Covid-19: ಯುಎಇನಿಂದ ಭಾರತಕ್ಕೆ ಮರಳಲು 9 ಸಾವಿರ ಮಂದಿ ಆನ್ ಲೈನ್ ನಲ್ಲಿ ಹೆಸರು ನೋಂದಣಿ

ಬುಧವಾರ ರಾತ್ರಿ, ಭಾರತಕ್ಕೆ ತೆರಳಲು ಹೆಸರನ್ನು ಆನ್ ಲೈನ್ ನಲ್ಲಿ ರಿಜಿಸ್ಟ್ರೇಶನ್ ಮಾಡಿದರೆ ಸ್ವೀಕರಿಸುವುದಾಗಿ ಘೋಷಿಸಿತ್ತು.

Team Udayavani, Apr 30, 2020, 4:12 PM IST

Covid-19: ಯುಎಇನಿಂದ ಭಾರತಕ್ಕೆ ಮರಳಲು 9 ಸಾವಿರ ಮಂದಿ ಆನ್ ಲೈನ್ ನಲ್ಲಿ ಹೆಸರು ನೋಂದಣಿ

UAE Indian Embassy

ಯುಎಇ: ಕೋವಿಡ್ 19 ವೈರಸ್ ನಿಂದ ಸಂಯುಕ್ತ ಅರಬ್ ರಾಷ್ಟ್ರ(ಯುನೈಟೆಡ್ ಅರಬ್ ಎಮಿರೇಟ್ಸ್)ಗಳಲ್ಲಿ ಸಿಕ್ಕಿಹಾಕಿಕೊಂಡಿರುವ ಭಾರತೀಯರಿಗೆ ಸ್ವದೇಶಕ್ಕೆ ಮರಳಲು ಅವಕಾಶ ಮಾಡಿಕೊಡುವ ನಿಟ್ಟಿನಲ್ಲಿ ಭಾರತೀಯ ರಾಯಭಾರಿ ಕಚೇರಿ ಹೆಸರು ಮತ್ತು ಸಂಪೂರ್ಣ ವಿಳಾಸ ನಮೂದಿಸಲು ಇ-ರಿಜಿಸ್ಟ್ರೇಶನ್ ಗೆ ಅವಕಾಶ ಕೊಟ್ಟ ಪರಿಣಾಮ 12 ಗಂಟೆಯಲ್ಲಿ 9 ಸಾವಿರ ಮಂದಿ ಹೆಸರು ನೋಂದಾಯಿಸಿಕೊಂಡಿರುವುದಾಗಿ ವರದಿ ತಿಳಿಸಿದೆ.

ಭಾರತಕ್ಕೆ ಮರಳಲು ಆನ್ ಲೈನ್ ರಿಜಿಸ್ಟ್ರೇಶನ್ ಮಾಡಿಸಬೇಕೆಂಬ ಸೂಚನೆ ಹಿನ್ನೆಲೆಯಲ್ಲಿ ಏಕಕಾಲಕ್ಕೆ ಅಪಾರ ಪ್ರಮಾಣದಲ್ಲಿ ಅಪ್ಲಿಕೇಶನ್ ಸಲ್ಲಿಸಿದ್ದರಿಂದ ವೆಬ್ ಸೈಟ್ ಹಲವು ಭಾರೀ ಕ್ರ್ಯಾಶ್ ಆಗಿತ್ತು. ಇ-ರಿಜಿಸ್ಟ್ರೇಶನ್ ಪೋರ್ಟಲ್ ಗೆ ಬುಧವಾರ ಚಾಲನೆ ನೀಡಲಾಗಿತ್ತು.

ತಾಂತ್ರಿಕ ಸಮಸ್ಯೆಯಿಂದ ವೆಬ್ ಸೈಟ್ ಕ್ರ್ಯಾಶ್ ಆಗುತ್ತಿರುವುದರಿಂದ ಮುಂದಿನ ಕೆಲವು ದಿನಗಳವರೆಗೆ ಹೆಸರು ಮತ್ತು ವಿವರಗಳನ್ನು ನಮೂದಿಸಲು ಅವಕಾಶ ನೀಡಬೇಕೆಂದು ಭಾರತೀಯರು ಮನವಿ ಮಾಡಿಕೊಂಡಿರುವುದಾಗಿ ಗಲ್ಫ್ ನ್ಯೂಸ್ ವರದಿ ಮಾಡಿದೆ.

