ಊರಿಗೆ ಹೋಗ್ಬೇಕು ಬಿಡಿ: ರೊಚ್ಚಿಗೆದ್ದ ವಲಸಿಗರಿಂದ ಕೈಗಾಡಿಗಳಿಗೆ ಬೆಂಕಿ; 80 ಮಂದಿ ಬಂಧನ
ಲಾಕ್ ಡೌನ್ ನಿಂದಾಗಿ ನೂರಾರು ವಲಸೆ ಕಾರ್ಮಿಕರು ಸೂರತ್ ನಲ್ಲಿ ಸಿಲುಕಿ ಹಾಕಿಕೊಂಡಿದ್ದಾರೆ.
Team Udayavani, Apr 11, 2020, 1:21 PM IST
Representative Image
ಗುಜರಾತ್(ಸೂರತ್):ಕೋವಿಡ್ 19 ತಡೆಗಟ್ಟಲು ಘೋಷಿಸಿರುವ ಲಾಕ್ ಡೌನ್ ನಿಂದ ರೋಸಿ ಹೋದ ವಲಸಿಗ ಕಾರ್ಮಿಕರು ತಮ್ಮ ಊರುಗಳಿಗೆ ಹೋಗಲು ಅನುಮತಿ ನೀಡಬೇಕೆಂದು ಆಕ್ರೋಶವ್ಯಕ್ತಪಡಿಸಿ ಕೈಗಾಡಿಗಳಿಗೆ, ಟಯರ್ ಗಳಿಗೆ ಬೆಂಕಿ ಹಚ್ಚಿರುವ ಘಟನೆ ಸೂರತ್ ನಲ್ಲಿ ನಡೆದಿದೆ. ಘಟನೆಗೆ ಸಂಬಂಧಿಸಿದಂತೆ 80 ಮಂದಿ ವಲಸಿಗ ಕಾರ್ಮಿಕರನ್ನು ಬಂಧಿಸಲಾಗಿದೆ ಎಂದು ಸೂರತ್ ಪೊಲೀಸರು ತಿಳಿಸಿದ್ದಾರೆ.
ಅಧಿಕಾರಿಗಳ ಹೇಳಿಕೆ ಉಲ್ಲೇಖಿಸಿ ವರದಿ ಮಾಡಿರುವ ಪಿಟಿಐ, ಲಾಕ್ ಡೌನ್ ನಿಂದಾಗಿ ನೂರಾರು ವಲಸೆ ಕಾರ್ಮಿಕರು ಸೂರತ್ ನಲ್ಲಿ ಸಿಲುಕಿ ಹಾಕಿಕೊಂಡಿದ್ದು, ಇದರಿಂದ ರೊಚ್ಚಿಗೆದ್ದ ಅವರು ಕೈಗಾಡಿ ಹಾಗೂ ಟಯರ್ ಗಳಿಗೆ ಶುಕ್ರವಾರ ತಡರಾತ್ರಿ ಬೆಂಕಿಹಚ್ಚಿರುವ ಘಟನೆ ಲಕ್ ಸಾನಾ ಪ್ರದೇಶದಲ್ಲಿ ನಡೆದಿದೆ ಎಂದು ತಿಳಿಸಿದೆ.
ಘಟನಾ ಸ್ಥಳಕ್ಕೆ ಭಾರೀ ಪ್ರಮಾಣದಲ್ಲಿ ಪೊಲೀಸರನ್ನು ರವಾನಿಸಲಾಗಿದ್ದು, ಪರಿಸ್ಥಿತಿ ನಿಯಂತ್ರಣದಲ್ಲಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಒಡಿಶಾ ಮೂಲದ ನೂರಾರು ಕಾರ್ಮಿಕರು ರಸ್ತೆಗೆ ಬಂದು ತಮ್ಮನ್ನು ಊರಿಗೆ ಹೋಗಲು ಬಿಡಿ ಎಂದು ಘೋಷಣೆ ಕೂಗಿರುವುದಾಗಿ ವರದಿ ತಿಳಿಸಿದೆ.
