ಕೋವಿಡ್ 19 ಸೋಂಕು: ಕುಕ್ಕಾಜೆಯ ಮಹಿಳೆ ಸಾವು, ಪೊಲೀಸರಿಗೆ ಪಾಸಿಟಿವ್


Team Udayavani, Jul 17, 2020, 6:15 AM IST

ಕೋವಿಡ್ 19 ಸೋಂಕು: ಕುಕ್ಕಾಜೆಯ ಮಹಿಳೆ ಸಾವು, ಪೊಲೀಸರಿಗೆ ಪಾಸಿಟಿವ್

ಸಾಂದರ್ಭಿಕ ಚಿತ್ರವನ್ನು ಬಳಸಲಾಗಿದೆ – Representative Image Used

ಬಂಟ್ವಾಳ: ರಕ್ತದೊತ್ತಡ, ಮಧುಮೇಹ ಸಹಿತ ಆರೋಗ್ಯ ಸಮಸ್ಯೆಯಿಂದ ಬಳಲುತ್ತಿದ್ದ ಮಂಚಿ ಸಮೀಪದ ಕುಕ್ಕಾಜೆಯ 47 ವರ್ಷದ ಮಹಿಳೆಯೊಬ್ಬರು ಗುರುವಾರ ಮೃತಪಟ್ಟಿದ್ದು, ಪರೀಕ್ಷೆಯಲ್ಲಿ ಕೋವಿಡ್ 19 ಸೋಂಕು ದೃಢಪಟ್ಟಿದೆ.

ಅವರ ಆರೋಗ್ಯದಲ್ಲಿ ವ್ಯತ್ಯಾಸ ಕಂಡುಬಂದ ಹಿನ್ನೆಲೆಯಲ್ಲಿ ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಸೋಂಕಿನ ಮೂಲಕ ಪತ್ತೆಯಾಗಿಲ್ಲ. ಗುರುವಾರ ಮಂಚಿ-ಕುಕ್ಕಾಜೆ ಮಸೀದಿಯ ಧಪನ ಅಂತ್ಯಕ್ರಿಯೆ ನಡೆಸಲಾಯಿತು.

ಬಂಟ್ವಾಳ ತಾಲೂಕಿನಲ್ಲಿ ಗುರುವಾರ 18 ಪಾಸಿಟಿವ್‌ ಪ್ರಕರಣಗಳು ದೃಢಪಟ್ಟಿವೆ. ಬಡಗಬೆಳ್ಳೂರು, ಜೋಡುಮಾರ್ಗ, ಬಂಟ್ವಾಳ, ಪಾಣೆಮಂಗಳೂರು, ಗೋಳ್ತಮಜಲು, ನಂದಾವರ, ಬಿಳಿಯೂರು, ಮಂಚಿ, ಇಡಿRದು, ನರಿಕೊಂಬು, ಬಾಳ್ತಿಲ, ಸಾಲೆತ್ತೂರು, ವಿಟ್ಲ, ಉರಿಮಜಲು, ಫರಂಗಿಪೇಟೆ, ಬಿ.ಸಿ. ರೋಡ್‌, ಬಿ.ಮೂಡದ ವ್ಯಕ್ತಿಗಳು ಬಾಧಿತರು.

ಸುಳ್ಯದಲ್ಲಿ ಮೂರನೇ ಸಾವು
ಅಸೌಖ್ಯದಿಂದ ಖಾಸಗಿ ಆಸ್ಪತ್ರೆಗೆ ದಾಖಲಾಗಿ ಜು. 14ರಂದು ಮೃತಪಟ್ಟಿದ್ದ ಐವರ್ನಾಡು ಪರ್ಲಿಕಜೆಯ 54 ವರ್ಷದ ವ್ಯಕ್ತಿಗೆ ಕೋವಿಡ್ 19 ದೃಢಪಟ್ಟಿದೆ. ಸುಳ್ಯದ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದು ಚಿಕಿತ್ಸೆ ಫ‌ಲಕಾರಿಯಾಗದೆ ಅದೇ ದಿನ ಮೃತಪಟ್ಟಿದ್ದರು. ಮೃತದೇಹವನ್ನು ಆಸ್ಪತ್ರೆಯಲ್ಲೇ ಇರಿಸಿ ಗಂಟಲ ದ್ರವದ ಮಾದರಿಯನ್ನು ಪರೀಕ್ಷೆಗೆ ಕಳುಹಿಸಲಾಗಿತ್ತು. ಗುರುವಾರ ವರದಿ ಬಂದಿದೆ.

