ಕೋವಿಡ್ ನಿಂದ ಶೈಕ್ಷಣಿಕ ತುರ್ತು ಪರಿಸ್ಥಿತಿ: ಯುನಿಸೆಫ್ ನಿಂದ ಆಘಾತಕಾರಿ ಹೇಳಿಕೆ

ಕೋವಿಡ್‌ ಪಿಡುಗಿನ ಬೆಳವಣಿಗೆಯಿಂದಾಗಿ ಆಫ್ರಿಕಾದ ಸಹರಾ ಉಪ ವಲಯವು ತೀವ್ರ ತೊಂದರೆಗೊಳಗಾಗಿದೆ.

Team Udayavani, Aug 29, 2020, 3:55 PM IST

ಕೋವಿಡ್ ನಿಂದ ಶೈಕ್ಷಣಿಕ ತುರ್ತು ಪರಿಸ್ಥಿತಿ: ಯುನಿಸೆಫ್ ನಿಂದ ಆಘಾತಕಾರಿ ಹೇಳಿಕೆ

ವಿಶ್ವಸಂಸ್ಥೆ: ಕೋವಿಡ್‌-19 ಪಿಡುಗಿನಿಂದಾಗಿ ಶಾಲೆ, ಕಾಲೇಜುಗಳು ಮುಚ್ಚಿದ್ದರಿಂದ ಜಾಗತಿಕ ಶಿಕ್ಷಣ ಕ್ಷೇತ್ರದಲ್ಲಿ ತುರ್ತು ಪರಿಸ್ಥಿತಿ ನಿರ್ಮಾಣವಾಗಿದೆ ಎಂದು ವಿಶ್ವಸಂಸ್ಥೆಯ ಮಕ್ಕಳ ಸಂಸ್ಥೆ ಯುನಿಸೆಫ್ ಹೇಳಿದೆ. ಕೋವಿಡ್‌ ಸುರಕ್ಷಾ ಲಾಕ್‌ಡೌನ್‌ನಿಂದಾಗಿ ಶಾಲೆ, ಕಾಲೇಜುಗಳು ಬಾಗಿಲು ತೆರೆಯದ ಕಾರಣ ವಿಶ್ವದ ಮೂರನೇ ಒಂದು ಭಾಗದಷ್ಟು ಮಕ್ಕಳು ಶಿಕ್ಷಣದಿಂದ ವಂಚಿತರಾಗಿದ್ದಾರೆ. ಇದು ಜಾಗತಿಕ ಶಿಕ್ಷಣ ಕ್ಷೇತ್ರದ ತುರ್ತು ಪರಿಸ್ಥಿತಿಗೆ ನಾಂದಿ ಹಾಡಿದೆ ಎಂದು ಯುನಿಸೆಫ್ ವರದಿ ಆತಂಕ ವ್ಯಕ್ತಪಡಿಸಿದೆ.

ಕೋವಿಡ್ ಅವಧಿಯಲ್ಲಿ ವಿಶ್ವದಾದ್ಯಂತ ಶಾಲೆಗಳು ಮುಚ್ಚಿದ ಕಾರಣ ಕನಿಷ್ಟ 46.30 ಕೋಟಿ ವಿದ್ಯಾರ್ಥಿಗಳು ಕಲಿಕೆಯಿಂದ ವಂಚಿತರಾಗಿದ್ದು, ಅವರಿಗೆ ಆನ್‌ಲೈನ್‌ ಶಿಕ್ಷಣವೂ ದೊರೆಯುತ್ತಿಲ್ಲ ಎಂದು ಯುನಿಸೆಫ್ ಕಾರ್ಯಕಾರಿ ನಿರ್ದೇಶಕಿ ಹೆನ್ರಿಟ್ಟಾ ಹೇಳಿದ್ದಾರೆ.

