ಶೇ. 90ರಷ್ಟು ಸಾವುಗಳಿಗೆ ಬೇರೆ ಕಾರಣವಿದೆ !


Team Udayavani, Aug 23, 2020, 3:23 PM IST

ಶೇ. 90ರಷ್ಟು  ಸಾವುಗಳಿಗೆ ಬೇರೆ ಕಾರಣವಿದೆ !

ನ್ಯೂಯಾರ್ಕ್‌: ಕೋವಿಡ್ ದಿಂದ ಸಾವನ್ನಪ್ಪಿದ ಜನರ ನಿಖರ ಸಂಖ್ಯೆಯನ್ನು ಗಣನೆಗೆ ತೆಗೆದುಕೊಳ್ಳುವುದು ಕಷ್ಟ ಎಂದು ಮೈಕ್ರೋಸಾಫ್ಟ್ ಸಹ ಸಂಸ್ಥಾಪಕ ಬಿಲ್‌ಗೇಟ್ಸ್‌ ಹೇಳಿದ್ದಾರೆ. ಕೋವಿಡ್ ಸೋಂಕು ಈ ಜಗತ್ತಿನಿಂದ ತೊಲಗುವ ಮೊದಲು ಲಕ್ಷಾಂತರ ಜನರು ಸಾಯುತ್ತಾರೆ. ಆದರೆ ಈ ಸಾವುಗಳನ್ನು ಕೋವಿಡ್ ದಿಂದ ಉಂಟಾದ ಸಾವು ಎಂದು ಹೇಳುವುದು ಕಷ್ಟ. ಕೋವಿಡ್‌ ಜಗತ್ತಿನ ಆರೋಗ್ಯ ವ್ಯವಸ್ಥೆ ಮತ್ತು ಆರ್ಥಿಕತೆಗಳ ಮೇಲೆ ಹೆಚ್ಚಿನ ಹೊರೆಯನ್ನು ಹೊರೆಸಿದೆ. ಬಡ ದೇಶಗಳಲ್ಲಿ ಕೊರೊನಾದಿಂದ ಉಂಟಾದ ಹಾನಿಯನ್ನು ನಿಖರವಾಗಿ ನಿರ್ಣಯಿಸುವುದು ಕಷ್ಟಕರವಾಗಿದೆ ಎಂದು ಉದ್ಯಮಿಯೂ ಆಗಿರುವ ಅವರು ಹೇಳಿದ್ದಾರೆ.

ಲಸಿಕೆ 2021ರ ಅಂತ್ಯದ ವೇಳೆಗೆ ಲಸಿಕೆ! :  ಈಗಾಗಲೇ ಕೆಲವು ದೇಶಗಳು ಲಸಿಕೆಗಳನ್ನು ಉತ್ಪಾದಿಸುತ್ತಿವೆ. ಮುಂಬರುವ ದಿನಗಳಲ್ಲಿ ಇಂತಹ ನೂರಾರು ಲಸಿಕೆಗಳನ್ನು ಹಲವು ದೇಶಗಳು ಉತ್ಪಾದಿಸಲಿವೆ. ಆದರೆ ಸರಿಯಾಗಿ ಪರಿಣಾಮಕಾರಿಯಾದ ಲಸಿಕೆಯ ಹೆಚ್ಚಿನ ಉತ್ಪಾದನೆಯು 2021ರ ಬಳಿಕವಷ್ಟೇ ಸಾಧ್ಯವಾಗಲಿದೆ ಎಂದು ಮೈಕ್ರೋಸಾಫ್ಟ್ ಸ್ಥಾಪಕ ಅಂದಾಜಿಸಿದ್ದಾರೆ. ಲಸಿಕೆ ತಯಾರಾಗುವ ಸಂದರ್ಭದಲ್ಲಿ ಕೊರೊನಾ ರೋಗಿಗಳ ಪ್ರಮಾಣವೂ ಇಳಿಕೆಯಾಗಲಿದೆ. ಈ ತನಕ ಸಂಭವಿಸಿದ ಶೇ.90ರಷ್ಟು ಸಾವುಗಳಿಗೆ ಕೊರೊನಾ ಮಾತ್ರ ಕಾರಣವಾಗಿಲ್ಲ. ಇತರ ಕಾಯಿಲೆಗಳಿಂದಲೂ ನಡೆದಿವೆ ಎಂದು ಬಿಲ್‌ ಗೇಟ್ಸ್‌ ಹೇಳಿದ್ದಾರೆ.

