ವಿಶ್ವಾದ್ಯಂತ ಏರುಗತಿಯಲ್ಲಿ ಸೋಂಕು ಪ್ರಮಾಣ; 6 ಲಕ್ಷ ದಾಟಿದ ಸಾವಿನ ಸಂಖ್ಯೆ
Team Udayavani, Jul 20, 2020, 6:51 AM IST
ಸಾಂದರ್ಭಿಕ ಚಿತ್ರವನ್ನು ಬಳಸಲಾಗಿದೆ – Representative Image Used
ಹೊಸದಿಲ್ಲಿ/ಜೊಹಾನ್ಸ್ಬರ್ಗ್: ಜಗತ್ತಿನಾದ್ಯಂತ ಸೋಂಕಿನಿಂದ ಅಸುನೀಗಿದವರ ಸಂಖ್ಯೆ 6 ಲಕ್ಷ ದಾಟಿದೆ.
ಅಮೆರಿಕ, ದಕ್ಷಿಣ ಆಫ್ರಿಕಾ, ಭಾರತ ಸೇರಿದಂತೆ ಹಲವು ರಾಷ್ಟ್ರಗಳಲ್ಲಿ ಸೋಂಕಿನ ಮತ್ತು ಸಾವಿನ ಸಂಖ್ಯೆ ಏರುಗತಿಯಲ್ಲಿದೆ.
ಜಗತ್ತಿನಾದ್ಯಂತ ಸತತ ಎರಡನೇ ದಿನ 2,59, 848 ಕೇಸುಗಳು ದೃಢಪಟ್ಟಿವೆ.
ಅಮೆರಿಕ, ಬ್ರೆಜಿಲ್, ಭಾರತ ಮತ್ತು ದಕ್ಷಿಣ ಆಫ್ರಿಕಾಗಳಲ್ಲಿ ಸೋಂಕಿನ ಪ್ರಮಾಣ ಹೆಚ್ಚು. ಶುಕ್ರವಾರ 2,37,743 ಪ್ರಕರಣಗಳು ದಾಖಲಾಗಿದ್ದು ಅದೇ ಈವರೆಗಿನ ಗರಿಷ್ಠ ಎನಿಸಿತ್ತು. ಹಾಲಿ ತಿಂಗಳಲ್ಲಿ ಪ್ರತಿ ದಿನ ಸರಾಸರಿ 4,800 ಸಾವಿನ ಪ್ರಕರಣಗಳು ವರದಿಯಾಗಿವೆ.
ಸಾಮುದಾಯಿಕ ಹಂತಕ್ಕೆ ಸೋಂಕು: ದೇಶದಲ್ಲಿ ಸತತವಾಗಿ ನಾಲ್ಕು ದಿನಗಳ ಅವಧಿಯಲ್ಲಿ ದಿನವಹಿ ಸೋಂಕು ಕೇಸುಗಳ ಸಂಖ್ಯೆ 30 ಸಾವಿರಕ್ಕಿಂತ ಹೆಚ್ಚಾಗಿದೆ. ಅದಕ್ಕೆ ಪೂರಕವಾಗಿ ದೇಶದಲ್ಲಿ ಸೋಂಕು ಸಾಮುದಾಯಿಕವಾಗಿ ಹರಡಲು ಶುರುವಾಗಿದೆ ಎಂದು ಇಂಡಿಯನ್ ಮೆಡಿಕಲ್ ಎಸೋಸಿಯೇಷನ್ ಆತಂಕ ವ್ಯಕ್ತಪಡಿಸಿದೆ.
ಒಟ್ಟಾರೆಯಾಗಿ ಹೇಳುವುದಿದ್ದರೆ ದೇಶದಲ್ಲಿ ಸೋಂಕಿನ ಸ್ಥಿತಿ ಉತ್ತಮವಾಗಿಲ್ಲವೆಂದು ಸಂಘಟನೆ ಅಧ್ಯಕ್ಷ ಡಾ|ವಿ.ಕೆ.ಮೋಂಗಾ ‘ANI’ ಸುದ್ದಿ ಸಂಸ್ಥೆಗೆ ನೀಡಿದ ಸಂದರ್ಶನದಲ್ಲಿ ತಿಳಿಸಿದ್ದಾರೆ.
ಗ್ರಾಮೀಣ ಪ್ರದೇಶಗಳಲ್ಲಿಯೂ ಸೋಂಕು ಹರಡುತ್ತಿದೆ ಎಂದು ಆತಂಕ ವ್ಯಕ್ತಪಡಿಸಿದ ಅವರು, ಇದೊಂದು ಆತಂಕ ತರುವ ವಿಚಾರ. ಸಾಮುದಾಯಿಕವಾಗಿ ಸೋಂಕು ಹರಡುತ್ತಿದೆ ಎನ್ನುವುದನ್ನು ಇದು ತೋರಿಸುತ್ತದೆ.
