ಕೋವಿಡ್ ಕಳವಳ-ಆಗಸ್ಟ್ 14: 7908 ಹೊಸ ಪ್ರಕರಣ ; 6940 ಡಿಸ್ಚಾರ್ಜ್ ; 104 ಸಾವು


Team Udayavani, Aug 14, 2020, 9:25 PM IST

ಕೋವಿಡ್ ಕಳವಳ-ಆಗಸ್ಟ್ 14: 7908 ಹೊಸ ಪ್ರಕರಣ ; 6940 ಡಿಸ್ಚಾರ್ಜ್ ; 104 ಸಾವು

ಸಾಂದರ್ಭಿಕ ಚಿತ್ರವನ್ನು ಬಳಸಲಾಗಿದೆ – Representative Image Used

ಬೆಂಗಳೂರು: ಗುರುವಾರ ಸಾಯಂಕಾಲದಿಂದ ಶುಕ್ರವಾರ ಸಾಯಂಕಾಲದವರೆಗಿನ ಕೋವಿಡ್ 19 ಸೋಂಕು ಪ್ರಕರಣಗಳ ವರದಿಯ ಪ್ರಕಾರ, ಈ 24 ಗಂಟೆಗಳ ಅವಧಿಯಲ್ಲಿ ರಾಜ್ಯದಲ್ಲಿ ಒಟ್ಟು 7908 ಕೋವಿಡ್ 19 ಸೋಂಕು ಪ್ರಕರಣಗಳು ವರದಿಯಾಗಿವೆ.

ಈ ನಿರ್ಧಿಷ್ಟ ಅವಧಿಯಲ್ಲಿ ರಾಜ್ಯದಲ್ಲಿ ಒಟ್ಟು 6940 ಸೋಂಕಿತರು ಗುಣಮುಖರಾಗಿದ್ದಾರೆ. ಮತ್ತು ಈ ಅವಧಿಯಲ್ಲಿ 104 ಸೋಂಕಿತರು ಮೃತಪಟ್ಟಿದ್ದಾರೆ.

ಇದೀಗ ರಾಜ್ಯದಲ್ಲಿ ಒಟ್ಟು ಕೋವಿಡ್ 19 ಸೋಂಕಿತರ ಸಂಖ್ಯೆ 2ಲಕ್ಷದ ಗಡಿ ದಾಟಿದ್ದು, ನಮ್ಮಲ್ಲಿ ಒಟ್ಟು 2,11,108 ಸೋಂಕು ಪ್ರಕರಣಗಳು ದಾಖಲಾಗಿವೆ. ಈ ನಡುವೆ ಸೋಂಕಿತರ ಚೇತರಿಕೆ ಸಂಖ್ಯೆಯೂ ಲಕ್ಷದ ಗಡಿಯನ್ನು ದಾಟಿರುವುದು ಆಶಾದಾಯಕ ವಿಷಯವಾಗಿದೆ. 1,28,182 ಸೊಂಕಿತರು ಇದೀಗ ಚೇತರಿಸಿಕೊಂಡಿದ್ದಾರೆ. ರಾಜ್ಯದಲ್ಲಿ ಇದೀಗ ಒಟ್ಟು 79,201 ಸಕ್ರಿಯ ಕೋವಿಡ್ 19 ಸೋಂಕು ಪ್ರಕರಣಗಳಿವೆ.

ಹಾಗೂ ರಾಜ್ಯದಲ್ಲಿ ಕೋವಿಡ್ 19 ಸೊಂಕು ಸಂಬಂಧಿ 3717 ಸಾವಿನ ಪ್ರಕರಣಗಳು ದಾಖಲಾಗಿವೆ ಹಾಗೂ 08 ಜನ ಕೋವಿಡ್ 19 ಸೋಂಕಿತರು ಅನ್ಯ ಕಾರಣದಿಂದ ಮೃತಪಟ್ಟಿದ್ದಾರೆ. 747 ಸೋಂಕಿತರು ತುರ್ತು ನಿಗಾ ಘಟಕದಲ್ಲಿ ದಾಖಲುಗೊಂಡು ಚಿಕಿತ್ಸೆಯನ್ನು ಪಡೆಯುತ್ತಿದ್ದಾರೆ.

