ರಾಜ್ಯದಲ್ಲೇ ಸಿಕ್ತಾ ಮಹಾಮಾರಿಗೆ ಔಷಧಿ?; ಯಶಸ್ವಿಯಾಯ್ತು ಕಜೆ ಔಷಧಿ ಪ್ರಯೋಗ!


Team Udayavani, Jul 2, 2020, 8:31 PM IST

ರಾಜ್ಯದಲ್ಲೇ ಸಿಕ್ತಾ ಮಹಾಮಾರಿಗೆ ಔಷಧಿ?; ಯಶಸ್ವಿಯಾಯ್ತು ಕಜೆ ಔಷಧಿ ಪ್ರಯೋಗ!

ಸಾಂದರ್ಭಿಕ ಚಿತ್ರವನ್ನು ಬಳಸಲಾಗಿದೆ – Representative Image Used

ಬೆಂಗಳೂರು: ವಿಶ್ವಾದ್ಯಂತ ವೈದ್ಯ ವಿಜ್ಞಾನಿಗಳು ಹಗಲಿರುಳೂ ತಲೆ ಕೆಡಿಸಿಕೊಂಡು ಕೋವಿಡ್ 19 ಮಹಾಮಾರಿಗೆ ಔಷಧಿ ಕಂಡುಹಿಡಿಯಲು ಶ್ರಮಿಸುತ್ತಿದ್ದಾರೆ.

ಈಗಾಗಲೇ ಹಲವಾರು ಸಂಶೋಧನೆಗಳು ಕ್ಲಿನಿಕಲ್ ಟ್ರಯಲ್ ಹಂತದವರೆಗೆ ಬಂದು ನಿಂತಿದೆ. ಈ ವರ್ಷಾಂತ್ಯದೊಳಗೆ ಈ ಮಹಾಮಾರಿಗೆ ಔಷಧಿ ಪತ್ತೆಹಚ್ಚುವ ಆಶಾವಾದವನ್ನು ಇತ್ತೀಚೆಗೆ ವಿಶ್ವ ಆರೋಗ್ಯ ಸಂಸ್ಥೆಯೂ ಸಹ ವ್ಯಕ್ತಪಡಿಸಿತ್ತು.

ಈ ನಡುವೆ ಬಾಬಾ ರಾಮ್ ದೇವ್ ಅವರ ಪತಂಜಲಿ ಸಂಸ್ಥೆ, ತಾನು ಕೋವಿಡ್ ಮಹಾಮಾರಿಗೆ ಆಯುರ್ವೇಧ ಔಷಧಿ ಕಂಡುಹಿಡಿದಿರುವುದಾಗಿ ಘೋಷಿಸಿ ಬಳಿಕ ಯೂ-ಟರ್ನ್ ಹೊಡೆದಿತ್ತು.

ಆದರೆ ಇದೀಗ ಬೆಂಗಳೂರಿನ ವಿಕ್ಟೋರಿಯಾ ಕೋವಿಡ್ ಆಸ್ಪತ್ರೆಯಲ್ಲಿ ಕೋವಿಡ್ ಸೋಂಕಿತರಿಗೆ ನೀಡಿರುವ ಆಯುರ್ವೇದ ಔಷಧಿಯೊಂದು ತನ್ನ ಪರಿಣಾಮವನ್ನು ತೋರಿಸಿದೆ.

ಹೌದು, ದಕ್ಷಿಣ ಕನ್ನಡದ ಪುತ್ತೂರು ಮೂಲದ ಆಯುರ್ವೇದ ವೈದ್ಯ ಡಾ. ಗಿರಿಧರ ಕಜೆ ಅವರು ಅಭಿವೃದ್ಧಿಪಡಿಸಿರುವ ಆಯುರ್ವೇದ ಔಷಧಿಯೊಂದು ಕೋವಿಡ್ ಸೋಂಕಿತರ ಪಾಲಿಗೆ ಸಂಜೀವಿನಿಯಾಗುವ ಎಲ್ಲಾ ಸಾಧ್ಯತೆಗಳೂ ಗೋಚರಿಸಲಾರಂಭಿಸಿದೆ.

ಕೋವಿಡ್ 19 ಸೋಂಕು ಭಾರತದಲ್ಲಿ ಕಾಣಿಸಿಕೊಂಡ ಪ್ರಾರಂಭದಲ್ಲೇ ಡಾ. ಗಿರಿಧರ್ ಕಜೆ ಅವರು ತಮ್ಮಲ್ಲಿ ಈ ಸೋಂಕಿಗೆ ಔಷಧಿ ಇದೆ ಎಂದು ಪ್ರಸ್ತಾಪಿಸಿ ಪ್ರಧಾನಮಂತ್ರಿಯವರಿಗೆ ಪತ್ರವೊಂದನ್ನೂ ಬರೆದಿದ್ದರು.

