ಚಾ.ನಗರ: ಕೋವಿಡ್ ಪ್ರಯೋಗಾಲಯ ಪುನರಾರಂಭ ; ಬುಧವಾರ 22 ಪ್ರಕರಣ ದೃಢ

ಉದಯವಾಣಿ ಡಿಜಿಟಲ್ ವರದಿಗೆ ಎಚ್ಚೆತ್ತ ಜಿಲ್ಲಾಡಳಿತ – ಸೀಲ್ ಡೌನ್ ಆಗಿದ್ದ ಕೋವಿಡ್ ಪ್ರಯೋಗಾಲಯ ಪುನರಾರಂಭ

Team Udayavani, Jul 1, 2020, 7:51 PM IST

ಚಾ.ನಗರ: ಕೋವಿಡ್ ಪ್ರಯೋಗಾಲಯ ಪುನರಾರಂಭ ; ಬುಧವಾರ 22 ಪ್ರಕರಣ ದೃಢ

ಸಾಂದರ್ಭಿಕ ಚಿತ್ರವನ್ನು ಬಳಸಲಾಗಿದೆ – Representative Image Used

ಚಾಮರಾಜನಗರ: ಜಿಲ್ಲೆಯಲ್ಲಿ ಬುಧವಾರ ಲಭ್ಯವಾದ ಕೋವಿಡ್ ಪರೀಕ್ಷಾ ಫಲಿತಾಂಶದಲ್ಲಿ 22 ಜನರಿಗೆ ಸೋಂಕು ದೃಢಪಟ್ಟಿದೆ.

ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಯವರ ವಾಹನ ಚಾಲಕ ಸೇರಿದಂತೆ, ನಗರದಲ್ಲಿ 4, ತಾಲೂಕಿನಲ್ಲಿ 2 ಗುಂಡ್ಲುಪೇಟೆಯಲ್ಲಿ 16 ಪ್ರಕರಣಗಳು ದೃಢಪಟ್ಟಿವೆ.

ಗುಂಡ್ಲುಪೇಟೆ ತಾಲೂಕಿನ ಬರಗಿ ಹಾಗೂ ಚಾಮರಾಜನಗರ ತಾಲೂಕಿನ ನಾಗವಳ್ಳಿ ಗ್ರಾಮದವರಿಗೆ ಸೋಂಕು ತಗುಲಿದ್ದು ಹಳ್ಳಿಗಳಿಗೂ ಸೋಂಕು ಹರಡುತ್ತಿದೆ.

ಕೋವಿಡ್ ಲ್ಯಾಬ್ ಸೀಲ್‌ಡೌನ್ ಆಗಿದ್ದ ಕಾರಣ ಕಳೆದ ಮೂರು ದಿನಗಳಿಂದ ಫಲಿತಾಂಶ ಲಭ್ಯವಾಗಿರಲಿಲ್ಲ. ಬೆಂಗಳೂರಿಗೆ ಕಳುಹಿಸಲಾಗಿದ್ದ 904 ಮಾದರಿಗಳ ಫಲಿತಾಂಶ ಬುಧವಾರ ಬಂದಿದ್ದು, ಇದರಲ್ಲಿ 22 ಮಂದಿಗೆ ಸೋಂಕು ದೃಢಪಟ್ಟಿದೆ.

ಇದರಿಂದಾಗಿ ಜಿಲ್ಲೆಯಲ್ಲಿ ಇದುವರೆಗೆ ಒಟ್ಟು 54 ಮಂದಿಗೆ ಸೋಂಕು ತಗುಲಿದ್ದು ಓರ್ವ ಗುಣಮುಖನಾಗಿದ್ದಾನೆ. 53 ಸಕ್ರಿಯ ಪ್ರಕರಣಗಳಿವೆ. ಇವರೆಲ್ಲರೂ ನಗರದ ಕೋವಿಡ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಈ ಪೈಕಿ ಇಬ್ಬರು ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಇದನ್ನೂ ಓದಿ: 3ನೇ ದಿನವೂ ದೊರಕದ ಫ‌ಲಿತಾಂಶ