ಅಬುಧಾಬಿಯಲ್ಲಿರುವ ಭಾರತೀಯ ರಾಯಭಾರಿ ಕಚೇರಿ ಮತ್ತು ದುಬೈಯಲ್ಲಿರುವ ರಾಜತಾಂತ್ರಿಕ ಕಚೇರಿ ಬುಧವಾರ ರಾತ್ರಿ, ಭಾರತಕ್ಕೆ ತೆರಳಲು ಹೆಸರನ್ನು ಆನ್ ಲೈನ್ ನಲ್ಲಿ ರಿಜಿಸ್ಟ್ರೇಶನ್ ಮಾಡಿದರೆ ಸ್ವೀಕರಿಸುವುದಾಗಿ ಘೋಷಿಸಿ, ಲಿಂಕ್ (https://cgidubai.gov.in/covid_register/) ಅನ್ನು ಬಿಡುಗಡೆ ಮಾಡಿತ್ತು.

ರಾಯಭಾರಿ ಕಚೇರಿ ಈ ಘೋಷಣೆ ಹೊರಡಿಸಿದ ಕೆಲವೇ ಕ್ಷಣಗಳಲ್ಲಿ ರಿಜಿಸ್ಟ್ರೇಶನ್ ಪ್ರತಿಕ್ರಿಯೆ ಆರಂಭಗೊಂಡಿದ್ದು, ತಾಂತ್ರಿಕ ಕಾರಣಗಳಿಂದ ವೆಬ್ ಸೈಟ್ ಕ್ರ್ಯಾಶ್ ಆಗಿತ್ತು ಎಂದು ವರದಿ ವಿವರಿಸಿದೆ. ಒಂದು ವೇಳೆ ವಿಪರೀತ ಟ್ರಾಫಿಕ್ (ರಿಜಿಸ್ಟ್ರೇಶನ್ ಸಂಖ್ಯೆ) ನಿಂದ ಪೇಜ್ ಲೋಡ್ ಆಗಲು ಸಮಯ ತೆಗೆದುಕೊಂಡರೆ ತಾಳ್ಮೆಯಿಂದ ಇರಿ ಎಂದು ಭಾರತೀಯ ಕಾನ್ಸುಲೇಟ್ ಗುರುವಾರ ನಸುಕಿನ ವೇಳೆ ಟ್ವೀಟ್ ಮೂಲಕ ವಿನಂತಿಸಿಕೊಂಡಿತ್ತು.

ಕೋವಿಡ್ 19 ಹರಡುವಿಕೆ ತಡೆಗಟ್ಟುವ ನಿಟ್ಟಿನಲ್ಲಿ ಮಾರ್ಚ್ 22ರಿಂದ ಗಡಿಭಾಗವನ್ನು ಬಂದ್ ಮಾಡಿ, ವಿಮಾನ ಹಾರಾಟ ನಿರ್ಬಂಧಿಸಿದ ನಿಟ್ಟಿನಲ್ಲಿ ಸಾವಿರಾರು ಭಾರತೀಯರು ಯುಎಇನಲ್ಲಿ ಸಿಕ್ಕಿಹಾಕಿಕೊಳ್ಳುವಂತಾಗಿತ್ತು. ಇದರಲ್ಲಿಯೂ ಮುಖ್ಯವಾಗಿ ವಿಸಿಟಿಂಗ್ ವೀಸಾದಲ್ಲಿ ಬಂದವರು, ಉದ್ಯೋಗ ಅರಸಿ ಬಂದವರು, ನಿರುದ್ಯೋಗಿ ಕೆಲಸಗಾರರು, ಗರ್ಭಿಣಿ ಮಹಿಳೆಯರು, ಪ್ರತ್ಯೇಕ ಕುಟುಂಬಗಳು, ವಯಸ್ಸಾದವರು ತಾಯ್ನಾಡಿಗೆ ಹಿಂದಿರುಗಲು ಸಿದ್ಧತೆ ನಡೆಸುತ್ತಿದ್ದಾರೆ ಎಂದು ಖಲೀಜ್ ಟೈಮ್ಸ್ ವರದಿ ಮಾಡಿದೆ.

