ಕೋವಿಡ್ 19 ವಿರುದ್ಧ ಹೋರಾಟ; ಭಾರತ ಆಪದ್ಭಾಂಧವ-ಸಕಾಲದ ನೆರವಿಗೆ ಅಫ್ಘಾನ್ ಕೃತಜ್ಞತೆ

ಅಫ್ಘಾನಿಸ್ತಾನ ಸೇರಿದಂತೆ ವಿಶ್ವದ 55 ದೇಶಗಳು ಹೈಡ್ರೋಕ್ಸಿಕ್ಲೋರೋಕ್ವಿನ್ ಮಾತ್ರೆಗಾಗಿ ಬೇಡಿಕೆ ಇಟ್ಟಿದ್ದವು.

Team Udayavani, Apr 18, 2020, 12:28 PM IST

ಕೋವಿಡ್ 19 ವಿರುದ್ಧ ಹೋರಾಟ; ಭಾರತ ಆಪದ್ಭಾಂಧವ-ಸಕಾಲದ ನೆರವಿಗೆ ಅಫ್ಘಾನ್ ಕೃತಜ್ಞತೆ

Representative Image

ನವದೆಹಲಿ:ಇಡೀ ಜಗತ್ತು ಮಾರಣಾಂತಿಕ ಕೋವಿಡ್ 19 ವೈರಸ್ ವಿರುದ್ಧ ಹೋರಾಡುತ್ತಿದೆ. ಇಂತಹ ಸಂದರ್ಭದಲ್ಲಿ ಭಾರತ ಐದು ಲಕ್ಷದಷ್ಟು ಹೈಡ್ರೋಕ್ಸಿಕ್ಲೋರೋಕ್ವಿನ್ ಮಾತ್ರೆಗಳನ್ನು ಕಳುಹಿಸಿಕೊಟ್ಟಿದ್ದು, ಇದಕ್ಕಾಗಿ ಅಭಿನಂದನೆ ಸಲ್ಲಿಸುವುದಾಗಿ ಅಫ್ಘಾನಿಸ್ತಾನದ ರಾಯಭಾರಿ ತಾಹೀರ್ ಖಾದ್ರಿ ಟ್ವೀಟ್ ಮಾಡುವ ಮೂಲಕ ಕೃತಜ್ಞತೆ ಸಲ್ಲಿಸಿದ್ದಾರೆ.

ಭಾರತಕ್ಕೆ ನಿರಂತರವಾಗಿ ಬೇಡಿಕೆ ಇಟ್ಟಿದ್ದು, “ಈ ನಿಟ್ಟಿನಲ್ಲಿ ಭಾರತ ಮಹತ್ವದ ಔಷಧವಾಗಿರುವ ಒಂದು ಲಕ್ಷ ಪ್ಯಾರಾಸಿಟಮೋಲ್ ಮಾತ್ರೆ ಹಾಗೂ 5 ಲಕ್ಷದಷ್ಟು ಹೈಡ್ರೋಕ್ಸಿಕ್ಲೋರೋಕ್ವಿನ್ ಮಾತ್ರೆಗಳನ್ನು ಅರಿಯಾನಾ ಏರ್ ಲೈನ್ಸ್ ಮೂಲಕ ಅಫ್ಘಾನಿಸ್ತಾನಕ್ಕೆ ಕಳುಹಿಸಿಕೊಟ್ಟಿದೆ. ಇದಕ್ಕೂ ಮುನ್ನ ಭಾರತ ಆಹಾರ ಭದ್ರತೆಗಾಗಿ ಗೋಧಿಯನ್ನು ಹಡಗಿನ ಮೂಲಕ ಕಳುಹಿಸಿತ್ತು.  ಭಾರತಕ್ಕೆ ಹೃದಯಪೂರ್ವಕ ಅಭಿನಂದನೆಗಳು” ಎಂದು ತಿಳಿಸಿದ್ದಾರೆ.

ಕೋವಿಡ್ 19 ವೈರಸ್ ವಿರುದ್ಧ ಹೋರಾಡುವ ವೈದ್ಯ ಸಿಬ್ಬಂದಿಗಳಿಗೆ ಹೈಡ್ರೋಕ್ಸಿಕ್ಲೋರೋಕ್ವಿನ್ ತುಂಬಾ ಉಪಯುಕ್ತ ಎಂದು ಅಮೆರಿಕದ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅಭಿಪ್ರಾಯವ್ಯಕ್ತಪಡಿಸಿದ ಮೇಲೆ ಹಲವು ದೇಶಗಳು ಈ ಮಾತ್ರೆಗಾಗಿ ಬೇಡಿಕೆ ಇಟ್ಟಿದ್ದವು. ಇಡೀ ಜಗತ್ತಿನಲ್ಲಿ ಹೈಡ್ರೋಕ್ಸಿಕ್ಲೋರೋಕ್ವಿನ್ ಮಾತ್ರೆ ಉತ್ಪಾದನೆಯಲ್ಲಿ ಭಾರತ ನಂ 1 ಆಗಿತ್ತು. ಅಲ್ಲದೇ ಅಫ್ಘಾನಿಸ್ತಾನ ಸೇರಿದಂತೆ ವಿಶ್ವದ 55 ದೇಶಗಳು ಹೈಡ್ರೋಕ್ಸಿಕ್ಲೋರೋಕ್ವಿನ್ ಮಾತ್ರೆಗಾಗಿ ಬೇಡಿಕೆ ಇಟ್ಟಿದ್ದವು.

