ಕೋವಿಡ್‌ಗೆ ಸೋಂಕಿತರ ಪ್ರತಿಕಾಯಗಳೇ ಮದ್ದು

160 ಜನರು ಪರೀಕ್ಷೆಗೆ ಒಳಗಾಗಿದ್ದು, ಎಲ್ಲರಲ್ಲೂ ಪ್ರತಿರೋಧಕ ಶಕ್ತಿ ಉತ್ಪತ್ತಿ ಪತ್ತೆ

Team Udayavani, May 29, 2020, 2:31 PM IST

ಕೋವಿಡ್‌ಗೆ ಸೋಂಕಿತರ ಪ್ರತಿಕಾಯಗಳೇ ಮದ್ದು

ಪ್ಯಾರಿಸ್‌: ಕೋವಿಡ್‌-19 ಇಡೀ ಮನುಕುಲದ ನಿದ್ದೆಗೆಡಿಸಿದೆ. ಇನ್ನೇನು ಸೋಂಕಿತರ ಪ್ರಮಾಣ ಕಡಿತವಾಗುತ್ತಿದೆ ಎಂದು ನಿಟ್ಟುಸಿರು ಬಿಡುವಾಗಲೇ ಮತ್ತೂಮ್ಮೆ ಅಬ್ಬರಿಸಿ ಬರುತ್ತಿದೆ. ಈ ಮಹಾಮಾರಿಯನ್ನು ಮಟ್ಟಹಾಕಲು ಲಸಿಕೆಯ ಅಗತ್ಯ ಇದೆ ಎಂದು ವಿಶ್ವದೆಲ್ಲೆಡೆ ಜನರು ಅಭಿಪ್ರಾಯಪಟ್ಟಿದ್ದಾರೆ. ಈ ನಡುವೆ ಆಶಾದಾಯಕ ಎನಿಸುವ ಕೆಲವು ಅಧ್ಯಯನಗಳು ನಡೆಯುತ್ತಿದ್ದು, ಫ್ರಾನ್ಸ್ ನಿಂದ ಸಕಾರಾತ್ಮಕ ವರದಿ ಹೊರಬಿದ್ದಿದೆ.

ಸೋಂಕಿಗೆ ತುತ್ತಾದ ವ್ಯಕ್ತಿಗಳ ದೇಹದಲ್ಲಿಯೇ ವೈರಸನ್ನು ಎದುರಿಸುವ ಶಕ್ತಿ ಉತ್ಪತ್ತಿ ಯಾಗಲಿದ್ದು, ಅವರಿಗೆ ಮತ್ತೂಮ್ಮೆ ಕೋವಿಡ್‌ – 19 ಪತ್ತೆಯಾಗುವುದಿಲ್ಲ ಎಂದು ಹೇಳಲಾಗಿದೆ. ಈಶಾನ್ಯ ಫ್ರಾನ್ಸ್ ನ ಸ್ಟ್ರಾಸ್‌ ಬರ್ಗ್‌ನಲ್ಲಿರುವ ಪಾಶ್ಚರ್‌ ಸಂಸ್ಥೆ ಹಾಗೂ ವಿಶ್ವವಿದ್ಯಾಲಯದ ಆಸ್ಪತ್ರೆಯ ಸಹಭಾಗಿತ್ವದಲ್ಲಿ ಈ ಅಧ್ಯಯನ ನಡೆದಿದೆ. ಕೋವಿಡ್‌-19 ವಿರುದ್ಧ ಮುಖ್ಯ ಭೂಮಿಕೆಯಲ್ಲಿ ಹೋರಾಡುತ್ತಿರುವ ವೈದ್ಯಾಧಿಕಾರಿಗಳ ತಂಡ, ದಾದಿಯರು ಹಾಗೂ ಸಿಬಂದಿಯ ಮೇಲೆ ಈ ಪ್ರಯೋಗ ಕೈಗೊಳ್ಳಲಾಗಿದೆ. ಪ್ರಾರಂಭಿಕ ಹಂತದ ಸೋಂಕಿನ ಗುಣಲಕ್ಷಣಗಳು ಕಂಡುಬಂದ ವೈದ್ಯರು ಹಾಗೂ ಆಸ್ಪತ್ರೆ ಸಿಬಂದಿಯ ದೇಹದಲ್ಲಿ ಸೋಂಕು ನಿಗ್ರಹಿಸುವ ಪ್ರತಿಕಾಯಗಳು ಉತ್ಪತ್ತಿಯಾಗಿವೆ ಎಂದು ಅಧ್ಯಯನದ ವರದಿ ಹೇಳಿದೆ.

