ಸೋಂಕಿತರ ಸಂಖ್ಯೆ ಹೆಚ್ಚಳ; ಇನ್ಮುಂದೆ ಕೋವಿಡ್ ಚಿಕಿತ್ಸೆ ರೋಗಿಗೆ ದುಬಾರಿಯಾಗಲಿದೆಯಾ?
ರಾಜ್ಯ ಸರ್ಕಾರ ಹಸಿರು ನಿಶಾನೆ ತೋರಿದರೆ ಕೋವಿಡ್ 19 ಸೋಂಕಿತರು ದುಬಾರಿ ಬೆಲೆ ತೆರಬೇಕಾಗಲಿದೆ ಎಂದು ವರದಿ ವಿವರಿಸಿದೆ.
Team Udayavani, Jun 6, 2020, 4:48 PM IST
ಬೆಂಗಳೂರು: ಕೋವಿಡ್ 19 ವೈರಸ್ ಅಮೆರಿಕ, ಸ್ಪೇನ್, ಬ್ರೆಜಿಲ್ ಸೇರಿದಂತೆ ವಿಶ್ವದ ಹಲವು ದೇಶಗಳನ್ನು ಕಂಗೆಡಿಸಿರುವ ನಡುವೆಯೇ ಇದೀಗ ಭಾರತದಲ್ಲಿಯೂ ಕೋವಿಡ್ ಕ್ಷಿಪ್ರವಾಗಿ ಹರಡತೊಡಗಿದೆ. ಅದರಲ್ಲಿಯೂ ಕರ್ನಾಟಕದಲ್ಲಿ ದಿನದಿಂದ ದಿನಕ್ಕೆ ಸೋಂಕಿತರ ಸಂಖ್ಯೆ ದುಪ್ಪಟ್ಟಾಗುತ್ತಿದೆ. ಈ ಹಿನ್ನೆಲೆಯಲ್ಲಿ ಇನ್ಮುಂದೆ ಕೋವಿಡ್ ಚಿಕಿತ್ಸೆ ರೋಗಿಗಳಿಗೆ ದುಬಾರಿಯಾಗುವ ಸಾಧ್ಯತೆ ಇದೆ ಎಂದು ವಿಶ್ಲೇಷಿಸಲಾಗುತ್ತಿದೆ.
ಇದನ್ನೂ ಓದಿ:Covid19 ವೈರಸ್ ರೋಗಿಯ ಚಿಕಿತ್ಸೆಗೆ ತಗಲುವ ವೆಚ್ಚ ಎಷ್ಟು ಗೊತ್ತಾ? ಬೊಕ್ಕಸಕ್ಕೆ ಎಷ್ಟು ಹೊರೆ!
ರಾಜ್ಯದಲ್ಲಿ ಕೋವಿಡ್ 19 ಸೋಂಕಿತರ ಸಂಖ್ಯೆ 700 ದಾಟಿ ಹೋಗಿದೆ. ಇನ್ನು ಕೆಲವೇ ದಿನಗಳಲ್ಲಿ ಸೋಂಕಿತರ ಸಂಖ್ಯೆ ಹೀಗೆ ದ್ವಿಗುಣಗೊಳ್ಳುತ್ತಾ ಹೋದರೆ ಉಚಿತವಾಗಿ ಚಿಕಿತ್ಸೆ ಲಭ್ಯವಾಗುವುದು ಕಷ್ಟವಾಗಬಹುದು. ಇದರಿಂದಾಗಿ ಸರ್ಕಾರ ಖಾಸಗಿ ಆಸ್ಪತ್ರೆಗಳತ್ತ ಮುಖ ಮಾಡಲಿದೆ ಎಂದು ಮೂಲಗಳು ಹೇಳಿವೆ. ಒಂದು ವೇಳೆ ಖಾಸಗಿ ಆಸ್ಪತ್ರೆಗಳಲ್ಲಿ ಚಿಕಿತ್ಸೆ ನೀಡಲು ರಾಜ್ಯ ಸರ್ಕಾರ ಹಸಿರು ನಿಶಾನೆ ತೋರಿದರೆ ಕೋವಿಡ್ 19 ಸೋಂಕಿತರು ದುಬಾರಿ ಬೆಲೆ ತೆರಬೇಕಾಗಲಿದೆ ಎಂದು ವರದಿ ವಿವರಿಸಿದೆ.
