ಕರ್ನಾಟಕಕ್ಕೆ ಈ ವಾರದ ಬಳಕೆಗಾಗಿ 1.62 ಲಕ್ಷ ರೆಮ್ಡೆಸಿವಿರ್ ವಯಲ್ಸ್ ಹಂಚಿಕೆ

ಮುಖ್ಯಮಂತ್ರಿ ಯಡಿಯೂರಪ್ಪ ಜೊತೆ ಸದಾನಂದ ಗೌಡ ಚರ್ಚೆ

Team Udayavani, May 1, 2021, 9:16 PM IST

Allocation of 1.62 lakh Remdecivir Vials

ನವದೆಹಲಿ: ಕೇಂದ್ರ ಸರ್ಕಾರವು ವಿವಿಧ ರಾಜ್ಯಗಳಿಗೆ ಇಂದು ಹೆಚ್ಚುವರಿಯಾಗಿ 16.5 ಲಕ್ಷ ವಯಲ್ಸ್ ರೆಮ್ಡೆಸಿವಿರ್ ಚುಚ್ಚುಮದ್ದನ್ನು ಹಂಚಿಕೆ ಮಾಡಿದ್ದು ಕರ್ನಾಟಕಕ್ಕೆ 1.62 ಲಕ್ಷ ವಯಲ್ಸ್ ನಿಗದಿಪಡಿಸಲಾಗಿದೆ.

ಇದು ಮುಂದಿನ ವಾರದ ಅಂದರೆ ಮೇ 3ರಿಂದ 9ರವರೆಗಿನ ಅವಧಿಯ ಬಳಕೆಗೆಗಾಗಿ. ಇದರಿಂದಾಗಿ ರಾಜ್ಯಕ್ಕೆ ಇದುವರೆಗೆ ಹಂಚಿಕೆಯಾದ ರೆಮ್ಡೆಸಿವರ್ ಪ್ರಮಾಣ 3,01,300 ವಯಲ್ಸಿಗೆ ಏರಿಕೆಯಾದಂತಾಗಿದೆ.

ಪತ್ರಿಕಾ ಹೇಳಿಕೆಯೊಂದರಲ್ಲಿ ಈ ವಿಷಯ ತಿಳಿಸಿರುವ ಕೇಂದ್ರ ರಾಸಾಯನಿಕ ಮತ್ತು ರಸಗೊಬ್ಬರ ಸಚಿವ ಡಿ ವಿ ಸದಾನಂದ ಗೌಡ ಅವರು ರಾಜ್ಯಕ್ಕೆ ಏಪ್ರಿಲ್ 21ರಿಂದ ಮೇ 2ರವರೆಗಿನ ಬಳಕೆಗಾಗಿ 1,39,300 ವಯಲ್ಸ್ ರೆಮ್ಡೆಸಿವಿರ್ ಹಂಚಿಕೆ ಮಾಡಲಾಗಿತ್ತು. ಮುಂದಿನ ವಾರದ (ಸೋಮವಾರದಿಂದ ಭಾನುವಾರದವರೆಗೆ) ಬಳಕೆಗಾಗಿ 1.62 ಲಕ್ಷ ವಯಲ್ಸ್ ನಿಗದಿಪಡಿಸಲಾಗಿದೆ ಎಂದರು.

ಆಮದು ಮಾಡಿಕೊಳ್ಳಲಾಗುತ್ತಿರುವ ರೆಮ್ಡೆಸಿವರ್ ಪೈಕಿ 75 ಸಾವಿರ ವಯಲ್ಸ್ ಈಗಾಗಲೇ ಭಾರತ ತಲುಪಿದೆ. ಹಾಗೆಯೇ ಭಾರತದಲ್ಲಿಯೂ ರೆಮ್ಡೆಸಿವರ್ ಉತ್ಪಾದನೆ ದಿನದಿಂದ ದಿನಕ್ಕೆ ಹೆಚ್ಚುತ್ತಿದ್ದು ಲಭ್ಯತೆಯನ್ನು ನೋಡಿಕೊಂಡು ಇನ್ನೂ ಹೆಚ್ಚುವರಿಯಾಗಿ ಹಂಚಿಕೆ ಮಾಡಲಾಗುವುದು ಸಚಿವರು ಭರವಸೆ ನೀಡಿದರು.

