿದ ಅಶ್ವಿನಿ ಮಳೆ

Gadag ಬೆಳ್ಳಂಬೆಳಗ್ಗೆ ವರುಣಾರ್ಭಟ ಆರಂಭ; ಮುಂಗಾರು ನಿರೀಕ್ಷೆ ಹೆಚ್ಚಿಸಿದ ಅಶ್ವಿನಿ ಮಳೆ

Boat Capsizes In Odisha’s Mahanadi River

Mahanadi River Tragedy: ಮಗುಚಿದ 50 ಜನರಿದ್ದ ದೋಣಿ; ಇಬ್ಬರು ಸಾವು; ಎಂಟು ಮಂದಿ ನಾಪತ್ತೆ

Tamil Nadu BJP chief Annamalai demands re-poll due to missing voter names

Loksabha Election; ತಮಿಳುನಾಡಿನಲ್ಲಿ ಮರು ಮತದಾನಕ್ಕೆ ಬಿಜೆಪಿ ಅಧ್ಯಕ್ಷ ಅಣ್ಣಾಮಲೈ ಆಗ್ರಹ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Boat Capsizes In Odisha’s Mahanadi River

Mahanadi River Tragedy: ಮಗುಚಿದ 50 ಜನರಿದ್ದ ದೋಣಿ; ಇಬ್ಬರು ಸಾವು; ಎಂಟು ಮಂದಿ ನಾಪತ್ತೆ

Tamil Nadu BJP chief Annamalai demands re-poll due to missing voter names

Loksabha Election; ತಮಿಳುನಾಡಿನಲ್ಲಿ ಮರು ಮತದಾನಕ್ಕೆ ಬಿಜೆಪಿ ಅಧ್ಯಕ್ಷ ಅಣ್ಣಾಮಲೈ ಆಗ್ರಹ

UCC; ದೇಶವು ಶರಿಯಾ ಕಾನೂನಿನಲ್ಲಿ ನಡೆಯಬೇಕೆ?: ಯುಸಿಸಿ ಜಾರಿ ಬಗ್ಗೆ ಅಮಿತ್ ಶಾ ಖಡಕ್ ಮಾತು

UCC; ದೇಶವು ಶರಿಯಾ ಕಾನೂನಿನಲ್ಲಿ ನಡೆಯಬೇಕೆ?: ಯುಸಿಸಿ ಜಾರಿ ಬಗ್ಗೆ ಅಮಿತ್ ಶಾ ಖಡಕ್ ಮಾತು

1-qweqwqe

Ban in Singapore; ಎವರೆಸ್ಟ್‌ ಮಸಾಲಾದಲ್ಲಿ ಕ್ರಿಮಿನಾಶಕ ಅಂಶ?

gold

Gold 10 ಗ್ರಾಂ ಬೆಲೆ 74,100 ರೂ.: ಇದು ನೂತನ ದಾಖಲೆ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Fraud: ರೈಸ್‌ ಪುಲ್ಲಿಂಗ್‌ ಹೆಸರಿನಲ್ಲಿ ವಂಚನೆಗೆ ಯತ್ನ; 3 ಸೆರೆ, 69.79 ಲಕ್ಷ ವಶ

Fraud: ರೈಸ್‌ ಪುಲ್ಲಿಂಗ್‌ ಹೆಸರಿನಲ್ಲಿ ವಂಚನೆಗೆ ಯತ್ನ; 3 ಸೆರೆ, 69.79 ಲಕ್ಷ ವಶ

Crime: ಸ್ನೇಹಿತನನ್ನೇ ಕೊಲೆ ಮಾಡಿದ್ದ ನಾಲ್ವರು ಆರೋಪಿಗಳ ಸೆರೆ

Crime: ಸ್ನೇಹಿತನನ್ನೇ ಕೊಲೆ ಮಾಡಿದ್ದ ನಾಲ್ವರು ಆರೋಪಿಗಳ ಸೆರೆ

Bengaluru: ನಕಲಿ ಭೂ ದಾಖಲೆಗಳ ಸಲ್ಲಿಸಿ 22 ಬ್ಯಾಂಕಲ್ಲಿ 10 ಕೋಟಿ ಸಾಲ!

Bengaluru: ನಕಲಿ ಭೂ ದಾಖಲೆಗಳ ಸಲ್ಲಿಸಿ 22 ಬ್ಯಾಂಕಲ್ಲಿ 10 ಕೋಟಿ ಸಾಲ!

Dharwad; ನೇಹಾ ಕೊಲೆ ಮಾಡಿದ ನನ್ನ ಮಗನಿಗೆ ಕಠಿಣ ಶಿಕ್ಷೆಯಾಗಲಿ: ಫಯಾಜ್ ತಾಯಿ ಆಗ್ರಹ

Dharwad; ನೇಹಾ ಕೊಲೆ ಮಾಡಿದ ನನ್ನ ಮಗನಿಗೆ ಕಠಿಣ ಶಿಕ್ಷೆಯಾಗಲಿ: ಫಯಾಜ್ ತಾಯಿ ಆಗ್ರಹ

Glanders infection: ಗ್ಲ್ಯಾಂಡರ್ಸ್‌ ಸೋಂಕು; ಬೆಂಗಳೂರು ತೊರೆದ ಕುದುರೆ ಮಾಲೀಕ, ಸವಾರ

Glanders infection: ಗ್ಲ್ಯಾಂಡರ್ಸ್‌ ಸೋಂಕು; ಬೆಂಗಳೂರು ತೊರೆದ ಕುದುರೆ ಮಾಲೀಕ, ಸವಾರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.