ಸೇವಾಶ್ರಮ ಹಾಗೂ ವೃದ್ಧಾಶ್ರಮಕ್ಕೆ ದಿನಸಿ ವಿತರಿಸಿದ ನಟ ಶ್ರೀಮುರಳಿ ಫ್ಯಾನ್ಸ್‌

ಅವರು ಆಶ್ರಮದ ವಿದ್ಯಾರ್ಥಿಗಳಿಗೆ ಹಾಗೂ ವೃದ್ಧಾಶ್ರಮದಲ್ಲಿರುವ ಹಿರಿಯ ಜೀವಗಳಿಗೆ ಸಹಾಯ ಮಾಡಿದ್ದಾರೆ.

Team Udayavani, Apr 10, 2020, 3:08 PM IST

ಸೇವಾಶ್ರಮ ಹಾಗೂ ವೃದ್ಧಾಶ್ರಮಕ್ಕೆ ದಿನಸಿ ವಿತರಿಸಿದ ನಟ ಶ್ರೀಮುರಳಿ ಫ್ಯಾನ್ಸ್‌

ಬೆಂಗಳೂರು: ಕೋವಿಡ್ ಎಂಬ ಸಾಂಕ್ರಾಮಿಕ ರೋಗ ಎಲ್ಲೆಡೆ ಹರಡಿದ್ದು ಗೊತ್ತೇ ಇದೆ. ಇದರಿಂದ ಸಾಕಷ್ಟು ಜನರು ತತ್ತರಿಸಿದ್ದಾರೆ. ಅದರಲ್ಲೂ ದಿನಗೂಲಿ ನೌಕರರ ಸಮಸ್ಯೆ ಹೇಳತೀರದು. ಅಂತಹವರನ್ನು ಗುರುತಿಸುತ್ತಿರುವ ಚಿತ್ರರಂಗದ ಅನೇಕ ಸಂಘ, ಸಂಸ್ಥೆಗಳು, ನಟ, ನಟಿಯರು, ಅವರ ಅಭಿಮಾನಿಗಳು ಹಾಗೂ ನಿರ್ಮಾಪಕರುಗಳು ಆಹಾರ ಸಾಮಗ್ರಿ ವಿತರಿಸುವ ಮೂಲಕ ಅವರ ಸಹಾಯಕ್ಕೆ ಮುಂದಾಗಿದ್ದಾರೆ.

ಈ ನಿಟ್ಟಿನಲ್ಲಿ ನಟ ಶ್ರೀಮುರಳಿ ಅವರ ಅಭಿಮಾನಿ ಬಳಗ ಕೂಡ ಸಹಾಯಕ್ಕೆ ಮುಂದಾಗಿದ್ದು, ಅವರು ಆಶ್ರಮದ ವಿದ್ಯಾರ್ಥಿಗಳಿಗೆ ಹಾಗೂ ವೃದ್ಧಾಶ್ರಮದಲ್ಲಿರುವ ಹಿರಿಯ ಜೀವಗಳಿಗೆ ಸಹಾಯ ಮಾಡಿದ್ದಾರೆ.

ಹೌದು, ತುಮಕೂರು ತಾಲೂಕಿನ ಕೊಂಡನಾಯಕನಹಳ್ಳಿಯಲ್ಲಿರುವ ಶಿವ ಶೈಕ್ಷಣಿಕ ಸೇವಾ ಆಶ್ರಮದಲ್ಲಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳಿಗೆ ಸಹಾಯ ಮಾಡಿದ್ದು, ಅಲ್ಲಿರುವ ಶಿವಾಶ್ರಮ ಹಿರಿಯ ಪ್ರಾಥಮಿಕ ವಸತಿ ಶಾಲೆಯಲ್ಲಿ ಇರುವ ವಿದ್ಯಾರ್ಥಿಗಳಿಗೆ ಶ್ರೀಮುರಳಿ ಅಭಿಮಾನಿ ಬಳಗ ಅಕ್ಕಿ, ಬೇಳೆ, ಎಣ್ಣೆ, ಸೋಪು ಸೇರಿದಂತೆ ಅಗತ್ಯ ವಸ್ತುಗಳನ್ನು ಪೂರೈಸಿದೆ.

ಅದೇ ಊರಿನಲ್ಲಿರುವ ಶ್ರೀ ಶಿರಡಿ ಸಾಯಿಬಾಬಾ ವೃದ್ಧಾಶ್ರಮಕ್ಕೂ ಭೇಟಿ ನೀಡಿರುವ ಶ್ರೀಮುರಳಿ ಅಭಿಮಾನಿ ಬಳಗದವರು ಅಲ್ಲೂ ಅಗತ್ಯ ವಸ್ತುಗಳನ್ನು ಪೂರೈಸುವ ಮೂಲಕ ಕಷ್ಟಕ್ಕೆ ಸ್ಪಂದಿಸಿದ್ದಾರೆ. ಶ್ರೀಮುರಳಿ ಅವರ ಅಭಿಮಾನಿಗಳ ಈ ಮಾನವೀಯತೆ ಕೆಲಸಕ್ಕೆ ಸೇವಾಶ್ರಮದ ಮಕ್ಕಳು ಹಾಗು ಸಾಯಿಬಾಬಾ ವೃದ್ಧಾಶ್ರಮದ ಹಿರಿಯರು ಧನ್ಯವಾದ ಅರ್ಪಿಸಿದ್ದಾರೆ.