ಪುತ್ತೂರು: ಮೂವರು ಪೊಲೀಸರಿಗೆ ಸೋಂಕು
ಪುತ್ತೂರು ನಗರ ಮಹಿಳಾ ಪೊಲೀಸ್‌ ಠಾಣೆಯ ಜೀಪು ಚಾಲಕ, 27 ವರ್ಷದ ಸಿಬಂದಿ, 23 ವರ್ಷದ ಇನ್ನೋರ್ವ ಮಹಿಳಾ ಸಿಬಂದಿ ಸಹಿತ ಪುತ್ತೂರು ಮತ್ತು ಕಡಬ ತಾಲೂಕಿನಲ್ಲಿ ಒಟ್ಟು 9 ಪ್ರಕರಣಗಳು ಗುರುವಾರ ವರದಿಯಾಗಿವೆ.

ಮೂರು ಪ್ರಕರಣಗಳು ಪ್ರಾಥಮಿಕ ಸಂಪರ್ಕದಿಂದ ಉಂಟಾಗಿವೆ. ಪುತ್ತೂರು ವಲಯ ಅರಣ್ಯಾಧಿಕಾರಿ ಕಚೇರಿಯ 32 ವರ್ಷದ ಮಹಿಳಾ ಸಿಬಂದಿ, ಕಬಕ ಗ್ರಾ.ಪಂ. ವ್ಯಾಪ್ತಿಯ ಮುರ ನಿವಾಸಿ 63ರ ಮಹಿಳೆ, ಉಪ್ಪಿನಂಗಡಿ ಹಳೆ ಬಸ್‌ ನಿಲ್ದಾಣ ಬಳಿಯ ನಿವಾಸಿ 23ರ ಯುವಕ, ಪುತ್ತೂರು ಪುರಸಭಾ ವ್ಯಾಪ್ತಿಯ ಪಡೀಲು ನಿವಾಸಿ 29ರ ಮಹಿಳೆಯಲ್ಲಿ ಕೋವಿಡ್ 19 ಸೋಂಕು ದೃಢಪಟ್ಟಿದೆ.

ಕಡಬ ತಾಲೂಕಿನಲ್ಲಿ ಮಸ್ಕತ್‌ನಿಂದ ಆಗಮಿಸಿದ ಕೋಡಿಂಬಾಳ ನಿವಾಸಿ 59ರ ವ್ಯಕ್ತಿ ಮತ್ತು ಅವರ 6ರ ಪುತ್ರನಿಗೆ ಕೋವಿಡ್ 19 ಸೋಂಕು ದೃಢಪಟ್ಟಿದೆ. ಇವರು ಕ್ವಾರಂಟೈನ್‌ನಲ್ಲಿದ್ದಾರೆ.