ಸೋಂಕಿಗೆ ಒಳಗಾದ ಪರೀಕ್ಷಾರ್ಥಿಗಳ ಪೈಕಿ ಶೇ. 98 ಜನರಲ್ಲಿ 28ರಿಂದ 41 ದಿನಗಳ ಒಳಗಾಗಿ ರೋಗ ನಿರೋಧಕ ಶಕ್ತಿಯ ಕಣಗಳು ಕಂಡುಬಂದಿದ್ದು, ರಕ್ತದ ಮಾದರಿಯನ್ನು ಆಧರಿಸಿ ಈ ಪರೀಕ್ಷೆ ನಡೆಸಲಾಗಿದೆ ಎಂದು ವರದಿ ಉಲ್ಲೇಖೀಸಿದೆ. ದಿನ ಕಳೆದಂತೆ ದೇಹದಲ್ಲಿ ಸೋಂಕನ್ನು ನಿಗ್ರಹಿಸುವ ಕಣಗಳ ಪ್ರಮಾಣದಲ್ಲೂ ಹೆಚ್ಚಳ ಕಂಡುಬಂದಿದ್ದು, ಮತ್ತಷ್ಟು ವಿಷಯಗಳನ್ನು ತಿಳಿದು ಕೊಳ್ಳಲು ಉಪಯುಕ್ತ ಎಂದು ಸಂಶೋಧಕರ ತಂಡ ಅಭಿಪ್ರಾಯಪಟ್ಟಿದೆ. ಆದರೆ, ಈ ನಿಟ್ಟಿನಲ್ಲಿ ಮತ್ತಷ್ಟು ಪ್ರಯೋಗಗಳು ನಡೆಯಬೇಕಿವೆ ಎಂದು ಅಭಿಪ್ರಾಯಪಟ್ಟಿದ್ದಾರೆ.

ಸುಮಾರು 160 ಜನರು ಈ ಪರೀಕ್ಷೆಗೆ ಒಳಗಾಗಿದ್ದು, ಎಲ್ಲರಲ್ಲೂ ರೋಗ ಪ್ರತಿರೋಧಕ ಶಕ್ತಿ ಉತ್ಪತ್ತಿಯಾಗಿದ್ದು ಕಂಡುಬಂದಿದೆ. ಅದರಲ್ಲೂ ಓರ್ವನಿಗೆ ಸೋಂಕು ಕಾಣಿಸಿಕೊಂಡ ಕೇವಲ 15 ದಿನಗಳಲ್ಲಿ ಸೋಂಕಿನ ವಿರುದ್ಧ ಹೋರಾಡುವ ಪ್ರತಿಕಾಯಗಳು ಸೃಷ್ಟಿಯಾಗಿವೆ ಎಂದು ಸಂಶೋಧನ ವರದಿ ತಿಳಿಸಿದೆ.