ಕೋವಿಡ್‌ ಪಿಡುಗಿನ ಬೆಳವಣಿಗೆಯಿಂದಾಗಿ ಆಫ್ರಿಕಾದ ಸಹರಾ ಉಪ ವಲಯವು ತೀವ್ರ ತೊಂದರೆಗೊಳಗಾಗಿದೆ. ಶಿಕ್ಷಣ ಕ್ಷೇತ್ರದಲ್ಲಿ ಗಣನೀಯ ಪ್ರಮಾಣದಲ್ಲಿ ಪ್ರಾದೇಶಿಕ ಅಸಮಾನತೆಗೆ ಕಾರಣವಾಗಿದೆ. ದಕ್ಷಿಣ ಏಷ್ಯಾ  ರಾಷ್ಟ್ರಗಳಲ್ಲಿಯೇ ಅತಿ ಹೆಚ್ಚು ಮಕ್ಕಳು, ಅಂದರೆ ಕನಿಷ್ಠ 14.7 ಕೋಟಿ ವಿದ್ಯಾರ್ಥಿಗಳು ಕಲಿಕೆಯಿಂದ ವಂಚಿತರಾಗಿದ್ದಾರೆ ಎಂದು ಯುನಿಸೆಫ್ ವರದಿಯಲ್ಲಿ ಉಲ್ಲೇಖವಾಗಿದೆ.

ಲಾಕ್‌ಡೌನ್‌ನಿಂದ ಶಾಲೆ ಮುಚ್ಚಿರುವುದು ಬಹುದೊಡ್ಡ ಪ್ರಮಾಣದಲ್ಲಿ ಮಕ್ಕಳ ಶಿಕ್ಷಣಕ್ಕೆ ಅಡ್ಡಿಯಾಗಿದೆ. ಇದರಿಂದ ಜಾಗತಿಕ ಶೈಕ್ಷಣಿಕ ತುರ್ತುಪರಿಸ್ಥಿ ನಿರ್ಮಾಣವಾಗಿದೆ. ಇದರ ಸಾಮಾಜಿಕ ಮತ್ತು ಆರ್ಥಿಕ ದುಷ್ಪರಿಣಾಮಗಳು ಮುಂದಿನ ದಶಕಗಳಲ್ಲಿ ಗೋಚರಿಸಲಿವೆ ಯುನಿಸೆಫ್ ಕಾರ್ಯಕಾರಿ ನಿರ್ದೇಶಕಿ ಹೆನ್ರಿಟ್ಟಾ ಪ್ರತಿಕ್ರಿಯಿಸಿದರು.

ವರ್ಷಾಂತ್ಯದಲ್ಲಿ ಕೋವಿಡ್ ಲಸಿಕೆ:

ವಾಷಿಂಗ್ಟನ್‌: ಕಣ್ಣಿಗೆ ಕಾಣದ ಕೊವೀಡ್‌ ಶತ್ರುವಿಗೆ ಈ ವರ್ಷಾಂತ್ಯದಲ್ಲಿ ಲಸಿಕೆ ಸಿದ್ಧವಾಗಲಿದೆ ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್‌ ಹೇಳಿದ್ದಾರೆ. ಶ್ವೇತಭವನದಲ್ಲಿ ನಡೆದ ರಿಪಬ್ಲಿಕನ್‌ ನೇಷನ್‌ ಸಮಾವೇಶದಲ್ಲಿ ಮಾತನಾಡಿದ ಅವರು ಇತ್ತೀಚಿನ ದಿನದಲ್ಲಿ ಅಮೆರಿಕ ಸೇರಿದಂತೆ ಇಡೀ ವಿಶ್ವ ಕಣ್ಣಿಗೆ ಕಾಣದ ಹೊಸ ಶತ್ರುವಿನಿಂದ ನಲುಗಿ ಹೋಗಿದೆ ಆದರೆ ಈ ವೈರಸ್‌ಗೆ ಶೀಘ್ರ ಲಸಿಕೆ ದೊಎರಯುವ ಮೂಲಕ ಮತ್ತೆ ಜನರು

ಹಿಂದಿನಂತೆ ಯಾವುದೇ ಭಯಬೀತರಾಗದೆ ಜೀವನ ನಡೆಸುತ್ತಾರೆ ಎಂದು ಟ್ರಂಪ್‌ ವಿಶ್ವಾಸ ವ್ಯಕ್ತಪಡಿಸಿದರು. ಮೂರು ಲಸಿಕೆಗಳು ಅಂತಿಮ ಹಂತದಲ್ಲಿವೆ. ಈ ವರ್ಷ ಸುರಕ್ಷಿತ ಮತ್ತು ಪರಿ ಣಾಮಕಾರಿ ಲಸಿಕೆಯನ್ನು ಬಿಡುಗಡೆ ಮಾಡುವ ಮೂಲಕ ಕೋವಿಡ್ ತೊಲಗಿಸುತ್ತೇವೆ ಎಂದರು.

