ಕೋವಿಡ್ ವೈರಸ್ ಭೀತಿ: ಜಮ್ಮು-ಕಾಶ್ಮೀರದಲ್ಲಿ 65 ಮಂದಿ ಕೈದಿಗಳ ಬಿಡುಗಡೆ, ಹೈಕೋರ್ಟ್ ಗೆ ವರದಿ
ಹೈಕೋರ್ಟ್ ಪೀಠದ ಜಸ್ಟೀಸ್ ಗೀತಾ ಮಿತ್ತಲ್ ಮತ್ತು ಜಸ್ಟೀಸ್ ರಜನೀಶ್ ಓಸ್ವಾಲ್ ನೇತೃತ್ವದ ಪೀಠ ವಿಡಿಯೋ ಕಾನ್ಫರೆನ್ಸ್ ಮೂಲಕ ವಿಚಾರಣೆ
Team Udayavani, Apr 12, 2020, 11:31 AM IST
ಹೈಕೋರ್ಟ್ ಪೀಠದ ಜಸ್ಟೀಸ್ ಗೀತಾ ಮಿತ್ತಲ್ ಮತ್ತು ಜಸ್ಟೀಸ್ ರಜನೀಶ್ ಓಸ್ವಾಲ್ ನೇತೃತ್ವದ ಪೀಠ ವಿಡಿಯೋ ಕಾನ್ಫರೆನ್ಸ್ ಮೂಲಕ ವಿಚಾರಣೆ
ಜಮ್ಮು-ಕಾಶ್ಮೀರ:ಮಾರಣಾಂತಿಕ ಕೋವಿಡ್ 19 ಸೋಂಕು ಹರಡುವ ಭೀತಿಯ ಹಿನ್ನೆಲೆಯಲ್ಲಿ ಜಮ್ಮು-ಕಾಶ್ಮೀರದಲ್ಲಿನ ಇಕ್ಕಟ್ಟಾದ ಜೈಲುಗಳಿಂದ ಸುಮಾರು 65 ಮಂದಿ ಕೈದಿಗಳನ್ನು ಬಿಡುಗಡೆಗೊಳಿಸಲಾಗಿದೆ ಎಂದು ವರದಿ ತಿಳಿಸಿದೆ. ಇದರಲ್ಲಿ ಸಾರ್ವಜನಿಕ ಸುರಕ್ಷಾ ಕಾಯ್ದೆ(ಪಿಎಸ್ ಎ)ಯಡಿ ಬಂಧಿಸಲ್ಪಟ್ಟಿದ್ದ 22 ಮಂದಿ ಸೇರಿದ್ದಾರೆ.
ಕೈದಿಗಳ ಬಿಡುಗಡೆಗೆ ಸಂಬಂಧಿಸಿದಂತೆ ಜೈಲಿನ ಮಹಾ ನಿರ್ದೇಶಕ ಹೈಕೋರ್ಟ್ ಗೆ ಲಿಖಿತ ವರದಿಯನ್ನು ಸಲ್ಲಿಸುವ ಮೂಲಕ ಮಾಹಿತಿ ನೀಡಿದ್ದಾರೆ. ಕೋವಿಡ್ 19 ವೈರಸ್ ಹರಡುವ ಭೀತಿಯ ಹಿನ್ನೆಲೆಯಲ್ಲಿ ಸಲ್ಲಿಕೆಯಾಗಿದ್ದ ಪಿಐಎಲ್ (ಸಾರ್ವಜನಿಕ ಹಿತಾಸಕ್ತಿ ಅರ್ಜಿ) ಅನ್ನು ಹೈಕೋರ್ಟ್ ಪೀಠದ ಜಸ್ಟೀಸ್ ಗೀತಾ ಮಿತ್ತಲ್ ಮತ್ತು ಜಸ್ಟೀಸ್ ರಜನೀಶ್ ಓಸ್ವಾಲ್ ನೇತೃತ್ವದ ಪೀಠ ವಿಡಿಯೋ ಕಾನ್ಫರೆನ್ಸ್ ಮೂಲಕ ವಿಚಾರಣೆ ನಡೆಸಲಿದೆ.