ಈ ಅವಧಿಯಲ್ಲಿ ಬೆಂಗಳೂರು ನಗರ ಜಿಲ್ಲೆಯಲ್ಲಿ 2452 ಕೋವಿಡ್ 19 ಸೊಂಕು ಪ್ರಕರಣಗಳು ವರದಿಯಾಗುವ ಮೂಲಕ ಸೋಂಕು ಪ್ರಕರಣಗಳಲ್ಲಿ ರಾಜ್ಯದಲ್ಲೇ ಮೊದಲ ಸ್ಥಾನದಲ್ಲಿದೆ. ಆ ಬಳಿಕದ ಸ್ಥಾನಗಳಲ್ಲಿ ಬಳ್ಳಾರಿ (608), ಶಿವಮೊಗ್ಗ (413), ದಾವಣಗೆರೆ (351), ಬೆಳಗಾವಿ (334), ಉಡುಪಿ (322), ದಕ್ಷಿಣ ಕನ್ನಡ (307), ಮೈಸೂರು (291), ಕಲಬುರಗಿ (229), ರಾಯಚೂರು (220), ಧಾರವಾಡ (219), ಗದಗ (190), ತುಮಕೂರು (185), ಬಾಗಲಕೋಟೆ (171), ಮಂಡ್ಯ (163), ಕೊಪ್ಪಳ (162), ಹಾಸನ (158), ವಿಜಯಪುರ (144), ಹಾವೇರಿ (138), ಯಾದಗಿರಿ (116) ಮತ್ತು ಚಿಕ್ಕಮಗಳೂರು (104) ಜಿಲ್ಲೆಗಳಿವೆ.

ಇನ್ನುಳಿದಂತೆ, ಬೀದರ್ (97), ಉತ್ತರ ಕನ್ನಡ (87), ರಾಮನಗರ (87), ಕೋಲಾರ (81), ಚಿತ್ರದುರ್ಗ (77), ಚಾಮರಾಜನಗರ (61), ಕೊಡಗು (60), ಚಿಕ್ಕಬಳ್ಳಾಪುರ (42) ಮತ್ತು ಬೆಂಗಳೂರು ಗ್ರಾಮಾಂತರ (39), ಸೇರಿದಂತೆ ರಾಜ್ಯದ ಒಟ್ಟು 30 ಜಿಲ್ಲೆಗಳಲ್ಲಿ ಇಂದು ಮೂರಂಕಿ ಹಾಗೂ ಎರಡಂಕಿಯ ಕೋವಿಡ್ 19 ಸೋಂಕಿನ ಪ್ರಕರಣಗಳು ವರದಿಯಾಗಿವೆ.

ಇಂದು ರಾಜ್ಯದಲ್ಲಿ ಒಟ್ಟು 29,422 Rapid ಆ್ಯಂಟಿಜೆನ್ ಸೋಂಕು ಪತ್ತೆ ಪರೀಕ್ಷೆಗಳನ್ನು ನಡೆಸಲಾಗಿದೆ ಹಾಗೂ RT PCR ಮತ್ತು ಇನ್ನಿತರೇ ವಿಧಾನಗಳ ಮೂಲಕ 27,216 ಸೋಂಕು ಪತ್ತೆ ಪರೀಕ್ಷೆಗಳನ್ನು ಈ ಅವಧಿಯಲ್ಲಿ ನಡೆಸಲಾಗಿದೆ. ಈ ಮೂಲಕ ಕಳೆದ 24 ಗಂಟೆಗಳ ಅವಧಿಯಲ್ಲಿ ರಾಜ್ಯಾದ್ಯಂತ ಒಟ್ಟು 56,638 ಸೋಂಕು ಪತ್ತೆ ಪರಿಕ್ಷೆಗಳನ್ನು ನಡೆಸಲಾಗಿದೆ.