ಟಾಪ್ ನ್ಯೂಸ್

ʼರಾಮಾಯಣʼ ಸೆಟ್‌ನಿಂದ ʼರಾಮ – ಸೀತೆʼಯಾದ ರಣ್ಬೀರ್-‌ ಸಾಯಿಪಲ್ಲವಿ ಪಾತ್ರದ ಫೋಟೋ ಲೀಕ್

ʼರಾಮಾಯಣʼ ಸೆಟ್‌ನಿಂದ ʼರಾಮ – ಸೀತೆʼಯಾದ ರಣ್ಬೀರ್-‌ ಸಾಯಿಪಲ್ಲವಿ ಪಾತ್ರದ ಫೋಟೋ ಲೀಕ್

13-bk-hariprasad

ಇದು ದೇಶದ ಚುನಾವಣೆ, ಸಿಎಂ ಸ್ಥಾನದ ಮಾಧ್ಯಮಗಳ ಚರ್ಚೆ ಅಪ್ರಸ್ತುತ: ಬಿ.ಕೆ.ಹರಿಪ್ರಸಾದ್

Hubli; ಜೋಶಿ ವೀರಶೈವ ಲಿಂಗಾಯತರ ಅವನತಿಗಾಗಿ‌ ಹುಟ್ಟಿಕೊಂಡ ಶಕ್ತಿ: ದಿಂಗಾಲೇಶ್ವರ ಸ್ವಾಮೀಜಿ

ಪ್ರಹ್ಲಾದ ಜೋಶಿ ವೀರಶೈವ ಲಿಂಗಾಯತರ ಅವನತಿಗಾಗಿ‌ ಹುಟ್ಟಿಕೊಂಡವರು: ದಿಂಗಾಲೇಶ್ವರ ಸ್ವಾಮೀಜಿ

12-prakash-raj

April 28 ರಂದು ರಾಜ್ಯಮಟ್ಟದ ವಿದ್ಯಾರ್ಥಿ ಸಮಾವೇಶಕ್ಕೆ ಚಿತ್ರನಟ ಪ್ರಕಾಶ ರೈ ಆಗಮನ

ಈಶ್ವರ ಖಂಡ್ರೆ

ಕೇಂದ್ರದಿಂದ 3454 ಕೋಟಿ ರೂ. ಬರ ಪರಿಹಾರ; ರಾಜ್ಯಕ್ಕೆ ಸಂದ ಜಯ: ಈಶ್ವರ ಖಂಡ್ರೆ

Koppala; ಅಮೃತಕಾಲ ಅಲ್ಲ, ಇದು ಅನ್ಯಾಯದ ಕಾಲ, ಬರ್ಬಾದ್ ಕಾಲ: ಹರಿಪ್ರಸಾದ್ ಟೀಕೆ

Koppala; ಅಮೃತಕಾಲ ಅಲ್ಲ, ಇದು ಅನ್ಯಾಯದ ಕಾಲ, ಬರ್ಬಾದ್ ಕಾಲ: ಹರಿಪ್ರಸಾದ್ ಟೀಕೆ

‘ತಾರಕ್​ ಮೆಹ್ತಾ ಕಾ ಉಲ್ಟಾ ಚಶ್ಮಾ’ ನಟ ಗುರುಚರಣ್​ ಸಿಂಗ್​ ನಾಪತ್ತೆ… ಮೊಬೈಲ್ ಸ್ವಿಚ್ ಆಫ್

‘ತಾರಕ್​ ಮೆಹ್ತಾ ಕಾ ಉಲ್ಟಾ ಚಶ್ಮಾ’ ನಟ ಗುರುಚರಣ್​ ಸಿಂಗ್​ ನಾಪತ್ತೆ… ಮೊಬೈಲ್ ಸ್ವಿಚ್ ಆಫ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Covid-19: ಕೋವಿಡ್ ಭೀತಿ; ಮೂರು ರಾಜ್ಯಗಳಲ್ಲಿ ಮಾಸ್ಕ್‌ ಕಡ್ಡಾಯ