ಕರ್ನಾಟಕದ ಆಮ್ಲಜನಕ ಪಾಲನ್ನು (ಪ್ರತಿದಿನ) ಸದ್ಯದ 802 ಮೆಟ್ರಿಕ್ ಟನ್ನಿನಿಂದ 865 ಮೆಟ್ರಿಕ್ ಟನ್ನಿಗೆ ಏರಿಸಲಾಗಿದೆ. ಇದನ್ನು ಇನ್ನಷ್ಟು ಹೆಚ್ಚಿಸುವಂತೆ ರಾಜ್ಯವು ಕೇಂದ್ರ ವಾಣಿಜ್ಯ ಇಲಾಖೆಯನ್ನು ಕೋರಿದೆ. ಈ ಬಗ್ಗೆ ಸಂಬಂಧಪಟ್ಟ ಸಚಿವರೊಂದಿಗೆ ನಾನೂ ಚರ್ಚಿಸಿದ್ದೇನೆ. ಕೋವಿಡ್ ನಿರ್ವಹಣೆ ಬಗ್ಗೆ  ಕೇಂದ್ರವು ರಾಜ್ಯ ಸರ್ಕಾರದೊಂದಿಗೆ ಸತತ ಸಂಪರ್ಕದಲ್ಲಿದೆ.  ಇಂದು ರಾಜ್ಯದ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಹಾಗೂ ಮುಖ್ಯ ಕಾರ್ಯದರ್ಶಿ ಪಿ ರವಿಕುಮಾರ್ ಅವರೊಂದಿಗೂ ನಾನು ಮಾತಾಡಿದ್ದೇನೆ. ಪ್ರಮುಖವಾಗಿ ಹೆಚ್ಚುವರಿ ಆಮ್ಲಜನಕ ಪೂರೈಕೆ ಬಗ್ಗೆ ಚರ್ಚಿಸಿದ್ದೇವೆ. ಕೋವಿಡ್ ವಿರುದ್ಧದ ಈ ಸಮರದಲ್ಲಿ ರಾಜ್ಯಕ್ಕೆ ಏನೆಲ್ಲ ನೆರವು ಬೇಕೋ ಅದನ್ನೆಲ್ಲ ಕೇಂದ್ರವು ಪ್ರಾಮಾಣಿಕ ಪ್ರಯತ್ನ ಮಾಡುವುದು ಎಂದು ಸದಾನಂದ ಗೌಡ ಹೇಳಿದರು.

ಅದೇ ರೀತಿ, ಇನ್ನೊಂದು ಪ್ರಮುಖ ಔಷಧ ‘ತೊಸಿಲಿಜುಮಾಬ್’ನ್ನು (Tocilizumab) ಸಿಪ್ಲಾ ಕಂಪನಿ ಮೂಲಕ ಸ್ವಿಜರ್ಲ್ಯಾಂಡಿನಿಂದ ಆಮದು ಮಾಡಿಕೊಳ್ಳಲಾಗುತ್ತಿದೆ. ಹೀಗೆ ಆಮದು ಮಾಡಿಕೊಳ್ಳಲಾದ 9500 ವಯಲ್ಸ್ ‘ತೊಸಿಲಿಜುಮಾಬ್’ನ್ನು ಕೇಂದ್ರದ ವೈದ್ಯಕೀಯ ಸಂಸ್ಥೆಗಳು ಹಾಗೂ ರಾಜ್ಯಗಳಿಗೆ ಹಂಚಿಕೆ ಮಾಡಲಾಗಿದೆ. ಈ ಪೈಕಿ ಕರ್ನಾಟಕಕ್ಕೆ 855 ವಯಲ್ಸ್ ಹಂಚಿಕೆ ಮಾಡಲಾಗಿದೆ ಎಂದು ಕೇಂದ್ರ ಫಾರ್ಮಾ ಸಚಿವರು ತಿಳಿಸಿದರು.

