ಲಾಕ್ ಡೌನ್: ಪಶ್ಚಿಮಬಂಗಾಳದ ಮಸೀದಿಯಲ್ಲಿ ನೂರಾರು ಮಂದಿ ನಮಾಜ್, 50 ಜನರ ವಿರುದ್ಧ FIR
ಗೋಪಿಪುರ್ ಮಸೀದಿಯಲ್ಲಿ ನೂರಾರು ಮಂದಿ ಸೇರುವ ಮೂಲಕ ನಮಾಜ್ ಪ್ರಾರ್ಥನೆ ಸಲ್ಲಿಸಿದ್ದರು.
Team Udayavani, Apr 11, 2020, 4:17 PM IST
ನವದೆಹಲಿ:ಕೋವಿಡ್ 19 ತಡೆಗಟ್ಟುವ ನಿಟ್ಟಿನಲ್ಲಿ ದೇಶಾದ್ಯಂತ ಲಾಕ್ ಡೌನ್ ಮುಂದುವರಿದಿರುವ ನಡುವೆಯೇ ಪಶ್ಚಿಮಬಂಗಾಳದ ಮುಷಿರಾಬಾದ್ ಮಸೀದಿಯಲ್ಲಿ ಲಾಕ್ ಡೌನ್ ಉಲ್ಲಂಘಿಸಿ ಸಾಮೂಹಿಕ ನಮಾಜ್ ಮಾಡಿದ 50 ಮಂದಿ ವಿರುದ್ಧ ಪಶ್ಚಿಮ ಬಂಗಾಳ ಪೊಲೀಸರು ಎಫ್ ಐಆರ್ ದಾಖಲಿಸಿಕೊಂಡಿರುವುದಾಗಿ ವರದಿ ತಿಳಿಸಿದೆ.
ವರದಿಗಳ ಪ್ರಕಾರ, ಲಾಕ್ ಡೌನ್ ಆದೇಶ ಉಲ್ಲಂಘಿಸಿ ಮುಷಿರಾಬಾದ್ ನ ಗೋಪಿಪುರ್ ಮಸೀದಿಯಲ್ಲಿ ನೂರಾರು ಮಂದಿ ಸೇರುವ ಮೂಲಕ ನಮಾಜ್ ಪ್ರಾರ್ಥನೆ ಸಲ್ಲಿಸಿದ್ದರು. ಅಲ್ಲದೇ ಇವರಲ್ಲಿ ಯಾರೂ ಕೂಡಾ ಸಾಮಾಜಿಕ ಅಂತರವನ್ನು ಅನುಸರಿಸಿಲ್ಲ, ಮಾಸ್ಕ್ ಸಹ ಧರಿಸಿಲ್ಲ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಶುಕ್ರವಾರ ಮಸೀದಿಯಲ್ಲಿ ನಮಾಜ್ ಮಾಡಿರುವ ವಿಡಿಯೋ ವೈರಲ್ ಆಗಿದೆ. ನೂರಾರು ಮಂದಿ ಮಸೀದಿಯಿಂದ ಹೊರಬರುತ್ತಿರುವ ದೃಶ್ಯ ವಿಡಿಯೋದಲ್ಲಿ ಸೆರೆಯಾಗಿದೆ. ನಂತರ ಪೊಲೀಸರು ಸ್ಥಳಕ್ಕೆ ಆಗಮಿಸಿ, ನಮಾಜ್ ಸಲ್ಲಿಸಲು ಆಗಮಿಸಿದ ಎಲ್ಲರನ್ನೂ ಮಸೀದಿ ಬಿಟ್ಟು ತೆರಳುವಂತೆ ಸೂಚಿಸಿದ್ದರು ಎಂದು ವರದಿ ವಿವರಿಸಿದೆ.
ಲಾಕ್ ಡೌನ್ ತೆರವುಗೊಳಿಸುವವರೆಗೆ ಮಸೀದಿಯಲ್ಲಿ ನಮಾಜ್ ನಡೆಸಬಾರದು ಎಂದು ಇಮಾಮ್ ಗೆ ಪೊಲೀಸರು ಸೂಚನೆ ನೀಡಿರುವುದಾಗಿ ತಿಳಿಸಿದ್ದಾರೆ. ಏತನ್ಮಧ್ಯೆ ಪಶ್ಚಿಮಬಂಗಾಳದ 10 ಹಾಟ್ ಸ್ಪಾಟ್ ಗಳಲ್ಲಿ 14 ದಿನ ಸಂಪೂರ್ಣ ಲಾಕ್ ಡೌನ್ ಜಾರಿಗೊಳಿಸಲು ನಿರ್ಧರಿಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ
CBI ತನಿಖೆ; ಸಂದೇಶಖಾಲಿಯಲ್ಲಿ ಬೀಡುಬಿಟ್ಟ ಕಮಾಂಡೋಗಳು; ಸುಪ್ರೀಂ ಮೆಟ್ಟಿಲೇರಿದ ಸರಕಾರ
ಏ.26ರಂದು 2ನೇ ಹಂತದ ಚುನಾವಣೆ;ರಾಹುಲ್, ತರೂರ್, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ
EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂಕೋರ್ಟ್…ಆದರೆ…
Singapore ಏರ್ ಲೈನ್ಸ್ ಪೈಲಟ್ ನಂತೆ ಪೋಸ್ ಕೊಟ್ಟ ಉತ್ತರಪ್ರದೇಶ ಯುವಕನ ಬಂಧನ!
MUST WATCH
ಹೊಸ ಸೇರ್ಪಡೆ
Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ
Minority ತುಷ್ಟೀಕರಣದಿಂದ ನೇಹಾಳ ಹತ್ಯೆಯಾಗಿದೆ :ಜಗದೀಶ್ ಶೆಟ್ಟರ್
Davanagere; ಪ್ರಧಾನಿ ಮೋದಿ ರ್ಯಾಲಿಗೆ ಅನುಮತಿ ನೀಡಬಾರದು:ಕಾಂಗ್ರೆಸ್ ಮನವಿ
2nd PUC: ಮರುಮೌಲ್ಯಮಾಪನದಲ್ಲಿ ರಾಜ್ಯಕ್ಕೆ ಆರನೇ ರ್ಯಾಂಕ್ ಪಡೆದ ತೀರ್ಥಹಳ್ಳಿಯ ಸುಚಿಂತ್
Belthangady: ಬಾಂಜಾರು ಮಲೆಯಲ್ಲಿ ದಾಖಲೆ ಶೇ.100 ಮತದಾನ