ಗುಂಡ್ಲುಪೇಟೆಯಲ್ಲಿ ಪತ್ತೆಯಾಗಿರುವ 16 ಪ್ರಕರಣಗಳಲ್ಲಿ ಬಹುತೇಕ ಪ್ರಕರಣಗಳು ಮಹದೇವಪ್ರಸಾದ್ ನಗರದವು. ಮೂರು ಪ್ರಕರಣಗಳು ಗುಂಡ್ಲುಪೇಟೆ ತಾಲೂಕಿನ ಬರಗಿ ಗ್ರಾಮದವರದು. ಅಲ್ಲದೇ ಕನಕದಾಸನಗರ, ನಾಯಕರ ಬೀದಿ, ಕೆಎಸ್‌ಎನ್ ಲೇಔಟ್‌ನಲ್ಲೂ ಪ್ರಕರಣಗಳು ಕಾಣಿಸಿಕೊಂಡಿವೆ.

ಎಸ್ಪಿ ವಾಹನ ಚಾಲಕನಿಗೆ ಸೋಂಕು: ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಯವರ ವಾಹನ ಚಾಲಕನಿಗೂ ಸೋಂಕು ದೃಢಪಟ್ಟಿದೆ. ಇದಲ್ಲದೇ ನಗರದ ಸೆಸ್‌ಕ್ ಕಚೇರಿಯ ಲೆಕ್ಕಾಧಿಕಾರಿ ಹಾಗೂ ಕ್ಯಾಶಿಯರ್‌ಗೆ, 45 ವರ್ಷದ ಓರ್ವ ಮಹಿಳೆಗೆ, ತಾಲೂಕಿನ ನಾಗವಳ್ಳಿಯ 34 ವರ್ಷದ ಮಹಿಳೆ ಹಾಗೂ 57 ವರ್ಷದ ವ್ಯಕ್ತಿಗೆ ಸೋಂಕು ತಗುಲಿದೆ.

ಕೋವಿಡ್ ಪ್ರಯೋಗಾಲಯ ಕಾರ್ಯಾರಂಭ: ಲ್ಯಾಬ್ ಟೆಕ್ನಿಷಿಯನ್‌ಗೆ ಸೋಂಕು ತಗುಲಿದ್ದ ಹಿನ್ನೆಲೆಯಲ್ಲಿ ಮೂರು-ನಾಲ್ಕು ದಿನಗಳಿಂದ ಮುಚ್ಚಲಾಗಿದ್ದ ನಗರದ ಕೋವಿಡ್ ಪ್ರಯೋಗಾಲಯ ಬುಧವಾರದಿಂದ ಮತ್ತೆ ಕಾರ್ಯಾರಂಭ ಮಾಡಿದೆ.

ಕೋವಿಡ್ ಪ್ರಯೋಗಾಲಯ ಸೀಲ್‌ಡೌನ್ ಆಗಿದ್ದರಿಂದ ಕೋವಿಡ್ ಪರೀಕ್ಷೆಗೆ ಮಾದರಿಗಳನ್ನು ಬೆಂಗಳೂರಿಗೆ ಕಳುಹಿಸಬೇಕಾಗಿತ್ತು. ಸತತ ಮೂರನೇ ದಿನವೂ ಫಲಿತಾಂಶ ಲಭ್ಯವಾಗದೇ ಜನರು ಆತಂಕಿತರಾಗಿದ್ದರು. ಪರೀಕ್ಷೆ ಮಾಡಿಸಿಕೊಂಡವರಲ್ಲಿ ಸೋಂಕಿತರಿದ್ದರೆ ಅವರು ಎಲ್ಲೆಡೆ ಓಡಾಡಿದರೆ ಸೋಂಕು ಹರಡುವುದಿಲ್ಲವೇ? ಎಂದು ಆತಂಕ ವ್ಯಕ್ತಪಡಿಸಿ ಉದಯವಾಣಿ.ಕಾಮ್ ಮಂಗಳವಾರ ವರದಿ ಪ್ರಕಟಿಸಿತ್ತು.