ಈ ಮಧ್ಯೆ ಕರ್ನಾಟಕದ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ (ಆರೋಗ್ಯ ಇಲಾಖೆ) ಜಾವಿದ್ ಅಖ್ತರ್ ಕೇಂದ್ರ ವಾಣಿಜ್ಯ ಇಲಾಖೆಗೆ ಪತ್ರವೊಂದನ್ನು ಬರೆದು ರಾಜ್ಯದ ಆಮ್ಲಜನಕದ ಪಾಲನ್ನು ಹೆಚ್ಚಿಸುವಂತೆ ಕೋರಿದ್ದಾರೆ. ರಾಜ್ಯದಲ್ಲಿ ಮೇ 5ರ ವೇಳೆಗೆ ಸಕ್ರೀಯ ಕೋವಿಡ್ ಪ್ರಕರಣಗಳು 3.95 ಲಕ್ಷಕ್ಕೆ ಏರಿಕೆಯಾಗಲಿದೆ. ಶೇಕಡಾ 3ರಷ್ಟು ಕೋವಿಡ್ ಪೀಡಿತರನ್ನು ತೀವ್ರನಿಗಾ ಘಟಕದಲ್ಲಿ ದಾಖಲಿಸಬೇಕಾಗುತ್ತದೆ. ಹಾಗೆಯೇ ಶೇಕಡಾ 17 ರಷ್ಟು ಜನರಿಗೆ ಆಮ್ಲಜನಕದ ಅವಶ್ಯಕತೆ ಉಂಟಾಗಲಿದೆ. ಇದರಿಂದಾಗಿ ಮೇ 5ರ ವೇಳೆಗೆ ರಾಜ್ಯದ ಆಮ್ಲಜನಕದ ಅವಶ್ಯಕತೆ ಪ್ರತಿದಿನ ಕನಿಷ್ಠಪಕ್ಷ 1162 ಮೆಟ್ರಿಕ್ ಟನ್ನಿಗೆ ಏರಿಕೆಯಾಗಲಿದ್ದು ಇದನ್ನು ಪೂರೈಸುವಂತೆ ಅವರು ಕೋರಿದ್ದಾರೆ.

ಟಾಪ್ ನ್ಯೂಸ್

Seat next to parents for children under 12 years on the plane?

DGCA: ವಿಮಾನದಲ್ಲಿ 12 ವರ್ಷದೊಳಗಿನ ಮಕ್ಕಳಿಗೆ ಪೋಷಕರ ಪಕ್ಕ ಆಸನ?

Congress ಗೆದ್ದರೆ ದಲಿತರ ಮೀಸಲು ಮುಸ್ಲಿಂ ಪಾಲು: ಮೋದಿ ಮತ್ತೆ ವಾಗ್ಬಾಣ

Congress ಗೆದ್ದರೆ ದಲಿತರ ಮೀಸಲು ಮುಸ್ಲಿಂ ಪಾಲು: ಮೋದಿ ಮತ್ತೆ ವಾಗ್ಬಾಣ

Dakshina Kannada: 5 ಸಿಎಪಿಎಫ್‌/ಕೆಎಸ್‌ಆರ್‌ಪಿ ತುಕಡಿ, 3,100 ಸಿಬಂದಿ ನಿಯೋಜನೆ

Dakshina Kannada: 5 ಸಿಎಪಿಎಫ್‌/ಕೆಎಸ್‌ಆರ್‌ಪಿ ತುಕಡಿ, 3,100 ಸಿಬಂದಿ ನಿಯೋಜನೆ

Election: ಮಂಗಳೂರು-ಶೋರ್ನೂರು-ಬೆಂಗಳೂರು ಮಧ್ಯೆ ವಿಶೇಷ ರೈಲು

Election: ಮಂಗಳೂರು-ಶೋರ್ನೂರು-ಬೆಂಗಳೂರು ಮಧ್ಯೆ ವಿಶೇಷ ರೈಲು

Udupi-Chikmagalur Lok Sabha constituency: ಯುವ ಮತದಾರರ ಚುನಾವಣೆ ಉತ್ಸಾಹ

Udupi-Chikmagalur: ಯುವ ಮತದಾರರ ಚುನಾವಣೆ ಉತ್ಸಾಹ

ಪರಿಹಾರ ತಾರತಮ್ಯ ಕಾಂಗ್ರೆಸ್‌ನ ನರೇಟಿವ್‌: ಅಣ್ಣಾಮಲೈ

ಪರಿಹಾರ ತಾರತಮ್ಯ ಕಾಂಗ್ರೆಸ್‌ನ ನರೇಟಿವ್‌: ಅಣ್ಣಾಮಲೈ

ಚೌಟರನ್ನು ದಾಖಲೆಯ ಅಂತರದಿಂದ ಗೆಲ್ಲಿಸಿ: ತಮಿಳುನಾಡು ಬಿಜೆಪಿ ಅಧ್ಯಕ್ಷ ಅಣ್ಣಾಮಲೈ

Puttur; ಚೌಟರನ್ನು ದಾಖಲೆಯ ಅಂತರದಿಂದ ಗೆಲ್ಲಿಸಿ: ಅಣ್ಣಾಮಲೈ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Seat next to parents for children under 12 years on the plane?

