24ಗಂಟೆಯಲ್ಲಿ 549 ಕೋವಿಡ್ ಪ್ರಕರಣ ಪತ್ತೆ, 49 ಸಾವಿರ ವೆಂಟಿಲೇಟರ್ಸ್ ಗೆ ಬೇಡಿಕೆ: ಸಚಿವಾಲಯ
ಈವರೆಗೆ 473 ಮಂದಿ ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ ಚಾರ್ಜ್ ಆಗಿರುವುದಾಗಿ ತಿಳಿಸಿದ್ದಾರೆ.
Team Udayavani, Apr 9, 2020, 7:31 PM IST
ನವದೆಹಲಿ:ದೇಶದಲ್ಲಿ ಈವರೆಗೆ 5,734 ಕೋವಿಡ್ 19 ಸೋಂಕು ಪೀಡಿತರು ಪತ್ತೆಯಾಗಿದ್ದು, ಕಳೆದ 24 ಗಂಟೆಯಲ್ಲಿ 549 ಹೊಸ ಪ್ರಕರಣಗಳು ಹಾಗೂ 17 ಮಂದಿ ಸಾವನ್ನಪ್ಪಿದ್ದರು. ಒಟ್ಟು ದೇಶದಲ್ಲಿ ಕೋವಿಡ್ ಗೆ ಸಂಬಂಧಿಸಿದಂತೆ ಸಾವನ್ನಪ್ಪಿದವರ ಸಂಖ್ಯೆ 166ಕ್ಕೆ ಏರಿದೆ ಎಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ಗುರುವಾರ ತಿಳಿಸಿದೆ.
ಐಸಿಎಂಆರ್, ಆರೋಗ್ಯ ಸಚಿವಾಲಯದ ಜಂಟಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಲಾವ್ ಅಗರ್ವಾಲ್, ದೇಶದಲ್ಲಿ 5734 ಮಂದಿಗೆ ಕೋವಿಡ್ ಸೋಂಕು ತಗುಲಿರುವುದು ದೃಢಪಟ್ಟಿದೆ. ಕಳೆದ 24 ಗಂಟೆಯಲ್ಲಿ 549 ಹೊಸ ಪ್ರಕರಣಗಳು ಪತ್ತೆಯಾಗಿದೆ.ಈವರೆಗೆ 473 ಮಂದಿ ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ ಚಾರ್ಜ್ ಆಗಿರುವುದಾಗಿ ತಿಳಿಸಿದ್ದಾರೆ.
ಪಿಪಿಇ, ಮಾಸ್ಕ್, ವೆಂಟಿಲೇಟರ್ ಗಳು ತಯಾರಿಕೆ ಆರಂಭಗೊಂಡಿದ್ದು, ಸುಮಾರು 1.7 ಕೋಟಿ ಪಿಪಿಇಗಳನ್ನು ಪೂರೈಕೆ ಮಾಡುವಂತೆ ಆರ್ಡರ್ ನೀಡಲಾಗಿದೆ. ದೇಶೀಯ 20 ಉತ್ಪಾದಕರು ಪಿಪಿಇ ಅನ್ನು ತಯಾರಿಸುತ್ತಿದ್ದಾರೆ. ಅಲ್ಲದೇ 49 ಸಾವಿರ ವೆಂಟಿಲೇಟರ್ಸ್ ಗಳಿಗೆ ಆರ್ಡರ್ ನೀಡಲಾಗಿದೆ ಎಂದು ಅಗರ್ವಾಲ್ ತಿಳಿಸಿದರು.