ಬಳಿಕ ಭಾರತೀಯ ವೈದ್ಯಕೀಯ ಸಂಶೋಧನಾ ಸಂಸ್ಥೆಯ ಅಧೀನ ಸಂಸ್ಥೆಯಾಗಿರುವ ಕ್ಲಿನಿಕಲಿ ಟ್ರಯಲ್ ರಿಜಸ್ಟರಿ ಆಫ್ ಇಂಡಿಯಾ ಕಜೆ ಅವರಿಗೆ ತಮ್ಮ ಬಳಿ ಇರುವ ಈ ಔಷದಿಯನ್ನು ಕೋವಿಡ್ ಸೋಂಕಿತರ ಮೇಲೆ ಪ್ರಯೋಗ ನಡೆಸಲು ಅನುಮತಿ ನೀಡಿತ್ತು.

ಈ ಪ್ರಕಾರವಾಗಿ ಡಾ. ಕಜೆ ಅವರು ವಿಕ್ಟೋರಿಯಾ ಕೋವಿಡ್ ಆಸ್ಪತ್ರೆಯಲ್ಲಿ ತಮ್ಮಲ್ಲಿರುವ ಔಷಧಿಯ ಪ್ರಯೋಗವನ್ನು ಜೂನ್ 7 ರಂದು 25ರವರೆಗೆ ನಡೆಸಿದ್ದು, 10 ಸೋಂಕಿತರ ಮೇಲೆ ಈ ಪ್ರಯೋಗವನ್ನು ನಡೆಸಲಾಗಿತ್ತು.

ಸುಮಾರು 14 ಗಿಡಮೂಲಿಕೆಗಳಿಂದ ತಯಾರಿಸಲಾದ ಎರಡು ಮಾತ್ರೆಗಳನ್ನು ಹತ್ತು ಸೋಂಕಿತರಿಗೆ 19 ದಿನಗಳವರೆಗೆ ನೀಡಲಾಗಿತ್ತು. ಈ ಎಲ್ಲಾ ಸೋಂಕಿತರು ರಕ್ತದೊತ್ತಡ, ಮಧುಮೇಹ ಮತ್ತು ಇನ್ನಿತರ ಸಹ ಸಮಸ್ಯೆಗಳಿಂದಲೂ ಬಳಲುತ್ತಿದ್ದರು ಹಾಗೂ ಇವರೆಲ್ಲರೂ 26 ರಿಂದ 65 ವರ್ಷ ಪ್ರಾಯವರ್ಗದ ಸೋಂಕಿತರಾಗಿದ್ದರು ಎಂಬ ಮಾಹಿತಿಯನ್ನೂ ಡಾ. ಕಜೆ ಅವರು ಇದೀಗ ನೀಡಿದ್ದಾರೆ.

ಈ ಎಲ್ಲಾ ಸೋಂಕಿತರಿಗೆ ಅಲೋಪಥಿ ಚಿಕಿತ್ಸೆಗೆ ಪೂರಕವಾಗಿ ಎರಡು ಆಯುರ್ವೇದ ಮಾತ್ರೆಗಳನ್ನು ನೀಡಲಾಗಿತ್ತು. ಮತ್ತು ಈ ಪ್ರಯೋಗ ಇದೀಗ ಯಶಸ್ವಿಯಾಗಿರುವುದು ಭವಿಷ್ಯದಲ್ಲಿ ಕೋವಿಡ್ 19 ಸೋಂಕಿಗೆ ಒಂದು ಪರಿಣಾಮಕಾರಿ ಔಷಧಿಯನ್ನು ಅಭಿವೃದ್ಧಿಪಡಿಸುವಲ್ಲಿ ಒಂದು ಮಹತ್ವದ ಮೈಲುಗಲ್ಲಾಗುವ ಸಾಧ್ಯತೆಗಳಿವೆ.

ಮಾತ್ರವಲ್ಲದೇ ವಿಶ್ವವನ್ನೇ ಕಂಗೆಡಿಸಿರುವ ಮಹಾಮಾರಿಗೆ ನಮ್ಮ ರಾಜ್ಯದಲ್ಲೇ ಔಷಧಿಯೊಂದು ಪತ್ತೆಯಾದರೆ ಆ ಹೆಮ್ಮೆ ಎಲ್ಲಾ ಕನ್ನಡಿಗರದ್ದಾಗಲಿದೆ!