ಜು. 14ರಂದು ಕಬಕ ಗ್ರಾ.ಪಂ. ವ್ಯಾಪ್ತಿಯ ಮುರ ನಿವಾಸಿ ಮಹಿಳೆ ಊರಿಗೆ ಆಗಮಿಸಿದ್ದು, ಈಗಾಗಲೇ ಮಂಗಳೂರು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಪಡೀಲು ನಿವಾಸಿ ಮಹಿಳೆ ಪುತ್ತೂರು ಸರಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಪೊಲೀಸ್‌ ಸಿಬಂದಿ ಸಹಿತ ಇನ್ನುಳಿದವರು ಸುಬ್ರಹ್ಮಣ್ಯದಲ್ಲಿ ಸಿದ್ಧವಾಗಿರುವ ಕೋವಿಡ್‌ ಚಿಕಿತ್ಸಾ ಕೇಂದ್ರಕ್ಕೆ ದಾಖಲಾಗಿದ್ದಾರೆ ಎಂದು ತಾಲೂಕು ಆರೋಗ್ಯ ಅಧಿಕಾರಿಗಳು ತಿಳಿಸಿದ್ದಾರೆ. ಪುತ್ತೂರು ಮತ್ತು ಕಡಬ ತಾಲೂಕಿನಲ್ಲಿ ಈ ತನಕ ಒಟ್ಟು 67 ಪಾಸಿಟಿವ್‌ ಪ್ರಕರಣ ದಾಖಲಾಗಿವೆ.

ಉಳ್ಳಾಲ: 22 ಪ್ರಕರಣ
ಉಳ್ಳಾಲ ನಗರಸಭಾ ವ್ಯಾಪ್ತಿಯಲ್ಲಿ ನಾಲ್ವರು ಸೇರಿದಂತೆ ಗುರುವಾರ ಒಟ್ಟು 22 ಜನರಿಗೆ ಸೋಂಕು ದೃಢವಾಗಿದೆ. ಬಾಧಿತರಲ್ಲಿ 70, 72, 73 ವರ್ಷದ ವೃದ್ಧರು, 23, 25ರ ಯುವಕರೂ ಸೇರಿದ್ದಾರೆ.

ಕೋವಿಡ್ 19 ಸೋಂಕಿಗೆ ಮರವಂತೆಯ ವ್ಯಕ್ತಿ ಸಾವು
ಕುಂದಾಪುರ:
ಕೋವಿಡ್ 19 ಸೋಂಕಿಗೆ ತುತ್ತಾಗಿದ್ದ ಬೈಂದೂರು ತಾಲೂಕಿನ ಮರವಂತೆ ಗ್ರಾಮದ 58 ವರ್ಷದ ವ್ಯಕ್ತಿ ಗುರುವಾರ ಮೃತಪಟ್ಟಿದ್ದಾರೆ. ತೀವ್ರ ಅಸ್ತಮಾದಿಂದ ಬಳಲುತ್ತಿದ್ದು, ಬುಧವಾರ ಸಂಜೆ ಅವರನ್ನು ಮರವಂತೆಯ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ಕರೆದೊಯ್ಯಲಾಗಿತ್ತು. ಅಲ್ಲಿಂದ ಕುಂದಾಪುರ ಕೋವಿಡ್‌ ಆಸ್ಪತ್ರೆಗೆ ದಾಖಲಿಸಿದ್ದು, ಚಿಕಿತ್ಸೆ ಆರಂಭಿಸುವ ವೇಳೆ ಸಾವನ್ನಪ್ಪಿದ್ದರು. ಗಂಟಲ ದ್ರವ ಮಾದರಿ ಪರೀಕ್ಷೆಯಲ್ಲಿ ಕೋವಿಡ್ 19 ಸೋಂಕು ದೃಢವಾಗಿದೆ.

ಅಂತ್ಯಸಂಸ್ಕಾರಕ್ಕೆ ವಿರೋಧ
ಕೋವಿಡ್‌ ಮಾರ್ಗಸೂಚಿಯಂತೆ ಅಂತ್ಯಕ್ರಿಯೆ ನಡೆಸಲು ಮೃತದೇಹವನ್ನು ಕುಂದಾಪುರ ಪುರಸಭೆ ವ್ಯಾಪ್ತಿಯ ರುದ್ರಭೂಮಿಗೆ ಒಯ್ದಾಗ ಅಲ್ಲಿ ವಿರೋಧ ವ್ಯಕ್ತವಾಗಿದ್ದು, ಬಳಿಕ ಬೇರೆ ಕಡೆಯಲ್ಲಿ ಅಂತ್ಯಸಂಸ್ಕಾರ ನಡೆಸಲಾಯಿತು.