ಭಾರತೀಯ ರೈಲ್ವೆ ಇಲಾಖೆಯ 5000 ಕೋಚ್ ಗಳನ್ನು ಐಸೋಲೇಶನ್ ಯೂನಿಟ್ ಗಳನ್ನಾಗಿ ಬಳಸಲಾಗುತ್ತಿದೆ. ಅಲ್ಲದೇ 80 ಸಾವಿರ ಐಸೋಲೇಶನ್ ಬೆಡ್ ಗಳಿಗೆ ಸಿದ್ಧತೆ ನಡೆಸಲಾಗುತ್ತಿದೆ. ಇದಕ್ಕಾಗಿ 5000 ಕೋಚ್ ಗಳನ್ನು ಐಸೋಲೇಶನ್ ಯೂನಿಟ್ ಗೆ ಬಳಸಲಿದ್ದು, ನಂತರ 3250 ಕೋಚ್ ಗಳನ್ನು ಮಾರ್ಪಡಿಲಾಗುವುದು ಎಂದು ಹೇಳಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Lok Sabha 2024: ಮೇಘಾಲಯದಲ್ಲಿ ಯಾವಾಗ ಜಾನ್ ಎಫ್ ಕೆನಡಿ ಹಿಟ್ಲರ್ ನನ್ನು ಬಂಧಿಸಿದ್ದು!
CAA: ದೇಶದಲ್ಲಿ ಸಿಎಎ ಜಾರಿಗೆ ತಡೆ ನೀಡಲ್ಲ, 3 ವಾರದೊಳಗೆ ಉತ್ತರ ನೀಡಿ: ಸುಪ್ರೀಂಕೋರ್ಟ್
Telangana: ಜಾರ್ಖಂಡ್ ಗವರ್ನರ್ ಗೆ ಹೆಚ್ಚುವರಿ ಹೊಣೆಗಾರಿಕೆ, ತಮಿಳಿಸೈ ರಾಜೀನಾಮೆ ಅಂಗೀಕಾರ
Patanjali Ads case:ಖುದ್ದು ಹಾಜರಾಗಿ- ಬಾಬಾ ರಾಮ್ ದೇವ್, ಬಾಲಕೃಷ್ಣಗೆ ಸುಪ್ರೀಂ ಸಮನ್ಸ್
Lok Sabha Poll 2024: ಪ್ರಧಾನಿ ಮೋದಿ ಕ್ಯಾಬಿನೆಟ್ ಗೆ RLJP ಮುಖಂಡ ಪರಾಸ್ ರಾಜೀನಾಮೆ
MUST WATCH
ಹೊಸ ಸೇರ್ಪಡೆ
ಇಂಡಿಯನ್ ಆಯಿಲ್ ಕಂಪನಿಗೆ ನಿರ್ದೇಶಕರಾಗಿ (ಎಚ್ಆರ್) ರಶ್ಮಿ ಗೋವಿಲ್ ಅಧಿಕಾರ ಸ್ವೀಕಾರ
OTT: ಸದ್ದಿಲ್ಲದೆ ಓಟಿಟಿಗೆ ಬಂತು ʼಒಂದು ಸರಳ ಪ್ರೇಮಕಥೆ’: ಯಾವುದರಲ್ಲಿ ಸ್ಟ್ರೀಮಿಂಗ್?
Lok Sabha 2024: ಮೇಘಾಲಯದಲ್ಲಿ ಯಾವಾಗ ಜಾನ್ ಎಫ್ ಕೆನಡಿ ಹಿಟ್ಲರ್ ನನ್ನು ಬಂಧಿಸಿದ್ದು!
ನಿರ್ಮಾಪಕನಾದ ರಾಜಮೌಳಿ ಪುತ್ರ: ಎರಡು ಹೊಸ ಸಿನಿಮಾ ಅನೌನ್ಸ್; ಲೀಡ್ ರೋಲ್ ನಲ್ಲಿ ಫಾಫಾ
ಕಾಂಗ್ರೆಸ್ ಸರಕಾರ ಬಂದಾಗಿನಿಂದ ರಾಜ್ಯದಲ್ಲಿ ಹಿಂದೂಗಳಿಗೆ ರಕ್ಷಣೆಯೇ ಇಲ್ಲದಾಗಿದೆ: ಜೋಶಿ