ಟಾಪ್ ನ್ಯೂಸ್

cbsc

CBSE ವರ್ಷಕ್ಕೆ 2 ಬಾರಿ ಪರೀಕ್ಷೆ:ರೂಪರೇಖೆಗೆ ಸೂಚನೆ

indi-1

Airbus; 30 ಏರ್‌ಬಸ್‌ ವಿಮಾನ ಖರೀದಿಗೆ ಮುಂದಾದ ಇಂಡಿಗೋ ಕಂಪೆನಿ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

1-weqwwqewq

ಬಾಂದ್ರಾ- ವರ್ಲಿ ಸೀ ಲಿಂಕ್‌ಗೆ 25,000 ಟನ್‌ ಗರ್ಡರ್‌ ಅಳವಡಿಕೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

ಶಿಬರೂರು ಕ್ಷೇತ್ರಕ್ಕೆ ಚಿತ್ರನಟಿ ಶಿಲ್ಪಾ ಶೆಟ್ಟಿ ಭೇಟಿ

ಶಿಬರೂರು ಕ್ಷೇತ್ರಕ್ಕೆ ಚಿತ್ರನಟಿ ಶಿಲ್ಪಾ ಶೆಟ್ಟಿ ಭೇಟಿ

Dakshina Kannada ಅಭ್ಯರ್ಥಿಗಳ ದಿನಚರಿ

Dakshina Kannada ಅಭ್ಯರ್ಥಿಗಳ ದಿನಚರಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Covid-19: ಕೋವಿಡ್ ಭೀತಿ; ಮೂರು ರಾಜ್ಯಗಳಲ್ಲಿ ಮಾಸ್ಕ್‌ ಕಡ್ಡಾಯ

Covid-19: ಕೋವಿಡ್ ಭೀತಿ; ಮೂರು ರಾಜ್ಯಗಳಲ್ಲಿ ಮಾಸ್ಕ್‌ ಕಡ್ಡಾಯ

UP government mandates Covid testing for arriving international passengers

Covid 19 ವಿದೇಶದಿಂದ ಬರುವವರಿಗೆ ಕೋವಿಡ್ ಟೆಸ್ಟ್ ಕಡ್ಡಾಯ ಮಾಡಿದ ಉತ್ತರ ಪ್ರದೇಶ ಸರ್ಕಾರ

mansukh mandaviya

ಕೋವಿಡ್ ಗೂ ಹೃದಯಾಘಾತಕ್ಕೂ ಸಂಬಂಧವಿದೆಯೇ? ಉತ್ತರ ನೀಡಿದ ಕೇಂದ್ರ ಆರೋಗ್ಯ ಸಚಿವ

India Sees Single-Day Rise Of Over 1,000 Covid-19 Cases

ಎಚ್3ಎನ್2 ಭೀತಿಯ ಮಧ್ಯೆ ಕೋವಿಡ್ ಏರಿಕೆ; ಒಂದೇ ದಿನ ಸಾವಿರ ದಾಟಿದ ಸೋಂಕಿತರ ಸಂಖ್ಯೆ

ಕೋವಿಡ್ 19 ಲಸಿಕೆಯಿಂದ ಅಡ್ಡಪರಿಣಾಮ ಇರೋದು ನಿಜ: RTIನಲ್ಲಿ ಕೇಂದ್ರದ ಉತ್ತರ ಬಹಿರಂಗ

ಕೋವಿಡ್ 19 ಲಸಿಕೆಯಿಂದ ಅಡ್ಡಪರಿಣಾಮ ಇರೋದು ನಿಜ: RTIನಲ್ಲಿ ಕೇಂದ್ರದ ಉತ್ತರ ಬಹಿರಂಗ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

cbsc

CBSE ವರ್ಷಕ್ಕೆ 2 ಬಾರಿ ಪರೀಕ್ಷೆ:ರೂಪರೇಖೆಗೆ ಸೂಚನೆ

indi-1

Airbus; 30 ಏರ್‌ಬಸ್‌ ವಿಮಾನ ಖರೀದಿಗೆ ಮುಂದಾದ ಇಂಡಿಗೋ ಕಂಪೆನಿ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

1-weqwwqewq

ಬಾಂದ್ರಾ- ವರ್ಲಿ ಸೀ ಲಿಂಕ್‌ಗೆ 25,000 ಟನ್‌ ಗರ್ಡರ್‌ ಅಳವಡಿಕೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.