ಮೇಘಾಲಯ: Covid-19 ಸೋಂಕಿಗೆ ವೈದ್ಯ ಸಾವು, 2000ಕ್ಕೂ ಅಧಿಕ ಜನರಿಗೆ ಸೋಂಕು ಹರಡಿರುವ ಶಂಕೆ?
ಡಾ.ಸೈಲೋ ಅವರು ಇಬ್ಬರು ಪುತ್ರಿ, ಇಬ್ಬರು ಪುತ್ರರು ಹಾಗೂ ಪತ್ನಿ ಅಚುಲಾ ಅವರನ್ನು ಅಗಲಿದ್ದಾರೆ.
Team Udayavani, Apr 15, 2020, 3:54 PM IST
ನವದೆಹಲಿ:ಕೋವಿಡ್ 19 ವೈರಸ್ ಗೆ ಮೇಘಾಲಯ ಬೆಥನಿ ಆಸ್ಪತ್ರೆಯ ನಿರ್ದೇಶಕ, ವೈದ್ಯರೊಬ್ಬರು (69ವರ್ಷ) ಬುಧವಾರ ಸಾವನ್ನಪ್ಪಿರುವುದಾಗಿ ವರದಿ ತಿಳಿಸಿದೆ. ಡಾ. ಜಾನ್ ಸೈಲೋ ರಾಜ್ಯದ ಕೋವಿಡ್ 19 ಸೋಂಕು ಪೀಡಿತ ಮೊದಲ ವ್ಯಕ್ತಿಯಾಗಿದ್ದಾರೆ ಎಂದು ವರದಿ ವಿವರಿಸಿದೆ.
ಸೈಲೋ ಕುಟುಂಬದ ಆರು ಮಂದಿಯನ್ನು ಪರೀಕ್ಷೆಗೊಳಪಡಿಸಲಾಗಿದ್ದು, ಪಾಸಿಟಿವ್ ವರದಿ ಬಂದಿದೆ ಎಂದು ವೈದ್ಯಾಧಿಕಾರಿಗಳು ತಿಳಿಸಿದ್ದಾರೆ. ದಿಬ್ರುಗಢ್ ನಲ್ಲಿ ಸೈಲೋ ಅವರು ಎಂಬಿಬಿಎಸ್ ಪದವಿ ಪಡೆದಿದ್ದು, ಏಮ್ಸ್ ನಲ್ಲಿ ಮೆಡಿಸಿನ್ ನಲ್ಲಿ ಎಂಡಿ ಪದವಿ ಗಳಿಸಿದ್ದರು. ಡಾ.ಸೈಲೋ ಅವರು ಇಬ್ಬರು ಪುತ್ರಿ, ಇಬ್ಬರು ಪುತ್ರರು ಹಾಗೂ ಪತ್ನಿ ಅಚುಲಾ ಅವರನ್ನು ಅಗಲಿದ್ದಾರೆ.
ಡಾ.ಸೈಲೋ ಅವರ ನಿಧನಕ್ಕೆ ಮೇಘಾಲಯ ಮುಖ್ಯಮಂತ್ರಿ ಕೋನಾರ್ಡ್ ಸಂಗ್ಮಾ ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ. ಅವರು ಕುಟುಂಬಕ್ಕೆ ದುಃಖ ಭರಿಸುವ ಶಕ್ತಿ ದೊರೆಯಲಿ. ಡಾ.ಸೈಲೋ ಅವರ ಆತ್ಮಕ್ಕೆ ಶಾಂತಿ ಸಿಗಲಿ ಎಂದು ಟ್ವೀಟ್ ಮಾಡಿದ್ದಾರೆ.