ಈ ಹಿನ್ನೆಲೆಯಲ್ಲಿ ಮಂಗಳವಾರ ಸರ್ಕಾರದ ಅಧಿಕಾರಿಗಳು ನೀಡಿರುವ ಮಾಹಿತಿ ಪ್ರಕಾರ, ಗಲ್ಫ್ ನಲ್ಲಿ ಸಿಲುಕಿಕೊಂಡಿರುವ ಭಾರತೀಯರನ್ನು ಕರೆದೊಯ್ಯುವ ನಿಟ್ಟಿನಲ್ಲಿ ಕನಿಷ್ಠ ಮೂರು ಭಾರತೀಯ ನೌಕಾ ಯುದ್ಧ ಹಡಗುಗಳು ಮತ್ತು 500 ವಿಮಾನಗಳನ್ನು ಸಿದ್ದವಾಗಿಟ್ಟುಕೊಳ್ಳುವಂತೆ ಮನವಿ ಮಾಡಿಕೊಂಡಿರುವುದಾಗಿ ತಿಳಿಸಿದ್ದಾರೆ.

ಇದೇ ರೀತಿ ಸೌದಿ ಅರೇಬಿಯಾದಲ್ಲಿಯೂ ಸಿಕ್ಕಿಹಾಕಿಕೊಂಡಿರುವ ಭಾರತೀಯರಿಗಾಗಿ ಹೆಸರು ನೋಂದಾಯಿಸಲು ವೆಬ್ ಸೈಟ್ ಲಾಂಚ್ ಮಾಡಿದೆ. ಈ ಬಗ್ಗೆ ಸೌದಿ ಅರೇಬಿಯಾದಲ್ಲಿರುವ ಭಾರತೀಯ ರಾಯಭಾರಿ ಕಚೇರಿ ಟ್ವೀಟ್ ಮಾಡಿದ್ದು, ಹೆಸರು ನೋಂದಣಿಯ ಮುಖ್ಯ ಉದ್ದೇಶ ಕೇವಲ ಅಂಕಿಅಂಶ ಸಂಗ್ರಹಕ್ಕಾಗಿ ಮಾತ್ರ. ಭಾರತಕ್ಕೆ ವಿಮಾನ ಸಂಚಾರ ಪುನರಾರಂಭಿಸುವ ಬಗ್ಗೆ ಈವರೆಗೂ ಯಾವುದೇ ನಿರ್ಧಾರ ಕೈಗೊಂಡಿಲ್ಲ. ಈ ಬಗ್ಗೆ ಭಾರತ ಸರ್ಕಾರವೇ ತನ್ನ ವೆಬ್ ಸೈಟ್ ಮತ್ತು ಸಾಮಾಜಿಕ ಜಾಲತಾಣಗಳಲ್ಲಿ ಘೋಷಣೆ ಹೊರಡಿಸಲಿದೆ ಎಂದು ರಾಯಭಾರಿ ಕಚೇರಿ ತಿಳಿಸಿರುವುದಾಗಿ ಖಲೀಜ್ ಟೈಮ್ಸ್ ವರದಿ ತಿಳಿಸಿದೆ.

ಟಾಪ್ ನ್ಯೂಸ್

Dharwad; ದಿಂಗಾಲೇಶ್ವರ ಸ್ವಾಮೀಜಿ ನಾಮಪತ್ರ ಸಲ್ಲಿಕೆ: ಸಚಿವ ಜೋಶಿ ವಿರುದ್ದ ಗಂಭೀರ ಆರೋಪ

Dharwad; ದಿಂಗಾಲೇಶ್ವರ ಸ್ವಾಮೀಜಿ ನಾಮಪತ್ರ ಸಲ್ಲಿಕೆ: ಸಚಿವ ಜೋಶಿ ವಿರುದ್ದ ಗಂಭೀರ ಆರೋಪ

ಸೂಪರ್ ಸ್ಟಾರ್‌ ಮೋಹನ್‌ ಲಾಲ್‌ ಭೇಟಿಯಾದ ರಿಷಬ್‌: ʼಕಾಂತಾರʼ ಕ್ಕೆ ಸ್ವಾಗತ ಎಂದ ನೆಟ್ಟಿಗರು.!

ಸೂಪರ್ ಸ್ಟಾರ್‌ ಮೋಹನ್‌ ಲಾಲ್‌ ಭೇಟಿಯಾದ ರಿಷಬ್‌: ʼಕಾಂತಾರʼ ಕ್ಕೆ ಸ್ವಾಗತ ಎಂದ ನೆಟ್ಟಿಗರು.!

Cricket; ಪಾಕ್ ವಿರುದ್ಧದ ಟೆಸ್ಟ್ ಸರಣಿ ಆಡಲು ರೋಹಿತ್ ಇಂಗಿತ; ಕ್ಯಾಪ್ಟನ್ ಹೇಳಿದ್ದೇನು?