ಪಡುಬಿದ್ರಿ: ಹೊಟೇಲ್‌, ಮಳಿಗೆ ಸೀಲ್‌ಡೌನ್‌
ಹೊಟೇಲ್‌ ಕಾರ್ಮಿಕರಿಬ್ಬರಿಗೆ ಮತ್ತು ವ್ಯವಹಾರ ಮಳಿಗೆಯ ಸಿಬಂದಿಗೆ ಕೋವಿಡ್ 19 ಸೋಂಕು ತಗಲಿರುವ ಹಿನ್ನೆಲೆಯಲ್ಲಿ ಪಡುಬಿದ್ರಿಯ ಒಂದು ಹೊಟೇಲು ಮತ್ತು ವ್ಯವಹಾರ ಮಳಿಗೆಯನ್ನು ಗುರುವಾರ ಸೀಲ್‌ಡೌನ್‌ ಮಾಡಲಾಗಿದೆ. ಆರೋಗ್ಯ ಇಲಾಖೆಯು ಸಾರ್ವಜನಿಕ ಸಂಸ್ಥೆಗಳಲ್ಲಿ ರ್‍ಯಾಂಡಮ್‌ ಪರೀಕ್ಷೆಗಳನ್ನು ನಡೆಸಿದ್ದು, ಬುಧವಾರ ಇವರಲ್ಲಿ ಕೊರೊನಾ ಪತ್ತೆಯಾಗಿತ್ತು.

ಕಾಪು: 9 ಪ್ರಕರಣ
ತಾಲೂಕಿನ ವಿವಿಧೆಡೆ ಗುರುವಾರ ಮತ್ತೆ 10 ಮಂದಿಗೆ ಸೋಂಕು ದೃಢವಾಗಿದೆ. ಮಲ್ಲಾರು, ಮೂಳೂರು, ಕುರ್ಕಾಲಿನ ಮೂವರು ಮಹಿಳೆಯರು, ಉಳಿಯಾರಗೋಳಿಯ ವೃದ್ಧ, ಕೈಪುಂಜಾಲಿನ ಇಬ್ಬರು ವ್ಯಕ್ತಿಗಳಲ್ಲಿ, ಕುರ್ಕಾಲಿನ 9 ವರ್ಷದ ಬಾಲಕ, ಗಿರಿನಗರದ ಯುವಕ ಮತ್ತು 5 ವರ್ಷದ ಬಾಲಕ, ಬೆಳಪುವಿನ ಪುರುಷನಿಗೆ ಪಾಸಿಟಿವ್‌ ಪತ್ತೆಯಾಗಿದೆ.

ಬೇಳೂರು: ಚಾಲಕನಿಗೆ ಸೋಂಕು
ತೆಕ್ಕಟ್ಟೆ: ಕುಂದಾಪುರ ತಾಲೂಕು ಬೇಳೂರು ಗ್ರಾ.ಪಂ. ವ್ಯಾಪ್ತಿಯ ಮುಳ್ಳುಗುಡ್ಡೆ ನಿವಾಸಿ ವಾಹನ ಚಾಲಕನಿಗೆ ಸೋಂಕು ಇರುವುದು ಗುರವಾರ ದೃಢಪಟ್ಟಿದೆ.

2ನೇ ಬಾರಿಗೆ ಬೈಂದೂರು ಠಾಣೆ ಸೀಲ್‌ಡೌನ್‌!
ಇಲ್ಲಿನ ಪೊಲೀಸ್‌ ಠಾಣೆಯ ಮೂವರು ಸಿಬಂದಿಗೆ ಕೋವಿಡ್ 19 ಸೋಂಕು ದೃಢವಾಗಿದ್ದು ಠಾಣೆಯನ್ನು ಸೀಲ್‌ಡೌನ್‌ ಮಾಡಲಾಗಿದೆ. ಕೋವಿಡ್ 19 ಸೋಂಕಿನಿಂದಾಗಿ ಈ ಠಾಣೆ ಸೀಲ್‌ ಡೌನ್‌ ಆಗುತ್ತಿರುವುದು ಇದು ಎರಡನೇ ಬಾರಿ.