ರಾಜ್ಯದಲ್ಲಿ ಇದುವರೆಗೆ ಒಟ್ಟು 4,64,286 Rapid ಆ್ಯಂಟಿಜೆನ್ ಸೋಂಕು ಪತ್ತೆ ಪರೀಕ್ಷೆಗಳನ್ನು ನಡೆಸಲಾಗಿದೆ. ಇದನ್ನು ಹೊರತಾಗಿಸಿ ರಾಜ್ಯಾದ್ಯಂತ 14,74,668 ಜನರಿಗೆ RT PCR ಮತ್ತು ಇನ್ನಿತರೇ ವಿಧಾನಗಳ ಮೂಲಕ ಕೋವಿಡ್ 19 ಸೋಂಕು ಪತ್ತೆ ಪರೀಕ್ಷೆಯನ್ನು ನಡೆಸಲಾಗಿದೆ. ಈ ಎಲ್ಲಾ ವಿಧಾನಗಳ ಮೂಲಕ ರಾಜ್ಯದಲ್ಲಿ ಇಂದಿನವರೆಗೆ ಒಟ್ಟು 19,38,954 ಜನರಿಗೆ ಕೋವಿಡ್ 19 ಸೋಂಕು ಪತ್ತೆ ಪರೀಕ್ಷೆಯನ್ನು ನಡೆಸಲಾಗಿದೆ.

ಬೆಂಗಳೂರು ನಗರ ಜಿಲ್ಲೆಯಲ್ಲಿ ಒಟ್ಟು ಕೋವಿಡ್ 19 ಸೋಂಕಿತ ಪ್ರಕರಣಗಳ ಸಂಖ್ಯೆ 84,185ಕ್ಕೆ ಏರಿಕೆಯಾಗಿದ್ದು, 49,392 ಜನರು ಸೋಂಕಿನಿಂದ ಗುಣಮುಖರಾಗಿದ್ದಾರೆ ಹಾಗೂ ಸಕ್ರಿಯ ಪ್ರಕರಣಗಳ ಸಂಖ್ಯೆ 33,432ಕ್ಕೆ ಏರಿಕೆಯಾಗಿದೆ. ಇಲ್ಲಿ ಕೋವಿಡ್ ಸಂಬಂಧಿತ 1360 ಸಾವು ಸಂಭವಿಸಿದೆ.

ಬಳ್ಳಾರಿ ಜಿಲ್ಲೆಯಲ್ಲಿ ಒಟ್ಟು 13,048 ಕೋವಿಡ್ 19 ಸೋಂಕಿನ ಪ್ರಕರಣಗಳು ದಾಖಲಾಗಿದ್ದು 6948 ಜನ ಸೋಂಕಿತರು ಗುಣಮುಖರಾಗಿದ್ದಾರೆ ಮತ್ತು 5952 ಸಕ್ರಿಯ ಪ್ರಕರಣಗಳು ಜಿಲ್ಲೆಯಲ್ಲಿವೆ. ಇಲ್ಲಿ ಕೋವಿಡ್ 19 ಸಂಬಂಧಿತ 148 ಸಾವು ಸಂಭವಿಸಿದೆ.

ಮೈಸೂರು ಜಿಲ್ಲೆಯಲ್ಲಿ 9280 ಕೋವಿಡ್ ಸೋಂಕಿನ ಪ್ರಕರಣಗಳು ದಾಖಲಾಗಿದ್ದು 5830 ಜನ ಸೋಂಕಿತರು ಗುಣಮುಖರಾಗಿದ್ದಾರೆ ಮತ್ತು 3166 ಸಕ್ರಿಯ ಪ್ರಕರಣಗಳು ಜಿಲ್ಲೆಯಲ್ಲಿವೆ. ಇಲ್ಲಿ ಕೋವಿಡ್ 19 ಸಂಬಂಧಿತ 284 ಸಾವು ಸಂಭವಿಸಿದೆ.

