ಗೋವಾ, ಮಣಿಪುರ ಬಳಿಕ ತ್ರಿಪುರಾ ಕೋವಿಡ್ 19 ವೈರಸ್ ಮುಕ್ತ ರಾಜ್ಯ: ನಿರ್ಬಂಧ ಮುಂದುವರಿಕೆ
ಏಪ್ರಿಲ್ 6ರಿಂದ ಐಸೋಲೇಶನ್ ನಲ್ಲಿದ್ದ ಮಹಿಳೆಯನ್ನು ಏಪ್ರಿಲ್ 16ರಂದು ಆಸ್ಪತ್ರೆಯಿಂದ ಡಿಸ್ ಚಾರ್ಜ್ ಮಾಡಲಾಗಿತ್ತು ಎಂದು ವರದಿ ತಿಳಿಸಿದೆ.
Team Udayavani, Apr 24, 2020, 6:08 PM IST
Representative Image
ಪಣಜಿ/ಅಗರ್ತಾಲಾ: ಗೋವಾ ಹಾಗೂ ಮಣಿಪುರ ರಾಜ್ಯಗಳು ಕೋವಿಡ್ 19 ವೈರಸ್ ಶೂನ್ಯ ಪಾಸಿಟಿವ್ ಪ್ರಕರಣಗಳನ್ನು ದಾಖಲಿಸಿದ ದೇಶದ ಮೊದಲ ಎರಡು ರಾಜ್ಯಗಳಾಗಿದ್ದು, ಇದೀಗ ತ್ರಿಪುರಾ ಮುಖ್ಯಮಂತ್ರಿ ಬಿಪ್ಲಾಬ್ ಕುಮಾರ್ ದೇಬ್ ಕೂಡಾ ರಾಜ್ಯವನ್ನು ಕೋವಿಡ್ ಮುಕ್ತ ಎಂದು ಶುಕ್ರವಾರ ಘೋಷಿಸಿದ್ದಾರೆ.
ತ್ರಿಪುರಾದ ಎರಡನೇ ಕೋವಿಡ್ 19 ವೈರಸ್ ಪೀಡಿತ ರೋಗಿಯನ್ನು ಸತತವಾಗಿ ಪರೀಕ್ಷಿಸಿದ ಬಳಿಕ ಇದೀಗ ನೆಗೆಟಿವ್ ಎಂದು ವರದಿ ಬಂದ ನಂತರ ತ್ರಿಪುರಾ ರಾಜ್ಯವನ್ನು ಕೋವಿಡ್ 19 ಮುಕ್ತ ಎಂದು ಘೋಷಿಸಲಾಗಿದೆ. ರಾಜ್ಯದ ಪ್ರತಿಯೊಬ್ಬರು ಸಾಮಾಜಿಕ ಅಂತರವನ್ನು ಕಾಪಾಡಿಕೊಳ್ಳಬೇಕು, ಸರ್ಕಾರದ ಸೂಚನೆಯನ್ನು ಪಾಲಿಸಿ ಮನೆಯಲ್ಲಿಯೇ ಸುರಕ್ಷಿತವಾಗಿ ಇರಿ ಎಂದು ಸಿಎಂ ಟ್ವೀಟ್ ಮೂಲಕ ತಿಳಿಸಿದ್ದಾರೆ.
ತ್ರಿಪುರಾದ ಗೋಮತಿ ಜಿಲ್ಲೆಯ ಉದಯ್ ಪುರ್ ಮಹಿಳೆ ಮೊದಲ ಕೋವಿಡ್ 19 ಸೋಂಕು ಪೀಡಿತೆಯಾಗಿದ್ದು, ಐಸೋಲೇಶನ್ ಬಳಿಕ ಈಕೆ ಗುಣಮುಖರಾಗಿದ್ದಾರೆ. ಏಪ್ರಿಲ್ 6ರಿಂದ ಐಸೋಲೇಶನ್ ನಲ್ಲಿದ್ದ ಮಹಿಳೆಯನ್ನು ಏಪ್ರಿಲ್ 16ರಂದು ಆಸ್ಪತ್ರೆಯಿಂದ ಡಿಸ್ ಚಾರ್ಜ್ ಮಾಡಲಾಗಿತ್ತು ಎಂದು ವರದಿ ತಿಳಿಸಿದೆ.
ನಂತರ ಗೋಮತಿ ಜಿಲ್ಲೆಯಿಂದ 50 ಕಿಲೋ ಮೀಟರ್ ದೂರದಲ್ಲಿ ಮಹಿಳೆಯನ್ನು ಕ್ವಾರಂಟೈನ್ ಸೆಂಟರ್ ನಲ್ಲಿ ಇಡಲಾಗಿದೆ ಎಂದು ಅಧಿಕಾರಿಗಳು ಮಾಹಿತಿ ನೀಡಿರುವುದಾಗಿ ವರದಿ ಹೇಳಿದೆ. ಏಪ್ರಿಲ್ 16ರಂದು ಪತ್ತೆಯಾಗಿದ್ದ ತ್ರಿಪುರಾ ಸ್ಟೇಟ್ ರೈಫಲ್ಸ್ ನ ಯೋಧನ ವರದಿ ಪಾಸಿಟಿವ್ ಎಂದು ಬಂದಿತ್ತು. ಬಳಿಕ ಜಿಬಿ ಪಂತ್ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಿದ್ದು ಏ.23ರಂದು ನೆಗೆಟಿವ್ ವರದಿ ಬಂದಿರುವುದಾಗಿ ತಿಳಿಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಏ.26ರಂದು 2ನೇ ಹಂತದ ಚುನಾವಣೆ;ರಾಹುಲ್, ತರೂರ್, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ
EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂಕೋರ್ಟ್…ಆದರೆ…
Singapore ಏರ್ ಲೈನ್ಸ್ ಪೈಲಟ್ ನಂತೆ ಪೋಸ್ ಕೊಟ್ಟ ಉತ್ತರಪ್ರದೇಶ ಯುವಕನ ಬಂಧನ!
Lok Sabha 2ನೇ ಹಂತ; ದಾಖಲೆ ಸಂಖ್ಯೆಯಲ್ಲಿ ಭಾಗವಹಿಸಲು ಪ್ರಧಾನಿ ಮೋದಿ ಕನ್ನಡದಲ್ಲಿ ಮನವಿ
JEE; ಮಹಾರಾಷ್ಟ್ರ ರೈತನ ಮಗ ಮೇನ್ ಟಾಪರ್
MUST WATCH
ಹೊಸ ಸೇರ್ಪಡೆ
Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ
INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್
ಹೆಸ್ಕತ್ತೂರು ಕಟ್ಟಿನಬುಡ: ಕೃಷಿಗೆ ಆಸರೆಯಾಗದ ವಾರಾಹಿ ಕಾಲುವೆ ನೀರು!
Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ
WhatsApp ಭಾರತದಲ್ಲಿ ಸ್ಥಗಿತಗೊಳಿಸ್ತೇವೆ; ಹೈಕೋರ್ಟ್ ಮೆಟ್ಟಿಲೇರಿದ ಪ್ರಕರಣ, ಏನಿದು?