ಎನ್ ಜಿಒಗಳಲ್ಲಿ ನೀಡುತ್ತಿರುವ ಊಟ ರುಚಿರಹಿತವಾಗಿದೆ. ಅಲ್ಲದೇ ಊಟಕ್ಕಾಗಿ ಗಂಟೆಗಟ್ಟಲೆ ಸರದಿ ಸಾಲಿನಲ್ಲಿ ನಿಲ್ಲಬೇಕಾಗಿದೆ ಎಂದು ವಲಸೆ ಕಾರ್ಮಿಕರು ಆಕ್ರೋಶ ವ್ಯಕ್ತಪಡಿಸಿರುವುದಾಗಿ ವರದಿ ಹೇಳಿದೆ.
ಘಟನೆಗೆ ಸಂಬಂಧಿಸಿದಂತೆ ನಾವು 80 ಮಂದಿ ವಲಸೆ ಕಾರ್ಮಿಕರನ್ನು ಬಂಧಿಸಿದ್ದೇವೆ. ಪರಿಸ್ಥಿತಿಯನ್ನು ನಿಯಂತ್ರಿಸಲು ಕಠಿಣ ಕ್ರಮ ತೆಗೆದುಕೊಳ್ಳಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.ಲಾಕ್ ಡೌನ್ ವೇಳೆ ಜನರ ಚಲನವಲನದ ಮೇಲೆ ಕಣ್ಗಾವಲು ಇಡಲು ಸೂರತ್ ಪೊಲೀಸರು ಡ್ರೋಣ್ ಮೊರೆ ಹೋಗಿರುವುದಾಗಿ ವರದಿ ವಿವರಿಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Doordarshan; ವ್ಯಾಪಕ ಟೀಕೆಗೆ ಕಾರಣವಾದ ಡಿಡಿ ನ್ಯೂಸ್ ಹೊಸ ಲೋಗೋ
ಅಂಡಾಶಯದ ಕ್ಯಾನ್ಸರ್ ನಿಂದ 30 ರ ಹರೆಯದಲ್ಲಿ ಖ್ಯಾತ ಫ್ಯಾಷನ್ ಇನ್ ಫ್ಲುಯೆನ್ಸರ್ ನಿಧನ
Lok Sabha Election 2024: ಝಾರ್ಖಂಡ್, ಛತ್ತೀಸ್ಗಢದಲ್ಲಿ ಗೆಲುವು ಯಾರಿಗೆ?
ಗ್ಯಾಂಗ್ ಸ್ಟರ್ ಬಿಷ್ಣೋಯಿ ಹೆಸರಿನಿಂದ ಸಲ್ಮಾನ್ ಮನೆಯಿಂದ ಕ್ಯಾಬ್ ಬುಕ್: ಯುವಕ ಅರೆಸ್ಟ್
Snake: 50 ಅಡಿ ಉದ್ದದ ದೈತ್ಯ ಹಾವು “ವಾಸುಕಿ’!
MUST WATCH
ಹೊಸ ಸೇರ್ಪಡೆ
Udupi: ನಿಟ್ಟೂರಿನಲ್ಲಿ ಬಸ್ ಢಿಕ್ಕಿಯಾಗಿ ಬೈಕ್ ಸವಾರ ದಾರುಣ ಸಾವು
Congress ಟ್ಯಾಕ್ಸ್ ಸಿಟಿಯನ್ನು ಟ್ಯಾಂಕರ್ ಸಿಟಿ ಮಾಡಿದೆ: ಬೆಂಗಳೂರಿನಲ್ಲಿ ಮೋದಿ
Kollywood: 18 ವರ್ಷದ ಬಳಿಕ ಪತಿ ಸೂರ್ಯ ಜೊತೆ ನಟಿಸಲಿದ್ದಾರೆ ಜ್ಯೋತಿಕಾ
ಸರ್ವರಿಗೂ ಸಮಪಾಲು ಸಮಬಾಳು ನೀಡಿದ ಕಾಂಗ್ರೆಸ್ ಪಕ್ಷಕ್ಕೆ ಮತ ನೀಡಿ: ಗೀತಾ ಶಿವರಾಜ್ ಕುಮಾರ್
Love Jihad ಹೆಸರಲ್ಲಿ ಒಂದು ಗುಂಪಿಗೆ ತರಬೇತಿ: ಜಗದೀಶ್ ಶೆಟ್ಟರ್ ಗಂಭೀರ ಆರೋಪ