ಗ್ರಾಮೀಣ ಪ್ರದೇಶಗಳಲ್ಲಿ ವ್ಯಾಪಕವಾಗಿ ಸೋಂಕು ಹರಡುತ್ತದೆ ಎಂದಾದರೆ ಅದನ್ನು ನಿಯಂತ್ರಿಸುವುದು ಕಷ್ಟ. ದಿಲ್ಲಿಯಲ್ಲಿ ಆಂಶಿಕವಾಗಿ ಸೋಂಕು ನಿಯಂತ್ರಿಸಲು ಯಶಸ್ವಿಯಾಗಿದ್ದೇವೆ. ಆದರೆ, ಕರ್ನಾಟಕ, ಕೇರಳ, ಮಹಾರಾಷ್ಟ್ರ, ಗೋವಾ, ಮಧ್ಯಪ್ರದೇಶದ ಗ್ರಾಮೀಣ ಪ್ರದೇಶಗಳ ಪರಿಸ್ಥಿತಿ ಏನಾಗಿದೆ ಎಂದು ಪ್ರಶ್ನೆ ಮಾಡಿದರು.
7 ಕಂಪೆನಿಗಳಿಂದ ಸಂಶೋಧನೆ
ಜಗತ್ತಿನಲ್ಲಿ ಸೋಂಕಿನ ವಿರುದ್ಧ ಲಸಿಕೆಗಾಗಿ ಸಂಶೋಧನೆಗಳು ಪ್ರಗತಿಯಲ್ಲಿವೆ. ಭಾರತದ ಮಟ್ಟಿಗೆ ಹೇಳುವುದಾದರೆ ಒಟ್ಟು ಏಳು ಕಂಪೆನಿಗಳು ಈ ಪ್ರಯತ್ನದಲ್ಲಿ ತಮ್ಮನ್ನು ತೊಡಗಿಸಿಕೊಂಡಿವೆ.
‘ಭಾರತ್ ಬಯೋಟೆಕ್’, ‘ಸೀರಂ ಇನ್ಸ್ಟಿಟ್ಯೂಟ್’, ‘ಝೈಡಸ್ ಕಾಡಿಲಾ’, ‘ಪನಾಸಿಯಾ ಬಯೋಟೆಕ್’, ‘ಇಂಡಿಯನ್ ಇಮ್ಯುನೊಲಾಜಿಕಲ್ಸ್’, ‘ಮೈನ್ವಾಕ್ಸ್’ ಮತ್ತು ‘ಬಯೋಲಾಜಿಕಲ್-ಇ’ ಎಂಬ ಕಂಪೆನಿಗಳು ದೇಶದ ವಿವಿಧ ಭಾಗಗಳಲ್ಲಿ ಸಂಶೋಧನೆ ನಡೆಸುತ್ತಿವೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಭಾರತಕ್ಕೆ ರಾಜತಾಂತ್ರಿಕ ಗೆಲುವು: ಇಸ್ರೇಲಿ ಹಡಗಿನಿಂದ 5 ಭಾರತೀಯರನ್ನು ಬಿಡುಗಡೆ ಮಾಡಿದ ಇರಾನ್
India ಲೋಕಸಭೆ ಚುನಾವಣೆಯಲ್ಲಿ ಅಮೆರಿಕ ಹಸ್ತಕ್ಷೇಪ: ರಷ್ಯಾ ಆರೋಪ
Insects: ಮಹಿಳೆಯ ಮೂಗಿನಲ್ಲಿ ನೂರಾರು ಹುಳಗಳು ಪತ್ತೆ!
Saudi Arabia; ಭೂಮಿ ನೀಡಲು ಒಪ್ಪದಿದ್ದರೆ ಹತ್ಯೆ: ಬಿಬಿಸಿ ವರದಿ
Student Missing: ಅಮೆರಿಕದಲ್ಲಿ ಮತ್ತೋರ್ವ ವಿದ್ಯಾರ್ಥಿ ನಾಪತ್ತೆ… ಕಂಗಾಲಾದ ಕುಟುಂಬ
MUST WATCH
ಹೊಸ ಸೇರ್ಪಡೆ
Dhruva Sarja ಮಾರ್ಟಿನ್ ರಿಸಲ್ಟ್ ಚಂದನವನಕ್ಕೆ ಹೆಮ್ಮೆ ತರಲಿದೆ…ನಿರ್ಮಾಪಕ ಉದಯ್ ಮೆಹ್ತಾ
Nomination: ಕೊನೆಯ ಕ್ಷಣದಲ್ಲಿ ಓಡೋಡಿ ಬಂದು ನಾಮಪತ್ರ ಸಲ್ಲಿಸಿದ ಬಿಜೆಪಿ ಅಭ್ಯರ್ಥಿ…
Vijayapura ಬಸವ ಜಯಂತಿ ದಿನ ಮಾದರಿ ಕಾರ್ಯ; ಹೆತ್ತವರಿಲ್ಲದ ವಿದ್ಯಾರ್ಥಿಗೆ ಶೈಕ್ಷಣಿಕ ದತ್ತು
Delhi Excise Policy Case: ಕೇಜ್ರಿಗೆ ಅಲ್ಪ ರಿಲೀಫ್; ಮಧ್ಯಂತರ ಜಾಮೀನು ನೀಡಿದ ಸುಪ್ರೀಂ
Rank: ಕುಂದಾಪುರ ತಾಲೂಕಿಗೆ ಪ್ರಥಮ ಹಾಗೂ ರಾಜ್ಯಕ್ಕೆ 5ನೇ ರ್ಯಾಂಕ್ ಪಡೆದ ಶುಕ್ತಿಜಾ