ಲಾಕ್‌ಡೌನ್‌ ಕಾರಣದಿಂದ ಜನರು ಇತರ ಕಾಯಿಲೆಗಳಿಗೆ ತುತ್ತಾಗಿದ್ದರು. ಈಗಾಗಲೇ ರೋಗ ಇದ್ದ ಕೆಲವರು ಔಷಧಿಯ ಕೊರತೆಯಿಂದ ಸಾವನ್ನಪ್ಪಿದ್ದರು. ಇದರಲ್ಲಿ ಇದು ಮಲೇರಿಯಾ ಮತ್ತು ಎಚ್‌ಐವಿಯಿಂದ ಸಂಭವಿಸುವ ಸಾವುಗಳೂ ಇದರಲ್ಲಿ ಸೇರಿವೆ.

350 ಮಿಲಿಯನ್‌ ಡಾಲರ್‌ ಕೊಡುಗೆ : ಸಾಂಕ್ರಾಮಿಕ ಸಮಯದಲ್ಲಿ ಬಿಲ್‌ ಗೇಟ್ಸ್‌ ಫೌಂಡೇಶನ್‌ 350 ಮಿಲಿಯನ್‌ ಡಾಲರ್‌ ಕೊಡುಗೆ ನೀಡಿದೆ ಎಂದು ಗೇಟ್ಸ್‌ ತನ್ನ ಸಂದರ್ಶನದಲ್ಲಿ ಹೇಳಿದ್ದಾರೆ. ಆದರೆ ಇದು ಸಾಕಾಗುವುದಿಲ್ಲ. ಇನ್ನೂ ಹೆಚ್ಚಿನ ಹಣದ ಅಗತ್ಯವಿದೆ. ಆರ್ಥಿಕ ನಷ್ಟವನ್ನು ತಡೆಗಟ್ಟಲು ಕೋವಿಡ್‌ -19 ಲಸಿಕೆ ತಯಾರಿಸಲು ನೆರವು ನೀಡುವುದಾಗಿ ಅವರು ಹೇಳಿದ್ದಾರೆ.

ಲಸಿಕೆಯನ್ನುಮಕ್ಕಳು,ವೃದ್ಧರಿಗೆ ಮೀಸಲಿಡಿ  : ಮುಂಬರುವ ದಿನಗಳಲ್ಲಿ ಕೋವಿಡ್ ಲಸಿಕೆ ಅಭಿವೃದ್ಧಿಯಾಗಲಿದ್ದು, ಅವುಗಳನ್ನು ಮಕ್ಕಳು, ವೃದ್ಧರು ಅಂತಹ ಕೆಲವು ಗುಂಪುಗಳಿಗೆ ಮೀಸಲಿಡಿ, ಎಲ್ಲರೂ ತೆಗೆದುಕೊಳ್ಳುವ ಅಗತ್ಯವಿಲ್ಲ ಎಂದು ಅಮೆರಿಕ ಆರೋಗ್ಯ ತಜ್ಞರು ಅಭಿಪ್ರಾಯಪಟ್ಟಿದ್ದಾರೆ. ಆಂಥೊನಿ ಫಾಸಿ ಮಾತನಾಡಿ, ಯಾವುದೇ ಕಾರಣಕ್ಕೂ ಲಸಿಕೆಯನ್ನು ಪಡೆಯಲೇಬೇಕು ಎಂದು ಯಾರನ್ನೂ ಒತ್ತಾಯ ಮಾಡುವಂತಿಲ್ಲ, ಅವರಿಗೆ ತೆಗೆದುಕೊಳ್ಳಬೇಕೆನಿಸಿದರೆ ತೆಗೆದುಕೊಳ್ಳಬಹುದು, ಕಡ್ಡಾಯವಿಲ್ಲ ಎಂದರು. ಆರೋಗ್ಯ ಕಾರ್ಯಕರ್ತರು, ಮಕ್ಕಳು ಸೇರಿದಂತೆ ಕೆಲವೇ ಕೆಲವು

