ಭಾರತ: 4 ದಿನದಲ್ಲಿ 1ಲಕ್ಷ ಜನರಿಗೆ ಕೋವಿಡ್ ಸೊಂಕು,ಅಮೆರಿಕಾದಲ್ಲಿ ಒಂದೇ ದಿನ 69ಸಾವಿರ ಪ್ರಕರಣ
Team Udayavani, Jul 11, 2020, 8:15 AM IST
ವಾಷಿಂಗ್ಟನ್/ನವದೆಹಲಿ: ಅಮೆರಿಕಾದಲ್ಲಿ ಕೋವಿಡ್ ವೈರಸ್ ತನ್ನ ಕಬಂಧ ಬಾಹುವನ್ನು ಚಾಚುತ್ತಿದ್ದು ಕಳೆದ 24 ಗಂಟೆಗಳಲ್ಲಿ 69,000 ಜನರಿಗೆ ಸೊಂಕು ತಗುಲಿದೆ. ಆ ಮೂಲಕ ಸತತ ಮೂರು ದಿನ 65 ಸಾವಿರಕ್ಕಿಂತ ಹೆಚ್ಚು ಪ್ರಕರಣಗಳು ದಾಖಲಾಗಿವೆ.
ಅಮೆರಿಕಾದ ಪ್ರಮುಖ 8 ರಾಜ್ಯಗಳಾದ ಅಲಾಸ್ಕ. ಜಾರ್ಜಿಯಾ, ಇಡಾಓ, ಲೂಸೀಯಾನ, ಮೋಂಟಾನಾ, ಓಹಿಯೋ, ಉಟಾಹ್, ವಿಸ್ಕಾನ್ಸಿನ್ ಗಳಲ್ಲಿ ವೈರಸ್ ಪ್ರತಿನಿತ್ಯ ಏರಿಕೆಯಾಗುತ್ತಲೇ ಇದೆ.
ಟೆಕ್ಸಾಸ್ ಸರ್ಕಾರ ಕೂಡ ತನ್ನ ಪ್ರಜೆಗಳಿಗೆ ಎಚ್ಚರಿಕೆ ನೀಡಿದ್ದು ಸಾಮಾಜಿಕ ಅಂತರ ಕಾಯ್ದುಕೊಳ್ಳದಿದ್ದರೆ ಮತ್ತೊಮ್ಮೆ ಲಾಕ್ ಡೌನ್ ಜಾರಿಗೆ ತರಲಾಗುವುದು ಎಂದಿದೆ. ಮತ್ತೊಂದೆಡೆ ಕ್ಯಾಲಿಪೋರ್ನಿಯಾದಲ್ಲಿ ಸೊಂಕಿನ ಭೀತಿಯಿಂದ ಸುಮಾರು 8000 ಕೈದಿಗಳನ್ನು ಬಿಡುಗಡೆ ಮಾಡಲು ಚಿಂತಿಸಲಾಗಿದೆ.
ಒಟ್ಟಾರೆಯಾಗಿ ಅಮೆರಿಕಾದಲ್ಲಿ 32 ಲಕ್ಷಕ್ಕಿಂತ ಹೆಚ್ಚು ಜನರಿಗೆ ಸೊಂಕಿಗೆ ಒಳಗಾಗಿದ್ದು, 1,33 ಲಕ್ಷ ಜನರು ಮೃತರಾಗಿದ್ದಾರೆ. ಮಾತ್ರವಲ್ಲದೆ 14 ಲಕ್ಷಕ್ಕಿಂತ ಹೆಚ್ಚು ಜನರು ಗುಣಮುಖರಾಗಿದ್ದಾರೆ ಎಂದು ವರದಿ ತಿಳಿಸಿದೆ.
ಭಾರತದಲ್ಲಿ ಕೂಡ ಈ ವೈರಾಣು ತನ್ನ ಪ್ರತಾಪವನ್ನು ಮುಂದುವರೆಸಿದ್ದು ಕಳೆದ 4 ದಿನಗಳಲ್ಲಿ 1 ಲಕ್ಷ ಜನರು ಸೊಂಕಿಗೆ ತುತ್ತಾಗಿದ್ದಾರೆ. ಹಾಗಾಗಿ ಒಟ್ಟು ಸೊಂಕಿತರ ಸಂಖ್ಯೆ 8 ಲಕ್ಷದ ಗಡಿ ದಾಟಿದ್ದು 22 ಸಾವಿರಕ್ಕಿಂತ ಹೆಚ್ಚು ಜನರು ಮೃತಪಟ್ಟಿದ್ದಾರೆ.