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಪಾಸಿಟಿವ್ ಪ್ರಕರಣಗಳ ಸಂಖ್ಯೆ 8373ಕ್ಕೆ ಏರಿಕೆಯಾಗಿದ್ದು ಇವರಲ್ಲಿ 6106 ಸೋಂಕಿತರು ಗುಣಮುಖರಾಗಿದ್ದಾರೆ. 2011 ಸಕ್ರಿಯ ಪ್ರಕರಣಗಳು ಜಿಲ್ಲೆಯಲ್ಲಿವೆ ಹಾಗೂ ಇಲ್ಲಿ ಕೋವಿಡ್ ಸಂಬಂಧಿತ 254 ಸಾವು ಸಂಭವಿಸಿದೆ. ಬೆಂಗಳೂರು ನಗರ (1360) ಹಾಗೂ ಮೈಸೂರು (284) ಜಿಲ್ಲೆಗಳ ಬಳಿಕ ಕೋವಿಡ್ 19 ಸಂಬಂಧಿ ಅತೀ ಹೆಚ್ಚಿನ ಸಾವು ಸಂಭವಿಸಿರುವ ಜಿಲ್ಲೆ ಇದಾಗಿದೆ.

ಕಲಬುರಗಿಯಲ್ಲಿ ಒಟ್ಟು 8351 ಪಾಸಿಟಿವ್ ಪ್ರಕರಣಗಳು ದಾಖಲಾಗಿದ್ದು, ಇದರಲ್ಲಿ 6150 ಸೋಂಕಿತರು ಸಂಪೂರ್ಣವಾಗಿ ಗುಣಮುಖರಾಗಿದ್ದಾರೆ. 2042 ಸಕ್ರಿಯ ಪ್ರಕರಣಗಳು ಜಿಲ್ಲೆಯಲ್ಲಿವೆ ಹಾಗೂ ಇಲ್ಲಿ 159 ಜನರು ಈ ಸೋಂಕಿಗೆ ಮೃತಪಟ್ಟಿದ್ದಾರೆ.

ಉಡುಪಿ ಜಿಲ್ಲೆಯಲ್ಲಿ 7496 ಕೋವಿಡ್ 19 ಸೋಂಕಿನ ಪ್ರಕರಣಗಳು ದಾಖಲಾಗಿದ್ದು 4752 ಜನರು ಸಂಪೂರ್ಣವಾಗಿ ಗುಣಮುಖರಾಗಿದ್ದಾರೆ ಹಾಗೂ ಜಿಲ್ಲೆಯಲ್ಲಿ 2667 ಸಕ್ರಿಯ ಪ್ರಕರಣಗಳಿವೆ. ಇಲ್ಲಿ ಕೋವಿಡ್ 19 ಸೋಂಕು ಸಂಬಂಧಿ 77 ಸಾವಿನ ಪ್ರಕರಣಗಳು ದಾಖಲಾಗಿದೆ.

ಧಾರವಾಡ ಜಿಲ್ಲೆಯಲ್ಲಿ 7147 ಕೋವಿಡ್ ಸೋಂಕಿನ ಪ್ರಕರಣಗಳು ದಾಖಲಾಗಿದ್ದು 4524 ಜನ ಸೋಂಕಿತರು ಗುಣಮುಖರಾಗಿದ್ದಾರೆ ಮತ್ತು 2401 ಸಕ್ರಿಯ ಪ್ರಕರಣಗಳು ಜಿಲ್ಲೆಯಲ್ಲಿವೆ. ಇಲ್ಲಿ ಕೋವಿಡ್ 19 ಸಂಬಂಧಿತ 222 ಸಾವು ಸಂಭವಿಸಿದೆ.

ಬೆಳಗಾವಿ ಜಿಲ್ಲೆಯಲ್ಲಿ 6958 ಕೋವಿಡ್ ಸೋಂಕಿನ ಪ್ರಕರಣಗಳು ದಾಖಲಾಗಿದ್ದು 3063 ಜನ ಸೋಂಕಿತರು ಗುಣಮುಖರಾಗಿದ್ದಾರೆ ಮತ್ತು 3782 ಸಕ್ರಿಯ ಪ್ರಕರಣಗಳು ಜಿಲ್ಲೆಯಲ್ಲಿವೆ. ಇಲ್ಲಿ ಕೋವಿಡ್ 19 ಸಂಬಂಧಿತ 113 ಸಾವು ಸಂಭವಿಸಿದೆ.

ಟಾಪ್ ನ್ಯೂಸ್

ಲೋಕಸಭಾ ಚುನಾವಣೆ: ಪಕ್ಷೇತರ ಅಭ್ಯರ್ಥಿಯಾಗಿ ಕಣಕ್ಕಿಳಿಯಲಿದ್ದಾರ ಸೂರಜ ನಾಯ್ಕ ಸೋನಿ ?