ಡಾ.ಸೈಲೋ ಅವರು ಎಲ್ಲಿಯೂ ಪ್ರಯಾಣ ಮಾಡಿರಲಿಲ್ಲವಾಗಿತ್ತು. ಅವರಿಗೆ ನಿಗೂಢವಾಗಿ ಹೊತ್ತು ತಂದಿರುವ ವ್ಯಕ್ತಿಯಿಂದ ಈ ಸೋಂಕು ಹರಡಿರಬಹುದು ಎಂದು ವರದಿ ಶಂಕಿಸಿದೆ. ಮೇಘಾಲಯ ಸರ್ಕಾರ ಸೋಂಕಿತರನ್ನು ಪತ್ತೆ ಹಚ್ಚುವ ಕಾರ್ಯದಲ್ಲಿ ತೊಡಗದಿದೆ. ಡಾ.ಸೈಲೋ ಅವರ ಬಳಿ ಸುಮಾರು ಎರಡು ಸಾವಿರಕ್ಕೂ ಅಧಿಕ ಜನರು ಸಂಪರ್ಕಕ್ಕೆ ಬಂದಿದ್ದು, ಅವರನ್ನೆಲ್ಲಾ ಪತ್ತೆ ಹಚ್ಚಬೇಕಾಗಿದೆ ಎಂದು ಸರ್ಕಾರ ತಿಳಿಸಿದೆ.
ಭಾರತದಲ್ಲಿ ಈಗಾಗಲೇ ಕೋವಿಡ 19 ಸೋಂಕು ಪೀಡಿತರ ಸಂಖ್ಯೆ 11,439ಕ್ಕೆ ಏರಿದ್ದು, ಸಾವಿನ ಸಂಖ್ಯೆ 377ಕ್ಕೆ ಏರಿಕೆಯಾಗಿದೆ. ಇದರಲ್ಲಿ 1076 ಹೊಸ ಪ್ರಕರಣ ಪತ್ತೆಯಾಗಿದೆ ಎಂದು ಆರೋಗ್ಯ ಸಚಿವಾಲಯದ ಅಂಕಿಅಂಶ ತಿಳಿಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Malicious Calls; ಜ್ಞಾನವ್ಯಾಪಿ ಮಸೀದಿ ಸರ್ವೆ ತೀರ್ಪು ನೀಡಿದ್ದ ಜಡ್ಜ್ ಗೆ ಬೆದರಿಕೆ ಕರೆ
ಜ.26ರಂದು 2ನೇ ಹಂತದ ಚುನಾವಣೆ;ರಾಹುಲ್, ತರೂರ್, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ
BJP 2025ರಲ್ಲಿ ಹಿಂದುಳಿದ ಸಮುದಾಯಗಳ ಮೀಸಲಾತಿ ತೆಗೆದು ಹಾಕಲಿದೆ: ರೇವಂತ್ ರೆಡ್ಡಿ
Patna: ಹೋಟೆಲ್ ನಲ್ಲಿ ಭಾರಿ ಅಗ್ನಿ ಅವಘಡ, 6 ಮಂದಿ ಸಜೀವ ದಹನ, ಹಲವರಿಗೆ ಗಾಯ
ನೀತಿ ಸಂಹಿತೆ ಉಲ್ಲಂಘನೆ: ಏಪ್ರಿಲ್ 29ರೊಳಗೆ ಉತ್ತರ ನೀಡಲು ಮೋದಿ, ರಾಹುಲ್ಗೆ ಸೂಚನೆ
MUST WATCH
ಹೊಸ ಸೇರ್ಪಡೆ
Kaup: ಎ.25ರಿಂದ ಕಳತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಬ್ರಹ್ಮಕಲಶೋತ್ಸವ, ನಾಗಮಂಡಲ
Malicious Calls; ಜ್ಞಾನವ್ಯಾಪಿ ಮಸೀದಿ ಸರ್ವೆ ತೀರ್ಪು ನೀಡಿದ್ದ ಜಡ್ಜ್ ಗೆ ಬೆದರಿಕೆ ಕರೆ
ಬಂಟರು ಹಾಗೂ ಬಿಲ್ಲವರು ಮೊಗವೀರರ ಎರಡು ಕಣ್ಣುಗಳಿದ್ದಂತೆ: ಕಿರಣ್ ಕುಮಾರ್ ಉದ್ಯಾವರ
Vote: ಬನ್ನಿ ಉತ್ತಮ ನಾಯಕನನ್ನು ಆಯ್ಕೆ ಮಾಡೋಣ
ಜ.26ರಂದು 2ನೇ ಹಂತದ ಚುನಾವಣೆ;ರಾಹುಲ್, ತರೂರ್, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