ಟಾಪ್ ನ್ಯೂಸ್

Lok Sabha Election; ಮತದಾನ ಮಾಡಿದ ಬಳಿಕ 7 ಮಂದಿ ಸಾವು

Lok Sabha Election; ಮತದಾನ ಮಾಡಿದ ಬಳಿಕ 7 ಮಂದಿ ಸಾವು

1-sadasd

Yadgir BJP ಬೃಹತ್ ರೋಡ್ ಶೋ; ದೇಶದ ರಕ್ಷಣೆಗಾಗಿ ಮತ್ತೆ ಬೆಂಬಲಿಸಿ: ನಡ್ಡಾ

1-wqeqqwe

Vote; ಕರ್ನಾಟಕ ಮೊದಲ ಹಂತ: ಶೇಕಡಾವಾರು ಮತದಾನದ ವಿವರ

voter

Chamarajanagar; ಮತದಾನ ಮಾಡಬೇಕೋ ಬೇಡವೋ ಎಂದು EVM ಗಳೇ ಧ್ವಂಸ !

1-wqeqewqe

EVM ಕುರಿತು ಸುಪ್ರೀಂ ತೀರ್ಪು ಪ್ರತಿಪಕ್ಷಗಳಿಗೆ ಕಪಾಳ ಮೋಕ್ಷ: ಪ್ರಧಾನಿ ಮೋದಿ

militry

Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ

shettar

Minority ತುಷ್ಟೀಕರಣದಿಂದ ನೇಹಾಳ ಹತ್ಯೆಯಾಗಿದೆ :ಜಗದೀಶ್ ಶೆಟ್ಟರ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

We Are The Bad Boys song from Vidyarthi Vidyarthiniyare

Kannada Cinema; ಬ್ಯಾಡ್‌ ಬಾಯ್ಸ್ ಬಂದ್ರು..! ವಿದ್ಯಾರ್ಥಿ ವಿದ್ಯಾರ್ಥಿನಿಯರ ಹಾಡಿದು…

Telugu version of ‘Markasthra’ titled ‘Maranayudham

ತೆಲುಗಿನಲ್ಲಿ ಮಾಲಾಶ್ರೀ ಚಿತ್ರ; ಮಾರಕಾಸ್ತ್ರ ಈಗ ಮಾರಣಾಯುಧಂ

Sandalwood: ಶೈನ್‌ ಶೆಟ್ಟಿ ಹೊಸ ಚಿತ್ರಕ್ಕೆ “ಜಸ್ಟ್‌ ಮ್ಯಾರೀಡ್‌” ಟೈಟಲ್

Sandalwood: ಶೈನ್‌ ಶೆಟ್ಟಿ ಹೊಸ ಚಿತ್ರಕ್ಕೆ “ಜಸ್ಟ್‌ ಮ್ಯಾರೀಡ್‌” ಟೈಟಲ್

21

ಹೊಸ ಚಿತ್ರಕ್ಕೆ ಮಹೇಶ್‌ ಬಾಬು ರೆಡಿ: ‘ವೀರ ಮದಕರಿ’ ಬಾಲ ಕಲಾವಿದೆ ಈಗ ನಾಯಕಿ

Ithyadi Movie: ಇತ್ಯಾದಿ ಮೇಲೆ ವಿಕ್ರಮ್‌ ಕಣ್ಣು

Ithyadi Movie: ಇತ್ಯಾದಿ ಮೇಲೆ ವಿಕ್ರಮ್‌ ಕಣ್ಣು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Lok Sabha Election; ಮತದಾನ ಮಾಡಿದ ಬಳಿಕ 7 ಮಂದಿ ಸಾವು

Lok Sabha Election; ಮತದಾನ ಮಾಡಿದ ಬಳಿಕ 7 ಮಂದಿ ಸಾವು

1-sadasd

Yadgir BJP ಬೃಹತ್ ರೋಡ್ ಶೋ; ದೇಶದ ರಕ್ಷಣೆಗಾಗಿ ಮತ್ತೆ ಬೆಂಬಲಿಸಿ: ನಡ್ಡಾ

1-wqeqqwe

Vote; ಕರ್ನಾಟಕ ಮೊದಲ ಹಂತ: ಶೇಕಡಾವಾರು ಮತದಾನದ ವಿವರ

voter

Chamarajanagar; ಮತದಾನ ಮಾಡಬೇಕೋ ಬೇಡವೋ ಎಂದು EVM ಗಳೇ ಧ್ವಂಸ !

1-wqeqewqe

EVM ಕುರಿತು ಸುಪ್ರೀಂ ತೀರ್ಪು ಪ್ರತಿಪಕ್ಷಗಳಿಗೆ ಕಪಾಳ ಮೋಕ್ಷ: ಪ್ರಧಾನಿ ಮೋದಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.