ಕೋವಿಡ್ 19, ಸರ್ಕಾರದ ವಿರುದ್ಧ ಗಂಭೀರ ಆರೋಪ; ಅಸ್ಸಾಂ ಶಾಸಕ ಅಮಿನುಲ್ ಅರೆಸ್ಟ್
ಅಸ್ಸಾಂನಲ್ಲಿರುವ ಕ್ವಾರಂಟೈನ್ ಸೆಂಟರ್ ಗಳು ತುಂಬಾ ಅಪಾಯಕಾರಿಯಾಗಿವೆ
Team Udayavani, Apr 7, 2020, 3:37 PM IST
MLA Aminul Islam
ಗುವಾಹಟಿ: ರಾಜ್ಯದಲ್ಲಿ ಕೋವಿಡ್ 19ಗೆ ಸಂಬಂಧಿಸಿದಂತೆ ಕ್ವಾರಂಟೈನ್ ವ್ಯವಸ್ಥೆ ಮತ್ತು ಆಸ್ಪತ್ರೆಗಳ ಬಗ್ಗೆ ವಿವಾದಿತ ಹೇಳಿಕೆಯನ್ನು ನೀಡಿರುವ ಅಸ್ಸಾಂನ ವಿರೋಧ ಪಕ್ಷದ ಶಾಸಕರೊಬ್ಬರನ್ನು ಬಂಧಿಸಲಾಗಿದೆ. ರಾಜ್ಯದಲ್ಲಿರುವ ಕ್ವಾರಂಟೈನ್ ಕೇಂದ್ರಗಳು ವಲಸಿಗರ ಬಂಧನ ಕೇಂದ್ರಕ್ಕಿಂತ ಕಳಪೆಯಾಗಿದೆ ಎಂದು ನೀಡಿರುವ ಹೇಳಿಕೆಯ ಆಡಿಯೋ ಕ್ಲಿಪ್ ವೈರಲ್ ಆಗಿತ್ತು.
ಅಸ್ಸಾಂನ ಆಲ್ ಇಂಡಿಯಾ ಯೂನೈಟೆಡ್ ಡೆಮೋಕ್ರಟಿಕ್ ಫ್ರಂಟ್ (ಎಐಯುಡಿಎಫ್)ನ ಧಿಂಗ್ ಕ್ಷೇತ್ರದ ಶಾಸಕ ಅಮಿನುಲ್ ಇಸ್ಲಾಂ ಹಾಗೂ ಮತ್ತೊಬ್ಬ ವ್ಯಕ್ತಿ ಉದ್ದೇಶಪೂರ್ವಕವಾಗಿ ನೀಡಿರುವ ಆಡಿಯೋ ಕ್ಲಿಪ್ ನಲ್ಲಿ, ಅಸ್ಸಾಂನಲ್ಲಿರುವ ಕ್ವಾರಂಟೈನ್ ಸೆಂಟರ್ ಗಳು ತುಂಬಾ ಅಪಾಯಕಾರಿಯಾಗಿವೆ. ಅಲ್ಲದೇ ಅಕ್ರಮ ವಲಸಿಗರ ಡಿಟೆನ್ ಶನ್ ಸೆಂಟರ್ ಕ್ಕಿಂತಲೂ ಕೆಟ್ಟದಾಗಿದೆ ಎಂದು ಆರೋಪಿಸಿರುವುದಾಗಿ ವರದಿ ತಿಳಿಸಿದೆ.
ಅಸ್ಸಾಂನಲ್ಲಿರುವ ಬಿಜೆಪಿ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ್ದ ಇಸ್ಲಾಂ, ಬಿಜೆಪಿ ಸರ್ಕಾರ ಮುಸ್ಲಿಮರ ವಿರುದ್ಧ ಸಂಚು ನಡೆಸುತ್ತಿದೆ. ಕಳೆದ ತಿಂಗಳು ದಿಲ್ಲಿಯ ನಿಜಾಮುದ್ದೀನ್ ಮರ್ಕಜ್ ನಲ್ಲಿ ನಡೆದ ಧಾರ್ಮಿಕ ಸಭೆಯಲ್ಲಿ ಭಾಗವಹಿಸಿ ವಾಪಸಾಗಿದ್ದವರ ಮೇಲೆ ವೈದ್ಯ ಸಿಬ್ಬಂದಿಗಳು ಕಿರುಕುಳ ನೀಡುತ್ತಿದ್ದಾರೆ. ಅಷ್ಟೇ ಅಲ್ಲ ಅವರಿಗೆ ಇಂಜೆಕ್ಷನ್ ನೀಡುವ ಮೂಲಕ ಕೋವಿಡ್ ಸೋಂಕಿತ ರೋಗಿಗಳಂತೆ ಬಿಂಬಿಸುತ್ತಿದ್ದಾರೆ ಎಂದು ಆರೋಪಿಸಿದ್ದ ಎಂದು ವರದಿ ವಿವರಿಸಿದೆ.
ದೇಶದಲ್ಲಿ ಪತ್ತೆಯಾಗಿರುವ ಕೋವಿಡ್ 19 ಸೋಂಕು ಪೀಡಿತರಲ್ಲಿ 3/1ರಷ್ಟು ಸೋಂಕಿತರು ದೆಹಲಿಯ ನಿಜಾಮುದ್ದೀನ್ ಮಸೀದಿಯ ತಬ್ಲಿಘಿ ಜಮಾತ್ ನ ಧಾರ್ಮಿಕ ಸಭೆಯಲ್ಲಿ ಪಾಲ್ಗೊಂಡಿರುವವರು ಹೆಚ್ಚಾಗಿದ್ದಾರೆ ಎಂದು ವರದಿ ತಿಳಿಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Madhya Pradesh Rally; ಕೈಯಿಂದ ಮೀಸಲಾತಿ ಕಸಿಯುವ ಯತ್ನ: ಪ್ರಧಾನಿ ಮೋದಿ
Rahul Gandhi: ಜಾತಿಗಣತಿಯನ್ನು ಯಾವ ಶಕ್ತಿಯೂ ತಡೆಯಲಾರದು: ರಾಹುಲ್ ಗಾಂಧಿ
Rajveer Diler: ಹೃದಯಾಘಾತದಿಂದ ಬಿಜೆಪಿ ಸಂಸದ ರಾಜ್ವೀರ್ ದಿಲೇರ್ ನಿಧನ
Scam: 25,000 ಕೋಟಿ ಬ್ಯಾಂಕ್ ಹಗರಣ ಪ್ರಕರಣ: ಅಜಿತ್ ಪವಾರ್ ಪತ್ನಿ ಸುನೇತ್ರಾಗೆ ಕ್ಲೀನ್ ಚಿಟ್
LS Polls: ವೇದಿಕೆಯಲ್ಲಿ ಭಾಷಣ ಮಾಡುತ್ತಲೇ ಅಸ್ವಸ್ಥಗೊಂಡ ಕೇಂದ್ರ ಸಚಿವ ನಿತಿನ್ ಗಡ್ಕರಿ
MUST WATCH
ಹೊಸ ಸೇರ್ಪಡೆ
ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್ ಬ್ರಿಜೇಶ್ ಚೌಟ
ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್ ಬೆಂಬಲಿಸಿ: ಪದ್ಮರಾಜ್ ಪೂಜಾರಿ
ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ
ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ
Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