Cricket; ಪಾಕ್ ವಿರುದ್ಧದ ಟೆಸ್ಟ್ ಸರಣಿ ಆಡಲು ರೋಹಿತ್ ಇಂಗಿತ; ಕ್ಯಾಪ್ಟನ್ ಹೇಳಿದ್ದೇನು?

Chattisgarh: ಕಳೆದ 4 ತಿಂಗಳಲ್ಲಿ 80 ನಕ್ಸಲೀಯರ ಸಾವು, 125 ಮಂದಿ ಬಂಧನ; 150 ಶರಣಾಗತಿ!

Chattisgarh: ಕಳೆದ 4 ತಿಂಗಳಲ್ಲಿ 80 ನಕ್ಸಲೀಯರ ಸಾವು, 125 ಮಂದಿ ಬಂಧನ; 150 ಶರಣಾಗತಿ!

ದಳಪತಿ ಅಭಿಮಾನಿಗಳ ಟ್ರೋಲ್‌ನಿಂದ ಇನ್ಸ್ಟಾ ಖಾತೆಯನ್ನು ನಿಷ್ಕ್ರಿಯಗೊಳಿಸಿದ್ರಾ ಯುವನ್ ಶಂಕರ್?

ದಳಪತಿ ಅಭಿಮಾನಿಗಳ ಟ್ರೋಲ್‌ನಿಂದ ಇನ್ಸ್ಟಾ ಖಾತೆಯನ್ನು ನಿಷ್ಕ್ರಿಯಗೊಳಿಸಿದ್ರಾ ಯುವನ್ ಶಂಕರ್?

Loan: ಸಾಲ ಪಡೆಯಲು ಸತ್ತ ವ್ಯಕ್ತಿಯನ್ನೇ ಬ್ಯಾಂಕಿಗೆ ಕರೆತಂದ ಮಹಿಳೆ… ಕೊನೆಗೆ ಆದದ್ದೇ ಬೇರೆ

Loan: ಸತ್ತ ವ್ಯಕ್ತಿಯನ್ನು ಕರೆತಂದು ಸಾಲ ಪಡೆಯಲು ಮುಂದಾದ ಮಹಿಳೆ… ಕೊನೆಗೆ ಆದದ್ದೇ ಬೇರೆ

Kalaburagi; Congress government has given 2000 compensation to farmers like beggars: Vijayendra

Kalaburagi; ಕಾಂಗ್ರೆಸ್ ಸರಕಾರ ರೈತರಿಗೆ ಭಿಕ್ಷುಕರಂತೆ 2ಸಾವಿರ ಪರಿಹಾರ ನೀಡಿದೆ: ವಿಜಯೇಂದ್ರ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Russia War: ಉಕ್ರೇನ್‌ ಮೇಲೆ ರಷ್ಯಾ ಭೀಕರ ದಾಳಿ-17 ಮಂದಿ ಮೃತ್ಯು; ನೆರವಿಗಾಗಿ ಮನವಿ