Covid-19: ಕೋವಿಡ್ ಭೀತಿ; ಮೂರು ರಾಜ್ಯಗಳಲ್ಲಿ ಮಾಸ್ಕ್‌ ಕಡ್ಡಾಯ

UP government mandates Covid testing for arriving international passengers

Covid 19 ವಿದೇಶದಿಂದ ಬರುವವರಿಗೆ ಕೋವಿಡ್ ಟೆಸ್ಟ್ ಕಡ್ಡಾಯ ಮಾಡಿದ ಉತ್ತರ ಪ್ರದೇಶ ಸರ್ಕಾರ

mansukh mandaviya

ಕೋವಿಡ್ ಗೂ ಹೃದಯಾಘಾತಕ್ಕೂ ಸಂಬಂಧವಿದೆಯೇ? ಉತ್ತರ ನೀಡಿದ ಕೇಂದ್ರ ಆರೋಗ್ಯ ಸಚಿವ

India Sees Single-Day Rise Of Over 1,000 Covid-19 Cases

ಎಚ್3ಎನ್2 ಭೀತಿಯ ಮಧ್ಯೆ ಕೋವಿಡ್ ಏರಿಕೆ; ಒಂದೇ ದಿನ ಸಾವಿರ ದಾಟಿದ ಸೋಂಕಿತರ ಸಂಖ್ಯೆ

ಕೋವಿಡ್ 19 ಲಸಿಕೆಯಿಂದ ಅಡ್ಡಪರಿಣಾಮ ಇರೋದು ನಿಜ: RTIನಲ್ಲಿ ಕೇಂದ್ರದ ಉತ್ತರ ಬಹಿರಂಗ

ಕೋವಿಡ್ 19 ಲಸಿಕೆಯಿಂದ ಅಡ್ಡಪರಿಣಾಮ ಇರೋದು ನಿಜ: RTIನಲ್ಲಿ ಕೇಂದ್ರದ ಉತ್ತರ ಬಹಿರಂಗ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ʼರಾಮಾಯಣʼ ಸೆಟ್‌ನಿಂದ ʼರಾಮ – ಸೀತೆʼಯಾದ ರಣ್ಬೀರ್-‌ ಸಾಯಿಪಲ್ಲವಿ ಪಾತ್ರದ ಫೋಟೋ ಲೀಕ್

ʼರಾಮಾಯಣʼ ಸೆಟ್‌ನಿಂದ ʼರಾಮ – ಸೀತೆʼಯಾದ ರಣ್ಬೀರ್-‌ ಸಾಯಿಪಲ್ಲವಿ ಪಾತ್ರದ ಫೋಟೋ ಲೀಕ್

13-bk-hariprasad

ಇದು ದೇಶದ ಚುನಾವಣೆ, ಸಿಎಂ ಸ್ಥಾನದ ಮಾಧ್ಯಮಗಳ ಚರ್ಚೆ ಅಪ್ರಸ್ತುತ: ಬಿ.ಕೆ.ಹರಿಪ್ರಸಾದ್

Hubli; ಜೋಶಿ ವೀರಶೈವ ಲಿಂಗಾಯತರ ಅವನತಿಗಾಗಿ‌ ಹುಟ್ಟಿಕೊಂಡ ಶಕ್ತಿ: ದಿಂಗಾಲೇಶ್ವರ ಸ್ವಾಮೀಜಿ

ಪ್ರಹ್ಲಾದ ಜೋಶಿ ವೀರಶೈವ ಲಿಂಗಾಯತರ ಅವನತಿಗಾಗಿ‌ ಹುಟ್ಟಿಕೊಂಡವರು: ದಿಂಗಾಲೇಶ್ವರ ಸ್ವಾಮೀಜಿ

12-prakash-raj

April 28 ರಂದು ರಾಜ್ಯಮಟ್ಟದ ವಿದ್ಯಾರ್ಥಿ ಸಮಾವೇಶಕ್ಕೆ ಚಿತ್ರನಟ ಪ್ರಕಾಶ ರೈ ಆಗಮನ

ಈಶ್ವರ ಖಂಡ್ರೆ

ಕೇಂದ್ರದಿಂದ 3454 ಕೋಟಿ ರೂ. ಬರ ಪರಿಹಾರ; ರಾಜ್ಯಕ್ಕೆ ಸಂದ ಜಯ: ಈಶ್ವರ ಖಂಡ್ರೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.