ಮುಂಬೈ: ಕೊಳೆಗೇರಿ ಧಾರಾವಿಯಲ್ಲಿ 100ಕ್ಕೆ ತಲುಪಿದ ಕೋವಿಡ್ ಸೋಂಕಿತರ ಸಂಖ್ಯೆ
ಏಷ್ಯಾದ ಅತೀ ದೊಡ್ಡ ಕೊಳಗೇರಿಯಾದ ಧಾರಾವಿಯಲ್ಲಿ ಬರೋಬ್ಬರಿ ಎಂಟು ಲಕ್ಷ ಮಂದಿ ಜನಸಂಖ್ಯೆ ಇದೆ.
Team Udayavani, Apr 17, 2020, 8:51 PM IST
Representative Image
ಮುಂಬೈ:ವಾಣಿಜ್ಯ ನಗರಿ ಮುಂಬೈಯ ಧಾರಾವಿ ಪ್ರದೇಶದಲ್ಲಿ ಕೋವಿಡ್ 19 ವೈರಸ್ ಪೀಡಿತರ ಸಂಖ್ಯೆ 100ಕ್ಕೆ ಏರಿಕೆಯಾಗಿದೆ.ಶುಕ್ರವಾರ 15 ಹೊಸ ಪ್ರಕರಣಗಳು ಧಾರಾವಿಯಲ್ಲಿ ಪತ್ತೆಯಾಗುವ ಮೂಲಕ ಒಟ್ಟು 101 ಜನರಿಗೆ ಸೋಂಕು ತಗುಲಿದ್ದು, ಸಾವಿನ ಸಂಖ್ಯೆ 10ಕ್ಕೆ ತಲುಪಿದೆ ಎಂದು ವರದಿ ತಿಳಿಸಿದೆ.
ಆಸ್ಪತ್ರೆಯಲ್ಲಿ 62 ವರ್ಷದ ವ್ಯಕ್ತಿಯೊಬ್ಬರು ಕೋವಿಡ್ 19 ಸೋಂಕಿಗೆ ಸಾವನ್ನಪ್ಪಿರುವುದಾಗಿ ಪಿಟಿಐ ವರದಿ ಮಾಡಿದೆ. ಮಾಟುಂಗಾ ಲೇಬರ್ ಕ್ಯಾಂಪ್ ನಲ್ಲಿ ಮೂರು ಪ್ರಕರಣ, ಸೋಶಿಯಲ್ ನಗರದಲ್ಲಿ ಎರಡು, ಡಾ.ಬಾಳಿಗಾ ನಗರದಲ್ಲಿ ಒಂದು, ಲಕ್ಷ್ಮಿ ಚಾವಲ್ ನಲ್ಲಿ ಒಂದು, ಜನತಾ ಸೊಸೈಟಿ, ಸರ್ವೋದಯ್ ಸೊಸೈಟಿ ಪ್ರದೇಶದಲ್ಲಿ ತಲಾ ಒಂದು ಪ್ರಕರಣ ವರದಿಯಾಗಿದೆ.
ಏಷ್ಯಾದ ಅತೀ ದೊಡ್ಡ ಕೊಳಗೇರಿಯಾದ ಧಾರಾವಿಯಲ್ಲಿ ಬರೋಬ್ಬರಿ ಎಂಟು ಲಕ್ಷ ಮಂದಿ ಜನಸಂಖ್ಯೆ ಇದೆ. ಒತ್ತೊತ್ತಾಗಿ ಮನೆಗಳು ಇದ್ದು ಈ ಪ್ರದೇಶದಲ್ಲಿ ಸಾಮಾಜಿಕ ಅಂತರ ಕಾಯ್ದುಕೊಳ್ಳುವುದು ತುಂಬಾ ಸವಾಲಿನ ಕೆಲಸವಾಗಿದೆ ಎಂದು ವರದಿ ವಿವರಿಸಿದೆ.
ಈ ಪ್ರದೇಶವನ್ನು ಹಾಟ್ ಸ್ಪಾಟ್ ಎಂದು ಗುರುತಿಸಲಾಗಿದೆ. ಕೊಳಗೇರಿ ಧಾರಾವಿ ಪ್ರದೇಶದಲ್ಲಿ ಒಂಬತ್ತು ನಿಯಂತ್ರಿತ ಪ್ರದೇಶಗಳನ್ನು ಗುರುತಿಸಲಾಗಿತ್ತು. ಕೋವಿಡ್ 19 ಹರಡದಂತೆ ತಡೆಗಟ್ಟಲು ಪೊಲೀಸರು ಜನರನ್ನು ನಿಯಂತ್ರಿಸಲು ಪ್ರವೇಶ ದ್ವಾರದಲ್ಲಿ ಬ್ಯಾರಿಕೇಡ್ ಇಟ್ಟಿರುವುದಾಗಿ ವರದಿ ತಿಳಿಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಏ.26ರಂದು 2ನೇ ಹಂತದ ಚುನಾವಣೆ;ರಾಹುಲ್, ತರೂರ್, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ
EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂಕೋರ್ಟ್…ಆದರೆ…
Singapore ಏರ್ ಲೈನ್ಸ್ ಪೈಲಟ್ ನಂತೆ ಪೋಸ್ ಕೊಟ್ಟ ಉತ್ತರಪ್ರದೇಶ ಯುವಕನ ಬಂಧನ!
Lok Sabha 2ನೇ ಹಂತ; ದಾಖಲೆ ಸಂಖ್ಯೆಯಲ್ಲಿ ಭಾಗವಹಿಸಲು ಪ್ರಧಾನಿ ಮೋದಿ ಕನ್ನಡದಲ್ಲಿ ಮನವಿ
JEE; ಮಹಾರಾಷ್ಟ್ರ ರೈತನ ಮಗ ಮೇನ್ ಟಾಪರ್
MUST WATCH
ಹೊಸ ಸೇರ್ಪಡೆ
Sringeri Sharadamba Temple; ಪ್ರಧಾನಿ ಮೋದಿ ಹೆಸರಲ್ಲಿ ಸಹಸ್ರನಾಮ ಪೂಜೆ
ಮೊದಲ ಬಾರಿ ಕುಂದಾನಗರಿಯಲ್ಲಿ ಪ್ರಧಾನಿ ಮೋದಿ ವಾಸ್ತವ್ಯ; 28ಕ್ಕೆ ಸಮಾವೇಶ
ಬಿಸಿಲ ಝಳದಿಂದ ಮೈದಾನಗಳು ಖಾಲಿ; ಮಕ್ಕಳ ಆಟಕ್ಕೂ ಉರಿ ಬಿಸಿಲು ಅಡ್ಡಿ!
Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ
INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್