ಟಾಪ್ ನ್ಯೂಸ್

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

1-asasas

Naxal ಬಾಧಿತ ಮತಗಟ್ಟೆಗಳ ಭದ್ರತೆಗೆ ಹೆಚ್ಚುವರಿ ಆದ್ಯತೆ: ಮುಲ್ಲೈ ಮುಗಿಲನ್‌

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

KPCC: ಮೋದಿ, ರಾಜನಾಥ್‌ಸಿಂಗ್‌ ವಿರುದ್ಧ ಕ್ರಮಕ್ಕೆ ಕೆಪಿಸಿಸಿ ದೂರು

KPCC: ಮೋದಿ, ರಾಜನಾಥ್‌ಸಿಂಗ್‌ ವಿರುದ್ಧ ಕ್ರಮಕ್ಕೆ ಕೆಪಿಸಿಸಿ ದೂರು

1-rerwer

IPL; ಸನ್‌ರೈಸರ್ಸ್ ಹೈದರಾಬಾದ್ ವಿರುದ್ಧ ಜಯದ ನಗು ಬೀರಿದ ಆರ್ ಸಿಬಿ

MONEY (2)

Mysuru: ದಾಖಲೆ ಇಲ್ಲದೆ ಸಾಗಿಸುತ್ತಿದ್ದ 89 ಲಕ್ಷ ರೂ. ವಶಕ್ಕೆ

Crime: ತಾಯಿ ಆತ್ಮಹತ್ಯೆಗೆ ಕಾರಣನಾದ ತಂದೆಯನ್ನು ಕೊಂದ ಮಗ

Crime: ತಾಯಿ ಆತ್ಮಹತ್ಯೆಗೆ ಕಾರಣನಾದ ತಂದೆಯನ್ನು ಕೊಂದ ಮಗ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Chamarajanagar: ಕೊಳ್ಳೇಗಾಲ ಶಾಸಕ ಎ ಆರ್ ಕೃಷ್ಣಮೂರ್ತಿ ಕಾರು ಅಪಘಾತ, ಅಪಾಯದಿಂದ ಪಾರು

Chamarajanagar: ಕೊಳ್ಳೇಗಾಲ ಶಾಸಕ ಎ ಆರ್ ಕೃಷ್ಣಮೂರ್ತಿ ಕಾರು ಅಪಘಾತ, ಅಪಾಯದಿಂದ ಪಾರು

ಸೂಲಿಬೆಲೆ ಕಾರ್ಯಕ್ರಮದಲ್ಲಿ ಫ್ಲೈಯಿಂಗ್ ಸ್ಕ್ವಾಡ್ ಅಧಿಕಾರಿಯ ತಳ್ಳಾಡಿದ ಯುವಕರು

Election; ಸೂಲಿಬೆಲೆ ಕಾರ್ಯಕ್ರಮದಲ್ಲಿ ಫ್ಲೈಯಿಂಗ್ ಸ್ಕ್ವಾಡ್ ಅಧಿಕಾರಿಯ ತಳ್ಳಾಡಿದ ಯುವಕರು

1-wewqewq

Bandipur: ನಡು ರಸ್ತೆಯಲ್ಲೇ ಹುಲಿ ದಾಳಿಗೆ ಆನೆ ಮರಿ ಸಾವು!

death

Kollegala: ಕಾಡಾನೆ ದಾಳಿಗೆ ವ್ಯಕ್ತಿ ಬಲಿ

Chamarajanagar: ಮೇವಿಗಾಗಿ ಕಬ್ಬಿನ ತೊಂಡೆಗೆ ಬೇಡಿಕೆ ಹೆಚ್ಚಳ

Chamarajanagar: ಮೇವಿಗಾಗಿ ಕಬ್ಬಿನ ತೊಂಡೆಗೆ ಬೇಡಿಕೆ ಹೆಚ್ಚಳ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

1-asasas

Naxal ಬಾಧಿತ ಮತಗಟ್ಟೆಗಳ ಭದ್ರತೆಗೆ ಹೆಚ್ಚುವರಿ ಆದ್ಯತೆ: ಮುಲ್ಲೈ ಮುಗಿಲನ್‌

1-MB

Note Ban ವೇಳೆ ಮಹಿಳೆಯರು ಮಂಗಳಸೂತ್ರ ಅಡವಿಟ್ಟಾಗ ಮೋದಿ ಮೌನ: ಭಂಡಾರಿ

Exam

Udupi; ಪಿಯುಸಿ ಪರೀಕ್ಷೆ-2 : ನಿಷೇಧಾಜ್ಞೆ ಜಾರಿ

IMD

Dakshina Kannada ಜಿಲ್ಲೆಯಲ್ಲಿ ಮುಂದುವರಿದ ಉರಿಬಿಸಿಲು:ಮಳೆಯ ಮುನ್ಸೂಚನೆ ಇಲ್ಲ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.