ಗುಂಪುಗಳಿಗೆ ಕಡ್ಡಾಯವಾಗಿ ನೀಡಬೇಕು. ಆರೋಗ್ಯ ಕಾರ್ಯಕರ್ತರು ಈ ಲಸಿಕೆ ಪಡೆದುಕೊಳ್ಳದೆ ರೋಗಿಗಳ ಸೇವೆ ಮಾಡಲು ಸಾಧ್ಯವಿಲ್ಲ. ಆಸ್ಟ್ರೇಲಿಯಾ ಪ್ರಧಾನಿ ಸ್ಕಾಟ್‌ ಮಾರಿಸನ್‌ ಮಾತನಾಡಿ, ಕೋವಿಡ್ ಲಸಿಕೆಗೆ ಒಮ್ಮೆ ಸಮ್ಮತಿ ಸಿಕ್ಕರೆ, ದೇಶದ ಜನತೆ ಕಡ್ಡಾಯವಾಗಿ ಲಸಿಕೆಯನ್ನು ತೆಗೆದುಕೊಳ್ಳಬೇಕು ಎಂದು ಘೋಷಿಸಿದ್ದಾರೆ. ಈ ರೀತಿ ಯಾರ ಮೇಲೂ ಒತ್ತಾಯ ಹೇರಬಾರದು ಎಂದಿದ್ದಾರೆ. ಟ್ರಂಪ್‌ 6 ಕಂಪನಿಗಳಿಗೆ ಮುಂಚಿತವಾಗಿಯೇ ಕೋವಿಡ್ ಲಸಿಕೆಯ ಬೇಡಿಕೆಯನ್ನಿಟ್ಟಿದೆ.

 

ವಿಶ್ವ ಆರೋಗ್ಯ ಸಂಸ್ಥೆಯಿಂದ ರಾಷ್ಟ್ರಗಳಿಗೆ ಪತ್ರ :  ಜಿನೇವಾ: ತನ್ನ ಜಾಗತಿಕ ಲಸಿಕೆ ಕಾರ್ಯಕ್ರಮದಲ್ಲಿ ಸೇರಿಕೊಳ್ಳುವಂತೆ ಆಹ್ವಾನಿಸಿ ವಿಶ್ವ ಆರೋಗ್ಯ ಸಂಸ್ಥೆಯು ಪ್ರತಿಯೊಂದು ದೇಶಕ್ಕೆ ಮಂಗಳವಾರ ಪತ್ರವೊಂದನ್ನು ಬರೆದಿದೆ ಹಾಗೂ ತನ್ನ ಸಂಭಾವ್ಯ ಲಸಿಕೆ ಯಾರಿಗೆ ಮೊದಲು ಸಿಗುತ್ತ ದೆ ಎಂಬುದನ್ನೂ ಅದು ತಿಳಿಸಿದೆ.

ಅತಿ ಹೆಚ್ಚಿನ ಅಪಾಯಕ್ಕೆ ಗುರಿಯಾಗಿರುವ ಜಗತ್ತಿನ ಜನ ಸಮುದಾಯಕ್ಕೆ ಏಕಕಾಲದಲ್ಲಿ ಲಸಿಕೆಯನ್ನು ನೀಡದ ಹೊರತು, ಜಾಗತಿಕ ಆರ್ಥಿಕತೆಯನ್ನು ಪುನರ್ನಿರ್ಮಿಸುವುದು ಅಸಾಧ್ಯ ಎಂದು ವಿಶ್ವ ಆರೋಗ್ಯ ಸಂಸ್ಥೆಯ ಮಹಾನಿರ್ದೇಶಕ ಟೆಡ್ರಾಸ್‌ ಅದನಾಮ್‌ ಗೇಬ್ರಿಯೇಸಸ್‌ ಹೇಳಿದ್ದಾರೆ.