ಕೋವಿಡ್ 19 ವೈರಸ್ ಗೆ ಈಗಾಗಲೇ ಅಫ್ಘಾನಿಸ್ತಾನದಲ್ಲಿ 30 ಮಂದಿ ಸಾವನ್ನಪ್ಪಿದ್ದು, 906 ಮಂದಿಗೆ ಸೋಂಕು ದೃಢಪಟ್ಟಿದೆ ಎಂದು ವರದಿ ತಿಳಿಸಿದೆ. ಮತ್ತೊಂದೆಡೆ ಭಾರತ ಹೈಡ್ರೋಕ್ಸಿಕ್ಲೋರೋಕ್ವಿನ್ ಮಾತ್ರೆಗಳನ್ನು ಬಹರೈನ್, ಯುಎಇ ಮತ್ತು ಒಮಾನ್ ದೇಶಕ್ಕೆ ಕಳುಹಿಸಲು ಸಿದ್ದತೆ ನಡೆಸಿದೆ. ಪ್ಯಾರಾಸಿಟಮೋಲ್ ಮಾತ್ರೆಯನ್ನು ಕುವೈಟ್ ಗೆ ಕಳುಹಿಸಿದೆ. ಕೇಂದ್ರ ಸರ್ಕಾರ ಕುವೈಟ್ ಗೆ ವಿಶೇಷ ತಂಡವನ್ನು ಕಳುಹಿಸಿರುವುದಾಗಿ ತಿಳಿಸಿದೆ.

ಟಾಪ್ ನ್ಯೂಸ್

Road Mishap ಗುಂಡ್ಲುಪೇಟೆ: ಅಪರಿಚಿತ ವಾಹನ ಡಿಕ್ಕಿ; ಬೈಕ್ ಸವಾರ ಸಾವು

Road Mishap ಗುಂಡ್ಲುಪೇಟೆ: ಅಪರಿಚಿತ ವಾಹನ ಡಿಕ್ಕಿ; ಬೈಕ್ ಸವಾರ ಸಾವು

1-wqeqweqw

Yellow alert; ಬೆಂಗಳೂರು ನಗರ ಸೇರಿ ಸುತ್ತಮುತ್ತ ಆಲಿಕಲ್ಲು ಸಹಿತ ಮಳೆ

1-wqewqewqe

Hubli: ಇಲ್ಲಿ ಮತ ಚಲಾಯಿಸಿ ಬಂದವರಿಗೆ ಸಿಗುತ್ತೆ ಫ್ರೀ ಐಸ್ ಕ್ರೀಮ್!

suicide (2)

Mangaluru: ಆಸ್ಪತ್ರೆಗೆ ದಾಖಲಾಗಿದ್ದ ವಿಚಾರಣಾಧೀನ ಕೈದಿ ಆತ್ಮಹತ್ಯೆ

1-qeewqewqe

Maldives; ಪ್ರವಾಸೋದ್ಯಮದ ಭಾಗವಾಗಿ: ಭಾರತೀಯರನ್ನು ಅಂಗಲಾಚಿದ ಮಾಲ್ಡೀವ್ಸ್!

Lok Sabha Polls ರಬಕವಿ-ಬನಹಟ್ಟಿ: ವಿಶೇಷ ಮತಗಟ್ಟೆಯ ರೂವಾರಿಗಳು ಚಿತ್ರಕಲಾ ಶಿಕ್ಷಕರು

Lok Sabha Polls ರಬಕವಿ-ಬನಹಟ್ಟಿ: ವಿಶೇಷ ಮತಗಟ್ಟೆಯ ರೂವಾರಿಗಳು ಚಿತ್ರಕಲಾ ಶಿಕ್ಷಕರು

India’s first-ever ‘hybrid pitch’ was unveiled at the HPCA stadium

HPCA; ಧರ್ಮಶಾಲಾದಲ್ಲಿ ಭಾರತದ ಮೊದಲ ಹೈಬ್ರಿಡ್ ಪಿಚ್ ಅನಾವರಣ; ಏನಿದು ಹೊಸ ಆವಿಷ್ಕಾರ?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Israel War- ಭೂ ದಾಳಿಗೂ ಮುನ್ನ ರಾಫಾದಿಂದ 1 ಲಕ್ಷ ಜನರ ಸ್ಥಳಾಂತರ: WHO