ಟಾಪ್ ನ್ಯೂಸ್

Srinagar: ಝೇಲಂ ನದಿಯಲ್ಲಿ ವಿದ್ಯಾರ್ಥಿಗಳಿದ್ದ ಬೋಟ್‌ ಮುಳುಗಡೆ; ಹಲವರು ನಾಪತ್ತೆ

Srinagar: ಝೇಲಂ ನದಿಯಲ್ಲಿ ವಿದ್ಯಾರ್ಥಿಗಳಿದ್ದ ಬೋಟ್‌ ಮುಳುಗಡೆ; ಹಲವರು ನಾಪತ್ತೆ

IPL 2024; ಮುಂಬೈ ಪಂದ್ಯದ ಟಾಸ್ ಕಳ್ಳಾಟ ಬಿಚ್ಚಿಟ್ಟ ಆರ್ ಸಿಬಿ ನಾಯಕ ಫಾಫ್| Video

IPL 2024; ಮುಂಬೈ ಪಂದ್ಯದ ಟಾಸ್ ಕಳ್ಳಾಟ ಬಿಚ್ಚಿಟ್ಟ ಆರ್ ಸಿಬಿ ನಾಯಕ ಫಾಫ್| Video

Salman Khan: ನಟ ಸಲ್ಮಾನ್‌ ಖಾನ್‌ ನಿವಾಸದ ಮೇಲೆ ಗುಂಡಿನ ದಾಳಿ; ಇಬ್ಬರ ಬಂಧನ

Salman Khan: ನಟ ಸಲ್ಮಾನ್‌ ಖಾನ್‌ ನಿವಾಸದ ಮೇಲೆ ಗುಂಡಿನ ದಾಳಿ; ಇಬ್ಬರ ಬಂಧನ

RCBsvSRH; ಚಿನ್ನಸ್ವಾಮಿಯಲ್ಲಿ ರೆಕಾರ್ಡ್ಸ್ ಸುರಿಮಳೆ; ದಾಖಲೆಗಳ ವಿವರ ಇಲ್ಲಿದೆ

RCBsvSRH; ಚಿನ್ನಸ್ವಾಮಿಯಲ್ಲಿ ರೆಕಾರ್ಡ್ಸ್ ಸುರಿಮಳೆ; ದಾಖಲೆಗಳ ವಿವರ ಇಲ್ಲಿದೆ

Bus Falls From Bridge In Odisha’s Jajpur

Jajpur; ಸೇತುವೆಯಿಂದ ಬಿದ್ದ ಬಸ್; ಐವರು ಸಾವು, ಹಲವರಿಗೆ ಗಾಯ

‘Please sell the RCB team to someone else’; Tennis star appeal

IPL 2024; ‘ದಯವಿಟ್ಟು ಆರ್ ಸಿಬಿ ತಂಡವನ್ನು ಬೇರೆಯವರಿಗೆ ಮಾರಿ ಬಿಡಿ’; ಟೆನ್ನಿಸ್ ತಾರೆ ಮನವಿ

Lok Sabha Elections ಈಶ್ವರಪ್ಪ ಸ್ಪರ್ಧೆಯಿಂದ ಬಿಜೆಪಿಗೆ ಲಾಭ: ಆರ್‌. ಅಶೋಕ್‌

Lok Sabha Elections ಈಶ್ವರಪ್ಪ ಸ್ಪರ್ಧೆಯಿಂದ ಬಿಜೆಪಿಗೆ ಲಾಭ: ಆರ್‌. ಅಶೋಕ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Covid-19: ಕೋವಿಡ್ ಭೀತಿ; ಮೂರು ರಾಜ್ಯಗಳಲ್ಲಿ ಮಾಸ್ಕ್‌ ಕಡ್ಡಾಯ