ಕೈದಿಗಳ ಬಿಡುಗಡೆಗೆ ಸಂಬಂಧಿಸಿದಂತೆ ಹೈಕೋರ್ಟ್ ಏ.7ರಂದು ಜೈಲಿನ ಮಹಾ ನಿರ್ದೇಶಕರಿಗೆ ಸೂಚನೆ ನೀಡಿತ್ತು. ಈ ನಿಟ್ಟಿನಲ್ಲಿ ಉನ್ನತ ಮಟ್ಟದ ಸಮಿತಿ ಪರಿಶೀಲನೆ ನಡೆಸಿ, ಸಾರ್ವಜನಿಕ ಸುರಕ್ಷಾ ಕಾಯ್ದೆಯಡಿ ಬಂಧಿಸಲ್ಪಟ್ಟ 22 ಮಂದಿ, ವಿಚಾರಣಾಧೀನ 32 ಕೈದಿಗಳು, ಅಪರಾಧ ದಂಡ ಸಂಹಿತೆ 107, 109, 151 ಅಡಿ ವಿಚಾರಣೆ ಎದುರಿಸುತ್ತಿದ್ದ 9 ಮಂದಿಯನ್ನು ಬಿಡುಗಡೆಗೊಳಿಸಲು ಶಿಫಾರಸು ಮಾಡಿದೆ. ಅಲ್ಲದೇ 19 ಕೈದಿಗಳನ್ನು ಪೆರೋಲ್ ಮೇಲೆ ಬಿಡುಗಡೆ ಮಾಡಲು ಅನುಮತಿ ನೀಡಿದೆ ಎಂದು ವರದಿ ತಿಳಿಸಿದೆ.
ಕೋವಿಡ್ 19 ವೈರಸ್ ಹರಡುವ ಭೀತಿಯ ಹಿನ್ನೆಲೆಯಲ್ಲಿ ಕೇಂದ್ರಾಡಳಿತ ಪ್ರದೇಶದಾದ್ಯಂತ ಇರುವ ಇಕ್ಕಟ್ಟಾದ ಜೈಲುಗಳಿಂದ ವಿಚಾರಣಾಧೀನ ಕೈದಿಗಳನ್ನು ತಾತ್ಕಾಲಿಕವಾಗಿ ಬಿಡುಗಡೆಗೊಳಿಸಲು ಜಮ್ಮು-ಕಾಶ್ಮೀರ ಸರ್ಕಾರ ಮಾರ್ಚ್ 30ರಂದು ಉನ್ನತ ಮಟ್ಟದ ಸಮಿತಿಯನ್ನು ರಚಿಸಲು ನಿರ್ಧರಿಸಿತ್ತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Arunachal Village: ಕೇವಲ ಒಂದು ಮತಕ್ಕಾಗಿ ಚುನಾವಣಾ ಅಧಿಕಾರಿಗಳ 40 ಕಿ.ಮೀ ಕಾಲ್ನಡಿಗೆ!
SSLC ಪರೀಕ್ಷೆ ವೇಳೆ ಉತ್ತರ ತೋರಿಸಲಿಲ್ಲ ಎಂದು ಸಹಪಾಠಿಗೆ ಚಾಕು ಇರಿದ ವಿದ್ಯಾರ್ಥಿಗಳು
Shocking: ಮುಸುಧಾರಿಗಳಿಂದ ಗುರುದ್ವಾರದ ಸಿಬ್ಬಂದಿಯ ಗುಂಡಿಕ್ಕಿ ಹತ್ಯೆ.. ಭಯಾನಕ ದೃಶ್ಯ ಸೆರೆ
Loksabha Poll: ತಮಿಳುನಾಡು ಮಾಜಿ ಕಾಂಗ್ರೆಸ್ ನಾಯಕ ಈಗ ಬಿಜೆಪಿ ರಾಷ್ಟ್ರೀಯ ವಕ್ತಾರ
Bhopal: ಅಜ್ಜಿಗೆ ಮನಬಂದಂತೆ ಥಳಿಸಿದ ದಂಪತಿಗೆ ಲಾಠಿ ರುಚಿ ತೋರಿಸಿದ ಪೊಲೀಸರು…
MUST WATCH
ಹೊಸ ಸೇರ್ಪಡೆ
Fire; ಬೈಕಂಪಾಡಿ ಕೈಗಾರಿಕಾ ಪ್ರದೇಶದಲ್ಲಿ ಅಗ್ನಿ ಅವಘಡ
ಮೈಸೂರು:ಶೃಂಗೇರಿ ಶಂಕರ ಮಠ-ಮಾ. 30ರಿಂದ ಅಭಿನವ ಶಂಕರಾಲಯದ ಶತಮಾನೋತ್ಸವ ಆಚರಣೆ
Delhi: ದುಬಾರಿ ಮರ್ಸಿಡೆಸ್ ಕಾರಿನಲ್ಲಿ ಡ್ರಗ್ಸ್ ಸಾಗಾಟ-ರಾಷ್ಟ್ರಮಟ್ಟದ ಕುಸ್ತಿಪಟು ಬಂಧನ!
Thirthahalli: ರಾಜ್ಯದ 28 ಕ್ಷೇತ್ರವನ್ನೂ ಗೆಲ್ಲಿಸಬೇಕೆಂದು ಜೆಡಿಎಸ್ ಪಕ್ಷದೊಂದಿಗೆ ಮೈತ್ರಿ
Tollywood: ಸಿದ್ಧಾರ್ಥ್ – ಅದಿತಿ ರಾವ್ ಮದುವೆ ಆಗಿಲ್ಲ: ಎಂಗೇಜ್ ಮೆಂಟ್ ಮಾಡಿಕೊಂಡ ಜೋಡಿ