ಪೊಲೀಸ್‌ ಎಎಸ್‌ಐ, ಮಹಿಳಾ ಸಿಬಂದಿ ಮತ್ತು ಠಾಣೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಓರ್ವ ಗೃಹರಕ್ಷಕರಿಗೆ ಪಾಸಿಟಿವ್‌ ಬಂದಿದ್ದು, ಕುಂದಾಪುರ ಕೋವಿಡ್‌ ಆಸ್ಪತ್ರೆಗೆ ದಾಖಲಿಸಲಾಗಿದೆ. ಎಲ್ಲ ಸಿಬಂದಿಯನ್ನು ಹೋಂ ಕ್ವಾರಂಟೈನ್‌ ಮಾಡಲಾಗುತ್ತದೆ.

ಟಾಪ್ ನ್ಯೂಸ್

ಅಶ್ಲೀಲ ವಿಡಿಯೋ ಮಾದರಿಯಲ್ಲಿ ಲೈಂಗಿಕ ಕ್ರಿಯೆಗೆ ಒತ್ತಾಯಿಸಿದ್ದಕ್ಕೆ ಮಹಿಳೆಯನ್ನು ಕೊಂದ ಟೆಕಿ

ಅಶ್ಲೀಲ ವಿಡಿಯೋ ಮಾದರಿಯಲ್ಲಿ ಲೈಂಗಿಕ ಕ್ರಿಯೆಗೆ ಒತ್ತಾಯಿಸಿದ್ದಕ್ಕೆ ಮಹಿಳೆಯನ್ನು ಕೊಂದ ಟೆಕಿ

Udupi Chikmagalur Lok Sabha Constituency: ಕಾಫಿನಾಡಲ್ಲಿ ಕೈ-ಕಮಲ ತೀವ್ರ ಪೈಪೋಟಿ

Udupi Chikmagalur Lok Sabha Constituency: ಕಾಫಿನಾಡಲ್ಲಿ ಕೈ-ಕಮಲ ತೀವ್ರ ಪೈಪೋಟಿ

1-aaaa

Scrap mafia ದರೋಡೆಕೋರ ರವಿ ಕಾನಾ ಮತ್ತು ಪ್ರೇಯಸಿ ಕಾಜಲ್ ಥಾಯ್ಲೆಂಡ್‌ ನಲ್ಲಿ ಬಂಧನ

1-qqwqe

Janardhana Poojary; ನನ್ನ ಜೀವಿತಾವಧಿಯಲ್ಲಿಯೇ ಶಿಷ್ಯ ಪದ್ಮರಾಜ್‌ ಗೆಲುವು ಕಾಣುವಾಸೆ..

DCvsGT; ಪಂತ್‌ ನಾಯಕತ್ವಕ್ಕೆ ಅಗ್ನಿಪರೀಕ್ಷೆ:  ತವರಿನ “ಕೋಟ್ಲಾ’ದಲ್ಲಿ ಗುಜರಾತ್‌ ಎದುರಾಳಿ

DCvsGT; ಪಂತ್‌ ನಾಯಕತ್ವಕ್ಕೆ ಅಗ್ನಿಪರೀಕ್ಷೆ:  ತವರಿನ “ಕೋಟ್ಲಾ’ದಲ್ಲಿ ಗುಜರಾತ್‌ ಎದುರಾಳಿ

ಬಸ್ರೂರಿನ ಶಾಸನಗಳನ್ನು ಉಳಿಸುವವರಾರು?

ಬಸ್ರೂರಿನ ಶಾಸನಗಳನ್ನು ಉಳಿಸುವವರಾರು?