Covid-19: ಕೋವಿಡ್ ಭೀತಿ; ಮೂರು ರಾಜ್ಯಗಳಲ್ಲಿ ಮಾಸ್ಕ್‌ ಕಡ್ಡಾಯ

UP government mandates Covid testing for arriving international passengers

Covid 19 ವಿದೇಶದಿಂದ ಬರುವವರಿಗೆ ಕೋವಿಡ್ ಟೆಸ್ಟ್ ಕಡ್ಡಾಯ ಮಾಡಿದ ಉತ್ತರ ಪ್ರದೇಶ ಸರ್ಕಾರ

mansukh mandaviya

ಕೋವಿಡ್ ಗೂ ಹೃದಯಾಘಾತಕ್ಕೂ ಸಂಬಂಧವಿದೆಯೇ? ಉತ್ತರ ನೀಡಿದ ಕೇಂದ್ರ ಆರೋಗ್ಯ ಸಚಿವ

India Sees Single-Day Rise Of Over 1,000 Covid-19 Cases

ಎಚ್3ಎನ್2 ಭೀತಿಯ ಮಧ್ಯೆ ಕೋವಿಡ್ ಏರಿಕೆ; ಒಂದೇ ದಿನ ಸಾವಿರ ದಾಟಿದ ಸೋಂಕಿತರ ಸಂಖ್ಯೆ

ಕೋವಿಡ್ 19 ಲಸಿಕೆಯಿಂದ ಅಡ್ಡಪರಿಣಾಮ ಇರೋದು ನಿಜ: RTIನಲ್ಲಿ ಕೇಂದ್ರದ ಉತ್ತರ ಬಹಿರಂಗ

ಕೋವಿಡ್ 19 ಲಸಿಕೆಯಿಂದ ಅಡ್ಡಪರಿಣಾಮ ಇರೋದು ನಿಜ: RTIನಲ್ಲಿ ಕೇಂದ್ರದ ಉತ್ತರ ಬಹಿರಂಗ

MUST WATCH

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

udayavani youtube

ಕೇಕ್ ಪ್ರಿಯರಿಗೆ ಹೇಳಿ ಮಾಡಿಸಿದ ಜಾಗ ಔರಾ .

udayavani youtube

ಶ್ರೀ ವೈಷ್ಣವಿ ದುರ್ಗಾ ದೇವಾಲಯ

udayavani youtube

ಟೈಟನ್ ಕಂಪೆನಿಯ Xylys ವಾಚ್ ವಿಶೇಷತೆಗಳೇನು ?

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

ಹೊಸ ಸೇರ್ಪಡೆ

Srinagar: ಝೇಲಂ ನದಿಯಲ್ಲಿ ವಿದ್ಯಾರ್ಥಿಗಳಿದ್ದ ಬೋಟ್‌ ಮುಳುಗಡೆ; ಹಲವರು ನಾಪತ್ತೆ

Srinagar: ಝೇಲಂ ನದಿಯಲ್ಲಿ ವಿದ್ಯಾರ್ಥಿಗಳಿದ್ದ ಬೋಟ್‌ ಮುಳುಗಡೆ; ಹಲವರು ನಾಪತ್ತೆ

IPL 2024; ಮುಂಬೈ ಪಂದ್ಯದ ಟಾಸ್ ಕಳ್ಳಾಟ ಬಿಚ್ಚಿಟ್ಟ ಆರ್ ಸಿಬಿ ನಾಯಕ ಫಾಫ್| Video

IPL 2024; ಮುಂಬೈ ಪಂದ್ಯದ ಟಾಸ್ ಕಳ್ಳಾಟ ಬಿಚ್ಚಿಟ್ಟ ಆರ್ ಸಿಬಿ ನಾಯಕ ಫಾಫ್| Video

Salman Khan: ನಟ ಸಲ್ಮಾನ್‌ ಖಾನ್‌ ನಿವಾಸದ ಮೇಲೆ ಗುಂಡಿನ ದಾಳಿ; ಇಬ್ಬರ ಬಂಧನ

Salman Khan: ನಟ ಸಲ್ಮಾನ್‌ ಖಾನ್‌ ನಿವಾಸದ ಮೇಲೆ ಗುಂಡಿನ ದಾಳಿ; ಇಬ್ಬರ ಬಂಧನ

RCBsvSRH; ಚಿನ್ನಸ್ವಾಮಿಯಲ್ಲಿ ರೆಕಾರ್ಡ್ಸ್ ಸುರಿಮಳೆ; ದಾಖಲೆಗಳ ವಿವರ ಇಲ್ಲಿದೆ

RCBsvSRH; ಚಿನ್ನಸ್ವಾಮಿಯಲ್ಲಿ ರೆಕಾರ್ಡ್ಸ್ ಸುರಿಮಳೆ; ದಾಖಲೆಗಳ ವಿವರ ಇಲ್ಲಿದೆ

Bus Falls From Bridge In Odisha’s Jajpur

Jajpur; ಸೇತುವೆಯಿಂದ ಬಿದ್ದ ಬಸ್; ಐವರು ಸಾವು, ಹಲವರಿಗೆ ಗಾಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.