ವೈದ್ಯಕೀಯ ಸಾಧನ ದಾಸ್ತಾನು ಮಾಡಲು ಸಲಹೆ


Team Udayavani, May 22, 2020, 9:53 AM IST

ವೈದ್ಯಕೀಯ ಸಾಧನ ದಾಸ್ತಾನು ಮಾಡಲು ಸಲಹೆ

ಸೇಂಟ್‌ ಪಾಲ್‌: ಇಲ್ಲಿನ ಯುನೈಟೆಡ್‌ ಆಸ್ಪತ್ರೆಯ ದಾದಿಯರು ತಮಗೆ ಇನ್ನಷ್ಟು ಸುರಕ್ಷೆಯನ್ನು ನೀಡಬೇಕು ಎಂದು ಪ್ರತಿಭಟನೆ ನಡೆಸುತ್ತಿರುವುದು.

ವಾಷಿಂಗ್ಟನ್‌: ಕೋವಿಡ್‌ ಹಾವಳಿಯನ್ನು ತಡೆಗಟ್ಟಲು ವಿಫ‌ಲರಾಗಿ ಎಲ್ಲೆಡೆಗಳಿಂದ ಟೀಕೆಯನ್ನು ಎದುರಿಸುತ್ತಿರುವ ಅಧ್ಯಕ್ಷ ಡೊನಾಲ್ಡ್‌ ಟ್ರಂಪ್‌ಗೆ ದೇಶದ ಒಂಭತ್ತು ಪ್ರಮುಖ ವಿಜ್ಞಾನಿಗಳು ಹಲವು ಸಲಹೆ ಸೂಚನೆಗಳನ್ನು ನೀಡಿದ್ದಾರೆ. ಏಳು ಪುಟಗಳ ವರದಿಯಲ್ಲಿ ಅವರು ಸಾಂಕ್ರಾಮಿಕ ರೋಗ ಘಟಸ್ಫೋಟಗೊಂಡಾಗ ಕೈಗೊಳ್ಳಬೇಕಾದ ತುರ್ತು ನಿರ್ಧಾರಗಳ ಬಗ್ಗೆ ಗಮನ ಸೆಳೆದಿದ್ದಾರೆ ಹಾಗೂ ವೈದ್ಯಕೀಯ ಸಾಧನಗಳನ್ನು ಸಾಕಷ್ಟು ಪ್ರಮಾಣದಲ್ಲಿ ದಾಸ್ತಾನು ಇಟ್ಟುಕೊಳ್ಳಲು ಸಲಹೆ ಮಾಡಿದ್ದಾರೆ.

ಕೋವಿಡ್‌ ವೈರಸ್‌ ಹಾವಳಿ ಇನ್ನೂ ನಿಂತಿಲ್ಲ. ಇನ್ನು ಮೂರು ತಿಂಗಳ ಒಳಗಾಗಿ ಅಗತ್ಯವಿರುವ ವೈದ್ಯಕೀಯ ಸಾಧನಗಳನ್ನು ದಾಸ್ತಾನು ಮಾಡಿಕೊಳ್ಳಬೇಕು. ಇಲ್ಲದಿದ್ದರೆ ಪರಿಸ್ಥಿತಿ ಇನ್ನಷ್ಟು ವಿಷಮಿಸಬಹುದು ಎಂಬ ಎಚ್ಚರಿಕೆಯನ್ನು ಈ ವಿಜ್ಞಾನಿಗಳು ನೀಡಿದ್ದಾರೆ.

ಎಲ್ಲ ಒಂಭತ್ತು ವಿಜ್ಞಾನಿಗಳು ಹಿಂದಿನ ಅಧ್ಯಕ್ಷ ಬರಾಕ್‌ ಒಬಾಮ ಅವರಿಗೆ ಎರಡೂ ಅವಧಿಯಲ್ಲಿ ವೈಜ್ಞಾನಿಕ ಸಲಹೆಗಾರರಾಗಿದ್ದವರು. ಒಬಾಮ ಮತ್ತು ಟ್ರಂಪ್‌ ನಡುವೆ ಕೋವಿಡ್‌ ವಿಚಾರವಾಗಿ ಚಕಮಕಿ ನಡೆಯುತ್ತಿರುವಾಗಲೇ ಈ ವಿಜ್ಞಾನಿಗಳು ತಂಡ ಸಲಹೆಗಳನ್ನು ನೀಡಿದೆ.

