ಲಾಕ್ ಡೌನ್ ಲೆಕ್ಕಿಸದೇ ಗುಜರಾತ್, ಇಸ್ರೇಲ್ ನಿಂದ ಮುಂಬೈಗೆ ಹಾರಿಬಂದ ನಸುಗೆಂಪು ಸುಂದರಿಯರು!

ಕಳೆದ ವರ್ಷಕ್ಕೆ ಹೋಲಿಸಿದರೆ ಈ ಬಾರಿ ಶೇ.25ರಷ್ಟು ಹೆಚ್ಚು ಫ್ಲೆಮಿಂಗೋಗಳು ವಲಸೆ ಬಂದಿವೆ.

Team Udayavani, Apr 23, 2020, 1:29 PM IST

ಲಾಕ್ ಡೌನ್ ಲೆಕ್ಕಿಸದೇ ಗುಜರಾತ್, ಇಸ್ರೇಲ್ ನಿಂದ ಮುಂಬೈಗೆ ಹಾರಿಬಂದ ನಸುಗೆಂಪು ಸುಂದರಿಯರು!

ಮುಂಬೈ:ಮಹಾಮಾರಿ ಕೋವಿಡ್ 19 ವೈರಸ್ ಹರಡುವುದು ತಡೆಗಟ್ಟುವ ನಿಟ್ಟಿನಲ್ಲಿ ದೇಶಾದ್ಯಂತ ಲಾಕ್ ಡೌನ್, ಜನ ಸಂಚಾರ ವಿರಳ, ಬಸ್, ರೈಲು, ವಿಮಾನ ಸಂಚಾರ ರದ್ದುಗೊಂಡಿದ್ದರೆ ಮತ್ತೊಂದೆಡೆ ಪ್ರಾಣಿ, ಪಕ್ಷಿಗಳು ಸ್ವಚ್ಛಂದವಾಗಿ ವಿಹರಿಸತೊಡಗಿವೆ. ನವಿ ಮುಂಬೈನ ಸರೋವರ ಈಗ ಸಾವಿರಾರು ನಸುಗೆಂಪು ಬಣ್ಣದ ಫ್ಲೆಮಿಂಗೋಗಳು ವಲಸೆ ಬಂದಿದ್ದು, ಪಕ್ಷಿ ಪ್ರಿಯರ ಕಣ್ಮನಸೆಳೆಯತೊಡಗಿದೆ.

ಪ್ರತಿವರ್ಷ ನವಿಮುಂಬೈಯ ಸರೋವರಕ್ಕೆ ಅಪಾರ ಸಂಖ್ಯೆಯಲ್ಲಿ ನಸುಗೆಂಪು ಬಣ್ಣದ ಫ್ಲೆಮಿಂಗೋಗಳು ವಲಸೆ ಬರುವುದು ವಾಡಿಕೆ. ಈ ವರ್ಷ ಲಾಕ್ ಡೌನ್ ಆರಂಭವಾದ ನಂತರ ಭಾರೀ ಸಂಖ್ಯೆಯಲ್ಲಿ ಪ್ಲೆಮಿಂಗೋಗಳು ಇಡೀ ಪರಿಸರವನ್ನು ಸುಂದರಗೊಳಿಸಿವೆ ಎಂದು ಪ್ರಫುಲ್ ಪಟೇಲ್ ಟ್ವೀಟ್ ಮಾಡಿದ್ದಾರೆ.

ಬಾಂಬೆ ನ್ಯಾಚುರಲ್ ಹಿಸ್ಟರಿ ಸೊಸೈಟಿಯ ಮಾಹಿತಿ ಪ್ರಕಾರ, ಕಳೆದ ವರ್ಷಕ್ಕೆ ಹೋಲಿಸಿದರೆ ಈ ಬಾರಿ ಶೇ.25ರಷ್ಟು ಹೆಚ್ಚು ಫ್ಲೆಮಿಂಗೋಗಳು ವಲಸೆ ಬಂದಿವೆ. ಕಳೆದ ಬಾರಿ 1.2ಲಕ್ಷದಷ್ಟು ಹಕ್ಕಿಗಳು ವಲಸೆ ಬಂದಿದ್ದು, ಈ ವರ್ಷ ಏಪ್ರಿಲ್ ಮೊದಲ ವಾರದಲ್ಲಿ ಒಂದೂವರೆ ಲಕ್ಷಕ್ಕೂ ಅಧಿಕ ಫ್ಲೆಮಿಂಗೋಗಳು ವಲಸೆ ಬಂದಿವೆ ಎಂದು ತಿಳಿಸಿದೆ.