ಲಸಿಕೆ ಸಿದ್ಧವಾದ ಮೇಲೆ ಮೊದಲ ಸುತ್ತಿನ ಲಸಿಕೆಯನ್ನು ಪ್ರತಿ ದೇಶದ ಜನಸಂಖ್ಯೆಯ 20 ಶೇಕಡದಷ್ಟು ಮಂದಿಗೆ ನೀಡಲಾಗುವುದು. ಇದರಲ್ಲಿ ಮುಂಚೂಣಿಯಲ್ಲಿ ಸೇವೆ ಸಲ್ಲಿಸುವ ಆರೋಗ್ಯ ಕಾರ್ಯಕರ್ತರು, 65 ವರ್ಷಕ್ಕಿಂತ ಹೆಚ್ಚಿನವರು ಮತ್ತು ಈಗಾಗಲೇ ಇತರ ಗಂಭೀರ ರೋಗಗಳಿಂದ ಬಳಲುತ್ತಿರುವವರು ಸೇರಿದ್ದಾರೆ ಎಂದು ಅವರು ತಿಳಿಸಿದರು. ವಿಶ್ವ ಆರೋಗ್ಯ ಸಂಸ್ಥೆಯ ನೇತೃತ್ವದಲ್ಲಿ “ಕೋವ್ಯಾಕ್ಸ್’ ಎಂಬ ಕಂಪೆನಿಯು ಕೋವಿಡ್‌ ಲಸಿಕೆಯ ಸಂಶೋಧನೆಯಲ್ಲಿ ತೊಡಗಿದೆ.

 

ಟಾಪ್ ನ್ಯೂಸ್

it

Congress ಬಳಿಕ ಸಿಪಿಐಗೂ 11 ಕೋಟಿ ರೂ.ಬಾಕಿಗಾಗಿ ಐಟಿ ನೋಟಿಸ್

ಸಿರಿಯಾದ ಮೇಲೆ ಇಸ್ರೇಲ್ ವೈಮಾನಿಕ ದಾಳಿ… 5 ಹಿಜ್ಬುಲ್ ಸದಸ್ಯರು ಸೇರಿ 38 ಮಂದಿ ಹತ

ಸಿರಿಯಾದ ಮೇಲೆ ಇಸ್ರೇಲ್ ವೈಮಾನಿಕ ದಾಳಿ… 5 ಹಿಜ್ಬುಲ್ ಸದಸ್ಯರು ಸೇರಿ 38 ಮಂದಿ ಹತ

20-

Crime: ಗುದದ್ವಾರಕ್ಕೆ ಗಾಳಿ: ಸ್ನೇಹಿತನ ದುರ್ಮರಣ: ಕೃತ್ಯವೆಸಗಿದಾತನ ಬಂಧನ

Bidar; The man jumps into the water tank

Bidar; ಪತ್ನಿಯ ಅನೈತಿಕ ಸಂಬಂಧಕ್ಕೆ ಮನನೊಂದು ನೀರಿನ ಟ್ಯಾಂಕ್ ಗೆ ಬಿದ್ದು ಪತಿ ಆತ್ಮಹತ್ಯೆ

19-gobi

Gobi Manchurian ಬ್ಯಾನ್‌ ಎಫೆಕ್ಟ್: ಚಾಟ್ಸ್‌ ಮಾರಾಟ ಕುಸಿತ

ಡೀಸೆಲ್ ಇಲ್ಲದೆ ನಿಂತ ವಾಹನ… ಕಸವನ್ನು ಹೆಗಲ ಮೇಲೆ ಹೊತ್ತು ವಿಲೇವಾರಿ ಮಾಡಿದ ಪೌರಕಾರ್ಮಿಕ

ಡೀಸೆಲ್ ಇಲ್ಲದೆ ನಿಂತ ವಾಹನ… ಕಸವನ್ನು ಹೆಗಲ ಮೇಲೆ ಹೊತ್ತು ವಿಲೇವಾರಿ ಮಾಡಿದ ಪೌರಕಾರ್ಮಿಕ

Chitradurga; We are not waiting for anyone, nomination is sure…: M. Chandrappa

Chitradurga; ನಾವು ಯಾರನ್ನೂ ಕಾಯಲ್ಲ, ನಾಮಿನೇಷನ್ ಪಕ್ಕಾ…: ಎಂ.ಚಂದ್ರಪ್ಪ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Covid-19: ಕೋವಿಡ್ ಭೀತಿ; ಮೂರು ರಾಜ್ಯಗಳಲ್ಲಿ ಮಾಸ್ಕ್‌ ಕಡ್ಡಾಯ

