ಕೋವಿಡ್ 19 ಮಹಾಮಾರಿ ವಿರುದ್ಧ ದೀರ್ಘಕಾಲ ಹೋರಾಡಬೇಕಾಗಿದೆ: ಪ್ರಧಾನಿ ಮೋದಿ
ಸೋಮವಾರ ಭಾರತೀಯ ಜನತಾ ಪಕ್ಷದ 40ನೇ ಸಂಸ್ಥಾಪನಾ ದಿನಾಚರಣೆಯ ವೇಳೆ ಪಕ್ಷದ ಕಾರ್ಯಕರ್ತರನ್ನು ಉದ್ದೇಶಿಸಿ ಮಾತನಾಡಿದರು.
Team Udayavani, Apr 6, 2020, 3:44 PM IST
ನವದೆಹಲಿ: ಕೋವಿಡ್ 19 ಮಹಾಮಾರಿ ವಿರುದ್ಧ ದೀರ್ಘ ಕಾಲ ಹೋರಾಟ ಎದುರಿಸಬೇಕಾಗಿದೆ. ಈ ಮಾರಣಾಂತಿಕ ಸೋಂಕನ್ನು ತಡೆಗಟ್ಟಲು ಸಾಮಾಜಿಕ ಅಂತರವನ್ನು ಎಲ್ಲರೂ ಕಾಪಾಡಿಕೊಳ್ಳುವ ಮೂಲಕ ಭಾರತ ಕೋವಿಡ್ ವೈರಸ್ ನಿಂದ ಹೊರಬರಬೇಕಾಗಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದರು.
ಸೋಮವಾರ ಭಾರತೀಯ ಜನತಾ ಪಕ್ಷದ 40ನೇ ಸಂಸ್ಥಾಪನಾ ದಿನಾಚರಣೆಯ ವೇಳೆ ಪಕ್ಷದ ಕಾರ್ಯಕರ್ತರನ್ನು ಉದ್ದೇಶಿಸಿ ಮಾತನಾಡಿದರು. ಕೋವಿಡ್ 19 ವಿರುದ್ಧ ದೀರ್ಘಕಾಲ ಹೋರಾಟ ನಡೆಸಬೇಕಾಗಿದೆ. ಆದರೆ ಜನರು ಈ ಹೋರಾಟದಿಂದ ವಿರಮಿಸಬಾರದು. ಅಲ್ಲದೇ ಈ ಸಂದರ್ಭದಲ್ಲಿ ಯಾರೊಬ್ಬರು ಹಸಿವಿನ ಬಿಕ್ಕಟ್ಟು ಎದುರಿಸದಂತೆ ನೋಡಿಕೊಳ್ಳಬೇಕಾಗಿದೆ ಎಂದು ಸಲಹೆ ನೀಡಿರುವುದಾಗಿ ವರದಿ ತಿಳಿಸಿದೆ.
ಕೋವಿಡ್ 19 ವಿರುದ್ಧ ಸೆಣಸುತ್ತಿರುವ ನಡುವೆಯೇ ಭಾರತೀಯ ಜನತಾ ಪಕ್ಷ 40ನೇ ಸಂಸ್ಥಾಪನಾ ದಿನಾಚರಣೆಗೆ ಸಾಕ್ಷಿಯಾಗಿದೆ. ನಮ್ಮ ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಜೆಪಿ ನಡ್ಡಾಜೀ ಅವರು ನೀಡುವ ಪಕ್ಷದ ನೀತಿ, ನಿಯಮಗಳನ್ನು ಕಾರ್ಯಕರ್ತರು ಅಳವಡಿಸಿಕೊಳ್ಳಬೇಕು. ಇದು ಸಾಮಾಜಿ ಅಂತರ ಕಾಯ್ದುಕೊಳ್ಳಲು ಮುಖ್ಯವಾಗುತ್ತದೆ ಎಂದು ಈ ಸಂದರ್ಭದಲ್ಲಿ ಹೇಳಿದರು.