ಲೋಕಸಭಾ ಚುನಾವಣೆ: ಪಕ್ಷೇತರ ಅಭ್ಯರ್ಥಿಯಾಗಿ ಕಣಕ್ಕಿಳಿಯಲಿದ್ದಾರ ಸೂರಜ್ ನಾಯ್ಕ ಸೋನಿ ?

jds

JDS; ಮೂವರು ಅಭ್ಯರ್ಥಿಗಳ ಪಟ್ಟಿ ಪ್ರಕಟ: ಕೋಲಾರಕ್ಕೆ ಮಲ್ಲೇಶ್ ಬಾಬು

Rameshwaram Cafe ಪ್ರಕರಣ: ಇಬ್ಬರು ಶಂಕಿತರ ಮಾಹಿತಿ ನೀಡಿದವರಿಗೆ 10 ಲಕ್ಷ ಬಹುಮಾನ ಘೋಷಣೆ

Rameshwaram Cafe ಪ್ರಕರಣ: ಇಬ್ಬರು ಶಂಕಿತರ ಮಾಹಿತಿ ನೀಡಿದವರಿಗೆ ಬಹುಮಾನ ಘೋಷಣೆ ಮಾಡಿದ NIA

prahlad-joshi

LS Election; ದಿಂಗಾಲೇಶ್ವರ ಶ್ರೀ ಟೀಕೆ ನನಗೆ ಆಶೀರ್ವಾದ ಇದ್ದಂತೆ: ಪ್ರಹ್ಲಾದ್ ಜೋಶಿ

1-wewqeq

Kejriwal ಪತ್ನಿಯನ್ನು ರಾಬ್ರಿ ದೇವಿಗೆ ಹೋಲಿಸಿದ ಕೇಂದ್ರ ಸಚಿವ ಹರ್ದೀಪ್ ಪುರಿ

1-eqqwqw

Mukhtar Ansari ಸಾವಿನ ಪ್ರಕರಣ: ನ್ಯಾಯಾಂಗ ತನಿಖೆಗೆ ಆದೇಶಿಸಿದ ಕೋರ್ಟ್

ವಿಕಸಿತ ಭಾರತದಂತಹ ಬಲಾಢ್ಯ ಕಲ್ಪನೆ ಕಾಂಗ್ರೆಸ್ ಇನ್ನೆಷ್ಟು ವರ್ಷ ಆಳ್ವಿಕೆ ಮಾಡಿದರೂ ಬಾರದು

ವಿಕಸಿತ ಭಾರತದಂತ ಬಲಾಢ್ಯ ಕಲ್ಪನೆ ಕಾಂಗ್ರೆಸ್ ಎಷ್ಟು ವರ್ಷ ಆಳ್ವಿಕೆ ಮಾಡಿದರೂ ಸಾಧ್ಯವಾಗದು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Lok Sabha Election: ಮಹಿಳೆ ಅಡುಗೆ ಮನೆಗಷ್ಟೇ ಸೀಮಿತವಲ್ಲ: ಗಾಯತ್ರಿ ಸಿದ್ದೇಶ್ವರ

Lok Sabha Election: ಮಹಿಳೆ ಅಡುಗೆ ಮನೆಗಷ್ಟೇ ಸೀಮಿತವಲ್ಲ: ಗಾಯತ್ರಿ ಸಿದ್ದೇಶ್ವರ

ಲೋಕಸಭಾ ಚುನಾವಣೆ: ಪಕ್ಷೇತರ ಅಭ್ಯರ್ಥಿಯಾಗಿ ಕಣಕ್ಕಿಳಿಯಲಿದ್ದಾರ ಸೂರಜ ನಾಯ್ಕ ಸೋನಿ ?