DGCA: ವಿಮಾನದಲ್ಲಿ 12 ವರ್ಷದೊಳಗಿನ ಮಕ್ಕಳಿಗೆ ಪೋಷಕರ ಪಕ್ಕ ಆಸನ?

Congress ಗೆದ್ದರೆ ದಲಿತರ ಮೀಸಲು ಮುಸ್ಲಿಂ ಪಾಲು: ಮೋದಿ ಮತ್ತೆ ವಾಗ್ಬಾಣ

Congress ಗೆದ್ದರೆ ದಲಿತರ ಮೀಸಲು ಮುಸ್ಲಿಂ ಪಾಲು: ಮೋದಿ ಮತ್ತೆ ವಾಗ್ಬಾಣ

Scrutiny of complaint against Modi: Election Commission

Loksabha Election; ಮೋದಿ ವಿರುದ್ಧದ ದೂರು ಪರಿಶೀಲನೆ: ಚುನಾವಣ ಆಯೋಗ

Election: ಕೇರಳದಲ್ಲಿ “ರಾಹುಲ್‌ ಗಾಂಧಿ ಡಿಎನ್‌ಎ ಪರೀಕ್ಷೆ’ ವಿವಾದ

Election: ಕೇರಳದಲ್ಲಿ “ರಾಹುಲ್‌ ಗಾಂಧಿ ಡಿಎನ್‌ಎ ಪರೀಕ್ಷೆ’ ವಿವಾದ

ಕರ್ನಾಟಕದಲ್ಲಿ ಹಿಂದುಳಿದ ವರ್ಗಕ್ಕೆ ಮುಸ್ಲಿಮರು: ಆಯೋಗ ಆಕ್ಷೇಪ

ಕರ್ನಾಟಕದಲ್ಲಿ ಹಿಂದುಳಿದ ವರ್ಗಕ್ಕೆ ಮುಸ್ಲಿಮರು: ಆಯೋಗ ಆಕ್ಷೇಪ

MUST WATCH

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

ಹೊಸ ಸೇರ್ಪಡೆ

Seat next to parents for children under 12 years on the plane?

DGCA: ವಿಮಾನದಲ್ಲಿ 12 ವರ್ಷದೊಳಗಿನ ಮಕ್ಕಳಿಗೆ ಪೋಷಕರ ಪಕ್ಕ ಆಸನ?

Congress ಗೆದ್ದರೆ ದಲಿತರ ಮೀಸಲು ಮುಸ್ಲಿಂ ಪಾಲು: ಮೋದಿ ಮತ್ತೆ ವಾಗ್ಬಾಣ

Congress ಗೆದ್ದರೆ ದಲಿತರ ಮೀಸಲು ಮುಸ್ಲಿಂ ಪಾಲು: ಮೋದಿ ಮತ್ತೆ ವಾಗ್ಬಾಣ

Dakshina Kannada: 5 ಸಿಎಪಿಎಫ್‌/ಕೆಎಸ್‌ಆರ್‌ಪಿ ತುಕಡಿ, 3,100 ಸಿಬಂದಿ ನಿಯೋಜನೆ

Dakshina Kannada: 5 ಸಿಎಪಿಎಫ್‌/ಕೆಎಸ್‌ಆರ್‌ಪಿ ತುಕಡಿ, 3,100 ಸಿಬಂದಿ ನಿಯೋಜನೆ

Election: ಮಂಗಳೂರು-ಶೋರ್ನೂರು-ಬೆಂಗಳೂರು ಮಧ್ಯೆ ವಿಶೇಷ ರೈಲು

Election: ಮಂಗಳೂರು-ಶೋರ್ನೂರು-ಬೆಂಗಳೂರು ಮಧ್ಯೆ ವಿಶೇಷ ರೈಲು

Udupi-Chikmagalur Lok Sabha constituency: ಯುವ ಮತದಾರರ ಚುನಾವಣೆ ಉತ್ಸಾಹ

Udupi-Chikmagalur: ಯುವ ಮತದಾರರ ಚುನಾವಣೆ ಉತ್ಸಾಹ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.