ಟೆಸ್ಟಿಂಗ್‌ ಕಿಟ್‌, ರಕ್ಷಣಾ ಉಡುಗೆ, ಎನ್‌ 95 ಮಾಸ್ಕ್, ಶಮನಕಾರಿ ಔಷಧಿ ಇತ್ಯಾದಿಗಳ ದಾಸ್ತಾನು ಪ್ರಕ್ರಿಯೆ ತಕ್ಷಣ ಶುರುವಾಗಬೇಕು. ಇನ್ನೊಂದು ಸುತ್ತಿನ ಕೋವಿಡ್‌ ತಾಂಡವ ಪ್ರಾರಂಭವಾಗಲು ಹೆಚ್ಚು ಸಮಯ ಬೇಕಾಗಿಲ್ಲ. ಹೀಗಾಗಿ ಸಮರೋಪಾದಿಯ ಸಿದ್ಧತೆಗಳನ್ನು ಮಾಡಿಕೊಳ್ಳಬೇಕೆಂದು ವಿಜ್ಞಾನಿಗಳು ಹೇಳಿದ್ದಾರೆ.

ರಾಜ್ಯಗಳನ್ನು ವಿಶ್ವಾಸಕ್ಕೆ ತೆಗೆದುಕೊಂಡು ರಾಷ್ಟ್ರೀಯ ಮಟ್ಟದಲ್ಲಿ ಈ ಕುರಿತು ಸಮಗ್ರವಾದ ಕಾರ್ಯಯೋಜನೆಯೊಂದನ್ನು ರಚಿಸುವ ಅಗತ್ಯವಿದೆ. ಈ ನಿಟ್ಟಿನಲ್ಲಿ ಸಂಸತ್ತು ನೀಡಿರುವ ಸಲಹೆಗಳನ್ನು ಅಧ್ಯಕ್ಷರು ಪರಿಗಣಿಸಬೇಕೆಂದು ವಿಜ್ಞಾನಿಗಳು ಹೇಳಿದ್ದಾರೆ.

ವೆಂಟಿಲೇಟರ್‌, ಟೆಸ್ಟಿಂಗ್‌ ಕಿಟ್‌, ಮಾಸ್ಕ್, ಪಿಪಿಇ ಮತ್ತಿತರ ಸಾಧನಗಳ ಕೊರತೆಯಿಂದಲೇ ಕೋವಿಡ್‌ ಹಾವಳಿ ತೀವ್ರವಾಯಿತು ಹಾಗೂ ಅನೇಕ ಆರೋಗ್ಯ ಸಿಬಂದಿಗಳು ಪ್ರಾಣ ಕಳೆದುಕೊಂಡರು. ಈ ತಪ್ಪು ಪುನರಾವ ರ್ತನೆಯಾಗಬಾರದು ಎಂದು ವಿಜ್ಞಾನಿಗಳು ಕಳಕಳಿ ವ್ಯಕ್ತಪಡಿಸಿದ್ದಾರೆ.

ಮುಂಬರುವ ಶರದೃತುವಿನಲ್ಲಿ ಅಮೆರಿಕದಲ್ಲಿ ಎರಡನೇ ಸುತ್ತಿನ ಕೋವಿಡ್‌ ಹಾವಳಿ ಶುರುವಾಗುವ ಸಾಧ್ಯತೆಯಿದೆ ಎಂಬ ಆತಂಕವಿದೆ. ಈ ಹಿನ್ನೆಲೆಯಲ್ಲಿ ವಿಜ್ಞಾನಿಗಳ ಸಲಹೆ ಮಹತ್ವ ಪಡೆದುಕೊಂಡಿದೆ.

ಟಾಪ್ ನ್ಯೂಸ್

Outrage over mistakes in CET exam question paper; Request for mercy marks

CET ಪರೀಕ್ಷೆ ಪ್ರಶ್ನೆಪತ್ರಿಕೆಯಲ್ಲಿ ಲೋಪಕ್ಕೆ ಆಕ್ರೋಶ; ಕೃಪಾಂಕಕ್ಕೆ ಆಗ್ರಹ

1-qweeweq

Viral video; ಯಾರಿವರು ಇಶಾ ಅರೋರಾ? ಮತದಾನದ ದಿನ ಭಾರಿ ಸುದ್ದಿ

New Jersey: ಸ್ಥಳೀಯ ಶಾಪ್‌ ನಲ್ಲಿ ಕಳ್ಳತನ- ಇಬ್ಬರು ಭಾರತೀಯ ವಿದ್ಯಾರ್ಥಿನಿಯರ ಬಂಧನ

New Jersey: ಸ್ಥಳೀಯ ಶಾಪ್‌ ನಲ್ಲಿ ಕಳ್ಳತನ- ಇಬ್ಬರು ಭಾರತೀಯ ವಿದ್ಯಾರ್ಥಿನಿಯರ ಬಂಧನ

RCB; ಸುಮ್ಮನೆ ಒಪ್ಪಂದಕ್ಕೆ ಸಹಿ ಹಾಕು…: ವಿರಾಟ್ ಜತೆಗಿನ ಮಾತುಕತೆ ನೆನೆದ ಕೆ.ಎಲ್ ರಾಹುಲ್

RCB; ಸುಮ್ಮನೆ ಒಪ್ಪಂದಕ್ಕೆ ಸಹಿ ಹಾಕು…: ವಿರಾಟ್ ಜತೆಗಿನ ಮಾತುಕತೆ ನೆನೆದ ಕೆ.ಎಲ್ ರಾಹುಲ್

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರಕಾರ ಬದ್ದ: ಸತೀಶ್ ಜಾರಕಿಹೊಳಿ

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರ್ಕಾರ ಬದ್ಧ: ಸತೀಶ್ ಜಾರಕಿಹೊಳಿ

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!

Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್‌ರಿಂದ ಪರಿಶೀಲನೆ

Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್‌ರಿಂದ ಪರಿಶೀಲನೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Covid-19: ಕೋವಿಡ್ ಭೀತಿ; ಮೂರು ರಾಜ್ಯಗಳಲ್ಲಿ ಮಾಸ್ಕ್‌ ಕಡ್ಡಾಯ

Covid-19: ಕೋವಿಡ್ ಭೀತಿ; ಮೂರು ರಾಜ್ಯಗಳಲ್ಲಿ ಮಾಸ್ಕ್‌ ಕಡ್ಡಾಯ

UP government mandates Covid testing for arriving international passengers

Covid 19 ವಿದೇಶದಿಂದ ಬರುವವರಿಗೆ ಕೋವಿಡ್ ಟೆಸ್ಟ್ ಕಡ್ಡಾಯ ಮಾಡಿದ ಉತ್ತರ ಪ್ರದೇಶ ಸರ್ಕಾರ

mansukh mandaviya

ಕೋವಿಡ್ ಗೂ ಹೃದಯಾಘಾತಕ್ಕೂ ಸಂಬಂಧವಿದೆಯೇ? ಉತ್ತರ ನೀಡಿದ ಕೇಂದ್ರ ಆರೋಗ್ಯ ಸಚಿವ

India Sees Single-Day Rise Of Over 1,000 Covid-19 Cases

ಎಚ್3ಎನ್2 ಭೀತಿಯ ಮಧ್ಯೆ ಕೋವಿಡ್ ಏರಿಕೆ; ಒಂದೇ ದಿನ ಸಾವಿರ ದಾಟಿದ ಸೋಂಕಿತರ ಸಂಖ್ಯೆ

ಕೋವಿಡ್ 19 ಲಸಿಕೆಯಿಂದ ಅಡ್ಡಪರಿಣಾಮ ಇರೋದು ನಿಜ: RTIನಲ್ಲಿ ಕೇಂದ್ರದ ಉತ್ತರ ಬಹಿರಂಗ

ಕೋವಿಡ್ 19 ಲಸಿಕೆಯಿಂದ ಅಡ್ಡಪರಿಣಾಮ ಇರೋದು ನಿಜ: RTIನಲ್ಲಿ ಕೇಂದ್ರದ ಉತ್ತರ ಬಹಿರಂಗ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

4-udupi

Udupi: ರಮಾಬಾಯಿ ಕೊಚ್ಚಿಕಾರ್‌ ಪೈ ನಿಧನ

1-aaa

Bajpe: ಹೆದ್ದಾರಿಯಲ್ಲಿ ಬ್ರೇಕ್ ಫೇಲ್ ಆಗಿ ಅಂಗಡಿಗಳು, ಹಲವು ವಾಹನಗಳಿಗೆ ಗುದ್ದಿದ ಲಾರಿ!

ಧರ್ಮ ಮಾರ್ಗದಲ್ಲಿ ನಡೆದರಷ್ಟೇ ಜೀವನ ಸಾರ್ಥಕ: ಶ್ರೀ ವಿಧುಶೇಖರಶ್ರೀ

ಧರ್ಮ ಮಾರ್ಗದಲ್ಲಿ ನಡೆದರಷ್ಟೇ ಜೀವನ ಸಾರ್ಥಕ: ಶ್ರೀ ವಿಧುಶೇಖರಶ್ರೀ

Outrage over mistakes in CET exam question paper; Request for mercy marks

CET ಪರೀಕ್ಷೆ ಪ್ರಶ್ನೆಪತ್ರಿಕೆಯಲ್ಲಿ ಲೋಪಕ್ಕೆ ಆಕ್ರೋಶ; ಕೃಪಾಂಕಕ್ಕೆ ಆಗ್ರಹ

Karkala: ಕಾಂಗ್ರೆಸ್ಸಿನಿಂದ ಬೃಹತ್‌ ಪರಿವರ್ತನಾ ರ್‍ಯಾಲಿ

Karkala: ಕಾಂಗ್ರೆಸ್ಸಿನಿಂದ ಬೃಹತ್‌ ಪರಿವರ್ತನಾ ರ್‍ಯಾಲಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.