Israel War- ಭೂ ದಾಳಿಗೂ ಮುನ್ನ ರಾಫಾದಿಂದ 1 ಲಕ್ಷ ಜನರ ಸ್ಥಳಾಂತರ: WHO

ಇಸ್ರೇಲ್‌ ದೇಶದಲ್ಲಿ ಅಲ್‌ಜಝೀರಾ ಸುದ್ದಿ ವಾಹಿನಿ ಶಾಶ್ವತ ಸ್ಥಗಿತ!

ಇಸ್ರೇಲ್‌ ದೇಶದಲ್ಲಿ ಅಲ್‌ಜಝೀರಾ ಸುದ್ದಿ ವಾಹಿನಿ ಶಾಶ್ವತ ಸ್ಥಗಿತ!

ಡ್ರಗ್ಸ್‌ ಕೊಟ್ಟು, ಸಂಸದೆಗೇ ಲೈಂಗಿಕ ಕಿರುಕುಳ ಆರೋಪ; ಆಸ್ಟ್ರೇಲಿಯಾ ಎಂಪಿ ಅಳಲು

ಡ್ರಗ್ಸ್‌ ಕೊಟ್ಟು, ಸಂಸದೆಗೇ ಲೈಂಗಿಕ ಕಿರುಕುಳ ಆರೋಪ; ಆಸ್ಟ್ರೇಲಿಯಾ ಎಂಪಿ

canada

Nijjar ಕೇಸ್ ತನಿಖೆ ಮೂವರ ಬಂಧನಕ್ಕೆ ಮುಕ್ತಾಯವಾಗಿಲ್ಲ: ಕೆನಡಾ ಪ್ರಧಾನಿ

Passenger hiding snakes in pants intercepted at Miami airport

Miami; ವಿಮಾನ ಪ್ರಯಾಣಿಕನ ಪ್ಯಾಂಟ್ ನಲ್ಲಿ ಹಾವುಗಳು! ಮಿಯಾಮಿ ಏರ್ಪೋರ್ಟ್ ನಲ್ಲಿ ಆಗಿದ್ದೇನು?

MUST WATCH

udayavani youtube

ಹಿಮೋಫಿಲಿಯಾ ಈ ರಕ್ತದ ಕಾಯಿಲೆ ಇರುವವರು ಮಾಡಬೇಕಾದ್ದೇನು ?

udayavani youtube

ಪ್ರಚಾರದ ವೇಳೆ ಕೈ ಮುಖಂಡನಿಗೆ ಕಪಾಳ ಮೋಕ್ಷ‌ ಮಾಡಿದ ಡಿಕೆಶಿ;

udayavani youtube

ಅಂಕಲ್ ಎಗ್ ರೈಸ್ ಕಾರ್ನರ್ ನಲ್ಲಿ ದಿನಕ್ಕೆ ಎಷ್ಟು ಮೊಟ್ಟೆ ಉಪಯೋಗಿಸುತ್ತಾರೆ ಗೊತ್ತಾ ?|

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

ಹೊಸ ಸೇರ್ಪಡೆ

Road Mishap ಗುಂಡ್ಲುಪೇಟೆ: ಅಪರಿಚಿತ ವಾಹನ ಡಿಕ್ಕಿ; ಬೈಕ್ ಸವಾರ ಸಾವು

Road Mishap ಗುಂಡ್ಲುಪೇಟೆ: ಅಪರಿಚಿತ ವಾಹನ ಡಿಕ್ಕಿ; ಬೈಕ್ ಸವಾರ ಸಾವು

1-wqeqweqw

Yellow alert; ಬೆಂಗಳೂರು ನಗರ ಸೇರಿ ಸುತ್ತಮುತ್ತ ಆಲಿಕಲ್ಲು ಸಹಿತ ಮಳೆ

1-weewqeq

Gadag; ಮತದಾನದ ಮುನ್ನಾ ದಿನ ಬಸ್‌ಗಳು ಫುಲ್ ರಶ್: ಜನರ ಪರದಾಟ

1-wqeeqw

Hunsur: ಹಣ್ಣಿನ ತೋಟ ಸೇರಿಕೊಂಡಿದ್ದ ಹೆಣ್ಣುಹುಲಿ ಸೆರೆ

1-wqewqewqe

Hubli: ಇಲ್ಲಿ ಮತ ಚಲಾಯಿಸಿ ಬಂದವರಿಗೆ ಸಿಗುತ್ತೆ ಫ್ರೀ ಐಸ್ ಕ್ರೀಮ್!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.