ಮಹಾರಾಷ್ಟ್ರ ಕೂಡ ವೈರಸ್ ಆರ್ಭಟಕ್ಕೆ ನಲುಗಿ ಹೋಗಿದ್ದು ಸುಮಾರು 2.30 ಲಕ್ಷ ಜನರು ಸೋಂಕಿಗೆ ತುತ್ತಾಗಿದ್ದಾರೆ. ಮಾತ್ರವಲ್ಲದೆ ತಮಿಳುನಾಡಿನಲ್ಲಿ 1.30 ಲಕ್ಷ ಜನರು, ದೆಹಲಿಯಲ್ಲಿ 1.07 ಲಕ್ಷ ಜನರು ವೈರಾಣು ಪೀಡಿತರಾಗಿದ್ದಾರೆ. ಪ್ರಮುಖವಾಗಿ ಮಹಾರಾಷ್ಟ್ರ, ತಮಿಳುನಾಡು, ಕರ್ನಾಟಕ, ದೆಹಲಿ, ತೆಲಂಗಾಣ ದಲ್ಲಿ ಅತೀ ಹೆಚ್ಚು ಸಕ್ರೀಯ ಪ್ರಕರಣಗಳಿವೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Covid-19: ಕೋವಿಡ್ ಭೀತಿ; ಮೂರು ರಾಜ್ಯಗಳಲ್ಲಿ ಮಾಸ್ಕ್ ಕಡ್ಡಾಯ
Covid 19 ವಿದೇಶದಿಂದ ಬರುವವರಿಗೆ ಕೋವಿಡ್ ಟೆಸ್ಟ್ ಕಡ್ಡಾಯ ಮಾಡಿದ ಉತ್ತರ ಪ್ರದೇಶ ಸರ್ಕಾರ
ಕೋವಿಡ್ ಗೂ ಹೃದಯಾಘಾತಕ್ಕೂ ಸಂಬಂಧವಿದೆಯೇ? ಉತ್ತರ ನೀಡಿದ ಕೇಂದ್ರ ಆರೋಗ್ಯ ಸಚಿವ
ಎಚ್3ಎನ್2 ಭೀತಿಯ ಮಧ್ಯೆ ಕೋವಿಡ್ ಏರಿಕೆ; ಒಂದೇ ದಿನ ಸಾವಿರ ದಾಟಿದ ಸೋಂಕಿತರ ಸಂಖ್ಯೆ
ಕೋವಿಡ್ 19 ಲಸಿಕೆಯಿಂದ ಅಡ್ಡಪರಿಣಾಮ ಇರೋದು ನಿಜ: RTIನಲ್ಲಿ ಕೇಂದ್ರದ ಉತ್ತರ ಬಹಿರಂಗ
MUST WATCH
ಹೊಸ ಸೇರ್ಪಡೆ
Belthangady: ದಿಬ್ಬಣದಲ್ಲೇ ಮತಗಟ್ಟೆಗೆ ಬಂದು ಮತ ಚಲಾಯಿಸಿದ ವಧು
LS Polls: ಚಿಕ್ಕಮಗಳೂರು… ವಿದೇಶದಿಂದ ಬಂದು ಮತದಾನ ಮಾಡಿ ಮಾದರಿಯಾದ ದಂಪತಿ…
Lok Sabha Election: ಉಡುಪಿ ಚಿಕ್ಕಮಗಳೂರಿನಲ್ಲಿ 29.03 % ಮತದಾನ…
Anti Israel ಪ್ರತಿಭಟನೆ-ಭಾರತೀಯ ಮೂಲದ ಪ್ರಿನ್ಸ್ ಟನ್ ವಿವಿ ವಿದ್ಯಾರ್ಥಿನಿ ಬಂಧನ
ಸುಳ್ಳು ಹೇಳುವುದರಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನಿಸ್ಸೀಮರು: ಸಚಿವ ಪ್ರಹ್ಲಾದ್ ಜೋಶಿ