ಶೋಧ ಕಾರ್ಯಾಚರಣೆಯ ಬಿಸಿಗೆ ತಣ್ಣಗಾದರೇ?

ಶೋಧ ಕಾರ್ಯಾಚರಣೆಯ ಬಿಸಿಗೆ ತಣ್ಣಗಾದರೇ?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-wewqwqe

Pilikula; ಎ. 29, ಮೇ ತಿಂಗಳ ಎಲ್ಲ ಸೋಮವಾರವೂ ಪಿಲಿಕುಳ ಮುಕ್ತ

1-qqwqe

Janardhana Poojary; ನನ್ನ ಜೀವಿತಾವಧಿಯಲ್ಲಿಯೇ ಶಿಷ್ಯ ಪದ್ಮರಾಜ್‌ ಗೆಲುವು ಕಾಣುವಾಸೆ..

Mangalore University; ಪದವಿಗೆ ಸೇರಲು 4 ತಿಂಗಳು ಕಾಯಬೇಕು!

Mangalore University; ಪದವಿಗೆ ಸೇರಲು 4 ತಿಂಗಳು ಕಾಯಬೇಕು!

6-court

Mangaluru: ಬಾಲಕಿಯನ್ನು ಅಪಹರಿಸಿ ಅತ್ಯಾಚಾರ; ಅಪರಾಧಿಗೆ 10 ವರ್ಷ ಕಠಿನ ಕಾರಾಗೃಹ ಶಿಕ್ಷೆ

Dakshina Kannada ಲೋಕಸಭಾ ಕ್ಷೇತ್ರ: ಚುನಾವಣೆಗೆ ಸಂಪೂರ್ಣ ಸಜ್ಜು

Dakshina Kannada ಲೋಕಸಭಾ ಕ್ಷೇತ್ರ: ಚುನಾವಣೆಗೆ ಸಂಪೂರ್ಣ ಸಜ್ಜು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Arrested: ಸುಲಿಗೆ ಸೇರಿ 42 ಕೇಸ್‌ಗಳಲ್ಲಿ ಭಾಗಿಯಾಗಿದ್ದ ರೌಡಿ ಬಂಧನ

Arrested: ಸುಲಿಗೆ ಸೇರಿ 42 ಕೇಸ್‌ಗಳಲ್ಲಿ ಭಾಗಿಯಾಗಿದ್ದ ರೌಡಿ ಬಂಧನ

Arrested: 17 ಕೇಸ್‌ನಲ್ಲಿ ಭಾಗಿಯಾಗಿದ್ದ ರೌಡಿಶೀಟರ್‌ ಬಂಧನ

Arrested: 17 ಕೇಸ್‌ನಲ್ಲಿ ಭಾಗಿಯಾಗಿದ್ದ ರೌಡಿಶೀಟರ್‌ ಬಂಧನ

3

Bengaluru: ಕಾರು ಹರಿದು ಒಂದೂವರೆ ವರ್ಷದ ಮಗು ದುರ್ಮರಣ

ಅಶ್ಲೀಲ ವಿಡಿಯೋ ಮಾದರಿಯಲ್ಲಿ ಲೈಂಗಿಕ ಕ್ರಿಯೆಗೆ ಒತ್ತಾಯಿಸಿದ್ದಕ್ಕೆ ಮಹಿಳೆಯನ್ನು ಕೊಂದ ಟೆಕಿ

ಅಶ್ಲೀಲ ವಿಡಿಯೋ ಮಾದರಿಯಲ್ಲಿ ಲೈಂಗಿಕ ಕ್ರಿಯೆಗೆ ಒತ್ತಾಯಿಸಿದ್ದಕ್ಕೆ ಮಹಿಳೆಯನ್ನು ಕೊಂದ ಟೆಕಿ

1-wewqwqe

Pilikula; ಎ. 29, ಮೇ ತಿಂಗಳ ಎಲ್ಲ ಸೋಮವಾರವೂ ಪಿಲಿಕುಳ ಮುಕ್ತ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.