ಈಗಾಗಲೇ ವರದಿಯಾಗಿರುವಂತೆ ಖಾಸಗಿ ಆಸ್ಪತ್ರೆಗಳಲ್ಲಿ ಕೋವಿಡ್ ರೋಗಿಗೆ ಚಿಕಿತ್ಸೆ ಪಡೆಯಲು ಅಂದಾಜು 3ರಿಂದ 4 ಲಕ್ಷ ರೂಪಾಯಿ ವ್ಯಯಿಸಬೇಕಾಗುತ್ತದೆ. ಈ ನಿಟ್ಟಿನಲ್ಲಿ ಕೋವಿಡ್ ರೋಗಿಗಳ ಸಂಖ್ಯೆ ಹೆಚ್ಚಾಗುವ ಜತೆಗೆ ಚಿಕಿತ್ಸೆಯ ವೆಚ್ಚವೂ ದುಬಾರಿಯಾಗಲಿದೆ ಎಂದು ವರದಿಯೊಂದು ತಿಳಿಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರ್ಕಾರ ಬದ್ಧ: ಸತೀಶ್ ಜಾರಕಿಹೊಳಿ
Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್ರಿಂದ ಪರಿಶೀಲನೆ
Kalaburagi; ಬಿಜೆಪಿ ತೊರೆದು ಮರಳಿ ಕಾಂಗ್ರೆಸ್ ಸೇರಿದ ಮಾಲೀಕಯ್ಯ ಗುತ್ತೇದಾರ
Lok Sabha Election: ‘ಬಿವೈಆರ್ಗೆ 3 ಲಕ್ಷ ಮತ ಅಂತರದ ಗೆಲುವು ಖಚಿತ’
ಹಣ ಪಡೆದು ವರ್ಗಾವಣೆಯಾದ ಪೊಲೀಸರಿಂದ ಕಾನೂನು ವ್ಯವಸ್ಥೆ ನಿರೀಕ್ಷೆ ಸಾಧ್ಯವೇ?: ಜೋಶಿ ಪ್ರಶ್ನೆ
MUST WATCH
ಹೊಸ ಸೇರ್ಪಡೆ
BJP ಶ್ರೀರಾಮುಲು, ಗಾಯತ್ರಿ ಸಿದ್ದೇಶ್ವರ್ ಈಗಾಗಲೇ ಗೆದ್ದಿದ್ದಾರೆ: ಜನಾರ್ದನ ರೆಡ್ಡಿ
Kumta: ಮಾಜಿ ಶಾಸಕಿ ಶಾರದಾ ಮೋಹನ್ ಶೆಟ್ಟಿ ಮರಳಿ ಕಾಂಗ್ರೆಸ್ ಸೇರ್ಪಡೆ
Udupi: ರಮಾಬಾಯಿ ಕೊಚ್ಚಿಕಾರ್ ಪೈ ನಿಧನ
Bajpe: ಹೆದ್ದಾರಿಯಲ್ಲಿ ಬ್ರೇಕ್ ಫೇಲ್ ಆಗಿ ಅಂಗಡಿಗಳು, ಹಲವು ವಾಹನಗಳಿಗೆ ಗುದ್ದಿದ ಲಾರಿ!
ಧರ್ಮ ಮಾರ್ಗದಲ್ಲಿ ನಡೆದರಷ್ಟೇ ಜೀವನ ಸಾರ್ಥಕ: ಶ್ರೀ ವಿಧುಶೇಖರಶ್ರೀ