ಕೋವಿಡ್ ಕಳವಳ ಜು.17: 3693 ಸೋಂಕಿತರು ; 1028 ಚೇತರಿಕೆ ಮತ್ತು 115 ಸಾವು
ಬೆಂಗಳೂರು ನಗರ 2208, ಧಾರವಾಡ 157, ಬಳ್ಳಾರಿ 133, ವಿಜಯಪುರ 118 ದಕ್ಷಿಣ ಕನ್ನಡ 311, ಮತ್ತು ಉಡುಪಿ 80 ಸೋಂಕು ಪ್ರಕರಣಗಳು
Team Udayavani, Jul 17, 2020, 8:08 PM IST
ಸಾಂದರ್ಭಿಕ ಚಿತ್ರವನ್ನು ಬಳಸಲಾಗಿದೆ – Representative Image Used
ಬೆಂಗಳೂರು: ಗುರುವಾರ ಸಾಯಂಕಾಲದಿಂದ ಶುಕ್ರವಾರ ಸಾಯಂಕಾಲದವರೆಗಿನ ಕೋವಿಡ್ 19 ಪ್ರಕರಣಗಳ ವರದಿಯ ಪ್ರಕಾರ ರಾಜ್ಯದಲ್ಲಿ ಈ 24 ಗಂಟೆಗಳ ಅವಧಿಯಲ್ಲಿ ಒಟ್ಟು 3693 ಕೋವಿಡ್ 19 ಸೋಂಕು ಪ್ರಕರಣಗಳು ವರದಿಯಾಗಿವೆ.
ಲಭ್ಯ ವರದಿಗಳ ಪ್ರಕಾರ ಈ ಅವಧಿಯಲ್ಲಿ ರಾಜ್ಯದಲ್ಲಿ ಒಟ್ಟು 1028 ಕೋವಿಡ್ 19 ಸೋಂಕಿತರು ಚೇತರಿಸಿಕೊಂಡಿದ್ದಾರೆ. ಇಂದು ರಾಜ್ಯದಲ್ಲಿ ಕೋವಿಡ್ 19 ಸಂಬಂಧಿತ ಒಟ್ಟು 115 ಸಾವು ಸಂಭವಿಸಿದೆ.
ಬೆಂಗಳೂರು ನಗರ ಜಿಲ್ಲೆಯಲ್ಲಿ ಕೋವಿಡ್ 19 ಸೋಂಕಿತರ ಸಂಖ್ಯೆ ಎರಡು ಸಾವಿರದ ಗಡಿ ದಾಟಿದ್ದು, ಇಂದು ಇಲ್ಲಿ 2208 ಸೋಂಕಿತರು ಪತ್ತೆಯಾಗಿದ್ದಾರೆ. ಆ ಬಳಿಕದ ಸ್ಥಾನದಲ್ಲಿ ದಕ್ಷಿಣ ಕನ್ನಡ (311), ಧಾರವಾಡ (157), ಬಳ್ಳಾರಿ (133), ವಿಜಯಪುರ (118), ಬೆಳಗಾವಿ (95) ಮತ್ತು ಮೈಸೂರು (93) ಜಿಲ್ಲೆಗಳಿವೆ.
ಇಂದು ರಾಜ್ಯದಲ್ಲಿ ಕೋವಿಡ್ 19 ಸೋಂಕಿಗೆ ಒಟ್ಟು 115 ಜನ ಬಲಿಯಾಗಿದ್ದಾರೆ. ಈ ಮೂಲಕ ರಾಜ್ಯದಲ್ಲಿ ಇದುವರೆಗೆ ಈ ಮಹಾಮಾರಿಗೆ ಬಲಿಯಾದವರ ಒಟ್ಟು ಸಂಖ್ಯೆ 1147ಕ್ಕೆ ಏರಿಕೆ ಆಗಿದೆ.
ಇಂದು ರಾಜ್ಯಾದ್ಯಂತ ಒಟ್ಟು 1028 ಕೋವಿಡ್ ಸೋಂಕಿತರು ಗುಣಮುಖರಾಗಿ ಆಸ್ಪತ್ರೆಗಳಿಂದ ಬಿಡುಗಡೆಗೊಂಡಿದ್ದಾರೆ. ರಾಜ್ಯದಲ್ಲಿ ಇಂದಿನವರೆಗೆ ಒಟ್ಟು 55115 ಕೋವಿಡ್ 19 ಸೋಂಕು ಪ್ರಕರಣಗಳು ದಾಖಲುಗೊಂಡಿದೆ. ಮತ್ತು ಇವರಲ್ಲಿ 20757 ಸೋಂಕಿತರು ಗುಣಮುಖರಾಗಿದ್ದಾರೆ ಹಾಗೂ ರಾಜ್ಯದಲ್ಲಿ ಸಕ್ರಿಯ ಪ್ರಕರಣಗಳ ಸಂಖ್ಯೆ 33205 ಇದೆ.
ಈ ಮೂಲಕ ರಾಜ್ಯದಲ್ಲಿ ಕೋವಿಡ್ 19 ಸೋಂಕಿಗೆ ಸಾವನ್ನಪ್ಪಿದವರ ಸಂಖ್ಯೆ ಸಾವಿರದ ಗಡಿ ದಾಟಿದ್ದು ಇಲ್ಲಿಯವರೆಗೆ 1147 ಸಾವು ಸಂಭವಿಸಿದೆ. ಹಾಗೂ 06 ಜನ ಕೋವಿಡ್ 19 ಸೋಂಕಿತರು ಅನ್ಯ ಕಾರಣದಿಂದ ಮೃತಪಟ್ಟಿದ್ದಾರೆ. 568 ಸೋಂಕಿತರು ತುರ್ತು ನಿಗಾ ಘಟಕದಲ್ಲಿ ದಾಖಲುಗೊಂಡು ಚಿಕಿತ್ಸೆಯನ್ನು ಪಡೆಯುತ್ತಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Bengaluru: ನಕಲಿ ಭೂ ದಾಖಲೆಗಳ ಸಲ್ಲಿಸಿ 22 ಬ್ಯಾಂಕಲ್ಲಿ 10 ಕೋಟಿ ಸಾಲ!
Dharwad; ನೇಹಾ ಕೊಲೆ ಮಾಡಿದ ನನ್ನ ಮಗನಿಗೆ ಕಠಿಣ ಶಿಕ್ಷೆಯಾಗಲಿ: ಫಯಾಜ್ ತಾಯಿ ಆಗ್ರಹ
Glanders infection: ಗ್ಲ್ಯಾಂಡರ್ಸ್ ಸೋಂಕು; ಬೆಂಗಳೂರು ತೊರೆದ ಕುದುರೆ ಮಾಲೀಕ, ಸವಾರ
Chain theft: ಒಂಟಿ ಮಹಿಳೆಯರ ಸರ ಕದಿಯುತ್ತಿದ್ದ 5 ಬಂಧನ; 10.82 ಲಕ್ಷದ ವಸ್ತು ಜಪ್ತಿ
Hubli;ತಪ್ಪಿತಸ್ಥರಿಗೆ ಶಿಕ್ಷೆ ಆಗಲೇಬೇಕು: ನೇಹಾ ಮನೆಗೆ ಫಕೀರ ಸಿದ್ಧರಾಮೇಶ್ವರ ಶಿವಯೋಗಿ ಭೇಟಿ