ಚಿತ್ರ ಬಿಡುಗಡೆಗೆ ಭಿನ್ನ ಮಾರ್ಗ; ಬೋಟ್‌ನಲ್ಲಿ ಕುಳಿತು ಚಿತ್ರ ನೋಡಿ

ಚಿತ್ರ ವೀಕ್ಷಣೆಗೆ ಪ್ರೇಕ್ಷಕರನ್ನು ಆಕರ್ಷಿಸಲು ಹೊಸ ಮಾರ್ಗ

Team Udayavani, Jul 10, 2020, 10:45 AM IST

ಚಿತ್ರ ಬಿಡುಗಡೆಗೆ ಭಿನ್ನ ಮಾರ್ಗ; ಬೋಟ್‌ನಲ್ಲಿ ಕುಳಿತು ಚಿತ್ರ ನೋಡಿ

ಸಾಂದರ್ಭಿಕ ಚಿತ್ರ

ಪ್ಯಾರಿಸ್‌ : ವಿಶ್ವದ್ಯಾಂತ ಅನ್‌ಲಾಕ್‌ ಪ್ರಕ್ರಿಯೆ ಪ್ರಾರಂಭಗೊಂಡಿದ್ದು, ಮಾಲ್‌ಗ‌ಳು ತೆರವೂಗೊಂಡಿವೆ. ಆದರೆ ಚಿತ್ರಮಂದಿರಗಳು ಮಾತ್ರ ಇನ್ನು ಲಾಕ್‌ ಹಾಗೇ ಇದ್ದು, ತೆರವುಗೊಳಿಸುವ ಭಾಗ್ಯ ಇನ್ನು ಬಹಳ ದೂರ ಇದೆ ಎಂಬ ಅಭಿಪ್ರಾಯಗಳು ಕೇಳಿ ಬರುತ್ತಿದೆ. ಹೀಗಾಗಿ ಓಟಿಟಿಯಲ್ಲಿಯೇ ಚಿತ್ರಗಳನ್ನು ಬಿಡುಗಡೆ ಮಾಡಲಾಗುತ್ತಿದೆ. ಇದು ಚಿತ್ರಮಂದಿರಗಳ ಆಕರ್ಷಣೆಯನ್ನೇ ಕುಗ್ಗಿಸಲಿದೆ ಎಂಬ ಆತಂಕ ಚಿತ್ರಮಂದಿರಗಳ ಮಾಲಕರನ್ನು ಕಾಡುತ್ತಿದೆ.
ಈ ಹಿನ್ನೆಲ್ಲಿಯಲ್ಲಿಯೇ ಪ್ರಪಂಚದ್ಯಾಂತ ಚಿತ್ರಗಳ ಬಿಡುಗಡೆಗಾಗಿ ವಿಭಿನ್ನ ಮಾರ್ಗಗಳನ್ನು ಕಂಡುಕೊಳ್ಳುತ್ತಿದ್ದು, ಸಾರ್ವಜನಿಕವಾಗಿ ಶೋಗಳನ್ನು ಏರ್ಪಡಿಸುತ್ತಿವೆ.

ಬೋಟಿಂಗ್‌ ಚಿತ್ರಮಂದಿರ
ಫ್ರಾನ್ಸ್ ಲಾಕ್‌ಡೌನ್‌ ಬಳಿಕ ಅನ್‌ಲಾಕ್‌ ಸ್ಥಿತಿಯತ್ತ ಮುಖ ಮಾಡಿದೆ. ಬೆಸಗೆ ಚಟುವಟಿಕೆಗಳ ಆರಂಭಕ್ಕೆ ಕ್ಷಣಗಣನೆ ಆರಂಭವಾಗಿದೆ. ಇದನ್ನು ವಿಶಿಷ್ಟವಾಗಿ ಶುರು ಮಾಡಲು ಅಲ್ಲಿ ನಿರ್ಧರಿಸಲಾಗಿದೆ. ಇದಕ್ಕಾಗಿ ತೇಲುವ ಥಿಯೇಟರ್‌ ಕಾರ್ಯ ನಿರ್ವಹಿಸಲಿದೆ. ಪ್ಯಾರಿಸ್‌ನ ನದಿಯ ಮೇಲೆ ಬೋಟ್‌ಗಳಲ್ಲಿ ಕುಳಿತು ಸಿನಿಮಾ ನೋಡಬಹುದು. ಅದೂ ಕೂಡ ವ್ಯಕ್ತಿಗತ ಅಂತರ ಕಾಯ್ದುಕೊಂಡು. ಪ್ರತಿ ಬೇಸಿಗೆಯಲ್ಲಿ ಇಲ್ಲಿನ ಸಿಯನ್ನಾ ನದಿ ತೀರದಲ್ಲಿ ನಿರ್ಮಿಸಲಾಗುವ ಕೃತಕ ಬೀಚ್‌​ಗಳಲ್ಲಿ ನಡೆಸಲಾಗುವ ಪ್ಯಾರಿಸ್‌ ಪ್ಲೇಗಸ್‌ಉತ್ಸವದಲ್ಲಿ ಈ ತೇಲುವ ಥಿಯೇಟರ್‌ ಪರಿಕಲ್ಪನೆ ಸಿದ್ಧಪಡಿಸಲಾಗಿದೆ. ಸುಮಾರು 38 ಬೋಟ್‌ಗಳು ಕೆರೆಯ ರೀತಿ ಇರುವ ಪ್ರದೇಶದಲ್ಲಿ ಇರಬಹುದು. ಕೆಲವು ಬೋಟ್‌ಗಳಲ್ಲಿ ಇಬ್ಬರು ಕೂರಬಹುದಾದರೆ, ಇನ್ನು ಕೆಲವು ಬೋಟ್‌ಗಳಲ್ಲಿ ಆರು ಮಂದಿಯವರೆಗೆ ಕೂರಬಹುದು. ಇದರಲ್ಲಿ ಆರಾಮದಾಯಕ ಸೀಟುಗಳನ್ನು ಅಳವಡಿಸಲಾಗಿದ್ದು ವಿಶಿಷ್ಟ ಅನುಭವ ನೀಡಲಿದೆ ಎಂದು ಆಯೋಜಕರು ತಿಳಿಸಿದ್ದಾರೆ.