Covid-19: ಕೋವಿಡ್ ಭೀತಿ; ಮೂರು ರಾಜ್ಯಗಳಲ್ಲಿ ಮಾಸ್ಕ್‌ ಕಡ್ಡಾಯ

UP government mandates Covid testing for arriving international passengers

Covid 19 ವಿದೇಶದಿಂದ ಬರುವವರಿಗೆ ಕೋವಿಡ್ ಟೆಸ್ಟ್ ಕಡ್ಡಾಯ ಮಾಡಿದ ಉತ್ತರ ಪ್ರದೇಶ ಸರ್ಕಾರ

mansukh mandaviya

ಕೋವಿಡ್ ಗೂ ಹೃದಯಾಘಾತಕ್ಕೂ ಸಂಬಂಧವಿದೆಯೇ? ಉತ್ತರ ನೀಡಿದ ಕೇಂದ್ರ ಆರೋಗ್ಯ ಸಚಿವ

India Sees Single-Day Rise Of Over 1,000 Covid-19 Cases

ಎಚ್3ಎನ್2 ಭೀತಿಯ ಮಧ್ಯೆ ಕೋವಿಡ್ ಏರಿಕೆ; ಒಂದೇ ದಿನ ಸಾವಿರ ದಾಟಿದ ಸೋಂಕಿತರ ಸಂಖ್ಯೆ

ಕೋವಿಡ್ 19 ಲಸಿಕೆಯಿಂದ ಅಡ್ಡಪರಿಣಾಮ ಇರೋದು ನಿಜ: RTIನಲ್ಲಿ ಕೇಂದ್ರದ ಉತ್ತರ ಬಹಿರಂಗ

ಕೋವಿಡ್ 19 ಲಸಿಕೆಯಿಂದ ಅಡ್ಡಪರಿಣಾಮ ಇರೋದು ನಿಜ: RTIನಲ್ಲಿ ಕೇಂದ್ರದ ಉತ್ತರ ಬಹಿರಂಗ

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

it

Congress ಬಳಿಕ ಸಿಪಿಐಗೂ 11 ಕೋಟಿ ರೂ.ಬಾಕಿಗಾಗಿ ಐಟಿ ನೋಟಿಸ್

Belagavi; ಬಸವಜಯ ಮೃತ್ಯುಂಜಯ ಸ್ವಾಮೀಜಿ ಭೆಟಿಯಾದ ಜಗದೀಶ್ ಶೆಟ್ಟರ್

Belagavi; ಬಸವಜಯ ಮೃತ್ಯುಂಜಯ ಸ್ವಾಮೀಜಿ ಭೇಟಿಯಾದ ಜಗದೀಶ್ ಶೆಟ್ಟರ್

ಸಿರಿಯಾದ ಮೇಲೆ ಇಸ್ರೇಲ್ ವೈಮಾನಿಕ ದಾಳಿ… 5 ಹಿಜ್ಬುಲ್ ಸದಸ್ಯರು ಸೇರಿ 38 ಮಂದಿ ಹತ

ಸಿರಿಯಾದ ಮೇಲೆ ಇಸ್ರೇಲ್ ವೈಮಾನಿಕ ದಾಳಿ… 5 ಹಿಜ್ಬುಲ್ ಸದಸ್ಯರು ಸೇರಿ 38 ಮಂದಿ ಹತ

20-

Crime: ಗುದದ್ವಾರಕ್ಕೆ ಗಾಳಿ: ಸ್ನೇಹಿತನ ದುರ್ಮರಣ: ಕೃತ್ಯವೆಸಗಿದಾತನ ಬಂಧನ

Bidar; The man jumps into the water tank

Bidar; ಪತ್ನಿಯ ಅನೈತಿಕ ಸಂಬಂಧಕ್ಕೆ ಮನನೊಂದು ನೀರಿನ ಟ್ಯಾಂಕ್ ಗೆ ಬಿದ್ದು ಪತಿ ಆತ್ಮಹತ್ಯೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.