Russia War: ಉಕ್ರೇನ್‌ ಮೇಲೆ ರಷ್ಯಾ ಭೀಕರ ದಾಳಿ-17 ಮಂದಿ ಮೃತ್ಯು; ನೆರವಿಗಾಗಿ ಮನವಿ

ನನ್ನ ಪತ್ನಿಗೆ ಏನಾದರೂ ಆದರೆ…: ಸೇನಾ ಮುಖ್ಯಸ್ಥರಿಗೆ ಎಚ್ಚರಿಕೆ ನೀಡಿದ ಇಮ್ರಾನ್ ಖಾನ್

ನನ್ನ ಪತ್ನಿಗೆ ಏನಾದರೂ ಆದರೆ…: ಸೇನಾ ಮುಖ್ಯಸ್ಥರಿಗೆ ಎಚ್ಚರಿಕೆ ನೀಡಿದ ಇಮ್ರಾನ್ ಖಾನ್

Heavy Rain: ಮರಳುಗಾಡು ದುಬೈನಲ್ಲಿ ಧಾರಾಕಾರ ಮಳೆ, ಪ್ರವಾಹ ಪರಿಸ್ಥಿತಿ-ಜನಜೀವನ ಅಸ್ತವ್ಯಸ್ತ

Heavy Rain: ಮರಳುಗಾಡು ದುಬೈನಲ್ಲಿ ಧಾರಾಕಾರ ಮಳೆ, ಪ್ರವಾಹ ಪರಿಸ್ಥಿತಿ-ಜನಜೀವನ ಅಸ್ತವ್ಯಸ್ತ

Rain: ವರುಣನ ಆರ್ಭಟಕ್ಕೆ ನಲುಗಿದ ದುಬೈ… ವಿಮಾನ ನಿಲ್ದಾಣ ಜಲಾವೃತ, ಜನಜೀವನ ಅಸ್ತವ್ಯಸ್ಥ

Rain: ವರುಣನ ಆರ್ಭಟಕ್ಕೆ ನಲುಗಿದ ದುಬೈ… ವಿಮಾನ ನಿಲ್ದಾಣ ಜಲಾವೃತ, ಜನಜೀವನ ಅಸ್ತವ್ಯಸ್ಥ

Israel-Iran ಅಣುಯುದ್ಧ? ಇರಾನ್‌ನ ಅಣುಸ್ಥಾವರಗಳ ಮೇಲೆ ದಾಳಿ: ವಿಶ್ವಸಂಸ್ಥೆ ಆತಂಕ

Israel-Iran ಅಣುಯುದ್ಧ? ಇರಾನ್‌ನ ಅಣುಸ್ಥಾವರಗಳ ಮೇಲೆ ದಾಳಿ: ವಿಶ್ವಸಂಸ್ಥೆ ಆತಂಕ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Dharwad; ದಿಂಗಾಲೇಶ್ವರ ಸ್ವಾಮೀಜಿ ನಾಮಪತ್ರ ಸಲ್ಲಿಕೆ: ಸಚಿವ ಜೋಶಿ ವಿರುದ್ದ ಗಂಭೀರ ಆರೋಪ

Dharwad; ದಿಂಗಾಲೇಶ್ವರ ಸ್ವಾಮೀಜಿ ನಾಮಪತ್ರ ಸಲ್ಲಿಕೆ: ಸಚಿವ ಜೋಶಿ ವಿರುದ್ದ ಗಂಭೀರ ಆರೋಪ

 Lok Sabha Election: ಉಡುಪಿ- ಜಯಪ್ರಕಾಶ್‌ ಹೆಗ್ಡೆ ಬಿರುಸಿನ ಪ್ರಚಾರ, ದೇವಾಲಯಕ್ಕೆ ಭೇಟಿ

 Lok Sabha Election: ಉಡುಪಿ- ಜಯಪ್ರಕಾಶ್‌ ಹೆಗ್ಡೆ ಬಿರುಸಿನ ಪ್ರಚಾರ, ದೇವಾಲಯಕ್ಕೆ ಭೇಟಿ

Beltangady: ಮನೆ ಮಾಲಕಿ ಮೇಲೆ ಸಾಕು ನಾಯಿ ದಾಳಿ

Beltangady: ಮನೆ ಮಾಲಕಿ ಮೇಲೆ ಸಾಕು ನಾಯಿ ದಾಳಿ

ಸೂಪರ್ ಸ್ಟಾರ್‌ ಮೋಹನ್‌ ಲಾಲ್‌ ಭೇಟಿಯಾದ ರಿಷಬ್‌: ʼಕಾಂತಾರʼ ಕ್ಕೆ ಸ್ವಾಗತ ಎಂದ ನೆಟ್ಟಿಗರು.!

ಸೂಪರ್ ಸ್ಟಾರ್‌ ಮೋಹನ್‌ ಲಾಲ್‌ ಭೇಟಿಯಾದ ರಿಷಬ್‌: ʼಕಾಂತಾರʼ ಕ್ಕೆ ಸ್ವಾಗತ ಎಂದ ನೆಟ್ಟಿಗರು.!

Cricket; ಪಾಕ್ ವಿರುದ್ಧದ ಟೆಸ್ಟ್ ಸರಣಿ ಆಡಲು ರೋಹಿತ್ ಇಂಗಿತ; ಕ್ಯಾಪ್ಟನ್ ಹೇಳಿದ್ದೇನು?

Cricket; ಪಾಕ್ ವಿರುದ್ಧದ ಟೆಸ್ಟ್ ಸರಣಿ ಆಡಲು ರೋಹಿತ್ ಇಂಗಿತ; ಕ್ಯಾಪ್ಟನ್ ಹೇಳಿದ್ದೇನು?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.