ಪ್ರವೇಶ ಶುಲ್ಕವಿಲ್ಲ
ಇದಕ್ಕೆ ಯಾವುದೇ ಪ್ರವೇಶ ಶುಲ್ಕವಿಲ್ಲ. ಬೋಟ್‌ಗಳಲ್ಲಿ ಪ್ರಯಾಣಿಸಲು ಟಿಕೆಟ್‌ ಪಡೆದು ಸಿನಿಮಾ ವೀಕ್ಷಿಸಬಹುದು ಎಂದು ಆಯೋಜಕರು ತಿಳಿಸಿದ್ದಾರೆ. ಜುಲೈ 18ರಂದು ಪ್ರದರ್ಶನ ಇರಲಿದ್ದು, 15ರವರೆಗೆ ಸ್ಥಳೀಯರು ಟಿಕೆಟ್‌ ಕಾದಿರಿಸಬಹುದು. ಇನ್ನು ಈ ಹಿಂದೆ ಅಮೆರಿಕದಲ್ಲಿ ಡ್ರೈವ್-ಇನ್‌ ಚಿತ್ರಮಂದಿರಗಳ ಕಲ್ಪನೆಗೆ ಮತ್ತೆ ಚಾಲನೆ ಸಿಕ್ಕಿದ್ದು, ಪಾರ್ಕಿಂಗ್‌ ತಾಣದಲ್ಲಿ ಬೃಹತ್‌ ಪರದೆಗಳ ಮೇಲೆ  ಸಿನಿಮಾ ಪ್ರದರ್ಶಿಸಿದರೆ, ಜನರು ತಮ್ಮ ವಾಹನಗಳಲ್ಲಿಯೇ ಕುಳಿತು ಚಿತ್ರ ನೋಡುವ ವ್ಯವಸ್ಥೆ ಮಾಡಲಾಗಿತ್ತು.

ಟಾಪ್ ನ್ಯೂಸ್

Outrage over mistakes in CET exam question paper; Request for mercy marks

CET ಪರೀಕ್ಷೆ ಪ್ರಶ್ನೆಪತ್ರಿಕೆಯಲ್ಲಿ ಲೋಪಕ್ಕೆ ಆಕ್ರೋಶ; ಕೃಪಾಂಕಕ್ಕೆ ಆಗ್ರಹ

1-qweeweq

Viral video; ಯಾರಿವರು ಇಶಾ ಅರೋರಾ? ಮತದಾನದ ದಿನ ಭಾರಿ ಸುದ್ದಿ

New Jersey: ಸ್ಥಳೀಯ ಶಾಪ್‌ ನಲ್ಲಿ ಕಳ್ಳತನ- ಇಬ್ಬರು ಭಾರತೀಯ ವಿದ್ಯಾರ್ಥಿನಿಯರ ಬಂಧನ

New Jersey: ಸ್ಥಳೀಯ ಶಾಪ್‌ ನಲ್ಲಿ ಕಳ್ಳತನ- ಇಬ್ಬರು ಭಾರತೀಯ ವಿದ್ಯಾರ್ಥಿನಿಯರ ಬಂಧನ

RCB; ಸುಮ್ಮನೆ ಒಪ್ಪಂದಕ್ಕೆ ಸಹಿ ಹಾಕು…: ವಿರಾಟ್ ಜತೆಗಿನ ಮಾತುಕತೆ ನೆನೆದ ಕೆ.ಎಲ್ ರಾಹುಲ್

RCB; ಸುಮ್ಮನೆ ಒಪ್ಪಂದಕ್ಕೆ ಸಹಿ ಹಾಕು…: ವಿರಾಟ್ ಜತೆಗಿನ ಮಾತುಕತೆ ನೆನೆದ ಕೆ.ಎಲ್ ರಾಹುಲ್

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರಕಾರ ಬದ್ದ: ಸತೀಶ್ ಜಾರಕಿಹೊಳಿ

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರ್ಕಾರ ಬದ್ಧ: ಸತೀಶ್ ಜಾರಕಿಹೊಳಿ

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!

Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್‌ರಿಂದ ಪರಿಶೀಲನೆ

Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್‌ರಿಂದ ಪರಿಶೀಲನೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Covid-19: ಕೋವಿಡ್ ಭೀತಿ; ಮೂರು ರಾಜ್ಯಗಳಲ್ಲಿ ಮಾಸ್ಕ್‌ ಕಡ್ಡಾಯ

Covid-19: ಕೋವಿಡ್ ಭೀತಿ; ಮೂರು ರಾಜ್ಯಗಳಲ್ಲಿ ಮಾಸ್ಕ್‌ ಕಡ್ಡಾಯ

UP government mandates Covid testing for arriving international passengers

Covid 19 ವಿದೇಶದಿಂದ ಬರುವವರಿಗೆ ಕೋವಿಡ್ ಟೆಸ್ಟ್ ಕಡ್ಡಾಯ ಮಾಡಿದ ಉತ್ತರ ಪ್ರದೇಶ ಸರ್ಕಾರ

mansukh mandaviya

ಕೋವಿಡ್ ಗೂ ಹೃದಯಾಘಾತಕ್ಕೂ ಸಂಬಂಧವಿದೆಯೇ? ಉತ್ತರ ನೀಡಿದ ಕೇಂದ್ರ ಆರೋಗ್ಯ ಸಚಿವ

India Sees Single-Day Rise Of Over 1,000 Covid-19 Cases

ಎಚ್3ಎನ್2 ಭೀತಿಯ ಮಧ್ಯೆ ಕೋವಿಡ್ ಏರಿಕೆ; ಒಂದೇ ದಿನ ಸಾವಿರ ದಾಟಿದ ಸೋಂಕಿತರ ಸಂಖ್ಯೆ

ಕೋವಿಡ್ 19 ಲಸಿಕೆಯಿಂದ ಅಡ್ಡಪರಿಣಾಮ ಇರೋದು ನಿಜ: RTIನಲ್ಲಿ ಕೇಂದ್ರದ ಉತ್ತರ ಬಹಿರಂಗ

ಕೋವಿಡ್ 19 ಲಸಿಕೆಯಿಂದ ಅಡ್ಡಪರಿಣಾಮ ಇರೋದು ನಿಜ: RTIನಲ್ಲಿ ಕೇಂದ್ರದ ಉತ್ತರ ಬಹಿರಂಗ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

1-qeqwqwe

Kumta: ಮಾಜಿ ಶಾಸಕಿ ಶಾರದಾ ಮೋಹನ್ ಶೆಟ್ಟಿ ಮರಳಿ ಕಾಂಗ್ರೆಸ್ ಸೇರ್ಪಡೆ

4-udupi

Udupi: ರಮಾಬಾಯಿ ಕೊಚ್ಚಿಕಾರ್‌ ಪೈ ನಿಧನ

1-aaa

Bajpe: ಹೆದ್ದಾರಿಯಲ್ಲಿ ಬ್ರೇಕ್ ಫೇಲ್ ಆಗಿ ಅಂಗಡಿಗಳು, ಹಲವು ವಾಹನಗಳಿಗೆ ಗುದ್ದಿದ ಲಾರಿ!

ಧರ್ಮ ಮಾರ್ಗದಲ್ಲಿ ನಡೆದರಷ್ಟೇ ಜೀವನ ಸಾರ್ಥಕ: ಶ್ರೀ ವಿಧುಶೇಖರಶ್ರೀ

ಧರ್ಮ ಮಾರ್ಗದಲ್ಲಿ ನಡೆದರಷ್ಟೇ ಜೀವನ ಸಾರ್ಥಕ: ಶ್ರೀ ವಿಧುಶೇಖರಶ್ರೀ

Outrage over mistakes in CET exam question paper; Request for mercy marks

CET ಪರೀಕ್ಷೆ ಪ್ರಶ್ನೆಪತ್ರಿಕೆಯಲ್ಲಿ ಲೋಪಕ್ಕೆ ಆಕ್ರೋಶ; ಕೃಪಾಂಕಕ್ಕೆ ಆಗ್ರಹ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.