ಬಾಲಿವುಡ್ ನ ರವೀನಾ ಟಂಡನ್, ದಿಯಾ ಮಿರ್ಜಾ ಮತ್ತು ಟ್ವಿಂಕಲ್ ಖನ್ನಾ ಈ ಸುಂದರ ಫೋಟೋವನ್ನು ಟ್ವೀಟ್ ಮಾಡುವ ಮೂಲಕ ಅಭಿಪ್ರಾಯ ಹಂಚಿಕೊಂಡಿದ್ದಾರೆ.


ಈ ಫ್ಲೆಮಿಂಗೋಗಳು ಗುಜರಾತ್ ನ ಕಛ್ ನ ರಣ್ ಹಾಗೂ ರಾಜಸ್ಥಾನದ ಸಾಂಬಾರ್ ಲೇಕ್, ಇನ್ನು ಪಾಕಿಸ್ತಾನ, ಅಫ್ಘಾನಿಸ್ತಾನ, ಇರಾನ್ ಮತ್ತು ಇಸ್ರೇಲ್ ಗಳಿಂದ ವಲಸೆ ಬರುತ್ತವೆ ಎಂದು ವರದಿ ವಿವರಿಸಿದೆ.

ಟಾಪ್ ನ್ಯೂಸ್

1—ewqewqe

IPL; ಅಗ್ರಸ್ಥಾನಿ ರಾಜಸ್ಥಾನ್‌-ಲಕ್ನೋ: ಬಲಿಷ್ಠರ ಸೆಣಸಾಟ

congress

BJP ಅಭ್ಯರ್ಥಿ ಅವಿರೋಧ ಆಯ್ಕೆ: ಸೂರತ್‌ನ ಕಾಂಗ್ರೆಸ್‌ ಅಭ್ಯರ್ಥಿ ಉಚ್ಚಾಟನೆ

1-visa

India VISA ನೀತಿ ಬಗ್ಗೆ ಅಲ್ಲಿನ ಸರಕಾರ ಮಾತನಾಡಲಿ: ಅಮೆರಿಕ

cbsc

CBSE ವರ್ಷಕ್ಕೆ 2 ಬಾರಿ ಪರೀಕ್ಷೆ:ರೂಪರೇಖೆಗೆ ಸೂಚನೆ

indi-1

Airbus; 30 ಏರ್‌ಬಸ್‌ ವಿಮಾನ ಖರೀದಿಗೆ ಮುಂದಾದ ಇಂಡಿಗೋ ಕಂಪೆನಿ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

1-weqwwqewq

ಬಾಂದ್ರಾ- ವರ್ಲಿ ಸೀ ಲಿಂಕ್‌ಗೆ 25,000 ಟನ್‌ ಗರ್ಡರ್‌ ಅಳವಡಿಕೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

cbsc

CBSE ವರ್ಷಕ್ಕೆ 2 ಬಾರಿ ಪರೀಕ್ಷೆ:ರೂಪರೇಖೆಗೆ ಸೂಚನೆ

indi-1

Airbus; 30 ಏರ್‌ಬಸ್‌ ವಿಮಾನ ಖರೀದಿಗೆ ಮುಂದಾದ ಇಂಡಿಗೋ ಕಂಪೆನಿ

1-weqwwqewq

ಬಾಂದ್ರಾ- ವರ್ಲಿ ಸೀ ಲಿಂಕ್‌ಗೆ 25,000 ಟನ್‌ ಗರ್ಡರ್‌ ಅಳವಡಿಕೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

militry

Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1—ewqewqe

IPL; ಅಗ್ರಸ್ಥಾನಿ ರಾಜಸ್ಥಾನ್‌-ಲಕ್ನೋ: ಬಲಿಷ್ಠರ ಸೆಣಸಾಟ

congress

BJP ಅಭ್ಯರ್ಥಿ ಅವಿರೋಧ ಆಯ್ಕೆ: ಸೂರತ್‌ನ ಕಾಂಗ್ರೆಸ್‌ ಅಭ್ಯರ್ಥಿ ಉಚ್ಚಾಟನೆ

1-visa

India VISA ನೀತಿ ಬಗ್ಗೆ ಅಲ್ಲಿನ ಸರಕಾರ ಮಾತನಾಡಲಿ: ಅಮೆರಿಕ

cbsc

CBSE ವರ್ಷಕ್ಕೆ 2 ಬಾರಿ ಪರೀಕ್ಷೆ:ರೂಪರೇಖೆಗೆ ಸೂಚನೆ

indi-1

Airbus; 30 ಏರ್‌ಬಸ್‌ ವಿಮಾನ ಖರೀದಿಗೆ ಮುಂದಾದ ಇಂಡಿಗೋ ಕಂಪೆನಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.