ಲೋಕಸಭಾ ಚುನಾವಣೆ: ಪಕ್ಷೇತರ ಅಭ್ಯರ್ಥಿಯಾಗಿ ಕಣಕ್ಕಿಳಿಯಲಿದ್ದಾರ ಸೂರಜ್ ನಾಯ್ಕ ಸೋನಿ ?

jds

JDS; ಮೂವರು ಅಭ್ಯರ್ಥಿಗಳ ಪಟ್ಟಿ ಪ್ರಕಟ: ಕೋಲಾರಕ್ಕೆ ಮಲ್ಲೇಶ್ ಬಾಬು

Rameshwaram Cafe ಪ್ರಕರಣ: ಇಬ್ಬರು ಶಂಕಿತರ ಮಾಹಿತಿ ನೀಡಿದವರಿಗೆ 10 ಲಕ್ಷ ಬಹುಮಾನ ಘೋಷಣೆ

Rameshwaram Cafe ಪ್ರಕರಣ: ಇಬ್ಬರು ಶಂಕಿತರ ಮಾಹಿತಿ ನೀಡಿದವರಿಗೆ ಬಹುಮಾನ ಘೋಷಣೆ ಮಾಡಿದ NIA

ವಿಕಸಿತ ಭಾರತದಂತಹ ಬಲಾಢ್ಯ ಕಲ್ಪನೆ ಕಾಂಗ್ರೆಸ್ ಇನ್ನೆಷ್ಟು ವರ್ಷ ಆಳ್ವಿಕೆ ಮಾಡಿದರೂ ಬಾರದು

ವಿಕಸಿತ ಭಾರತದಂತ ಬಲಾಢ್ಯ ಕಲ್ಪನೆ ಕಾಂಗ್ರೆಸ್ ಎಷ್ಟು ವರ್ಷ ಆಳ್ವಿಕೆ ಮಾಡಿದರೂ ಸಾಧ್ಯವಾಗದು

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

Lok Sabha Election: ಮಹಿಳೆ ಅಡುಗೆ ಮನೆಗಷ್ಟೇ ಸೀಮಿತವಲ್ಲ: ಗಾಯತ್ರಿ ಸಿದ್ದೇಶ್ವರ

Lok Sabha Election: ಮಹಿಳೆ ಅಡುಗೆ ಮನೆಗಷ್ಟೇ ಸೀಮಿತವಲ್ಲ: ಗಾಯತ್ರಿ ಸಿದ್ದೇಶ್ವರ

Kannada Cinema; ಚಿತ್ರೀಕರಣ ಮುಗಿಸಿದ ‘ವಿದ್ಯಾರ್ಥಿ ವಿದ್ಯಾರ್ಥಿನಿಯರೇ’

Kannada Cinema; ಚಿತ್ರೀಕರಣ ಮುಗಿಸಿದ ‘ವಿದ್ಯಾರ್ಥಿ ವಿದ್ಯಾರ್ಥಿನಿಯರೇ’

ಲೋಕಸಭಾ ಚುನಾವಣೆ: ಪಕ್ಷೇತರ ಅಭ್ಯರ್ಥಿಯಾಗಿ ಕಣಕ್ಕಿಳಿಯಲಿದ್ದಾರ ಸೂರಜ ನಾಯ್ಕ ಸೋನಿ ?

ಲೋಕಸಭಾ ಚುನಾವಣೆ: ಪಕ್ಷೇತರ ಅಭ್ಯರ್ಥಿಯಾಗಿ ಕಣಕ್ಕಿಳಿಯಲಿದ್ದಾರ ಸೂರಜ್ ನಾಯ್ಕ ಸೋನಿ ?

jds

JDS; ಮೂವರು ಅಭ್ಯರ್ಥಿಗಳ ಪಟ್ಟಿ ಪ್ರಕಟ: ಕೋಲಾರಕ್ಕೆ ಮಲ್ಲೇಶ್ ಬಾಬು

Rameshwaram Cafe ಪ್ರಕರಣ: ಇಬ್ಬರು ಶಂಕಿತರ ಮಾಹಿತಿ ನೀಡಿದವರಿಗೆ 10 ಲಕ್ಷ ಬಹುಮಾನ ಘೋಷಣೆ

Rameshwaram Cafe ಪ್ರಕರಣ: ಇಬ್ಬರು ಶಂಕಿತರ ಮಾಹಿತಿ ನೀಡಿದವರಿಗೆ ಬಹುಮಾನ ಘೋಷಣೆ ಮಾಡಿದ NIA

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.